Home Posts tagged #bjp (Page 7)

ಉಡುಪಿ : ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆ ಖಂಡಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ

ಉಡುಪಿ: ರಾಜ್ಯ ಸರಕಾರದ ಸರ್ವಾಧಿಕಾರಿ ಧೋರಣೆ, ಸಂವಿಧಾನ ವಿರೋಧಿ ನೀತಿ, ಹದಗೆಟ್ಟ ಕಾನೂನು ಸುವ್ಯವಸ್ಥೆ, ರೈತರ ಆತ್ಮಹತ್ಯೆ, ಬೆಲೆ ಏರಿಕೆ ವಿರುದ್ಧ ಜಿಲ್ಲಾ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತು. ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದ ಬಳಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗಿಯಾದರು. ಈ ವೇಳೆ ಕಾಂಗ್ರೆಸ್ ಸರಕಾರದ ವಿರುದ್ಧ

ಬಿಜೆಪಿ ಯುವ ಮೋರ್ಚ ವತಿಯಿಂದ ಸ್ಪೀಕರ್ ವಿರುದ್ಧ ಪ್ರತಿಭಟನೆ

ಕರ್ನಾಟಕ ರಾಜ್ಯ ಅಧಿವೇಶನದಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಿದರು ಎಂದು ಆರೋಪಹರಿಸಿ 10 ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕಾಂಗ್ರೆಸ್ ಪಕ್ಷದ ನಡವಳಿಕೆ ಹಾಗೂ ನಿಷ್ಪಕ್ಷಪಾತವಾಗಿ ನ್ಯಾಯ ನೀಡಬೇಕಾಗಿದ್ದ ಸ್ಪೀಕರ್ ವಿರುದ್ಧ ಬಿಜೆಪಿ ಯುವ ಮೋರ್ಚ ಸುರತ್ಕಲ್ ನಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ಮಂಗಳೂರು ಉತ್ತರಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ ರಾಜ್ಯ ಯುವ ಮೋರ್ಚಾ

ಕಡಬ : ಶಾಸಕಿ ಭಾಗೀರಥಿ ಮುರುಳ್ಯ ಅವರ ನೂತನ ಕಚೇರಿ ಉದ್ಘಾಟನೆ

ಸುಳ್ಯ ತಾಲೂಕಿನ ಶಾಸಕಿ ಭಾಗೀರಥಿ ಮುರುಳ್ಯ ಅವರ ಕಡಬದ ನೂತನ ಕಛೇರಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಡಬ ಮಿನಿ ವಿಧಾನ ಸೌಧದಲ್ಲಿ ನೂತನ ಕಚೇರಿ ಉದ್ಘಾಟಿಸಲಾಯಿತು. ಬೆಳಿಗ್ಗೆ ಗಣಹೋಮ ಪೂಜೆ ನಡೆಸಿದ ಬಳಿಕ ಉದ್ಘಾಟನೆ ನೆರವೇರಿಸಲಾಯಿತು. ಜನಸಂಘ ಹಗೂ ಬಿಜೆಪಿಯ ಹಿರಿಯ ಕಾರ್ಯಕರ್ತರಾದ ಹರಿಶ್ಚಂದ್ರ ರೈ ಪಟ್ಟೆಗುತ್ತು ಪೆರಾಬೆ ಹಾಗೂ ತನಿಯಪ್ಪ ಮಜ್ಜಗುಡ್ಡೆ ಕಡಬ, ಕುಶಾಲಪ್ಪ ಗೌಡ ಕುಡಾಲ ದೀಪ ಬೆಳಗಿಸಿ ಉದ್ಘಾಟನೆ ನೆರವೇರಸಿದರು. ಶಾಸಕಿ ಭಾಗೀರಥಿ ಮುರುಳ್ಯ ಅವರು 94

