Home Posts tagged #congress (Page 14)

ಪುತ್ತೂರಿನ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ.

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿದರು. ವೇದನಾಥ್ ಸುವರ್ಣ, ಸತೀಶ್ ಕೆಡೆಂಜಿ, ಡಾ. ರಾಜಾರಾಮ್, ಜಯಪ್ರಕಾಶ್ ಬದಿನಾರು ಮತ್ತಿತರ ನಾಯಕರೊಂದಿಗೆ ಆಗಮಿಸಿದ ಅಶೋಕ್ ರೈ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು.

ಉದ್ಯಾವರ ಗ್ರಾ.ಪಂ ಸದಸ್ಯ ಮಿಥೇಶ್ ಪೂಜಾರಿ ಕಾಂಗ್ರೆಸ್ ನಿಂದ ಬಿಜೆಪಿ ತೆಕ್ಕೆಗೆ

ಕಾಪು ಬಿಜೆಪಿ ಕಚೇರಿಯಲ್ಲಿ ಉದ್ಯಾವರ ಗ್ರಾಮ ಪಂಚಾಯತ್ 6ನೇ ವಾರ್ಡನ್ನು 2 ಬಾರಿ ಪ್ರತಿನಿಧಿಸಿರುವ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಉದ್ಯಾವರ ಗ್ರಾಮೀಣ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥೇಶ್ ಪೂಜಾರಿ ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಂಡರು. ಶಾಸಕ ಲಾಲಾಜಿ ಮೆಂಡನ್ ಪಕ್ಷದ ಧ್ವಜ ನೀಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಬಿ.ಜೆ.ಪಿ

ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಕಾರ್ಕಳ: ಕಾಂಗ್ರೆಸ್ ಪಕ್ಷ ರಾಷ್ಟ್ರ ಧ್ವಜ, ಸಂವಿಧಾನದ ಪರವಿರುವ ಪಕ್ಷ ಎಂದು ರಾಜ್ಯ ಸಭಾ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದರು. ಅವರು ಮಂಜುನಾಥ್ ಪೈ ಸಭಾಭವನದಲ್ಲಿ ನಡೆದ ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯದ ವಿಜಯಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ ಕಳೆದುಕೊಂಡಾಗ ನಮ್ಮ ಚುನಾಯಿತ ಪ್ರತಿನಿಧಿಗಳು ಯಾಕೆ ಪ್ರಶ್ನಿಸಿಲ್ಲ. ಕೊಡಗು ಭೂ ಕುಸಿತ, ಪ್ರವಾಹ, ಕೋವಿಡ್ ಸಮಯದಲ್ಲಿ ಮೃತಪಟ್ಟವರನ್ನು ಒಮ್ಮೆಯು

ಬ್ಯಾಟರಾಯನಪುರದ ಕುವೆಂಪು ನಗರದಲ್ಲಿ ಕೃಷ್ಣ ಭೈರೇಗೌಡರ ಪರ ಮತಯಾಚನೆ

ಬ್ಯಾಟರಾಯನಪುರ ವಿಧಾನಸಭಾ ಕ್ಷೇತದ ಕುವೆಂಪು ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಭೈರೇಗೌಡರ ಪರವಾಗಿ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಾ ರಾಮಯ್ಯ, ಕೃಷ್ಣ ಭೈರೇಗೌಡ ಮಾದರಿ ರಾಜಕಾರಣಿಯಾಗಿದ್ದು, ಕ್ಷೇತ್ರದಲ್ಲಿ ಜನಪರ ಕೆಲಸ ಮಾಡುತ್ತಿದ್ದಾರೆ. ಕೃಷ್ಣ ಭೈರೇಗೌಡರನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಿನಾಕ್ಷೀ ಕೃಷ್ಣ

ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ನಾಮಪತ್ರ ಸಲ್ಲಿಕೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಇಂದು ನಾಮಪತ್ರ ಸಲ್ಲಿಸಿದರು.ಬಿ.ಸಿ.ರೋಡಿನ ವಿಧಾನಸೌಧದ ಚುನಾವಣಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ತೆರಳಿದ ಅವರು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 9:30ಕ್ಕೆ ಬಂಟ್ವಾಳ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಅಲ್ಲಿಂದ ಭಾರೀ ಸಂಖ್ಯೆಯ ಕಾರ್ಯಕರ್ತರ ಕರತಾಡನದೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದು ಬಂಟ್ವಾಳ ಕೆಳಗಿನ

