Home Posts tagged #congress (Page 25)

ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ವಿಧಿವಶ

ಮಂಗಳೂರು:ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ವಿಧಿವಶರಾಗಿದ್ದಾರೆ.ಆಸ್ಕರ್ ಫೆರ್ನಾಂಡಿಸ್ ಅವರಿಗೆ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಈ ಹಿನ್ನೆಲೆಯಲ್ಲಿ, ಆಸ್ಕರ್ ಫರ್ನಾಂಡಿಸ್ ಅವರಿಗೆ ಐಸಿಯುನಲ್ಲಿ

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕಲಬುರಗಿ ಪಾಲಿಕೆಯ ಮೇಯರ್ ಆಗ್ತಾರೆ: ಶಾಸಕ ಖಾದರ್ ವಿಶ್ವಾಸ

ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೇ ಮೇಯರ್ ಆಗುತ್ತಾರೆ ಎಂಬ ವಿಶ್ವಾಸ ಇದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಜನರು ನಮಗೆ ಮತ ನೀಡಿ ಸ್ಪಷ್ಟ ಬಹುಮತ ಕೊಟಿದ್ದಾರೆ. ಜೆಡಿಎಸ್ ತತ್ವ ಪ್ರಕಾರ ಕಾಂಗ್ರೆಸ್‌ಗೆ ಬೆಂಬಲ ನೀಡಬೇಕು. ಜೆಡಿಎಸ್ ಕಾಂಗ್ರೆಸ್ ಮಾಡಿದ ಉಪಕಾರ ಮರಿಯಲ್ಲ. ಜ್ಯಾತ್ಯಾತೀತ ನಿಲುವಿನ ಹಿನ್ನೆಲೆ ನಾವು ಅವ್ರಿಗೆ ಅವಕಾಶ ನೀಡಿದ್ದೇವೆ. ರಾಜ್ಯಸಭೆ

ವಿಟ್ಲ ವ್ಯಾಪ್ತಿಯಲ್ಲಿ ಹಾದುಹೋಗಲಿರುವ 400ಕೆವಿ ವಿದ್ಯುತ್: ಕೃಷಿಕರಿಗೆ ತೊಂದರೆ

ವಿಟ್ಲ: ಉಡುಪಿ ಕಾಸರಗೋಡು 400ಕೆವಿ ವಿದ್ಯುತ್ ಮಾರ್ಗ ಸದ್ಯದ ಮಾಹಿತಿಯಂತೆ ವಿಟ್ಲ ಪಟ್ಟಣ ಪಂಚಾಯಿತಿಯ 4-5 ವಾರ್ಡ್ ಗಳಲ್ಲಿ ಹಾದುಹೋಗುತ್ತಿದೆ. ಕೃಷಿಕರಿಗೆ ಹಾಗೂ ಹಲವಾರು ಜಮೀನು ಮಾಲೀಕರಿಗೆ ಸಮಸ್ಯೆಯಾಗುತ್ತಿದ್ದರೂ, ಈ ಬಗ್ಗೆ ಶಾಸಕರಾಗಲಿ, ಈ ಭಾಗದ ಜನಪ್ರತಿನಿಧಿಗಳಾಗಲೀ ಸಂತ್ರಸ್ತ ಜನರ ಪರವಾಗಿ ಧ್ವನಿ ಎತ್ತುತ್ತಿಲ್ಲ ಎಂದು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ ಆರೋಪಿಸಿದರು. ಬಂಟ್ವಾಳ ತಾಲೂಕಿನಲ್ಲಿ ಅಗಾಧ ಪ್ರಮಾಣದಲ್ಲಿ ರೈತರಿಗೆ

