ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವು ಬಹಿರಂಗ ಪ್ರಚಾರ ಸಭೆಗೆ ಮುನ್ನುಡಿ ಬರೆದಿದ್ದು, ಈಗಾಗಲೇ ಹಲವಾರು ಯಶಸ್ವಿ ಸಭೆ ನಡೆದಿದೆ. ಪ್ರತಿ ಸಭೆಯಲ್ಲೂ ಸಾವಿರಕ್ಕೂ ಅಧಿಕ ಜನರು ಉಪಸ್ಥಿತರಿರುವ ಮೂಲಕ ಬಿಜೆಪಿ ಪರವಾದ ಸ್ಪಷ್ಟ ವಾತಾವರಣ ಸೃಷ್ಟಿಯಾಗುತ್ತಿದೆ. ಈ ಮಧ್ಯೆ ಬಿಜೆಪಿ ಯಶಸ್ಸು ನೋಡುತ್ತಿರುವ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ತ್ಯಜಿಸಿ ಬಿಜೆಪಿ
ಮೂಡುಬಿದಿರೆ: ಇರುವೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಡಾರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಅವರು ಮತ ಪ್ರಚಾರ ನಡೆಸಿದರು.ಈ ಸಂದರ್ಭ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ಸಚಿನ್ ಶೆಟ್ಟಿ ಅವರು ಕ್ಷೇತ್ರದಲ್ಲಾಗಿರುವ ಅಭಿವೃದ್ಧಿ ಕಾರ್ಯ, ಕೇಂದ್ರ ಮತ್ತು ರಾಜ್ಯ ಸರಕಾರಗಳ ಕಾರ್ಯ ಶೈಲಿಯನ್ನು ಮೆಚ್ಚಿ ಕೋಟ್ಯಾನ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ವಕೀಲ ಶಾಂತಿಪ್ರಸಾದ್ ಹೆಗ್ಡೆ,ಪಂಚಾಯತ್ ಸದಸ್ಯರುಗಳಾದ
ಇದು ನಮ್ಮ ಕೊನೆಯ ಚುನಾವಣೆ, ರಾಜಕೀಯ ನಿವೃತ್ತಿ ಎಂದು ಜನರ ಬಳಿಕ ಕಾಂಗ್ರೆಸ್ ತೆರಳಿ ಮತಯಾಚನೆ ಮಾಡುತ್ತಿದೆ. ಆಂತಹ ಕಾಂಗ್ರೆಸ್ ನಾಯಕರನ್ನು ತಿರಸ್ಕರಿಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿನಲ್ಲಿ ಗುಡುಗಿದ್ದಾರೆ. ಅವರು ಮೂಲ್ಕಿಯ ಕೊಳ್ನಾಡುವಿನಲ್ಲಿ ನಡೆದ ಬಿಜೆಪಿಯ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಮ್ಮ ನಾಯಕ ನಿವೃತ್ತಿಯಾಗುತ್ತಿದ್ದಾನೆ. ಅದಕ್ಕಾಗಿ ವೋಟ್ ಕೊಡಿ ಎಂದು ಕಾಂಗ್ರೆಸ್ ಕೇಳುತ್ತಿದೆ.
ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರ ಚುನಾವಣಾ ಮತಯಾಚನಯು ಮಜೂರು ಪಂಚಾಯತ್ ವ್ಯಾಪ್ತಿಯ ಪ್ರದೇಶದಲ್ಲಿ ನೆರವೇರಿತು.ಮತದಾರರನ್ನು ಉದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು, ಪಕ್ಷದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾತನಾಡಿ ಈ ಬಾರಿಯೂ ಬಿಜೆಪಿ ಸರ್ಕಾರದ ಆಡಳಿತಕ್ಕಾಗಿ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ನಂತರ ಶಾಸಕರಾದ ಲಾಲಾಜಿ
ಮೂಲ್ಕಿಯ ಕೋಳ್ನಾಡುವಿನಲ್ಲಿ ನವಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ನಡೆಸಿ ಕಾಂಗ್ರೆಸ್ ವಿರುದ್ದ ಕಿಡಿಕಾರಿದರು. ಮೂಲ್ಕಿಯ ಕಾರ್ನಾಡಿನ ಗುಂಡಾಲು ಪ್ರದೇಶದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪರಶುರಾಮ ಸೃಷ್ಟಿ ಎಂದು ತುಳುವಿನಲ್ಲಿ ಮಾತನಾಡಿದರು. ಹಿಂದಿನ ಕಾಂಗ್ರೆಸ್ ಸರ್ಕಾರಕ್ಕೆ ಮೀನುಗಾರರ ಸಂಕಷ್ಟಗಳು ಕಣ್ಣಿಗೆ ಕಾಣಲಿಲ್ಲ. ಉಡುಪಿಯಲ್ಲಿ ನನ್ನ ಸಹೋದರರ
ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡ ಅಪಾರ ಸಂಖ್ಯೆಯ ತಾಯಂದಿರು, ಅಕ್ಕ ತಂಗಿಯರನ್ನು ಕಂಡಾಗ, ಬಿಜೆಪಿ ಬಗ್ಗೆ ಬೈಂದೂರಿನ ಮಹಿಳೆಯರಿಗೆ ನಂಬಿಕೆಯಿರುವುದು ಖಾತ್ರಿ. ಅಪಾರ ಹಾಗಾಗಿ ಮುಂಬರುವ ಚುನಾವಣೆಯಲ್ಲಿ ಬೈಂದೂರಲ್ಲಿ ಗುರುರಾಜ್ ಗಂಟೆಹೊಳೆ ಅವರ ಗೆಲುವು ನಿಶ್ಚಿತ ಎಂದು ಬಿಜೆಪಿಯ ಸ್ಟಾರ್ ಪ್ರಚಾರಕಿ, ನಟಿ ತಾರಾ ವಿಶ್ವಾಸ ವ್ಯಕ್ತಪಡಿಸಿದರು. ಅವರು ಹೆಮ್ಮಾಡಿಯ ಜಯಶ್ರೀ ಸಭಾಂಗಣದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಬೈಂದೂರು ಮಂಡಲದ ವತಿಯಿಂದ ನಡೆದ ಮಹಿಳಾ
ಬೈಂದೂರು: ಜಿಲ್ಲೆಯಲ್ಲಿ ನಾಲ್ಕು ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಬಿಜೆಪಿ ಪಕ್ಷ ತನ್ನ ಹೊಸ ಪ್ರಯೋಗದಲ್ಲಿ ಖಂಡಿತ ಯಶಸ್ಸು ಸಾಧಿಸಲಿದೆ. ಮಾತ್ರವಲ್ಲ ರಾಜ್ಯದಲ್ಲಿಯೂ ಬಿಜೆಪಿ ಪ್ರಚಂಡ ಗೆಲುವು ದೊರೆಯಲಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮದ್ವರಾಜ್ ಹೇಳಿದರು. ಅವರು ಮಂಗಳವಾರ ಬೈಂದೂರು ಬಿಜೆಪಿ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬೈಂದೂರು ಬಿಜೆಪಿ ಅಭ್ಯರ್ಥಿಯ ಬಗ್ಗೆ ಕಾರ್ಯಕರ್ತರು ಹಾಗೂ ಜನರಲ್ಲಿ ಉತ್ತಮ
ಬೆಳ್ತಂಗಡಿಯ ಬಿಜೆಪಿ ಪಕ್ಷದಿಂದ ಬೇಸತ್ತು, ಬಹಿರಂಗವಾಗಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಪಕ್ಷಕ್ಕೆ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕುಲಾಲ್ ಸಮುದಾಯದ ಮುಖಂಡರಾದ ಚಂದಪ್ಪ ಕುಲಾಲ್ ಅವರು ಮಾಜಿ ಶಾಸಕರಾದ ವಸಂತ ಬಂಗೇರರ ನೇತೃತ್ವದಲ್ಲಿ ಸೇರ್ಪಡೆಗೊಂಡಿದ್ದಾರೆ. ಮಡಂತ್ಯಾರನಲ್ಲಿ ನಡೆದ ಪಕ್ಷ ಸೇರ್ಪಡೆಯಲ್ಲಿ ಕಾಂಗ್ರೆಸ್ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಮಾತ್ನಾಡಿ, ಚಂದಪ್ಪ ಕುಲಾಲ್ ಅವರಂತಹ ಪ್ರಮುಖರು
ಮಂಗಳೂರು ವಿಧಾನಸಭಾ ಕ್ಷೇತ್ರದ ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಸಾಂಬಾರ ತೋಟ 109 ವಾರ್ಡಿನಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲರವರ ಪರ ಮನೆ ಮನೆ ಭೇಟಿ ನೀಡಿ ಮತಯಾಚನೆ ನಡೆಸಲಾಯಿತು.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿರುವ ಬಜರಂಗದಳ ನಿಷೇಧ ಕುರಿತು ಮಂಗಳೂರು ನಗರ ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರು ಕಿಡಿ ಕಾರಿದ್ದು, ನಿಷೇಧಿತ ಪಿಎಫ್ಐ ಜೊತೆ ಬಜರಂಗದಳವನ್ನು ಹೋಲಿಕೆಗೆ ತಕ್ಕ ಪ್ರತಿಫಲ ಅನುಭವಿಸಲಿದೆ ಎಂದು ಹೇಳಿದ್ದಾರೆ. ಜನರಿಂದ ತಿರಸ್ಕಾರಗೊಂಡಿರುವ ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಓಲೈಕೆ ರಾಜಕಾರಣದಲ್ಲಿ ತೊಡಗಿಸಿಕೊಂಡಿದೆ. ದೇಶಪ್ರೇಮ ಹಾಗೂ ದೇಶದ್ರೋಹಿಗಳ ನಡುವೆ ವ್ಯತ್ಯಾಸ ತಿಳಿಯದ ಕಾಂಗ್ರೆಸ್