Home Posts tagged #congress (Page 19)

ಶರಣ್ ಪಂಪ್ ವೆಲ್ ನನ್ನು ಗಡಿ ಪಾರು ಮಾಡುವಂತೆ ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಅವರ ನೇತೃತ್ವದಲ್ಲಿ ಮನವಿ

ಭಾಷಣ ಮಾಡಿದ ಭಜರಂಗದಳ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಅವರ ನೇತೃತ್ವದ ಕಾಂಗ್ರೆಸ್ ನಿಯೋಗ ಸೋಮವಾರ ಮಂಗಳೂರು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. “ದ.ಕ. ಜಿಲ್ಲೆ ಸೂಕ್ಷ್ಮ ಪ್ರದೇಶವಾಗಿದ್ದು, ಕೋಮುಸಂಘರ್ಷವನ್ನು ಉಂಟುಮಾಡುವ ಜನಾಂಗೀಯ ಹತ್ಯೆಗೆ

ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ಹಾಗೂ ಮಹಾತ್ಮ ಗಾಂಧಿ ಅವರ 75ನೇ ಪುಣ್ಯಸ್ಮರಣೆ

ಅಖಿಲ ಭಾರತ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಆರಂಭಿಸಿದ ಭಾರತ್ ಜೋಡೋ ಯಾತ್ರೆ ಸೋಮವಾರ ಕಾಶ್ಮೀರದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಧ್ವಜಾರೋಹಣ ಹಾಗೂ ಮಹಾತ್ಮ ಗಾಂಧಿ ಅವರ 75ನೇ ಪುಣ್ಯಸ್ಮರಣೆ ಜರಗಿತು. ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಭಾರತ್ ಜೋಡೊ ಯಾತ್ರೆ 2ನೇ ಸ್ವಾತಂತ್ರ್ಯ ಸಂಗ್ರಾಮವಾಗಿದ್ದು, ಅಂದು

ಉಳ್ಳಾಲ ಸೈಯದ್ ಮದನಿ ದರ್ಗಾಕ್ಕೆ ಡಾ. ಜಿ. ಪರಮೇಶ್ವರ್ ಭೇಟಿ

ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಇತಿಹಾಸ ಪ್ರಸಿದ್ಧ ಉಳ್ಳಾಲ ಸೈಯದ್ ಮದನಿ ದರ್ಗಾಕ್ಕೆ ಭೇಟಿ ನೀಡಿದರು. ಮಂಗಳೂರು ದಕ್ಷಿಣ  ಮಾಜಿ ಶಾಸಕ ಜೆ.ಆರ್ ಲೋಬೊ, ಕೆಪಿಸಿಸಿಯ ಪ್ರೊ. ರಾಧಾಕೃಷ್ಣ , ಕೆಪಿಸಿಸಿ ಸೆಕ್ರೆಟರಿಗಳಾದ ಹುಸೈನ್ , ಜಿ.ಎ.ಬಾವಾ, ಟಿ.ಕೆ ಸುಧೀರ್, ಡಾ.ಅಭಿಲಾಷ್ ಕೂಡ ಭೇಟಿ ನೀಡಿದ್ದು, ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಜ.22ರಂದು ಪುತ್ತೂರಿನಲ್ಲಿ ಕಾಂಗ್ರೆಸ್‍ನಿಂದ ಜನಧ್ವನಿ ಕಾರ್ಯಕ್ರಮ

ಪುತ್ತೂರು: ಮಂಗಳೂರಿನಲ್ಲಿ ಜ.22ರಂದು ಸಾಯಂಕಾಲ 4 ಗಂಟೆಗೆ ನಡೆಯುವ ಜನಧ್ವನಿ ಕಾರ್ಯಕ್ರಮದಲ್ಲಿ ಒಟ್ಟು 50ಸಾವಿರ ಮಂದಿ ಸೇರುವ ನಿರೀಕ್ಷೆಯನ್ನು ಇಟ್ಟಿಕೊಳ್ಳಲಾಗಿದೆ. ಪ್ರತಿ ಬೂತ್ ಮಟ್ಟದಿಂದ 20 ಜನರು ಭಾಗವಹಿಸುವ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ 5ಸಾವಿರ ಜನರು ಭಾಗವಹಿಸಲಿದ್ದಾರೆ. ಪಕ್ಷಕ್ಕೆ ಬದ್ದವಾಗಿ ಬರುವವರನ್ನು ಸ್ವಾಗತ ಮಾಡುತ್ತೇವೆ ಮತ್ತು ನಾವು ಪಕ್ಷದ ಚಿಹ್ನೆಯ ಕೆಳಗೆ ಕೆಲಸಮಾಡುತ್ತೇವೆ ಎಂದು ಪುತ್ತೂರು