ರಾಜ್ಯಾದ್ಯಂತ ತಾಂಡವಾಡುತ್ತಿದೆ ಭ್ರಷ್ಟಾಚಾರ: ಮುರಳೀಧರ ರೈ ಮಠಂತಬೆಟ್ಟು ಆರೋಪ

ವಿಟ್ಲ: ರಾಜ್ಯ ಸರ್ಕಾರ ಅನುದಾನ ಕೊಡುವುದಕ್ಕೆ ಗುತ್ತಿಗೆದಾರರಿಂದ ಶೇ.15ಕ್ಕೂ ಮೇಲ್ಪಟ್ಟು ವಸೂಲಿ ಮಾಡುತ್ತಿದೆ. ಕಾಂಗ್ರೆಸ್ ಮುಕ್ತವಾದರೆ ಭ್ರಷ್ಟಾಚಾರ ಮುಕ್ತ ಎಂಬ ಹೇಳಿಕೆಯನ್ನು ಹೇಳಿರುವ ಪುತ್ತೂರು ಶಾಸಕರಿಗೆ ಇದು ಗಮನದಲ್ಲಿ ಇಲ್ಲವಾ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಪ್ರಪಂಚ ನೋಡಲ್ಲ ಎಂಬ ಗಾದೆ ಮಾತಿನಂತೆ ಬಿಜೆಪಿ ಸರ್ಕಾರದ ಪರಿಸ್ಥಿಯಾಗಿದೆ ಎಂದು ಡಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ರೈ ಮಠಂತಬೆಟ್ಟು ಹೇಳಿದರು. ವಿಟ್ಲದಲ್ಲಿ ಕರೆದ

ಗ್ಯಾಸ್ ಬೆಲೆ 354 ರೂ. ಇದ್ದಾಗ ಬೀದಿಗಿಳಿದವರು ಈಗ ಎಲ್ಲಿದ್ದಾರೆ: ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಮತಾ ಗಟ್ಟಿ ಪ್ರಶ್ನೆ

 ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಕೊರೋನಾದಿಂದ ಮೃತಪಡಲ್ಲ, ಬಡತನದಿಂದ ಮೃತಪಡುವ ಸಾಧ್ಯತೆ ಇದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದ್ರು. ಈ ಕುರಿತು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಚ್ಚೇದಿನ್ ತರುವುದಾಗಿ ಹೇಳಿ ಕಾಂಗ್ರೆಸ್‌ನ ದೋಷಗಳನ್ನು ಹೇಳಿ ಭಾವನಾತ್ಮಕವಾಗಿ ಜನರನ್ನು ಸೆಳೆದು ಮತಗಳಿಸಿ ಉನ್ನತ ಅಧಿಕಾರಕ್ಕೇರಿದ್ದರೂ ಜನರ

ಕೋವಿಡ್ ಲಸಿಕೆ ಹಂಚಿಕೆಯಲ್ಲಿ ತಾರತಮ್ಯ : ಮೂಡುಬಿದರೆಯಲ್ಲಿ ಕಾಂಗ್ರೆಸ್‍ನಿಂದ ಪ್ರತಿಭಟನೆ

ಮೂಡುಬಿದಿರೆ: ತಾಲೂಕಿನ ವಿವಿಧ ಕಡೆ ಕೋವಿಡ್ ಲಸಿಕೆ ಕೊಡುವಲ್ಲಿ ತಾರತಮ್ಯವಾಗುತ್ತಿದೆ ಎಂದು ಆರೋಪಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಹಸೀಲ್ದಾರ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಕೋವಿಡ್ ವ್ಯಾಕ್ಸಿನ್ ವಿಚಾರದಲ್ಲಿ ಶಾಸಕರು, ಬಿಜೆಪಿ ಮುಖಂಡರು ತಾರತಮ್ಯ ಮಾಡುತ್ತಿದ್ದಾರೆ. ಸರ್ಕಾರಿ ಆರೋಗ್ಯ ಕೇಂದ್ರಗಳು, ಪಂಚಾಯಿತಿ ಕಾರ್ಯಾಲಯ ಅಥವಾ ಶಾಲೆಗಳಲ್ಲಿ ಕೋವಿಡ್

