Home Posts tagged #congress

ಕರ್ನಾಟಕ ಸರಕಾರ ಆಹಾರ ಆಯೋಗದ ಸದಸ್ಯರಾಗಿ ಹಿರಿಯ ಕಾಂಗ್ರೆಸ್ಸಿಗ ಸುಮಂತ್ ರಾವ್ ಆಯ್ಕೆ

1991ರಿಂದ ವಿದ್ಯಾರ್ಥಿ ಕಾಂಗ್ರೆಸ್ ನಲ್ಲಿ (nsui ) ಗುರುತಿಸಿಕೊಂಡು ಯು. ಟಿ ಖಾದರ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿ ಹೋರಾಟವನ್ನು ಸಂಘಟಿಸಿಕೊಂಡು ಎನ್ ಎಸ್ ಯು ಐ ಯಲ್ಲಿ ಅವಿಭಾಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ

ದಿಲ್ಲಿ: ಮೈತ್ರಿ, ಸೀಟು ಹಂಚಿಕೆ ಬಗೆಗೆ ಸ್ಪಷ್ಟನೆ

ದಿಲ್ಲಿಯ ದಿಲ್ಲಿ ಪಶ್ಚಿಮ, ದಿಲ್ಲಿ ದಕ್ಷಿಣ, ದಿಲ್ಲಿ ಪೂರ್ವ ಮತ್ತು ನವದೆಹಲಿ ಈ ನಾಲ್ಕು ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ. ಈಶಾನ್ಯ ದಿಲ್ಲಿ, ವಾಯುವ್ಯ ದಿಲ್ಲಿ ಮತ್ತು ಚಾಂದಿನಿ ಚೌಕ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಲಾಯಿತು.ಎಎಪಿಯವರೂ ಇದ್ದ ಮಾಧ್ಯಮ ಮಾತುಕತೆಯಲ್ಲಿ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಮಾಹಿತಿ ನೀಡಿದರು.ಗುಜರಾತಿನ 26ರಲ್ಲಿ 24ಕಡೆ ಕಾಂಗ್ರೆಸ್

ಬಿಜೆಪಿಯು ನಮ್ಮ ಹಣ ಕದಿಯುತ್ತಿದೆ : ಕೆ. ಸಿ. ವೇಣುಗೋಪಾಲ್

ಯುವ ಕಾಂಗ್ರೆಸ್ ಮತ್ತು ಎನ್‌ಎಸ್‌ಯುಐ ಹಾಗೂ ಕಾಂಗ್ರೆಸ್ಸಿನ ಬ್ಯಾಂಕ್ ಖಾತೆಗಳಿಂದ ಆದಾಯ ತೆರಿಗೆ ಇಲಾಖೆಯು 65.89 ಕೋಟಿ ರೂಪಾಯಿ ಕತ್ತರಿಸಿಕೊಳ್ಳುತ್ತಿದೆ ಇದು ಬಿಜೆಪಿ ಕದಿಯುತ್ತಿರುವ ಹಣ ಎಂದು ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಆಪಾದಿಸಿದರು.ನಾವು ಕೇಂದ್ರದಲ್ಲಿ ಆಳುತ್ತಿದ್ದಾಗ ಬಿಜೆಪಿ ವಿಷಯದಲ್ಲಿ ನಾವು ಹೀಗೆ ಎಂದೂ ಹೀಗೆ ನಡೆದುಕೊಂಡಿಲ್ಲ. ಬಿಜೆಪಿಯು ರಾಜಕೀಯ ಪಕ್ಷವಾಗಿ ಎಂದೂ ತೆರಿಗೆ ಕಟ್ಟಿಲ್ಲ. ಆದರೆ ನಮ್ಮ ಖಾತೆಗೆ ತೆರಿಗೆ ಎನ್ನುತ್ತಿದೆ. ಯಾರು

