Home Posts tagged #brahmavara

ಬ್ರಹ್ಮಾವರ :ಬಿರ್ತಿಯ ಅರ್ವಿಶ್ ಕೈಚಳಕದಲ್ಲಿ ಮೂಡಿದ ಗಣಪ

ವಿಶ್ವದಾದ್ಯಂತ ಮುಂದಿನವಾರದಿಂದ ನಡೆಯುವ ಶ್ರೀ ಗಣೇಶೋತ್ಸವದ ಸಂಭ್ರಮಕ್ಕೆ ಗಣಪತಿ ವಿಗ್ರಹ ರಚನೆಗಳು ಬಹುತೇಕ ಕಡೆಯಲ್ಲಿ ಅಂತಿಮ ಹಂತ ನಡೆಯುತ್ತಿದ್ದರೆ ಬ್ರಹ್ಮಾವರ ಬಿರ್ತಿಯ 1 ನೇತರಗತಿಯ ವಿದ್ಯಾರ್ಥಿ ಅರ್ವಿಶ್ ಶಾಲಾ ಸಮಯದ ಬಳಿಕ ಮನೆಯಲ್ಲಿ ನಾನಾ ಗಣಪತಿಯನ್ನು ರಚನೆ ಮಾಡಿ ಗಮನಸೆಳೆಯುತ್ತಿದ್ದಾನೆ. ಎಸ್ ಎಂ ಎಸ್.ಸಿಬಿಎಸ್ ಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಪೋಸ್ಟರ್ ಮೇಕಿಂಗ್ ಸ್ಪರ್ಧೆ

ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ “ಪೋಸ್ಟರ್ ಮೇಕಿಂಗ್” ಸ್ಪರ್ಧೆಯನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಸಂಭ್ರಮದಿಂದ ಭಾಗವಹಿಸಿ “ಮಾನವೀಯತೆ” ಎಂಬ ವಿಷಯದ ಕುರಿತು ಪೋಸ್ಟರ್ ಗಳನ್ನು ವಿಭಿನ್ನವಾಗಿ ತಯಾರಿಸಿದರು . ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ. ನಿರ್ದೇಶಕಿ ಶ್ರೀಮತಿ ಮಮತಾ, ಪ್ರಾಂಶುಪಾಲರಾದ ಶ್ರೀ ರವಿರಾಜ್ ಶೆಟ್ಟಿ

ಬ್ರಹ್ಮಾವರದಲ್ಲಿ ಬಿರುಸಿನಿಂದ ನಡೆಯಿತ್ತಿರುವ ಮತದಾನ

ಬ್ರಹ್ಮಾವರ: ನೈರುತ್ಯ ಪಧವೀಧರ ಶಿಕ್ಷಕರ ಚುನಾವಣೆಯ ಮತದಾನ ಬ್ರಹ್ಮಾವರದ ಮತಗಟ್ಟೆಗಳಲ್ಲಿ ನಡೆಯುತ್ತಿದೆ. ಮತಗಟ್ಟೆಯಲ್ಲಿ ಶಿಕ್ಷಕರ ಕ್ಷೇತ್ರದಿಂದ 322 ಪುರುಷರು, 417 ಮಹಿಳೆಯರು ಮತ್ತು ಪಧವೀಧರ ಕ್ಷೇತ್ರದಿಂದ 1489 ಪುರುಷರು 1657 ಮಹಿಳೆಯರು ಮತದಾರರನ್ನು ಹೊಂದಿದೆ.

ಉದ್ಯಾವರದಿಂದ ಕುಂದಾಪುರ ತನಕ ಚತುಷ್ಪಥ ರಸ್ತೆಗೆ ಡಾಮರು :ವಿ4ನ್ಯೂಸ್‌ನ ವರದಿಗೆ ಎಚ್ಚೆತ್ತ ಹೆದ್ದಾರಿ ಇಲಾಖೆ ಅಧಿಕಾರಿಗಳು

ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ ಉಡುಪಿಯ ಉದ್ಯಾವರದಿಂದ ಕುಂದಾಪುರ ತನಕ ಚತುಷ್ಪಥ ರಸ್ತೆಗೆ ಡಾಮರೀಕರಣ ಮಾಡಲಾಗಿತ್ತು. ಆ ಸಂದರ್ಭದಲ್ಲಿ ರಸ್ತೆಗೆ ಬಿಳಿ ಬಣ್ಣದ ಗುರುತುಗಳಿಲ್ಲದೆ ರಸ್ತೆಯಲ್ಲಿ ಅಪಘಾತಗಳ ಹೆಚ್ಚಳ ಕಾರಣವಾಗಿತ್ತು. ಈ ಬಗ್ಗೆ ವಿ4 ನ್ಯೂಸ್‌ನಲ್ಲಿ ಸಮಗ್ರ ವರದಿ ಬಿತ್ತರಿಸಲಾಗಿತ್ತು. ವರದಿಗೆ ಎಚ್ಚೆತ್ತುಕೊಂಡ ಹೆದ್ದಾರಿ ಇಲಾಖೆ ರಸ್ತೆಗೆ ಬಿಳಿ ಬಣ್ಣದ ಗುರುತುಗಳನ್ನು ಹಾಕುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ ೬೬ ಉಡುಪಿ ಜಿಲ್ಲೆಯ ಉದ್ಯಾವರದಿಂದ

ಬ್ರಹ್ಮಾವರ : ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ ಲಕ್ಷಾಂತರ ಮೌಲ್ಯದ ಮಿಲಿಟರಿ ಮದ್ಯ ವಶಕ್ಕೆ – ಓರ್ವ ಅರೆಸ್ಟ್

ಬ್ರಹ್ಮಾವರ : ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಬ್ರಹ್ಮಾವರದಲ್ಲಿ ನಡೆಸಿದ ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮಿಲಿಟರಿ ಮದ್ಯವನ್ನು ವಶಕ್ಕೆ ಪಡೆದು ಓರ್ವನ್ನು ಅರೆಸ್ಟ್ ಮಾಡಿದ್ದಾರೆ. ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು ಉಡುಪಿ ಜಿಲ್ಲೆ ಇವರುಗಳು ಮಾರ್ಗದರ್ಶನದಂತೆ ಖಚಿತ ಮಾಹಿತಿ ಮೇರೆಗೆ ಉಡುಪಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ

ಎಪ್ರಿಲ್ 3ರಂದು ನಾಮಪತ್ರ ಸಲ್ಲಿಕೆ : ಕೋಟ ಶ್ರೀನಿವಾಸ ಪೂಜಾರಿ

ಈ ಬಾರಿಯ ಚುನಾವಣೆ ದೇಶದ ಭದ್ರತೆ, ಬಯೋತ್ಪಾದನೆ ಹತೋಟಿ, ಆರ್ಥಿಕ ಸುಭದ್ರತೆಯನ್ನು ನೀಡಬಲ್ಲ ರಾಷ್ಟ್ರನಾಯಕ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡುವ ಮಹತ್ತರವಾದ ಚುನಾವಣೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬ್ರಹ್ಮಾವರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು, ಈಗಾಗಲೆ ನಮ್ಮ ಮತಕ್ಷೇತ್ರ ವ್ಯಾಪ್ತಿಯ 1850 ಮತಗಟ್ಟೆ ಮತ್ತು ಮತದಾರರ ಒಂದು ಸುತ್ತಿನ ಬೇಟಿ ಮಾಡಿ ಏಪ್ರಿಲ್ ೩ನೇ

ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ಬ್ರಹ್ಮಾವರದ ನದಿ ತೀರದ ಸರಕಾರಿ ಜಾಗದಲ್ಲಿ ನಡೆಯುತ್ತಿರುವ ಮರಳುಗಾರಿಕೆ ವಿರುದ್ಧ ಮೂಡುಹೋಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಬ್ರಹ್ಮಾವರ ತಾಲೂಕು ಸೌಧದ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಅದೇ ಜಾಗದ ಬಳಿ ನೂರಾರು ಎಕ್ರೆ ಕೃಷಿ ಭೂಮಿ ಜಲಾವೃತವಾಗುವ ಭೀತಿ ಎದುರಾಗಿದ್ದು, ಮತ್ತು ಅಲ್ಲಿನ ಪರಿಸರದ ಜನರು ಗೋಮಾಳದಲ್ಲಿ ಹಸುಗಳನ್ನು ಮೇಯಲು ಬಿಟ್ಟಾಗ ಮರಳುಗಾರಿಕೆ ಮಾಡುವವರು ಮಹಿಳೆಯರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಪ್ರತಿಭಟನೆಗೆ ಬಂದ

