Home Posts tagged #bjp (Page 25)

ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ :ಉಡುಪಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ

ಮುಖ್ಯ ಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ರು, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರು ನೇತೃತ್ವದಲ್ಲಿ ಉಡುಪಿಯ ಕ್ಲಾಕ್ ಟವರ್ ಬಳಿ ಸೇರಿದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ,ಜೈಕಾರ ಹಾಕಿ ಸಂಭ್ರಮಿಸಿದರು. ಇನ್ನು ಉಡುಪಿ ಜಿಲ್ಲಾ ಉಸ್ತುವಾರಿ

ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ: ಪ್ರಮಾಣವಚನ ಬೋಧಿಸಿದ ರಾಜ್ಯಪಾಲ ಟಿ.ಸಿ.ಗೆಹ್ಲೋಟ್

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಜ ಬೊಮ್ಮಾಯಿ ಅವರಿಗೆ ಪ್ರಮಾಣ ಬೋಧಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆ ಪ್ರಮಾಣ ವಚನ ಬೋಧಿಸಿದರು. ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಕಾರ್ಯಕ್ರಮ

ಮಂಗಳೂರು ಉತ್ತರ ಮಂಡಲ ಬಿಜೆಪಿ ಮಹಿಳಾ ಮೋರ್ಚಾದಿಂದ ಕಾರ್ಯಕಾರಿಣಿ  ಸಭೆ 

ಕಾವೂರು: ಮಂಗಳೂರು ಉತ್ತರ ಮಂಡಲ ಮಹಿಳಾ ಮೋರ್ಚಾ  ಇದರ ಕಾರ್ಯಕಾರಿಣಿ ಸಭೆ ಕಾವೂರು ಬಿಜೆಪಿ ಕಚೇರಿಯಲ್ಲಿ ಶನಿವಾರ ಜರಗಿತು. ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಕಾರ್ಯಕಾರಿಣಿ ಉದ್ಘಾಟಿಸಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಎಲ್ಲರಿಗೂ ಅವಕಾಶ ಲಭಿಸುತ್ತದೆ. ಪಕ್ಷದ ಮೇಲೆ ನಿಷ್ಟೆಯಿಟ್ಟು ನಾವು ಪಕ್ಷದ ಹಿತಕ್ಕಾಗಿ ಕೆಲಸ ಮಾಡಿದಾಗ ನಾಯಕರು ಇದನ್ನು ಗುರುತಿಸಿ ಪಕ್ಷ  ಸಂಘಟನೆ ಜವಾಬ್ದಾರಿ ಜತೆಗೆ ಸ್ಥಳೀಯ ಚುನಾವಣಾ ಕಣಕ್ಕೂ ಇಳಿಸಲು ಸೂಚಿಸಬಹುದು.ಬಿಜೆಪಿ ಇತರ

ಬೆಳ್ತಂಗಡಿಯಲ್ಲಿ ಬಿಜೆಪಿ ಮಂಡಲದಿಂದ ವಿಶೇಷ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜಾ ರವರು ಕೋವಿಡ್ನ 2 ನೆ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸುವ ದೇಶ ಅಂದರೆ ಅದು ನರೇಂದ್ರ ಮೋದಿ ಸರಕಾರದ ಭಾರತ ದೇಶ, ಕರ್ನಾಟಕದಲ್ಲಿ ಮುಖ್ಯ ಮಂತ್ರಿ ಯಡಿಯೂರಪ್ಪ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಅಲ್ಲದೆ ಬರೀ ಮೂರು ವರ್ಷದಲ್ಲಿ ಬೆಳ್ತಂಗಡಿ

ಬಿಜೆಪಿ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್: ಕಾಂಗ್ರೆಸ್ ಟ್ವೀಟ್ ಮೂಲಕ ಲೇವಡಿ

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರದ್ದೆನ್ನಲಾದ ಆಡಿಯೋ ಸಂಬಂಧ ಕರ್ನಾಟಕ ಕಾಂಗ್ರೆಸ್ ಪಕ್ಷ, ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಎಂದು ಲೇವಡಿ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್, ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ಬಿಎಸ್ ಯಡಿಯೂರಪ್ಪ ಅವರಿಗೆ ಈ ಹಿಂದೆಯೇ ಮನವರಿಕೆಯಾಗಿತ್ತು. ಆದರೆ ಜಗದೀಶ್ ಶೆಟ್ಟರ್ ಮತ್ತು ಕೆಎಸ್ ಈಶ್ವರಪ್ಪ

ವೈರಲ್ ಆಗ್ತಿರೋ ವಿಡಿಯೋ ನನ್ನದಲ್ಲ: ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ- ನಳಿನ್ ಕುಮಾರ್ ಕಟೀಲ್

