ರಾಷ್ಟ್ರೀಯ ವಿಚಾರಧಾರೆಗಳಲ್ಲಿ ಬಿಜೆಪಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಹಿಂದುಗಳನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಿರ್ಲಕ್ಷಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಡಾ. ನವೀನ್ ಹೇಳಿದರು. ಪುತ್ತೂರು ಅಮರ ಜವಾನ್ ಸ್ಮಾರಕದ ಬಳಿ ರಾಜ್ಯ
ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭ ನಿಯೋಗದೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯಳ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ
ಉಡುಪಿಯ ಜಿಲ್ಲೆಯ ಮುದ್ದೂರು ಎಂಬಲ್ಲಿ ಬಿಜೆಪಿಯವರಿಂದಲೇ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಾಣಾಂತಿಕ ಹಲ್ಲೆ ನಡೆದಿದ್ದು ಗಂಭೀರ ಗಾಯಗೊಂಡಿರುವ ಬಿಜೆಪಿ ಕಾರ್ಯಕರ್ತ ನೆಂಚಾರು ನಿವಾಸಿ ಪ್ರಭಾಕರ ಪೂಜಾರಿ (51) ಅಜ್ಜರಕಾಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು ಮೊದಲಿನಿಂದಲೂ ಬಿಜೆಪಿಯ ಕಾರ್ಯಕರ್ತರಾಗಿದ್ದ ಪ್ರ್ರಭಾಕರ ಪೂಜಾರಿ ಕಳೆದ ಬಾರಿ ಸ್ಥಳೀಯ ಪಂಚಾಯತ್ ಚುನಾವಣೆಯಲ್ಲಿ
ಕಾಂಗ್ರೆಸ್ ಆಡಳಿತದಲ್ಲಿ ಬಿಜೆಪಿ ಶಾಸಕರಿಗೆ ಅಗೌರವ, ಹಕ್ಕುಚ್ಯುತಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಗ್ರಾಪಂ, ತಾಲೂಕು ಮಟ್ಟದ ಕಾರ್ಯಕ್ರಮಗಳನ್ನು ದಿಢೀರ್ ರದ್ದುಪಡಿಸಿ ಕಾಂಗ್ರೆಸ್ ನಾಯಕರು ದುರಾಡಳಿತ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪದಾಧಿಕಾರಿಗಳು ಕ್ಷೇತ್ರದ ಶಾಸಕರನ್ನು ಕಡೆಗಣಿಸಿ ದರ್ಪ ಮೆರೆಯುತ್ತಾರೆ. ಗ್ರಾಪಂ ಮಟ್ಟದ ಅಧಿಕಾರಿಗಳನ್ನು
ತಲಪಾಡಿ ಗ್ರಾಮ ಪಂಚಾಯಿತಿನಲ್ಲಿ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಎಸ್ಡಿಪಿಐ ಅಭ್ಯರ್ಥಿಗಳನ್ನು ಬೆಂಬಲಿಸಿದ ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರನ್ನು ಜಿಲ್ಲಾಧ್ಯಕ್ಷರ ಆದೇಶದಂತೆ ತಕ್ಷಣದಿಂದ ಪಕ್ಷದ ಚಟುವಟಿಕೆಗಳಿಂದ ಉಚ್ಛಾಟಿಸಲಾಗುವುದು ಹಾಗೂ ಮುಂದಿನ ಆರು ವರ್ಷಗಳ ಕಾಲ ಪಕ್ಷಕ್ಕೆ ಬರದಂತೆ ನಿರ್ಭಂಧಿಸಲಾಗುವುದು ಎಂದು ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಹೇಳಿದ್ದಾರೆ. ಅವರು ಪಂಡಿತ್ ಹೌಸ್ನ ಚುನಾವಣಾ
ಉಡುಪಿ: ಮುಂಬರುವ ಲೋಕಸಭಾ ಚುನಾವಣೆಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಬಿಜೆಪಿಯ ಅಭ್ಯರ್ಥಿ ಆಗಲು ಪ್ರಬಲ ಆಕಾಂಕ್ಷಿ ಆಗಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಕೆಲ ಜನರ ಬಾಯಿಯಲ್ಲಿ ನಾನು ಬಿಜೆಪಿಯನ್ನು ತ್ಯಜಿಸುವ ಸಾಧ್ಯತೆ ಇದೆ ಎಂಬ ಅಪಪ್ರಚಾರ ನಡೆಯುತ್ತಿದೆ. ಮುಂದೊಂದು ದಿನ ರಾಜಕೀಯ ನಿವೃತ್ತಿ -ದೇಹಾಂತ್ಯ ಆಗುವವರೆಗೆ ನಾನು ಬಿಜೆಪಿಯಲ್ಲಿ ಕಾರ್ಯಕರ್ತನಾಗಿರುತ್ತೇನೆ.ಇಹಲೋಕ ತ್ಯಾಗ ಮಾಡುವ