Mangaluru : ಗೋ ಕಳ್ಳತನ ಹಾಗೂ ಗೋಹತ್ಯೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು : ನಳಿನ್ ಕುಮಾರ್ ಕಟೀಲ್

ಆ್ಯಂಕರ್ : ಗೋ ಕಳ್ಳತನ ಹಾಗೂ ಗೋಹತ್ಯೆ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಗೋ ಸಂಸ್ಕøತಿ ಇದೆ. ಕೃಷಿ, ಜೀವನ, ಆರಾಧನೆ ಎಲ್ಲದಕ್ಕೂ ಗೋವು ಮುಖ್ಯವಾಗಿದೆ. ಗೋ ರಕ್ಷಣೆಗಾಗಿ ಬಿಜೆಪಿ ಸರಕಾರ ಗೋ ಹತ್ಯೆ ನಿಷೇಧ ಕಾನೂನು ಜಾರಿ ಮಾಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಕೈ ಬಿಡುವ ನಿರ್ಧಾರ ಮಾಡುತ್ತಿದೆ. ರಾಜ್ಯದಲ್ಲಿ ಗೋ

ಗೋಸಾಗಾಟ, ಗೋವಧೆ ನಡೆಸುವವರ ವಿರುದ್ಧ ನಿಗಾ ವಹಿಸಬೇಕು :ಶಾಸಕ ವೇದವ್ಯಾಸ್ ಕಾಮತ್

ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ನಡೆಸುವವರ ವಿರುದ್ಧ ನಿಗಾ ವಹಿಸಬೇಕು. ಗೋಕಳ್ಳತನ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಕಾಮತ್ ಅವರು, ಗೋವು ಹಿಂದುಗಳಿಗೆ ಪವಿತ್ರವಾಗಿದೆ. ಜಿಲ್ಲೆಯಲ್ಲಿ ಶಾಂತಿ ಕಾಪಾಡುವ ದೃಷ್ಟಿಯಿಂದ ಅಕ್ರಮ ಗೋವಧೆ, ಅಕ್ರಮ ಗೋಹತ್ಯೆ ತಡೆಯಲು ಪೆÇಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈಗಾಗಲೇ ಅನೇಕ ಕಡೆಗಳಲ್ಲಿ

ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ : ಸಂಸದ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ

ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ಸ್ಪಷ್ಟ ಪಡಿಸಿದ್ದಾರೆ. ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ

ಕಾಪುವಿನಲ್ಲಿ ಬಿಜೆಪಿ ಪಕ್ಷ ಕಛೇರಿ ಉದ್ಘಾಟನೆ

ಕಾಪುವಿನಲ್ಲಿ ಬಿಜೆಪಿ ಪಕ್ಷದ ಕಛೇರಿಯನ್ನು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್ ಮಾತನಾಡಿ, ಪಕ್ಷದ ಕಾರ್ಯಕರ್ತರಿಗೆ ಅನುಕೂಲವಾಗುವ ರೀತಿಯಲ್ಲಿ ಈ ಕಛೇರಿಯನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು. ಮಾಜಿ ಶಾಸಕ ಲಾಲಾಜಿ ಮೆಂಡನ್ ಕಛೇರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭ ಪಕ್ಷದ ಜಿಲ್ಲಾಧ್ಯಕ್ಷ ಕೊಯಿಲಾಡಿ ಸುರೇಶ್ ನಾಯಕ್, ನವೀನ್ ಮುಂತಾದ ಮುಖಂಡರಿದ್ದರು.