ನಾಯಕತ್ವ ಬದಲಾವಣೆ ಕುರಿತಂತೆ ವೈರಲ್ ಆಗಿರುವ ವಿಡಿಯೋಗೂ ನನಗೂ ಸಂಬಂಧವಿಲ್ಲ. ಮುಖ್ಯಮಂತ್ರಿಗಳಿಗೆ ಈ ಪತ್ರ ಬರೆಯುತ್ತೇನೆ ಹಾಗೂ ತನಿಖೆಗೆ ಆಗ್ರಹಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಆಡಿಯೋ ವೈರಲ್ ಕುರಿತಾಗಿ ಮಂಗಳೂರಲ್ಲಿ ಮಾತನಾಡಿದ್ರು. ತನಿಖೆಯ ಬಳಿಕ ಆಡಿಯೋದ ಸತ್ಯಾಸತ್ಯತೆ ಹೊರ ಬರಲಿದೆ. ನಾಯಕತ್ವದ ಬದಲಾವಣೆ ಕುರಿತು ನಮ್ಮಲ್ಲಿ ಯಾವುದೇ ಚರ್ಚೆಗಳಿಲ್ಲ.ನಮ್ಮ ಪಾರ್ಟಿಗೆ ಆತ್ಮ ಯಡಿಯೂರಪ್ಪ. ಅವರೇ ನಮ್ಮ ಸರ್ವ ಸಮ್ಮತದ

ಬಿಜೆಪಿ ಮತ್ತು ಕಾಂಗ್ರೆಸ್ ಪ್ರತಿಭಟನಾಕಾರರ ಮುಖಾಮುಖಿ: ಕಾವಳಕಟ್ಟೆಯಲ್ಲಿ ವಾಗ್ವಾದ

ಬಂಟ್ವಾಳ: ಭಿನ್ನ ಉದ್ದೇಶಗಳಿಗೆ ಪ್ರತಿಭಟನೆ ನಡೆಸಲು ಜಮಾಯಿಸಿದ್ದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯ ಕರ್ತರ ನಡುವೆ ವಾಗ್ವಾದ ನಡೆದು ಪರಸ್ಪರ ಹೊಯೈ ಕೈ ನಡೆದ ಘಟನೆ ಕಾವಳಕಟ್ಟೆಯಲ್ಲಿ ನಡೆದಿದೆ. ಕಾವಳಮೂಡೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಸಿದ್ದತೆ ನಡೆಸಿದ್ದರು. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕಾವಳಮೂಡೂರು ಗ್ರಾ.ಪಂ. ನೀರು ಹಾಗೂ ಮನೆ ತೆರಿಗೆಯನ್ನು ಏಕಾಏಕಿ ಏರಿಕೆಯನ್ನು

ಕೇಂದ್ರದಲ್ಲಿರುವುದು ಹೃದಯಹೀನ ಸಂವೇದನಾ ರಹಿತ ಸರಕಾರ: ಸುನಿಲ್ ಕುಮಾರ್ ಬಜಾಲ್

ಮಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ದುರ್ಬಲ ಆರ್ಥಿಕ ನೀತಿಯಿಂದಾಗಿ ದೇಶದ ಅರ್ಥ ವ್ಯವಸ್ಥೆ ಅಧಪತನದತ್ತ ಸಾಗುತ್ತಿದೆ. ತಪ್ಪು ಆರ್ಥಿಕ ನೀತಿಯಿಂದಾಗಿ ಅಕ್ರಮಗಳೇ ಬಿಜೆಪಿ ಸರಕಾರದ ನೀತಿಗಳಾಗುತ್ತಿವೆ. ಹಾಗಾಗಿ ಭ್ರಷ್ಟಾಚಾರ ಪ್ರಕರಣ ಹೊರಬರುತ್ತಿಲ್ಲ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.ಅವರು ಇಂದು ಹಳೆ ಬಂದರು ಸಗಟು ಮಾರುಕಟ್ಟೆಯ ಗೋಳಿಕಟ್ಟೆ ವೃತ್ತದ ಬಳಿ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಪೆಟ್ರೋಲ್,

ಗುರುಪುರ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಶಾಸಕ ಡಾ. ವೈ ಭರತ್ ಶೆಟ್ಟಿ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕರು ಶಾಸಕ ಭರತ್ ಶೆಟ್ಟಿ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಶನಿವಾರ ನಡೆದ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಪ್ರಮುಖರಾದ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ, ಹಾಗೂ ಹಾಲಿ ಪಂಚಾಯತ್ ಸದಸ್ಯರಾದ ಸಚಿನ್ ಅಡಪ್ಪ ,ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹಾಲಿ ಪಂಚಾಯತ್

ಕಾಂಗ್ರೆಸ್ ಪಕ್ಷ ಕೈಗೊಂಡ ದಮನಕಾರಿ ನೀತಿಯ ಬಗ್ಗೆ ಜನಜಾಗೃತಿ : ಜಗದೀಶ್ ಶೇಣವ

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ಕಾಂಗ್ರೆಸ್ ಪಕ್ಷ ಕೈಗೊಂಡ ದಮನಕಾರಿ ನೀತಿಯ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜೂನ್ 26ರ ಸಂಜೆ 4ರಂದು ವೆಬೆಕ್ಸ್ ಮೂಲಕ ವಿಚಾರಗೋಷ್ಠಿಯನ್ನು ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಮಾಧ್ಯಮ ವಕ್ತಾರ ಜಗದೀಶ್ ಶೇಣವ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1975ರಲ್ಲಿ ಕಾಂಗ್ರೆಸ್ ಪಕ್ಷವು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ಪ್ರಜಾಪ್ರಭುತ್ವದ ಹತ್ಯೆ