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಪ್ರತಿನಿಧಿಗಳ ಸಭೆ

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ರಾಜ್ ಪ್ರತಿನಿಧಿಗಳ ಸಂವಾದ ಕಾರ್ಯಕ್ರಮ  ಜಿಲ್ಲಾ ಕಾಂಗ್ರೆಸ್ ಕಛೇರಿ ಯಲ್ಲಿ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ರಾಜ್ಯ ಅಧ್ಯಕ್ಷ ಸಿ.ನಾರಾಯಣ್ ಸ್ವಾಮಿ, ಸಂಚಾಲಕರಾದ ವಿಜಯ್ ಸಿಂಗ್, ರಾಷ್ಟೀಯ ಸಲಹಾ ಮಂಡಳಿಯ ಸದಸ್ಯರಾದ D.R. ಪಾಟೀಲ್,V.Y. ಘೋರ್ಪಡೆ, ಮಾಜಿ ಸಚಿವ ರಮಾನಾಥ ರೈ,

ಬಿಜೆಪಿ ಜಿಲ್ಲೆಗೆ ಹೊಸ ಯೋಜನೆಗಳನ್ನು ತಂದಿಲ್ಲ- ಮಾಜಿ ಸಚಿವ ರಮಾನಾಥ ರೈ ಹೇಳಿಕೆ

ಮಂಗಳೂರಿನ ಉರ್ವಸ್ಟೋರ್ ಬಳಿ ಇತ್ತೀಚಿಗೆ ಉದ್ಘಾಟನೆಗೊಂಡ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನವನ್ನು ಮಾಜಿ ಸಚಿವ ಬಿ.ರಮಾನಾಥ್ ರೈ ಸೇರಿದಂತೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿದ್ರು. ತದ ಬಳಿಕ ಸುದ್ದಿಗಾರದೊಂದಿಗೆ ಮಾತನಾಡಿದ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತ ನಡೆಸುತ್ತಿದ್ದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಅದರಲ್ಲೂ, ಹೊಸ ಜಿಲ್ಲಾಧಿಕಾರಿ ಕಚೇರಿ, ಜಿಲ್ಲೆಗೆ ಪಶುವೈದ್ಯಕೀಯ ಕಾಲೇಜು ನಿರ್ಮಾಣ, ಕೆಲವೊಂದು

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಗಾಂಧೀಜಿಗೆ ಅಪಮಾನ : ಕಾಂಗ್ರೆಸ್‍ನಿಂದ ಪ್ರತಿಭಟನೆ

ದ.ಕ ಜಿಲ್ಲಾಡಳಿತ ವತಿಯಿಂದ ನೆಹರೂ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ರವರು ಸಿದ್ದಪಡಿಸಿದ ಭಾಷಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹೆಸರನ್ನು ಕೊನೆಯಲ್ಲಿ ಉಲ್ಲೇಖಿಸಿದ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಟೌನ್ ಹಾಲ್ ಮುಂಭಾಗದ ಗಾಂಧಿ ಪ್ರತಿಮೆ ಎದುರುಗಡೆ ಪ್ರತಿಭಟನೆ ನಡೆಯಿತು. ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್ ದೇಶಕ್ಕಾಗಿ ಸ್ವಾತಂತ್ರ್ಯ ತಂದುಕೊಟ್ಟವರು

ನೆಹರೂರನ್ನು ಅವಮಾನಿಸಿದ ಸಿ.ಟಿ ರವಿ ದೇಶದ್ರೋಹಿ: ಮಾಜಿ ಸಚಿವ ರಮಾನಾಥ್ ರೈ ಕಿಡಿ

ದೇಶಕ್ಕಾಗಿ ಜೈಲಿಗೆ ಹೋದವರು ಮತ್ತು ಹುತಾತ್ಮರಾದವರ ಬಗ್ಗೆ ಹಗುರವಾಗಿ ಮಾತನಾಡುವ ಸಿ.ಟಿ ರವಿಯಂತಹವರೇ ನಿಜವಾದ ದೇಶದ್ರೋಹಿ ಎಂದು ಮಾಜಿ ಸಚಿವ ಬಿ.ರಮಾನಾಥ್ ರೈ ಕಿಡಿಕಾರಿದ್ದಾರೆ. ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಸಿ.ಟಿ.ರವಿ, ಈಶ್ವರಪ್ಪರಂತಹವರು ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದವರನ್ನು, ಕೊಡುಗೆಗಳನ್ನು ನೀಡಿದವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ದೇಶದ ಪ್ರಪ್ರಥಮ