ಮಂಗಳೂರು ಡೆಡ್ ಸಿಟಿಯಾಗಿದೆ-ಜಿಲ್ಲೆಯ ಅಭಿವೃದ್ಧಿಗೆ ಹೊಸ ಅಲೋಚನೆ ಇದೆ -ಡಿಸಿಎಂ ಡಿಕೆಶಿ

ಮಂಗಳೂರು ಸಂಜೆ ಏಳು ಗಂಟೆಯ ನಂತರ ಡೆಡ್ ಸಿಟಿ ಆಗಿದೆ. ವ್ಯಾಪಾರ ವಹಿವಾಟು ನಡೆದು ಜನರಿಗೆ ಉದ್ಯೋಗ ಸಿಗಬೇಕು. ಇಲ್ಲಿನ ಬ್ಯಾಂಕ್‌ಗಳು ಕೂಡ ಇಲ್ಲಿಂದ ಬೇರೆ ಕಡೆ ಹೋಗುತ್ತಾ ಇವೆ. ಮಂಗಳೂರಿನಲ್ಲಿ ಧರ್ಮ ರಾಜಕೀಯ ಇದೆ, ಬಿಜೆಪಿ ಇಲ್ಲಿ ಅಭಿವೃದ್ಧಿ ಮಾಡುತ್ತಿಲ್ಲ. ಈ ಜಿಲ್ಲೆಯ ಬಗ್ಗೆ ನಾವು ಹೊಸ ಆಲೋಚನೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.ಅವರು ಮಂಗಳೂರಿನ ಅಡ್ಯಾರ್‌ನಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶದ ಮೈದಾನದ ಬಳಿ ಮಾತನಾಡಿದರು. ಇಲ್ಲಿನ

ಕರಾವಳಿಗೆ ಭರಪೂರ ಕೊಡುಗೆ: ಮಂಜುನಾಥ ಭಂಡಾರಿ

ಮಂಗಳೂರು: ರಾಜ್ಯ ಸರಕಾರದ ಬಜೆಟ್ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಕೃಷಿ, ಮೀನುಗಾರಿಕೆ, ಉದ್ಯಮ, ಕೈಗಾರಿಕೆ ಸೇರಿದಂತೆ ಎಲ್ಲ ವಲಯಗಳಿಗೆ ಪ್ರೋತ್ಸಾಹ ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹೇಳಿದರು. ಅವರು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಅಯವ್ಯಯ ಬಗ್ಗೆ ಪ್ರತಿಕ್ರಿಯೆ ನೀಡಿದರು. ರೈತ ಮಹಿಳೆಯರಿಗೆ ಹಸು-ಎಮ್ಮೆ ಖರೀದಿಗೆ ಸಾಲ ಸೌಲಭ್ಯ, ಮತ್ಸ್ಯ ಆಶಾಕಿರಣ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರ ಮೊತ್ತ 3ಸಾವಿರ

ರಾಜ್ಯದ ಆರ್ಥಿಕತೆಗೆ ಚೈತನ್ಯ: ಹರೀಶ್ ಕುಮಾರ್

ಮಂಗಳೂರು: ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಅಭಿವೃದ್ಧಿ ಶಕೆಯೇ ಆರಂಭವಾಗಿದೆ. ಇಂದು ಮಂಡಿಸಿದ ಬಜೆಟ್‌ನಲ್ಲಿ ರಾಜ್ಯದ ಆರ್ಥಿಕತೆಗೆ ಚೈತನ್ಯ ತುಂಬಿದೆ ಎಂದು ವಿಧಾನ ಪರಿಷತ್‌ನ ಸದಸ್ಯರೂ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಹೇಳಿದರು. ಅವರು ರಾಜ್ಯ ಬಜೆಟ್ ಬಗೆಗೆ ಪ್ರತಿಕ್ರಿಯೆ ನೀಡಿದರು. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆ ಜನಸಾಮಾನ್ಯರು, ಮಧ್ಯಮ ವರ್ಗದವರ ಆರ್ಥಿಕತೆಗೆ ಚೈತನ್ಯ ನೀಡಿದ್ದು,

ದೇಶವಾಸಿಗಳಿಗೆ ನಿರಾಶೆಯ ಬಜೆಟ್ : ಮಂಜುನಾಥ ಭಂಡಾರಿ

ಕೇಂದ್ರ ಸರಕಾರದ ಮಧ್ಯಂತರ ಬಜೆಟ್‌ನಲ್ಲಿ ಬಡವರು, ಮಧ್ಯಮ ವರ್ಗವನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಆದಾಯ ತೆರಿಗೆದಾರರ ನಿರೀಕ್ಷೆ ಹುಸಿಯಾಗಿದೆ. ವಿತ್ತ ಸಚಿವರು 55 ನಿಮಿಷಗಳ ಕಾಲ ಚುನಾವಣಾ ಭಾಷಣ ಮಾಡಿದರೇ ಹೊರತು ದೇಶದ ಅಭಿವೃದ್ಧಿ ದೃಷ್ಟಿಕೋನದಿಂದ ಯಾವುದೇ ಯೋಜನೆ ಪ್ರಕಟಿಸಿಲ್ಲ. ದೇಶದ ಆದಾಯ ಮೂಲವಾದ ಕೃಷಿ, ಉದ್ಯಮ, ಸೇವಾ ಕ್ಷೇತ್ರವನ್ನು ಕಡೆಗಣಿಸಲಾಗಿದೆ. ಬಹುನಿರೀಕ್ಷೆಯಿಂದ ಬಜೆಟ್‌ನ್ನು ಕಾಯುತ್ತಿದ್ದ ದೇಶವಾಸಿಗಳಿಗೆ ಕೇಂದ್ರ ಸರಕಾರ ನಿರಾಶೆ ಮೂಡಿಸಿದೆ ಎಂದು

