Home Posts tagged #congress (Page 15)

ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ

ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಗುಜರಾತ್‍ನ ನ್ಯಾಯಾಲಯವು 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ

ಶಕುಂತಳಾ ಶೆಟ್ಟಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿ : ಪಕ್ಷದ ವರಿಷ್ಠರಿಗೆ ಮಹಿಳಾ ಕಾಂಗ್ರೆಸ್ ಸಮಿತಿ ಆಗ್ರಹ

ಪುತ್ತೂರು ಕಾಂಗ್ರೇಸ್ ನಲ್ಲಿ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರಿಗೆ ಆದ್ಯತೆ ನೀಡಬೇಕು. ಅದರಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿ ಅವರಿಗೆ ಮತ್ತೊಮ್ಮೆ ಅವಕಾಶ ನೀಡಬೇಕು ಎಂದು ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಆಗ್ರಹಿಸಿದೆ. ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶಾರದಾ ಅರಸ್ ಅವರು ಮಂಗಳವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ

ಉಳ್ಳಾಲ : ರಸ್ತೆ ಅವ್ಯವಸ್ಥೆ : ಕಾಂಗ್ರೆಸ್ ಚುನಾವಣಾ ಪ್ರಚಾರದ ಬ್ಯಾನರಿಗೆ ಸ್ಟಿಕ್ಕರ್ ಅಂಟಿಸಿ ವಿರೋಧ

ಉಳ್ಳಾಲ: ಕಾಂಗ್ರೆಸ್ ಚುನಾವಣಾ ಪ್ರಚಾರವಾಗಿ ಸೋಮೇಶ್ವರ ಕೊಲ್ಯ ಸಮೀಪ ಹಾಕಲಾದ ಬ್ಯಾನರಿಗೆ ಗ್ರಾಮಸ್ಥರು ಸ್ಟಿಕ್ಕರ್ ಅಂಟಿಸಿ 15 ವರ್ಷಗಳಿಂದ ಹದಗೆಟ್ಟಿರುವ ರಸ್ತೆ ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆ. 15 ವರ್ಷಗಳಿಂದ ಇಲ್ಲಿಯ ರಸ್ತೆ ಕಾಮಗಾರಿ ನಡೆಯದೆ ಜನರು ಕೊಳಚೆಯಲ್ಲಿಯೇ ಬದುಕಬೇಕಾಗಿದೆ. ಯಾವ ಪಕ್ಷಕ್ಕೆ ಮತ ಹಾಕಬೇಕು? ಅನ್ನುವ ಸ್ಟಿಕ್ಕರ್ ಅಂಟಿಸಲಾಗಿದೆ. ಉಳ್ಳಾಲ ಶಾಸಕ ಯು.ಟಿ ಖಾದರ್ ಭಾವಚಿತ್ರ ಹೊಂದಿರುವ ಬ್ಯಾನರ್ ಹಾಗೂ ಕಾಂಗ್ರೆಸ್ ಚುನಾವಣೆ ಭರವಸೆಗಳಿರುವ

ಭ್ರಷ್ಟಾಚಾರ ಮಾಡಿದ್ದರೆ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಸಿದ್ಧ : ಅಭಯಚಂದ್ರ ಜೈನ್ ಗೆ ಶಾಸಕ ಕೋಟ್ಯಾನ್ ಸವಾಲು

ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ನನ್ನನ್ನು ಟಾರ್ಗೆಟ್ ಮಾಡಿ ಏಕವಚನ ಉಪಯೋಗಿಸಿ ಮಾತನ್ನಾಡಿರುವುದು ಹಿರಿಯರಾದ ಅವರಿಗೆ ಶೋಭೆ ತರುವಂತದಲ್ಲ.ತಾನು 500 ಕೋ.ಭ್ರಷ್ಟಾಚಾರ ಮಾಡಿದ್ದೇನೆಂದು ಅವರು ಆರೋಪಿಸುತ್ತಿದ್ದಾರೆ ಆದರೆ ನಾನು 500 ಅಲ್ಲ ರೂ 5 ಕೋ.ಭ್ರಷ್ಟಾಚಾರ ಮಾಡಿದ್ದರೂ ಧರ್ಮಸ್ಥಳ ಅಥವಾ ಹನುಮಂತ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಸಿದ್ಧ ಜೈನ್ ಅವರು ಆ ಕ್ಷೇತ್ರಗಳಿಗೆ ಬಂದು ಪ್ರಮಾಣ ಮಾಡಲು ಸಿದ್ಧರಿದ್ದಾರೆಯೇ ಎಂದು ಸವಾಲು ಹಾಕಿದ್ದಾರೆ. ಅವರು ಬಿಜೆಪಿ

