Home Posts tagged #bengalore (Page 2)

“ಡ್ರೈಫ್ ಡ್ರೈಫ್ ಆಟೋ“ ಸೇವೆ: ಅನ್ಯ ಕ್ಯಾಬ್ ಗಳಂತೆ ಚಾಲಕರಿಂದ ಕಮೀಷನ್ ಪಡೆಯುವುದಿಲ್ಲ, – ಸಂಸ್ಥೆ ಸ್ಪಷ್ಟನೆ

ಬೆಂಗಳೂರು, ಡಿ, 8; ಕ್ಯಾಬ್ ಸಾಗಾಣೆ ವ್ಯವಸ್ಥೆಯಲ್ಲಿ ಕ್ರಾಂತಿಕಾರ ಹೆಜ್ಜೆ ಇಟ್ಟಿರುವ “ಡ್ರೈಫ್ ಡ್ರೈಫ್ ಆಟೋ “ ಸೇವೆ ಚಾಲಕರಿಗೆ ವರದಾನವಾಗಿ ಪರಿಣಮಿಸಿದ್ದು, ಅವರಿಂದ ಯಾವುದೇ ರೀತಿಯ ಕಮಿಷನ್ ಪಡೆಯುವುದಿಲ್ಲ ಎಂದು ಪ್ರಕಟಿಸಿದೆ. ಬೇರೆ ಕ್ಯಾಬ್ ಸೇವೆಗಳಿಂದ ಬಸವಳಿದಿರುವ ಚಾಲಕರು ಈ ತೀರ್ಮಾನದಿಂದ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಬ್ಲಾಕ್ ಚೈನ್

ಡಿ.15 : ರಾಜ್ಯ ವಾರ್ತಾ ಆಯುಕ್ತರ ಕಚೇರಿ ಎದುರು ಪ್ರತಿಭಟನೆ

ಬೆಂಗಳೂರು : ಹಿಂದುಳಿದ ವರ್ಗಗಳ ಪತ್ರಕರ್ತರ ಮಾಲೀಕತ್ವದ ಪತ್ರಿಕೆಗಳಿಗೆ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿರುವ ಮಾಸಿಕ ಎರಡು ಪುಟ ಜಾಹೀರಾತು ಹಾಗೂ ಮೀಡಿಯಾ ಕಿಟ್ ನೀಡುವಲ್ಲಿ ವಿಳಂಬವಾಗಿದ್ದು, ಸರಕಾರದ ಈ ವಿಳಂಬ ನೀತಿಯನ್ನು ವಿರೋಧಿಸಿ ಡಿಸೆಂಬರ್ 15ರಂದು ಬೆಂಗಳೂರಿನಲ್ಲಿ ರಾಜ್ಯ ವಾರ್ತಾ ಇಲಾಖೆಯ ಆಯುಕ್ತರ ಕಛೇರಿಯ ಮುಂಭಾಗದಲ್ಲಿ ಸಾಂಕೇತಿಕ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ, ವರದಿಗಾರರ ಸಂಘ ಎಚ್ಚರಿಕೆ

ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಪುರಸ್ಕಾರ ಪ್ರಧಾನ : ಅಸೋಸಿಯೇಷನ್ ಲಾಂಛನ ಅನಾವರಣ

ಬೆಂಗಳೂರು, ಡಿ. 5: ರಾಜ್ಯ ವ್ಯಾಪ್ತಿಯ ಡಿಜಿಟಲ್ ಮಾಧ್ಯಮ ಸಂಘಟನೆ ‘ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್’ ಇದರ ಉದ್ಘಾಟನೆ, ಲಾಂಛನ ಅನಾವರಣ ಹಾಗೂ ವಾರ್ಷಿಕ ಮಾಧ್ಯಮ ಸಾಧನಾ ಪ್ರಶಸ್ತಿ ಪ್ರಧಾನ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು. ಬೆಂಗಳೂರಿನ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಚಿತ್ರನಟ, ಸಂಗೀತ ನಿರ್ದೇಶಕ ವಿ. ಮನೋಹರ್, ವಿಜಯ ಕರ್ನಾಟಕ ಆನ್ ಲೈನ್ ಎಡಿಟರ್ ಪ್ರಸಾದ್ ನಾಯಕ್, ‘ಡಿ.ಎಕ್ಸ್

