ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಾಮಾಣಿಕರು, ಪಾರದರ್ಶಕವಾಗಿ ಇದ್ದಿದ್ದೇ ಆದರೆ ಅವರ ವಿರುದ್ಧದ ಪ್ರಕರಣ ಹಿಂಪಡೆಯುವ ಅಗತ್ಯ ಇರಲಿಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು. ಸಚಿವ ಸಂಪುಟ ಸಭೆಯಲ್ಲಿ ಡಿಕೆಶಿ ಅವರ ಮೇಲಿದ್ದ ಸಿಬಿಐ ತನಿಖೆ ಪ್ರಕರಣ ವಾಪಸ್ ಪಡೆಯಲು ನಿರ್ಧರಿಸಿದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದರು.
ದ.ಕ. ಜಿಲ್ಲೆಯಲ್ಲಿ ಮರಳಿನ ಸಮಸ್ಯೆಗೆ ನಾಲ್ಕು ವರ್ಷ ಆಡಳಿತ ನಡೆಸಿದ ಬಿಜೆಪಿಯ ಮರಳು ನೀತಿಯೇ ಕಾರಣ ಹೊರತು ಕಾಂಗ್ರೆಸ್ ಸರಕಾರವಲ್ಲ. ಫೋನ್ ಮಾಡಿದರೆ ಸಾಕು, 2 ಸಾವಿರಕ್ಕೆ ಒಂದು ಲೋಡ್ ಮರಳು ಮನೆ ಬಾಗಿಲಿಗೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮಾಡಿದ್ದ ಘೋಷಣೆ ಅನುಷ್ಠಾನ ಆಗಿದೆಯೇ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಪ್ರಶ್ನಿಸಿದ್ದಾರೆ. ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರು ಕಾಂಗ್ರೆಸ್ ಸರಕಾರದ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಜಿಲ್ಲಾ
ಹಲವು ಸಮಯದಿಂದ ಬಾಕಿ ಇರುವ ನಿಗಮ ಮಂಡಳಿಗಳಿಗೆ ಶೀಘ್ರ ಅಧ್ಯಕ್ಷರ ನೇಮಕ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರಿಗೆ ಆದ್ಯತೆ ನೀಡಿ, ಎರಡನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಗೃಹ ಸಚಿವ ಜಿ. ಪರಮೇಶ್ವರ ಅವರು ಮನೆಗೆ ಊಟಕ್ಕೆ ಕರೆದಿದ್ದರು. ನಾನು ಮತ್ತು ಕೆಲವು ಸಚಿವರು ಹೋಗಿದ್ದೆವು. ಅಲ್ಲಿ
ಮೂಡುಬಿದಿರೆ: ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ನಡೆಯುತ್ತಿರುವ 80% ಕಮೀಷನ್ ದಂಧೆ ಸಹಿತ ಭ್ರಷ್ಟಾಚಾರವನ್ನು ವಿರೋಧಿಸಿ ಮೂಡುಬಿದಿರೆ ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲದ ವತಿಯಿಂದ ತಾಲೂಕು ಆಡಳಿತ ಸೌಧದ ಮುಂಭಾಗ ಪ್ರತಿಭಟನೆ ನಡೆಯಿತು. ಶಾಸಕ ಉಮಾನಾಥ ಕೋಟ್ಯಾನ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಬಿಜೆಪಿ ಸರಕಾರವನ್ನು 40% ಸರಕಾರವೆಂದು ದೂಷಿಸುತ್ತಾ, ಜನರಿಗೆ ವಿವಿಧ ರೀತಿಯ ಗ್ಯಾರಂಟಿಗಳ ಸುಳ್ಳು ಭರವಸೆಯನ್ನು ನೀಡುತ್ತಾ ಅಧಿಕಾರಕ್ಕೆ ಬಂದಿರುವ
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಕಲೆಕ್ಷನ್ ಕೇಂದ್ರವಾಗಿದೆ. ಬರಕ್ಕೆ ತುತ್ತಾಗಿರುವ ರೈತರಿಗೆ ಪರಿಹಾರ ನೀಡಿಲ್ಲ. ತುಷ್ಟೀಕರಣದಲ್ಲಿ ಸರ್ಕಾರ ಮುಳುಗಿದೆ. ಇತ್ಯಾದಿ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ಸುಳ್ಯದಲ್ಲಿ ಪ್ರತಿಭಟನೆ ನಡೆಸಿದರು. ಸುಳ್ಯದ ತಾಲೂಕು ಕಚೇರಿ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಮುಖಂಡರು, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ.