ಉಮಾನಾಥ್ ಕೋಟ್ಯಾನ್‍ಗೆ ಬೇನಾಮಿ ಆಸ್ತಿ : ಮಿಥುನ್ ರೈ

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಳ್ಕುಂಜೆ, ಉಳೆಪಾಡಿ, ಕೊಲ್ಲೂರು, ಅತಿಕಾರಿಬೆಟ್ಟು, ಕವತ್ತಾರು, ಬಜ್ಪೆ ವ್ಯಾಪ್ತಿಯಲ್ಲಿ ಕೈಗಾರಿಕೆಗಳಿಗೆ ಯೋಗ್ಯವಾದ ಸುಮಾರು ಒಂದು ಸಾವಿರ ಎಕರೆಗೂ ಮಿಕ್ಕಿ ಭೂಮಿಯಿದ್ದು, ಜನರು ಸರಕಾರಕ್ಕೆ ಕೊಡಲು ಉತ್ಸುಕರಾಗಿದ್ದು, ತಾವು ದಯವಿಟ್ಟು ಈ ಭಾಗದಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕೆ ಸ್ಥಾಪಿಸಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಸರಕಾರ ಹಾಗೂ ಕೆಐಡಿಬಿ

ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರು ಟಿಕೆಟ್ ಮಾರಾಟ ಮಾಡಿದ್ದಾರೆ : ಮಾಜಿ ಶಾಸಕ ಮೊಯ್ದಿನ್ ಬಾವಾ ಕಿಡಿ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಇನಾಯತ್ ಆಲಿ ಅವರಿಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮೊಯ್ದಿನ್ ಬಾವಾ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರು ಟಿಕೆಟ್ ಮಾರಾಟ ಮಾಡಿದ್ದಾರೆ. ಪಕ್ಷದ ಸರ್ವೆಯಲ್ಲಿ 78 ಶೇ. ನನ್ನ ಪರವಾಗಿ ಮತಗಳು ಬಂದಿದ್ದವು. ಇನಾಯತ್ ಆಲಿಗೆ ಕೇವಲ 7 ಶೇಕಡಾ ಮತ ಸಿಕ್ಕಿದ್ದರೂ ಪಾಲುದಾರ ಎಂಬ

ಏ.23ಕ್ಕೆ ಬೈಂದೂರಿಗೆ ಡಿಕೆಶಿ

ಕುಂದಾಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಮಕುಮಾರ್ ಅವರು ಎ.23ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಬೈಂದೂರಿನಲ್ಲಿ ನಡೆಯಲಿರುವ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಲಾದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್ ಪರ ಅಲೆ ಇದ್ದು, ಡಿಕೆಶಿ ಅವರ ಕಾರ್ಯಕ್ರಮದಲ್ಲಿಯೇ ಬಿಜೆಪಿಯ ಹಲವು ಮುಖಂಡರು ಹಾಗೂ

ಏ.20ರಂದು ಜೆ.ಆರ್. ಲೋಬೋ ನಾಮಪತ್ರ ಸಲ್ಲಿಕೆ

ರಾಜ್ಯ ವಿಧಾನಸಭೆ ಚುನಾವಣೆಯ ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಏ.20ರಂದು ಮಧ್ಯಾಹ್ನ 12.15ಕ್ಕೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದರು. ಅವರು ನಗರದ ಕಾಂಗ್ರೆಸ್‍ನ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಸಂವಿಧಾನ, ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುವ ಪಕ್ಷ, ಸರ್ವ ಜಾತಿ ಧರ್ಮವನ್ನು ಪ್ರೀತಿಸುವ ಪಕ್ಷವಾಗಿದೆ. ದೇಶವು ಅಭವೃದ್ಧಿ

ಬಿಜೆಪಿಯವರು ಗೆಲುವಿನ ಭ್ರಮೆ ಇಟ್ಟುಕೊಂಡಿದ್ರೆ ಸತ್ಯಕ್ಕೆ ದೂರವಾದ ವಿಚಾರ : ಮಾಜಿ ಎಮ್‍ಎಲ್‍ಸಿ ಐವನ್ ಡಿಸೋಜಾ

ದ.ಕ ಮತ್ತು ಉಡುಪಿಯಲ್ಲಿ 2013 ರ ಚರಿತ್ರೆ ಮರುಕಳಿಸಲಿದೆ. ಬಿ.ಜೆ.ಗೆ 2018ರಲ್ಲಿ ಮತ ಹಾಕಿದವರು ಇದೀಗ ಪಶ್ಚತ್ತಾಪಪಡುತ್ತಿದ್ದಾರೆ. ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ, ಬಿ.ಜೆ.ಪಿಯವರು ಭ್ರಮೆ ಇಟ್ಟು ಕೊಂಡಿದ್ದರೆ ಅದು ಸತ್ಯಕ್ಕೆ ದೂರವಾದ ವಿಚಾರ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು. ಅವರು ನಗರದ ಕಾಂಗ್ರೆಸ್‍ನ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. 2023 ರ ಚುನಾವಣೆಯಲ್ಲಿ ಮಂಗಳೂರು