ಕನ್ನಡೇತರರಿಗೆ ಕನ್ನಡ ಕಲಿಸಲು ವಾರಕ್ಕೆ ಒಂದು ಗಂಟೆ ಮೀಸಲಿಡಿ: ಹಿರಿಯ ನಟ ರಮೇಶ್ ಭಟ್

ಕನ್ನಡೇತರರಿಗೆ ಕನ್ನಡ ಕಲಿಸಲು ವಾರಕ್ಕೆ ಒಂದು ದಿನ ಮೀಸಲಿರಿಸುವಂತೆ ಹಿರಿಯ ಚಿತ್ರ ರಮೇಶ್ ಭಟ್ ಸಲಹೆ ಮಾಡಿದ್ದಾರೆ. ಕರ್ನಾಟಕ ಯೂಥ್ ವೆಲ್ ಫೇರ್ ಅಸೋಸಿಯೇಷನ್ ನಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಆಯೋಜಿಸಿದ್ದ 67 ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಗಣ್ಯರಿಗೆ ಜೀವಮಾನ ಶ್ರೇಷ್ಠ ಸಾಧನೆ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಕನ್ನಡ ಭಾಷೆಗೆ ಭವ್ಯ ಇತಿಹಾಸವಿದೆ.

ರಾಜ್ಯದಲ್ಲಿ 3 ದಿನ ಭಾರೀ ಮಳೆ : ಭಾರತೀಯ ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಹೆಚ್ಚು ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡು, ಮಲೆನಾಡು, ಕರಾವಳಿ ಭಾಗಗಳಲ್ಲಿ ನ. 17ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ,

ಬೆಂಗಳೂರು : ಅರಮನೆಯಂತೆ ಕಂಗೋಳಿಸುತ್ತಿದೆ ಕೆಂಪೇಗೌಡ ವಿಮಾನ ನಿಲ್ದಾಣ

ದೇಶಿ ಹಾಗೂ ವಿದೇಶಿ ಪ್ರಯಾಣಿಕರಿಗೆ ಐಶಾರಾಮಿ ಸೇವೆಯನ್ನು ಇಲ್ಲಿ ಒದಗಿಸಲಾಗುತ್ತದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನವ ವಿನ್ಯಾಸದ ಹೈಟೆಕ್ ನಿಲ್ದಾಣ ಅನಾವರಣಗೊಂಡಿದೆ ಟರ್ಮಿನಲ್ 2 ಅನ್ನು ಉದ್ಯಾನ ನಗರಿ ಬೆಂಗಳೂರಿನ ಗೌರವಾರ್ಥವಾಗಿ ವಿನ್ಯಾಸಗೊಳಿಸಲಾಗಿದೆ. ಉದ್ಯಾನವನದಲ್ಲಿ ನಡೆದಂತ ಅನುಭವವನ್ನು ಇದು ಪ್ರಯಾಣಿಕರಿಗೆ ನೀಡುತ್ತದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುಮಾರು 5000 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಹೊಸ

ಸರ್ವ ಧರ್ಮ ಸಮ್ಮೇಳನ : ಧರ್ಮ ಸಾಗರದಲ್ಲಿ ಸೌಹಾರ್ದತೆಯ ಅಲೆಗಳಾಗಿ ಸಾಗೋಣ – ಮುನಿ ಶ್ರೀ ರಶ್ನಿ ಕುಮಾರ್ ಜೀ

ಬೆಂಗಳೂರು: ನ, 6: ವಿಜಯನಗರಜ ಅರ್ಹಂ ಭವನದಲ್ಲಿ ಧರ್ಮ ಧರ್ಮಗಳ ನಡುವೆ ಸಾಮರಸ್ಯ ಬೆಸೆಯುವ ಸರ್ವ ಧರ್ಮ ಸಮ್ಮೇಳನ ಹಾಗೂ ಸರ್ವಧರ್ಮ ಆಧ್ಯಾತ್ಮಿಕ ಸ್ನೇಹ ಮಿಲನ-2022 ಕಾರ್ಯಕ್ರಮ ಸಂತಸ, ಸಡಗರದಿಂದ ನೆರವೇರಿತು. ಧರ್ಮ ಧರ್ಮಗಳ ನಡುವೆ, ಧಾರ್ಮಿಕ ಮುಖಂಡರ ಮಧ್ಯೆ ಪರಸ್ಪರ ಗೌರವ ನೀಡುವ, ಆಲಂಗಿಸಿಕೊಂಡು ಬೆನ್ನು ತಟ್ಟುವ, ಸಾಮರಸ್ಯದಲ್ಲಿ ನಿಮಗಿಂತ ನಾವೇ ಒಂದು ಹೆಜ್ಜೆ ಮುಂದೆ ಎನ್ನುವ ಭಾವನೆ ಪ್ರತಿಯೊಬ್ಬರಲ್ಲೂ ಕಂಡು ಬಂತು. ಸಮ್ಮೇಳನದಲ್ಲಿ ವಿಶ್ವ ಮಾನವ ಸಂದೇಶ