ಹಂತಕರಿಂದ ಹತ್ಯೆಗೀಡಾದ ಜಲೀಲ್ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಶಾಸಕ ಪ್ರಿಯಾಂಕ್ ಖರ್ಗೆ

ಸುರತ್ಕಲ್: ಇತ್ತೀಚೆಗೆ ಹಂತಕರಿಂದ ಅಮಾನುಷವಾಗಿ ಹತ್ಯೆಗೀಡಾದ ಜಲೀಲ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿ ಸಾಂತ್ವಾನ ನುಡಿದರು. ಜಲೀಲ್ ಹತ್ಯೆಯ ಬಗ್ಗೆ ಪ್ರಿಯಾಂಕ್‍ಗೆ ಕೂಲಂಕಷ ವಿವರಣೆ ನೀಡಿದ ಮೊಯ್ದೀನ್ ಬಾವಾ ಹತ್ಯೆ ಆರೋಪಿಗಳು ಮೂರೇ ತಿಂಗಳಲ್ಲಿ ಜಾಮೀನು ಪಡೆದು ಹೊರಬಂದಿದ್ದಾರೆ. ಇದಕ್ಕೆ ಬಿಜೆಪಿ ಸರ್ಕಾರವೇ

ಗೋಸಂತತಿ ಹೆಚ್ಚಿಸಲು ಯೋಜನೆ ಜಾರಿಗೊಳಿಸಬೇಕಿದೆ : ವಿಪಕ್ಷ ಉಪನಾಯಕ ಯು.ಟಿ ಖಾದರ್ ಹೇಳಿಕೆ

ಉಳ್ಳಾಲ: ಗೋಸಂತತಿ ಕಡಿಮೆಯಿದೆ. ಅದನ್ನು ಹೆಚ್ಚು ಮಾಡುವ ಕೆಲಸ ಆಗಬೇಕಿದೆ. ಗೋವುಗಳನ್ನು ಸಾಕುವವರಿಗೆ ಅದರ ಕಷ್ಟಗಳು ಗೊತ್ತಿದೆ ಹೊರತು ಭಾಷಣ ಮಾಡುವವರಿಗೆ ಕಷ್ಟದ ಬಗ್ಗೆ ಗೊತ್ತಿಲ್ಲ. ಗೋಸಾಕುವವರಿಗೆ ಶೇ.90 ಕ್ಕಿಂತ ಹೆಚ್ಚಿನ ಸಬ್ಸಿಡಿಯನ್ನು ಸರಕಾರ ನೀಡಿ ಗೋವುಗಳನ್ನು ಸಾಕಲು ಪ್ರೋತ್ಸಾಹಿಸಬೇಕು ಎಂದು ವಿಪಕ್ಷ ಉಪನಾಯಕ ಯು.ಟಿ ಖಾದರ್ ಹೇಳಿದರು. ದ.ಕ ಜಿಲ್ಲಾ ಪಂಚಾಯತ್ , ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಳ್ಳಾಲ ತಾಲೂಕು ಇದರ 2021-22 ನೇ ಸಾಲಿನ

ಕರ್ತವ್ಯದಲ್ಲಿದ್ದ ಸಂದರ್ಭ ಮೃತ ಪಟ್ಟಿದ್ದ ಪೊಲೀಸ್ ಕುಟುಂಬಕ್ಕೆ 1ಲಕ್ಷ ರೂ.ಪರಿಹಾರ ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ

