ಉಪರಾಷ್ಟ್ರಪತಿ ಜಗದೀಶ್ ಧನ್ ಕರ್ ಅವರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಿದರು. ರಾಜ್ಯ ಸರಕಾರದ ಪರವಾಗಿ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕರ್ ಅವರು ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿದರು. ಸಂಸದ ಕ್ಯಾ. ಬ್ರಿಜೇಶ್ ಚೌಟ, ಡಿಸಿ ಮುಲ್ಲೈ. ಮುಹಿಲನ್, ಕಮೀಷನರ್ ಅನುಪಮ್ ಅಗ್ರವಾಲ್ ಈ ಸಂದಭ೯ದಲ್ಲಿ ಇದ್ದರು.ಬಳಿಕ ಧಮ೯ಸ್ಥಳಕ್ಕೆ ಹೆಲಿಕಾಪ್ಟರ್
ಉಳ್ಳಾಲ: ದೇವಸ್ಥಾನಗಳ ಮುಖಾಂತರ ಧರ್ಮಕೇಂದ್ರದ ಚಟುವಟಿಕೆಗಳು ಹಾಗೂ ಧರ್ಮಜಾಗೃತಿಯ ಮುಖೇನ ಹಿಂದುತ್ವಕ್ಕೆ ಶಕ್ತಿ ಕೊಡುವ ಕಾರ್ಯಗಳಾಗಬೇಕಿದೆ ಎಂದು ಸಂಸದ ಕ್ಯಾ.ಬೃಜೇಶ್ ಚೌಟ ಅಭಿಪ್ರಾಯಪಟ್ಟರು. ತಲಪಾಡಿ ದೇವಿಪುರದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ತನ್ನ ಕುಟುಂಬದ ದೊಡ್ಡಮನೆಗೆ ನೂತನ ಸಂಸದರಾಗಿ ಆಯ್ಕೆಗೊಂಡು ಆಶೀರ್ವಾದ ಪಡೆಯಲು ಬಂದವರು ತಲಪಾಡಿ ದೇವಸ್ಥಾನದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಶೇ. 30% ಮುಸಲ್ಮಾನರಿದ್ದು,