ಪ್ರಗತಿ ಹಿನ್ನಡೆಯ ಸಂಕೇತ: ಕೆ. ಹರೀಶ್ ಕುಮಾರ್

ಮಂಗಳೂರು: ದೇಶದ ಬಿಜೆಪಿ ಸರಕಾರ ಹೇಳುತ್ತಿರುವ ದೇಶದ ಅಭಿವೃದ್ಧಿ ಶಕೆ ಕನ್ನಡಿಯೊಳಗಿನ ಗಂಟು ಇದ್ದಂತೆ. ದೇಶದ ಪ್ರಗತಿ ಹಿನ್ನಡೆ ಕಂಡಿರುವ ಈ ಕಾಲಘಟ್ಟದಲ್ಲಿ ನಿರ್ಮಲಾ ಸೀತಾರಾಮನ್ ಅವರು ಈ ರೀತಿಯ ಬಜೆಟ್ ಅಲ್ಲದೆ ಬೇರೇನು ಮಂಡಿಸಲು ಸಾಧ್ಯವಿಲ್ಲö ಎಂದು ವಿಧಾನ ಪರಿಷತ್ ಶಾಸಕರುಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.ಕಾರ್ಪೊರೇಟ್ ಸಂಸ್ಥೆಗಳ ಅಡಿಯಾಳಾಗಿರುವ ಕೇಂದ್ರ ಸರಕಾರ ಈ ಬಜೆಟ್‌ನಲ್ಲಿ ಬಡವರು, ಮಧ್ಯಮ

ಕೇಂದ್ರ ಬಜೆಟ್ ನಿರಾಶಾದಾಯಕ : ಬಿ.ರಮನಾಥ ರೈ

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್-2024 ನಿರಾಶಾದಾಯಕವಾಗಿದೆ. ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದರೋ ಅಥವಾ ಆಯವ್ಯಯ ಪತ್ರ ಮಂಡಿಸಿದರೋ ಎಂಬ ಸಂಶಯ ಬರುತ್ತಿದೆ. ಪ್ರಗತಿ, ಬೆಳವಣಿಗೆ, ಧ್ಯೇಯ, ಆಧ್ಯತೆ, ಗಮನ, ಸಹಾಯ, ಬೆಂಬಲ, ಸಹಕಾರ, ಕ್ರಮ, ಕಾರ್ಯಕ್ರಮ, ಮಂತ್ರ ಎಂಬ ಪದಗಳನ್ನು ಹೇಳಿದ್ದರೆ ಹೊರತು ನಿರ್ದಿಷ್ಟವಾಗಿ ಅನುದಾನ ಹಂಚಿಕೆ ಮಾಡಿಲ್ಲ. ಈ ಬಜೆಟ್ ಪ್ರಾದೇಶಿಕತೆಯನ್ನು ಮರೆತಿದೆ. ವಲಯಗಳನ್ನು ಕಡೆಗಣಿಸಿದೆ. ವರ್ಗಗಳನ್ನು ನಿರ್ಲಕ್ಷ್ಯ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮಹಿಳಾ ಶಕ್ತಿ ಪಯಣ ಹೆಚ್ಚಳ

ಮಂಗಳೂರು ಮತ್ತು ಪುತ್ತೂರು ವಿಭಾಗದ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಶಕ್ತಿ ಯೋಜನೆಯ ಅನುಕೂಲ ಪಡೆದು 7 ತಿಂಗಳಲ್ಲಿ ಪಯಣಿಸಿದ ಮಹಿಳೆಯರಿಗೆ 2.8 ಕೋಟಿ ಟಿಕೆಟ್ ನೀಡಿಕೆ ಆಗಿದೆ. ಈ ಟಿಕೆಟ್‌ಗಳ ಒಟ್ಟು ದರ 9.15 ಕೋಟಿ ರೂಪಾಯಿ. ಆರಂಭದ ಜೂನ್ ತಿಂಗಳಿನಲ್ಲಿ 20,87,658 ಇದ್ದ ಟಿಕೆಟ್ ನೀಡಿಕೆ ಹೆಚ್ಚುತ್ತ ಬಂದಿದ್ದು ಜನವರಿ ತಿಂಗಳಲ್ಲಿ ತಿಂಗಳು ಮುಗಿಯುವುದಕ್ಕೆ ಮೊದಲೆ 26,96,261ತಲುಪಿದೆ.