ಮೊಯ್ದೀನ್ ಬಾವಾ ದೇವಸ್ಥಾನದ ಪ್ರಸಾದ ಕಾಲಡಿ ಹಾಕಿ ತುಳಿಯುತ್ತಾರೆ : ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿಕೆಗೆ ಬಾವಾ ಕಿಡಿ

`ಮೊಯ್ದೀನ್ ಬಾವಾ ದೇವಸ್ಥಾನದ ಪ್ರಸಾದವನ್ನು ಕಾಲಡಿ ಹಾಕಿ ತುಳಿಯುತ್ತಾರೆ’ ಎಂದು ಶಾಸಕ ಡಾ| ಭರತ್ ಶೆಟ್ಟಿ ಅವರು ಹೇಳಿದ್ದಾರೆ. ಇದು ಸತ್ಯವೇ ಆಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಅಥವಾ ದರ್ಗಾದಲ್ಲಿ ಆಣೆ ಮಾಡಲಿ, ನಾನು ಬರುತ್ತೇನೆ ಎಂದು ಮಾಜಿ ಶಾಸಕ ಮೊಯ್ದೀನ್ ಬಾವಾ ಅವರು ಶಾಸಕ ಭರತ್ ಶೆಟ್ಟಿಯವರಿಗೆ ಆಹ್ವಾನ ನೀಡಿದ್ದಾರೆ. ಮಂಗಳವಾರ ನಗರ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನಗೆ ಬಾಲ್ಯದಲ್ಲಿ ಹೆತ್ತವರು ಸಂಸ್ಕಾರ

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನ

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವ ನಾರಾಯಣ (60) ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೈಸೂರಿನ ಮನೆಯಲ್ಲಿ ಶುಕ್ರವಾರ ತಡರಾತ್ರಿಯಲ್ಲಿ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ಮೂಲಗಳು ತಿಳಿಸಿವೆ. 1983 ರಲ್ಲಿ ಕಾಂಗ್ರೆಸ್ ಸೇರುವ ಮೂಲಕ ರಾಜಕೀಯ ರಂಗಕ್ಕೆ ಪ್ರವೇಶಿಸಿದ್ದ ಅವರು, ಸಂತೇಮರಹಳ್ಳಿ ಕ್ಷೇತ್ರದಿಂದ ಒಂದು ಶಾಸಕರಾಗಿ ಆಯ್ಕೆಯಾಗಿ, ಎರಡನೇ ಬಾರಿ ಕೊಳ್ಳೇಗಾಲ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಚಾಮರಾಜನಗರ ಕ್ಷೇತ್ರದಿಂದ

ವಿಧಾನಸಭಾ ಚುನಾವಣೆಗೆ ಯುವ ಕಾಂಗ್ರೆಸ್ ನಿಂದ ತಯಾರಿ

ಬೆಂಗಳೂರು, ಮಾ, 3; ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ “ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯಕಾರಣಿ” ಆರಂಭಗೊಂಡಿದೆ. ವಿಧಾನಸಭಾ ಚುನಾವಣೆಯಲ್ಲಿ ಯುವ ಕಾಂಗ್ರೆಸ್ ಪಾತ್ರ, ಚುನಾವಣಾ ಪ್ರಚಾರ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯಗಳನ್ನು ಜನರ ಮುಂದಿಟ್ಟು ಪರಿಣಾಮಕಾರಿಯಾಗಿ ಹೋರಾಟ ನಡೆಸುವ ಮತ್ತು ನಿರುದ್ಯೋಗ, ಇತರೆ ಯುವ ಜನಾಂಗ ಎದುರಿಸುತ್ತಿರುವ ಗಂಭೀರ

