ಬಡವರಿಗೆ ಅಕ್ಕಿ ನೀಡುವ ಯೋಜನೆಗೆ ಅಡ್ಡಿಪಡಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅನ್ನದ ಬಟ್ಟಲು ಬಡಿಯುವ ಮೂಲಕ ಮಂಗಳವಾರ ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಲಿದ್ದೇವೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಡವರ ಅನ್ನಕ್ಕೆ ಕಲ್ಲು ಹಾಕುವವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ.
ಹರೀಶ್ ಪೂಂಜ ಅವರು ವೇದಿಕೆಯಲ್ಲಿ ತನಗೆ ಮುಸ್ಲಿಮರ ಮತ ಬೇಡ ಎಂದು ಹೇಳಿ ಹಿಂದುಗಳನ್ನು ದಾರಿತಪ್ಪಿಸಿ ಮುಸ್ಲಿಮರಿಗೆ ಕ್ರೈಸ್ತ ರಿಗೆ ನೆರವಾಗಿದ್ದಾರೆ. ಅವರಿಗೆ ಕೊಡುವ ಬಗ್ಗೆ ನಮ್ಮ ತಕರಾರಿಲ್ಲ. ಆದರೆ ಹಿಂದೂಗಳ ಮುಂದೆ ಬಂದು ಸುಳ್ಳು ಹೇಳುವುದು ಯಾಕೆ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಮಹೇಶ್ ಶೆಟ್ಟಿ ತಿಮರೋಡಿ ಪ್ರಶ್ನಿಸಿದ್ದಾರೆ. ಅವರು ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಇಂತಹ ಇಬ್ಬಗೆಯ ನೀತಿಯನ್ನು ಅಂದಿನಿಂದಲೂ




