ಮತಾಂತರ ತಿದ್ದುಪಡಿ ಕಾಯ್ದೆ ರದ್ದು ವಿಚಾರ ಖಂಡನೀಯ : ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಕಿಡಿ

ಮಂಗಳೂರು: ಕಾಂಗ್ರೆಸ್ ಸರಕಾರ ಮತಾಂತರ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಲು ಹೊರಟಿರುವ ನಿರ್ಧಾರ ಖಂಡನೀಯ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಹೇಳಿದರು. ಅವರು ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಎಪಿಎಂಸಿ ಕಾಯ್ದೆಯನ್ನು ರದ್ದು ಮಾಡುವ ಮೂಲಕ ದಳ್ಳಾಲಿಗಳಿಗೆ ಉತ್ತೇಜನ ನೀಡುವ, ಏಜೆಂಟರಿಗೆ ಅವಕಾಶ ಮಾಡಿಕೊಡುವ ಅವಕಾಶ ಕರ್ನಾಟಕ ರೈತರಿಗೆ ಮಾಡಿದ ಮೋಸವಾಗಿದೆ. ಪಠ್ಯಪುಸ್ತಕ ಪರಿಷ್ಕರಣೆ ಸ್ವಾತಂತ್ರ್ಯ ಬಂದ ಕೂಡಲೇ

ಬಿಜೆಪಿ ರಾಜ್ಯಾಧ್ಯಕ್ಷರ ಸವಣೂರಿನ ಮನೆಯಲ್ಲಿ ರಹಸ್ಯ ಹವನ

ಬಿಜೆಪಿ ರಾಜ್ಯಾಧ್ಯಕ್ಷರ ಸವಣೂರಿನ ಮನೆಯಲ್ಲಿ ವಿಶೇಷ ಹವನವೊಂದನ್ನು ನಡೆಯುತ್ತಿರುವುದಾಗಿ ತಿಳಿದುಬಂದಿದೆ. ಸುಮಾರು 9ದಿನಗಳ ಕಾಲ ಈ ವಿಶಿಷ್ಟ ಹವನ ನಡೆಯಲಿದ್ದು, ಜೂ.11ರಂದು ಪ್ರಾರಂಭವಾಗಿದ್ದು, ಜೂ.18ರವರೆಗೆ ಹವನ ನಡೆಯಲಿದೆ ನಿರಂತರ 9 ದಿನಗಳ ಕಾಲ ನಡೆಯುವ ಈ ಹೋಮದ ನೇತೃತ್ವವನ್ನು ವಿದ್ವಾನ್ ಬಾಲಕೃಷ್ಣ ಕಾರಂತ್ ವಹಿಸಿದ್ದಾರೆ. ಅತ್ಯಂತ ಗೌಪ್ಯವಾಗಿ ಈ ಹವನವನ್ನು ನಡೆಸಲಾಗುತ್ತಿದ್ದು, ಯಾವ ಉದ್ದೇಶ ಪ್ರಾಪ್ತಿಗಾಗಿ ಈ ಹೋಮ ನಡೆಸಲಾಗುತ್ತಿದೆ ಎಂಬ ವಿಚಾರವನ್ನು

ಮುಲ್ಕಿಯಲ್ಲಿ ಬಿಜೆಪಿ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಗೆಲುವು ಸಾಧ್ಯವಾಗಿದೆ. ಅದ್ದರಿಂದ ಕಾರ್ಯಕರ್ತರಿಗೆ ವಿಶೇಷ ಅಭಿನಂದನೆ ಸಲ್ಲಬೇಕಾಗಿದೆ ಎಂದು ಮುಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಧ ಕೋಟ್ಯಾನ್ ಹೇಳಿದರು. ಅವರು ಪಡುಪಣಂಬೂರಿನ ಮೂಲ್ಕಿ ಸೀಮೆ ಅರಮನೆ ಧರ್ಮಚಾವಡಿಯಲ್ಲಿ ನಡೆದ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ವಿರೋಧ ಪಕ್ಷದವರು ಎಲ್ಲಾ ರೀತಿಯ ಅಪಪ್ರಚಾರ ಮಾಡಿದ್ದು ಆದರೆ ಯಾವುದೇ ಅಪಪ್ರಚಾರಕ್ಕೆ ನಾನು ಉತ್ತರ ನೀಡಲಿಲ್ಲ.