ಬ್ರಹ್ಮಾವರದಲ್ಲಿ ಎಂ.ಸಿ.ಸಿ ಬ್ಯಾಂಕ್‌ ನ 17ನೇ ಶಾಖೆ ಉದ್ಘಾಟನೆ

ರಾಜ್ಯದ ಅಗ್ರಗಣ್ಯ ಸಹಕಾರಿ ಬ್ಯಾಂಕುಗಳಲ್ಲಿ ಒಂದಾಗಿರುವ ಎಂ.ಸಿ.ಸಿ ಬ್ಯಾಂಕಿನ 17ನೇ ಶಾಖೆಯು ಬ್ರಹ್ಮಾವರದ ವಾರಂಬಳ್ಳಿಯ ಶೇಷಗೋಪಿ ಪ್ಯಾರಡೈಸ್‌ನ ನೆಲಮಹಡಿ, ಆಕಾಶವಾಣಿ ವೃತ್ತದ ಬಳಿ, ಉದ್ಘಾಟನೆಗೊಂಡಿತು. ಹೊಸ ಶಾಖೆಯ ಉದ್ಘಾಟನೆಯನ್ನು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣರವರು ನೆರವೇರಿಸಿದರು. ಹೋಲಿ ಫ್ಯಾಮಲಿ ಚರ್ಚ್, ಬ್ರಹ್ಮಾವರ ಇದರ ಧರ್ಮಗುರುಗಳಾದ ವಂದನೀಯ ಜಾನ್ ಫೆರ್ನಾಂಡಿಸ್‌ರವರು ಆಶೀರ್ವಚನವನ್ನು ನೆರವೇರಿಸಿದರು. ಹೊಸ ಶಾಖೆಯ ಭದ್ರತಾ ಕೊಠಡಿಯನ್ನು

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಇಶಾ ಹಠ ಯೋಗ ಫೌಂಡೇಶನ್ ವತಿಯಿಂದ ಉಪನ್ಯಾಸ ಹಾಗೂ ತರಬೇತಿ

ಉತ್ತಮ ಆರೋಗ್ಯಕ್ಕಾಗಿ ದಿನನಿತ್ಯದ ಜೀವನದಲ್ಲಿ ಯೋಗ ಒಂದು ಆರೋಗ್ಯ ಪೂರ್ಣವಾದ ಅಭ್ಯಾಸ ಮಾರ್ಗವಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಮನಸ್ಥಿತಿ ಹೊಂದುವ ಉದ್ದೇಶದಿಂದ ಕಾಲೇಜಿನಲ್ಲಿ  ಉಪನ್ಯಾಸ, ತರಬೇತಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರವೀಣ್ ಕುಮಾರ್ ಈಶ ಫೌಂಡೇಶನ್ ಶಿಕ್ಷಕರು ಮಂಗಳೂರು, ಸುಬ್ರಹ್ಮಣ್ಯ ಕಾರ್ಯಕರ್ತರು ಇಶಾ ಫೌಂಡೇಶನ್ ಉಡುಪಿ, ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ, ನಿರ್ದೇಶಕಿಯಾದ ಮಮತಾ, ಕಾಲೇಜಿನ ಪ್ರಾಂಶುಪಾಲರಾದ ಡಾ. ಸೀಮಾ ಜಿ ಭಟ್

ಜನಸಾಮಾನ್ಯರಿಗೆ ತ್ವರಿತ ನ್ಯಾಯ ಅಗತ್ಯ: ಕಾನೂನು ಸಚಿವ ಹೆಚ್.ಕೆ. ಪಾಟೀಲ್

ಜಿಲ್ಲಾ ನ್ಯಾಯಾಂಗ ಉಡುಪಿ, ವಕೀಲರ ಸಂಘ ಬ್ರಹ್ಮಾವರ  ಇವರ ಸಂಯುಕ್ತ ಆಶ್ರಯದಲ್ಲಿ  ಬ್ರಹ್ಮಾವರದಲ್ಲಿ ನೂತನವಾಗಿ ನಿರ್ಮಾಣವಾದ ಬ್ರಹ್ಮಾವರ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವನ್ನು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಉದ್ಘಾಟಿಸಿದರು.   ನೂತನ ನ್ಯಾಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು, ರಾಜ್ಯದಲ್ಲಿ ಸಾರ್ವಜನಿಕರಿಗೆ ಶೀಘ್ರ ನ್ಯಾಯದಾನ ವ್ಯವಸ್ಥೆ ತಲುಪಿಸುವ ಉದ್ದೇಶದಿಂದ ರಾಜ್ಯದ ಸಿವಿಲ್ ಪ್ರೊಸೀಜರ್