ಬ್ರಹ್ಮಾವರ : ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಬ್ರಹ್ಮಾವರದಲ್ಲಿ ನಡೆಸಿದ ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮಿಲಿಟರಿ ಮದ್ಯವನ್ನು ವಶಕ್ಕೆ ಪಡೆದು ಓರ್ವನ್ನು ಅರೆಸ್ಟ್ ಮಾಡಿದ್ದಾರೆ. ಲೋಕಸಭಾ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು ಉಡುಪಿ ಜಿಲ್ಲೆ
ಈ ಬಾರಿಯ ಚುನಾವಣೆ ದೇಶದ ಭದ್ರತೆ, ಬಯೋತ್ಪಾದನೆ ಹತೋಟಿ, ಆರ್ಥಿಕ ಸುಭದ್ರತೆಯನ್ನು ನೀಡಬಲ್ಲ ರಾಷ್ಟ್ರನಾಯಕ ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡುವ ಮಹತ್ತರವಾದ ಚುನಾವಣೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಬ್ರಹ್ಮಾವರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು, ಈಗಾಗಲೆ ನಮ್ಮ ಮತಕ್ಷೇತ್ರ ವ್ಯಾಪ್ತಿಯ 1850 ಮತಗಟ್ಟೆ ಮತ್ತು ಮತದಾರರ ಒಂದು ಸುತ್ತಿನ ಬೇಟಿ ಮಾಡಿ ಏಪ್ರಿಲ್ ೩ನೇ
ಬ್ರಹ್ಮಾವರದ ನದಿ ತೀರದ ಸರಕಾರಿ ಜಾಗದಲ್ಲಿ ನಡೆಯುತ್ತಿರುವ ಮರಳುಗಾರಿಕೆ ವಿರುದ್ಧ ಮೂಡುಹೋಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಬ್ರಹ್ಮಾವರ ತಾಲೂಕು ಸೌಧದ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಅದೇ ಜಾಗದ ಬಳಿ ನೂರಾರು ಎಕ್ರೆ ಕೃಷಿ ಭೂಮಿ ಜಲಾವೃತವಾಗುವ ಭೀತಿ ಎದುರಾಗಿದ್ದು, ಮತ್ತು ಅಲ್ಲಿನ ಪರಿಸರದ ಜನರು ಗೋಮಾಳದಲ್ಲಿ ಹಸುಗಳನ್ನು ಮೇಯಲು ಬಿಟ್ಟಾಗ ಮರಳುಗಾರಿಕೆ ಮಾಡುವವರು ಮಹಿಳೆಯರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಪ್ರತಿಭಟನೆಗೆ ಬಂದ
ರಾಜ್ಯದ ಅಗ್ರಗಣ್ಯ ಸಹಕಾರಿ ಬ್ಯಾಂಕುಗಳಲ್ಲಿ ಒಂದಾಗಿರುವ ಎಂ.ಸಿ.ಸಿ ಬ್ಯಾಂಕಿನ 17ನೇ ಶಾಖೆಯು ಬ್ರಹ್ಮಾವರದ ವಾರಂಬಳ್ಳಿಯ ಶೇಷಗೋಪಿ ಪ್ಯಾರಡೈಸ್ನ ನೆಲಮಹಡಿ, ಆಕಾಶವಾಣಿ ವೃತ್ತದ ಬಳಿ, ಉದ್ಘಾಟನೆಗೊಂಡಿತು. ಹೊಸ ಶಾಖೆಯ ಉದ್ಘಾಟನೆಯನ್ನು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣರವರು ನೆರವೇರಿಸಿದರು. ಹೋಲಿ ಫ್ಯಾಮಲಿ ಚರ್ಚ್, ಬ್ರಹ್ಮಾವರ ಇದರ ಧರ್ಮಗುರುಗಳಾದ ವಂದನೀಯ ಜಾನ್ ಫೆರ್ನಾಂಡಿಸ್ರವರು ಆಶೀರ್ವಚನವನ್ನು ನೆರವೇರಿಸಿದರು. ಹೊಸ ಶಾಖೆಯ ಭದ್ರತಾ ಕೊಠಡಿಯನ್ನು
ಉತ್ತಮ ಆರೋಗ್ಯಕ್ಕಾಗಿ ದಿನನಿತ್ಯದ ಜೀವನದಲ್ಲಿ ಯೋಗ ಒಂದು ಆರೋಗ್ಯ ಪೂರ್ಣವಾದ ಅಭ್ಯಾಸ ಮಾರ್ಗವಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಮನಸ್ಥಿತಿ ಹೊಂದುವ ಉದ್ದೇಶದಿಂದ ಕಾಲೇಜಿನಲ್ಲಿ ಉಪನ್ಯಾಸ, ತರಬೇತಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರವೀಣ್ ಕುಮಾರ್ ಈಶ ಫೌಂಡೇಶನ್ ಶಿಕ್ಷಕರು ಮಂಗಳೂರು, ಸುಬ್ರಹ್ಮಣ್ಯ ಕಾರ್ಯಕರ್ತರು ಇಶಾ ಫೌಂಡೇಶನ್ ಉಡುಪಿ, ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ, ನಿರ್ದೇಶಕಿಯಾದ ಮಮತಾ, ಕಾಲೇಜಿನ ಪ್ರಾಂಶುಪಾಲರಾದ ಡಾ. ಸೀಮಾ ಜಿ ಭಟ್