ಕಡಬ:ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸರ್ವೋತ್ತಮ ಗೌಡ ಇವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆದೇಶ ಮಾಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಕಾರದಲ್ಲಿ ಪಕ್ಷ ಸಂಘಟನೆ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ. ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಹೊಸಮನೆ ನಿವಾಸಿಯಾಗಿರುವ ಸರ್ವೋತ್ತಮ ಗೌಡ ಅವರು ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್
ಸುಳ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಯ ಮೇಲೆ ಕೆಲವರನ್ನು ಉಚ್ಛಟಿಸಲಾಗಿದೆ ಎನ್ನುವ ಸುದ್ದಿ ಯಾವುದೋ ಕಾರಣಕ್ಕೆ ಹರಡಿತ್ತು. ಆದರೆ ಸುಳ್ಯ ಬ್ಲಾಕ್ ಕಾಂಗ್ರೆಸ್ನಿಂದ ಉಚ್ಛಾಟನೆಗೆ ಯಾವುದೇ ಶಿಫಾರಸ್ಸು ಹೋಗಿಲ್ಲ ಎಂದು ಕೆ.ಪಿ.ಸಿ.ಸಿ ಉಸ್ತುವಾರಿ ಮಮತಾ ಗಟ್ಟಿ ಸ್ಪಷ್ಟಪಡಿಸಿದರು. ಅವರು ಕಡಬ ಅನುಗ್ರಹ ಸಭಾಭವನದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪಕ್ಷ
ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನಸಾಮಾನ್ಯರಿಗೆ ಮುಟ್ಟಿಸಬೇಕು. ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಯಲ್ಲಿ ಘೋಷಣೆ ಮಾಡಿರುವ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡುತ್ತಿದೆ ಎಂದು ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪೂರ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ಸಂದರ್ಭ ಕಾರ್ಯಕರ್ತರನ್ನು ಉದ್ದೇಶಸಿ ಮಾತನಾಡಿದರು. ಬಳಿಕ ಸಚಿವರು ಕಾರ್ಯಕರ್ತರ ಅಹವಾಲು ಸ್ವೀಕರಿಸಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಕಾಂಗ್ರೆಸ್ 12 ರಿಂದ 15 ಸ್ಥಾನ ಗೆಲ್ಲುವುದು ನಿಶ್ಚಿತ. ಸದ್ಯದ ಪರಿಸ್ಥಿತಿ ನೋಡಿದ್ರೆ 15ಕ್ಕಿಂತ ಹೆಚ್ಚು ಸ್ಥಾನ ಬಂದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಸೇರಲು ರಾಜ್ಯದ ಎಲ್ಲಾ ತಾಲೂಕು ಜಿಲ್ಲೆಯ ಜನ ಉತ್ಸುಕರಾಗಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಇನ್ನೂ ದಯನೀಯ
ಮಣಿಪುರದ ಮಹಿಳೆಯರ ಮೇಲಿನ ದೌರ್ಜನ್ಯ, ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ದ ಹಾಗೂ ಜನರಿಗೆ ರಕ್ಷಣೆ ನೀಡಲು ಆಗ್ರಹಿಸಿ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ನಗರದ ಮಹಾನಗರ ಪಾಲಿಕೆಯ ಎದುರಿನ ಲಾಲ್ಬಾಗ್ ಮಹಾತ್ಮಾ ಗಾಂಧಿ ಪ್ರತಿಮೆಯ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಮಿಥುನ್ ರೈ ಮಾತನಾಡಿ, ಮಣಿಪುರದಲ್ಲಿ ಗಲಭೆ ಆರಂಭವಾಗಿ 3 ತಿಂಗಳಾದರೂ ಬಿಜೆಪಿಯ