ಉಡುಪಿ: ರಾಜ್ಯ ಸರಕಾರದ ಸರ್ವಾಧಿಕಾರಿ ಧೋರಣೆ, ಸಂವಿಧಾನ ವಿರೋಧಿ ನೀತಿ, ಹದಗೆಟ್ಟ ಕಾನೂನು ಸುವ್ಯವಸ್ಥೆ, ರೈತರ ಆತ್ಮಹತ್ಯೆ, ಬೆಲೆ ಏರಿಕೆ ವಿರುದ್ಧ ಜಿಲ್ಲಾ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತು. ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದ ಬಳಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗಿಯಾದರು. ಈ ವೇಳೆ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನಕಾರರು ಧಿಕ್ಕಾರ ಕೂಗಿದರು. ಬೆಂಗಳೂರಿನಲ್ಲಿ ಬಂಧಿತ ಶಂಕಿತ ಭಯೋತ್ಪಾದಕರ ಪ್ರಕರಣವನ್ನು
ಕರ್ನಾಟಕ ರಾಜ್ಯ ಅಧಿವೇಶನದಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಿದರು ಎಂದು ಆರೋಪಹರಿಸಿ 10 ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕಾಂಗ್ರೆಸ್ ಪಕ್ಷದ ನಡವಳಿಕೆ ಹಾಗೂ ನಿಷ್ಪಕ್ಷಪಾತವಾಗಿ ನ್ಯಾಯ ನೀಡಬೇಕಾಗಿದ್ದ ಸ್ಪೀಕರ್ ವಿರುದ್ಧ ಬಿಜೆಪಿ ಯುವ ಮೋರ್ಚ ಸುರತ್ಕಲ್ ನಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಮಂಗಳೂರು ಉತ್ತರಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ ರಾಜ್ಯ ಯುವ ಮೋರ್ಚಾ
ಸುಳ್ಯ ತಾಲೂಕಿನ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬದ ನೂತನ ಕಛೇರಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಡಬ ಮಿನಿ ವಿಧಾನ ಸೌಧದಲ್ಲಿ ನೂತನ ಕಚೇರಿ ಉದ್ಘಾಟಿಸಲಾಯಿತು. ಬೆಳಿಗ್ಗೆ ಗಣಹೋಮ ಪೂಜೆ ನಡೆಸಿದ ಬಳಿಕ ಉದ್ಘಾಟನೆ ನೆರವೇರಿಸಲಾಯಿತು. ಜನಸಂಘ ಹಗೂ ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಹರಿಶ್ಚಂದ್ರ ರೈ ಪಟ್ಟೆಗುತ್ತು ಪೆರಾಬೆ ಹಾಗೂ ತನಿಯಪ್ಪ ಮಜ್ಜಗುಡ್ಡೆ ಕಡಬ, ಕುಶಾಲಪ್ಪ ಗೌಡ ಕುಡಾಲ ದೀಪ ಬೆಳಗಿಸಿ ಉದ್ಘಾಟನೆ ನೆರವೇರಸಿದರು. ಶಾಸಕಿ ಭಾಗೀರಥಿ ಮುರುಳ್ಯ ಅವರು 94
ಆ್ಯಂಕರ್ : ಗೋ ಕಳ್ಳತನ ಹಾಗೂ ಗೋಹತ್ಯೆ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಗೋ ಸಂಸ್ಕøತಿ ಇದೆ. ಕೃಷಿ, ಜೀವನ, ಆರಾಧನೆ ಎಲ್ಲದಕ್ಕೂ ಗೋವು ಮುಖ್ಯವಾಗಿದೆ. ಗೋ ರಕ್ಷಣೆಗಾಗಿ ಬಿಜೆಪಿ ಸರಕಾರ ಗೋ ಹತ್ಯೆ ನಿಷೇಧ ಕಾನೂನು ಜಾರಿ ಮಾಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಕೈ ಬಿಡುವ ನಿರ್ಧಾರ ಮಾಡುತ್ತಿದೆ. ರಾಜ್ಯದಲ್ಲಿ ಗೋ