ಮಲಬಾರ್ ಗೋಲ್ಡ್ : ಸೊಲಿಟೇರ್ ವಜ್ರಾಭರಣ ಪ್ರದರ್ಶನ ಉದ್ಘಾಟಿಸಿದ ಪ್ರಾಚಿ ಗೌಡ

ಬೆಂಗಳೂರು : ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ಬೆಂಗಳೂರು ಜಯನಗರ ಶಾಖೆಯಲ್ಲಿ ಫಾರ್ ಏವರ್‍ಮಾರ್ಕ್ ಸೊಲಿಟೇರ್ ವಜ್ರಾಭರಣ ಪ್ರದರ್ಶನವನ್ನು ನಟಿ , ಮೊಡೆಲ್ ಮತ್ತು ಸಾಮಾಜಿಕ ಕಾರ್ಯಕರ್ತೆ ಪ್ರಾಚಿ ಗೌಡ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಾಚಿ ಗೌಡ ಅವರು, ಚಿನ್ನಾಭರಣ ಹಾಗೂ ವಜ್ರಾಭರಣಗಳಿಗೆ ಅತ್ಯಂತ ವಿಶ್ವಾಸನೀಯ ಪರಂಪರೆಯನ್ನು ಮ¯ಬಾರ್ ಸಂಸ್ಥೆ ಹೊಂದಿದೆ , ವೈವಿಧ್ಯಮಯ ಡಿಸೈನ್‍ನ ಫಾರ್ ಏವರ್ ಮಾರ್ಕ್ ಸೊಲಿಟೇರ್

ಗುಜರಾತ್ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ವಿಷ್ಣುಪಾಂಡ್ಯಾವರವರಿಗೆ ‘ಲಿಟೆರರಿ ಅವಾರ್ಡ್’

ಬೆಂಗಳೂರಿನ ಸೌಂದರ್ಯ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ ಸಭಾಂಗಣದಲ್ಲಿ ಗ್ಲೋಬಲ್ ಮೋಟಿವೇಷನಲ್ ಸ್ಟ್ರಿಪ್ಸ್ ಅಡ್ಮಿನಿಸ್ಟ್ರೇಷನ್ ಹಾಗೂ ಗುಜರಾತ್ ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ಆಯೋಜಿಸಿದ್ದ ‘ಲಿಟೆರರಿ ಅವಾರ್ಡ್’ ಕಾರ್ಯಕ್ರಮವನ್ನು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರು ಮತ್ತು ಎಲ್ಲಾ ಅತಿಥಿ ಗಣ್ಯರು ಸೇರಿ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಅತಿಥಿಗಳಾದ ಕರ್ನಾಟಕ

ದಲಿತ ಮಹಿಳೆಗೆ ಸೇರಿರುವ ಎರಡು ಎಕರೆ ಭೂಮಿ ಕಬಳಿಸಿದ ಆರ್ಟ್ ಆಫ್ ಲೀವಿಂಗ್ ಆಶ್ರಮ: ಸಮತಾ ಸೈನಿಕ ದಳದಿಂದ ಬೃಹತ್ ಹೋರಾಟದ ಎಚ್ಚರಿಕೆ

ಬೆಂಗಳೂರು; ಆರ್ಟ್ ಆಫ್ ಲೀವಿಂಗ್ ನ ಶ್ರೀ ರವಿಶಂಕರ್ ಗುರೂಜಿ ಆಶ್ರಮದಿಂದ ದಲಿತ ವೃದ್ಧ ಮಹಿಳೆಗೆ ಸೇರಿದ ಎರಡು ಎಕರೆ ಭೂಮಿ ಕಬಳಿಸಿದ್ದು, ಇದನ್ನು ವಿರೋಧಿಸಿ ಕನಕಪುರ ರಸ್ತೆಯ ಉದಿಪಾಳ್ಯ ಆಶ್ರಮದ ಮುಂದೆ ಇದೇ 29 ರಂದು ಭಾರೀ ಪ್ರತಿಭಟನೆ ನಡೆಸುತ್ತಿದ್ದು, ನ್ಯಾಯ ಸಿಗುವ ತನಕ ಹೋರಾಟ ಮುಂದುವರೆಸುವುದಾಗಿ ಸಮತಾ ಸೈನಿಕ ದಳ ಎಚ್ಚರಿಕೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮತಾ ಸೈನಿಕ ದಳದ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಆರ್ ಚಂದ್ರಶೇಖರ್, ಬೆಂಗಳೂರು