ಬಗಂಬಿಲ : ಬಿಜೆಪಿ-ಕಾಂಗ್ರೆಸ್ ಪಕ್ಷಗಳಿಂದ ಒಂದೇ ರಸ್ತೆಯ ಎರಡೆರಡು ಉದ್ಘಾಟನೆ

ಉಳ್ಳಾಲ: ಒಂದು ರಸ್ತೆ, ಒಂದೇ ಅನುದಾನ, ಆದರೆ ಉದ್ಘಾ ಟನೆ ಮಾತ್ರ ಎರಡು ದಿನ! ಹೀಗೊಂದು ವಿಲಕ್ಷಣ ಪ್ರಕರಣ ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು, ಬಿಜೆಪಿ-ಕಾಂಗ್ರೆಸ್ ನಡುವಿನ ರಸ್ತೆ ರಾಜಕೀಯಕ್ಕೆ ಸಾಕ್ಷಿಯಾಗಿದೆ. ಕೋಟೆಕಾರ್ ಪಟ್ಟಣ ಪಂಚಾ ಯತ್ ವ್ಯಾಪ್ತಿಯಲ್ಲಿರುವ ಕುಂಪಲ ಬೈಪಾಸ್‌ನಿಂದ ಬಗಂಬಿಲ ಮೂಲಕ ಯೇನಪೋಯ ಆಸ್ಪತ್ರೆಯನ್ನು ಸಂಪರ್ಕಿಸುವ ರಸ್ತೆ ಬಹುತೇಕ ಕಾಂಕ್ರೀಟ್‌ನಿಂದ ಕೂಡಿದೆ. ಈ ರಸ್ತೆಗೆ ವಿವಿಧ ಹಂತದಲ್ಲಿ ಸರಕಾರದಿಂದ

ಉಳ್ಳಾಲ ನಗರಸಭೆಯ 2023-24ನೇ ಸಾಲಿನ ಬಜೆಟ್ : ನಗರಸಭೆಯ ಸದಸ್ಯರ ನಡುವೆ ನೂಕಾಟ, ತಳ್ಳಾಟ

ಉಳ್ಳಾಲ: ಉಳ್ಳಾಲ ನಗರಸಭೆಯ 2023-24 ನೇ ಸಾಲಿನ ಬಜೆಟ್ ಮಂಡನೆಯಾಗಿದ್ದು ಬಜೆಟ್‍ನ್ನು ವಿರೋಧಿಸಿದ ಜೆಡಿಎಸ್ ಕೌನ್ಸಿಲರ್‍ಗಳು ಕಿವಿಗೆ ಹೂವಿಟ್ಟು ಆಡಳಿತ ರೂಢ ಕಾಂಗ್ರೆಸನ್ನು ಅಣಕಿಸಿದ್ದಾರೆ. ಕಳೆದ ರಾಜ್ಯ ಬಜೆಟ್ ಮಂಡನೆ ವೇಳೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಸದನದಲ್ಲಿ ಕಿವಿಗೆ ಹೂ ಇಟ್ಟು ಬಿಜೆಪಿ ಸರಕಾರವನ್ನ ಅಣಕಿಸಿ ಗಮನ ಸೆಳೆದಿದ್ದರು.ಕಾಂಗ್ರೆಸ್ ಅಸ್ತ್ರವನ್ನೇ ಇದೀಗ ಜೆಡಿಎಸ್ ನ ಉಳ್ಳಾಲ ನಗರ ಸದಸ್ಯರು ಬಳಸಿ ಆಡಳಿತರೂಢ ಕಾಂಗ್ರೆಸ್

ಎಂ.ಎಸ್. ರಕ್ಷಾ ರಾಮಯ್ಯಗೆ ಏಐಸಿಸಿ ಸದಸ್ಯತ್ವ

ಬೆಂಗಳೂರು, : ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ಏಐಸಿಸಿ ಸದಸ್ಯರನ್ನಾಗಿ ನೇಮಿಸಲಾಗಿದೆ. ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ನೇಮಕ ಮಾಡಿದ್ದಾರೆ. ಈ ಕುರಿತು ಏಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಯುವ ಕಾಂಗ್ರೆಸ್ ವಿಭಾಗದಿಂದ ರಕ್ಷಾ ರಾಮಯ್ಯ ಅವರಿಗೆ ಏಐಸಿಸಿಯಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗಿದ್ದು, ಯುವ ಸಮೂಹಕ್ಕೆ ಆದ್ಯತೆ ನೀಡಲಾಗಿದೆ