ಜಿಲ್ಲಾ ನ್ಯಾಯಾಂಗ ಉಡುಪಿ, ವಕೀಲರ ಸಂಘ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಾವರದಲ್ಲಿ ನೂತನವಾಗಿ ನಿರ್ಮಾಣವಾದ ಬ್ರಹ್ಮಾವರ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವನ್ನು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಉದ್ಘಾಟಿಸಿದರು. ನೂತನ ನ್ಯಾಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು, ರಾಜ್ಯದಲ್ಲಿ ಸಾರ್ವಜನಿಕರಿಗೆ ಶೀಘ್ರ ನ್ಯಾಯದಾನ ವ್ಯವಸ್ಥೆ ತಲುಪಿಸುವ ಉದ್ದೇಶದಿಂದ ರಾಜ್ಯದ ಸಿವಿಲ್ ಪ್ರೊಸೀಜರ್
ಬ್ರಹ್ಮಾವರ ಹಳೆ ಪೊಲೀಸ್ ಠಾಣೆ ಬಳಿ ಕಾರ್ಯನಿರ್ವಯಿಸುತ್ತಿದ್ದ ಬ್ರಹ್ಮಾವರ ತಾಲೂಕು ಕಛೇರಿ ಒಂದು ವಾರದಲ್ಲಿ ನೂತನವಾಗಿ ರಾಷ್ಟ್ರೀಯ ಹೆದ್ದಾರಿ 66 ಬಳಿ ನಿರ್ಮಾಣಗೊಂಡ ಮಿನಿ ವಿಧಾನ ಸೌಧಕ್ಕೆ ವರ್ಗಾವಣೆಯಾಗಲಿದೆ. ಚುನಾವಣಾ ಪೂರ್ವದಲ್ಲಿ ವಿವಿಧ ಅಧಿಕಾರಿಗಳು ಜನಪ್ರತಿನಿಧಿಗಳಿಂದ ಮಿನಿವಿಧಾನ ಸೌಧ ಉದ್ಘಾಟನೆಗೊಂಡರೂ ಬಳಿಕ ನೀತಿ ಸಂಹಿತೆ ಜಾರಿಯಾದ ಬಳಿಕ ಕಂದಾಯ ಇಲಾಖೆಯ ಸಿಬ್ಬಂದಿಗಳು ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಕಳೆದ ಕೆಲವು ದಿನದಿಂದ ಕಂದಾಯ
ಬ್ರಹ್ಮಾವರ : ದೇವಾಲಯಗಳ ನಗರ ಬಾರಕೂರಿನಲ್ಲಿ ದೇವರ ಅಭಿಷೇಕಕ್ಕೆ ಕೂಡಾ ನೀರಿನ ಕೊರತೆ ಕಾಡುತ್ತಿದೆ. ಅತೀ ಪ್ರಾಚೀನ ಸೀಮೆಯ ಅಧಿ ದೇವರಾದ ಕೋಟೇಕೇರಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುರಾತನ ತೀರ್ಥ ಬಾವಿಯಲ್ಲಿ ನೀರು ಬತ್ತಿ ಹೋಗಿ ಅಭಿಷೇಕ ಪ್ರೀಯ ಶಿವನಿಗೆ ಕೂಡಾ ನೀರಿನ ಕೊರತೆ ಉಂಟಾಗಿದೆ. ದೇವಸ್ಥಾನದ ತೀರ್ಥ ಬಾವಿಯಲ್ಲಿ ಬೆಳಿಗ್ಗಿನ ಹೊತ್ತು ಅರ್ದ ಕೊಡಪಾನ ಮುಳುಗುವಷ್ಠು ನೀರು ಇರುವುದನ್ನು ಇಲ್ಲಿನ ಅರ್ಚಕರು ಜೋಪಾನ ಮಾಡಿ ತೆಗೆದು ನಿತ್ಯ ಪೂಜೆಗೆ ಅಭಿಷೇಕ
ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇತ್ತೀಚೆಗೆ ದಿವಂಗತರಾದ ಕ್ಲಬ್ಬಿನ ಉಪಾಧ್ಯಕ್ಷ ಸಾಲ್ವಡೊರ್ ನೊರೊನ್ಹಾ ಹಾಗೂ ಕ್ಲಬ್ಬಿನ ಸದಸ್ಯರಾಗಿದ್ದ ಜಯರಾಜ್ ಶೆಟ್ಟಿ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಕ್ಲಬ್ಬಿನ ಒಳಾಂಗಣದಲ್ಲಿ ಆಯೋಜಿಸಿದ ಈ ಸಂತಾಪ ಸಭೆಯಲ್ಲಿ ಪ್ರೊಫೆಸರ್ ಕೆ ನಾರಾಯಣನ್, ಜಿ ಬಾಲಕೃಷ್ಣ ಶೆಟ್ಟಿ , ಬಿರ್ತಿ ರಾಜೇಶ್ ಶೆಟ್ಟಿ ಹಾಗೂ ಚಂದ್ರಶೇಖರ ಶೆಟ್ಟಿಯವರು ಅಗಲಿದ ಮಹನೀಯರನ್ನು ಹಾಗೂ ಅವರ ಸೇವೆಯನ್ನು