ಸುರತ್ಕಲ್: ಚಿತ್ತಾಪುರ್ ಶಾಸಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಇತ್ತೀಚಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಪೊಲೀಸ್ ಕಾನ್ ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು.ಪಣಂಬೂರು ಪೊಲೀಸ್ ಕ್ವಾಟ್ರಸ್ ನಲ್ಲಿ ವಾಸವಿದ್ದ ಬಾಗಲಕೋಟ ಮೂಲದ ಹನುಮಂತ ಅವರು ಕಾವೂರು

ಜ. 22ರಂದು ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ

ಮಂಗಳೂರು: “ಬೆಳಗಾವಿಯಲ್ಲಿ ಪ್ರಾರಂಭವಾಗಿರುವ ಪ್ರಜಾಧ್ವನಿ ಯಾತ್ರೆಯು ಜ.22ರಂದು ಮಂಗಳೂರಿಗೆ ಆಗಮಿಸಲಿದ್ದು ನಗರದ ಕರಾವಳಿ ಮೈದಾನದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಸಮಾಕ್ಷಮದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ” ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮಾಹಿತಿ ನೀಡಿದರು. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. “ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದೆ. ಕೋವಿಡ್ ನಿಂದಾಗಿ ಜನರ ಆರ್ಥಿಕ ಸ್ಥಿತಿ

ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಕಾಂಗ್ರೆಸ್‍ನ್ನು ಅಧಿಕಾರಕ್ಕೆ ತನ್ನಿ
ಮೂಡುಬಿದರೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿಕೆ

ಮೂಡುಬಿದಿರೆ: ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅಭಿವೃದ್ಧಿಯ ನೆಪದಲ್ಲಿ ಪರ್ಸಂಟೇಜ್ ವ್ಯವಹಾರ ನಡೆಯುತ್ತಿದೆ.ಇದನ್ನೆಲ್ಲಾ ಹೋಗಲಾಡಿಸಿ ಭ್ರಷ್ಟಚಾರ ಮುಕ್ತ ಮೂಡುಬಿದಿರೆಯನ್ನಾಗಿ ರೂಪುಗೊಳಿಸಲು ಕಾಂಗ್ರೆಸ್ ನ ಎಂಎಲ್ ಎ ಬರಬೇಕು ಎಂದು ಮಾಜಿ ಸಚಿವ, ಕೆಪಿಸಿಸಿಯ ರಾಜ್ಯ ಉಪಾಧ್ಯಕ್ಷ ಕೆ.ಅಭಯಚಂದ್ರ ಜೈನ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಪಕ್ಷದ ಬಲಾಢ್ಯ ನಾಯಕರುಗಳು ಜನವರಿ 22 ರಂದು ಮಂಗಳೂರಿಗೆ

ರಾಜ್ಯಕ್ಕೆ ಬರಬೇಕಾದ ಅನುದಾನ ತರಬೇಕು, ನಾಯಿಮರಿ ತರ ಇರಬಾರದು : ಸಿದ್ದರಾಮಯ್ಯ

ರಾಜ್ಯದ ಸಮಸ್ಯೆಗಳ ಬಗ್ಗೆ ಕೇಂದ್ರ ಸರಕಾರದ ಜೊತೆ ಮಾತನಾಡುವ ಧೈರ್ಯ ರಾಜ್ಯದ ಮುಖ್ಯಮಂತ್ರಿಗೆ ಇರಬೇಕು. ರಾಜ್ಯಕ್ಕೆ ಬರಬೇಕಾದ ಅನುದಾನ ತರಬೇಕು, ನಾಯಿಮರಿ ತರ ಇರಬಾರದೆಂದು ಹೇಳಿದ್ದೇನಷ್ಟೇ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಅವರು ನಗರದ ಶ್ರೀ ಕುದ್ರೋಳಿ ಕ್ಷೇತ್ರ ಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನನ್ನನ್ನು ಹಲವು ಬಾರಿ ಹುಲಿಯಾ ಅನ್ನುತ್ತಾರೆ. ಯಡಿಯೂರಪ್ಪರನ್ನು ರಾಜಾ ಹುಲಿ