Home Posts tagged #congress (Page 3)

ಮೋದಿಯವರ ಧ್ಯಾನ ನಿಶ್ಶಬ್ದ ಕಾಲದ ದುರುಪಯೋಗ:ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನೇರ ದೂರು

ಪ್ರಚಾರ ನಡೆಸಬಾರದ 48 ಗಂಟೆಗಳ ಕಾಲ ಧ್ಯಾನ ಮಾಡುವ ಮೋದಿಯವರ ಕಾರ್ಯವು ಸ್ಪಷ್ಟವಾಗಿ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಜೂನ್ 1ರಂದು ಮೋದಿಯವರ ವಾರಣಾಸಿ ಕ್ಷೇತ್ರಕ್ಕೂ ಸೇರಿ ಕೊನೆಯ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದೆ. ಅದರಲ್ಲಿ ಲಾಭ ಪಡೆಯಲು ಪ್ರಧಾನಿ ಮೋದಿಯವರು ಪ್ರಚಾರ ಮಾಡಬಾರದ 48 ಗಂಟೆಗಳ

ಕಾಂಗ್ರೆಸ್ ಪ್ರಚಾರ ಪುಸ್ತಕದಲ್ಲಿ ಬಿಜೆಪಿ ನಾಯಕನ ಪೋಟೋ!?

ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಪ್ರಚಾರ ಪತ್ರದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರ ಭಾವಚಿತ್ರದ ಬದಲು ಬಿಜೆಪಿ ಮುಖಂಡನ ಭಾವಚಿತ್ರ ಮುದ್ರಿಸಲ್ಪಟ್ಟಿದೆ! ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾಕ್ಟರ್ ಕೆ.ಕೆ.ಮಂಜುನಾಥ್ ಕುಮಾರ್ ಅವರ ಚುನಾವಣಾ ಪ್ರಚಾರ ಪತ್ರದಲ್ಲಿ ಈ ಎಡವಟ್ಟು ಕಂಡು ಬಂದಿದ್ದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಪ್ರಚಾರ ಪತ್ರದಲ್ಲಿ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿಯ ಬದಲು ಬಿಜೆಪಿ

ಬಿಜೆಪಿಯವರೇ ಕಾಂಗ್ರೆಸ್ ಸರ್ಕಾರದ ಟಾರ್ಗೆಟ್ ಯಾಕೆ: ಭರತ್ ಶೆಟ್ಟಿ ಪ್ರಶ್ನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತನ ಪರವಾಗಿ ಹೋಗಿದ್ದಾರೆ. ಯಾವುದೇ ಕಾನೂನು ಉಲ್ಲಂಘನೆಯಂತಹ ಕೆಲಸ ಮಾಡದೆ ಇದ್ದರೂ ಕಾಂಗ್ರೆಸ್ ಸರಕಾರ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಸುಳ್ಳು ಕೇಸು ಹಾಕಿಸಿ ದ್ವೇಷವಸಾಧನೆಯ ಕೆಲಸ ಮಾಡುತ್ತಿದೆ. ಬಿಜೆಪಿ ನಾಯಕರನ್ನು ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಪಕ್ಷದ ಶಕ್ತಿ ಕುಂದಿಸುವ ಕೆಲಸ ಮಾಡುವುದನ್ನು ಬಿಡಿ. ನಿಮ್ಮ ಆಡಳಿತ ಶಾಶ್ವತ ಅಲ್ಲ, ನಮ್ಮ ಶಾಸಕರನ್ನು, ಕಾರ್ಯಕರ್ತರನ್ನು ಬಂಧನದ ಸಾಧನೆ

ಧಾರವಾಡ: ವಾಹನ ಅಪಘಾತದಲ್ಲಿ ಶಿವಕುಮಾರ್ ಕೌಡಿಚ್ಚಾರ್ ಮೃತ್ಯು

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಮಾಜಿ ಅಧ್ಯಕ್ಷ ಶಿವಕುಮಾರ್ ಕೌಡಿಚ್ಚಾರ್ ವಾಹನ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಉದ್ಯೋಗ ನಿಮಿತ್ತ ಧಾರವಾಡದಲ್ಲಿ ವಾಸ್ತವ್ಯ ಹೊಂದಿದ್ದರು ಎಂದು ಮಾಹಿತಿ ಲಭ್ಯವಾಗಿದೆ. ಮೃತ ಶರೀರ ದಾರವಾಡ ಸರಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಕುಟುಂಬಸ್ಥರು ಈಗಾಗಲೇ ಧಾರವಾಡ ಕಡೆ ಪ್ರಯಾಣ ಬೆಳೆಸಿದ್ದಾರೆ.

ಬೆಳ್ತಂಗಡಿ : ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ – ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ

ನರೇಂದ್ರ ಮೋದಿ ಒಬ್ಬ ಹಿಟ್ಲರ್: ವೀರಪ್ಪ ಮೊಯ್ಲಿ

ಕೇಂದ್ರದಲ್ಲಿ ಹಿಟ್ಲರ್ ಸರ್ಕಾರವಿದೆ. ನರೇಂದ್ರ ಮೋದಿ ಒಬ್ಬ ಹಿಟ್ಲರ್, ಅವರ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಉದ್ದೇಶವಾಗಿದೆ ಎಂದು ಮಾಜಿ ಸಿಎಂ,ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಅವರು ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮೀನುಗಾರರಿಗೆ ಯಾವ ಸೌಕರ್ಯಗಳನ್ನು ಕೂಡ ಬಿಜೆಪಿ ಸರ್ಕಾರ ಕಲ್ಪಿಸಿಲ್ಲ. ಮಂಗಳೂರಿನ ಅಳಿವೆ ಬಂದರಿನಲ್ಲಿ ಹೂಳೆತ್ತುವ ಕಾರ್ಯವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ. ಉಡುಪಿ,

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶಕ್ಕೆ ಗ್ಯಾರಂಟಿ ಯೋಜನೆ ವಿಸ್ತರಣೆ : ಪದ್ಮಪ್ರಸಾದ್ ಜೈನ್

ಮೂಡುಬಿದಿರೆ: 2004 ರ ಲೋಕಸಭಾ ಚುನಾವಣೆಯಲ್ಲಿ ಯಾವ ಫಲಿತಾಂಶ ಕಾಂಗ್ರೆಸ್ ಗೆ ಸಿಕ್ಕಿತ್ತೋ ಅದೇ ರೀತಿಯ ಫಲಿತಾಂಶ ಈಬಾರಿ ಕಾಂಗ್ರೆಸ್ ನೇತೃತ್ವದ ಐ.ಎನ್.ಡಿ.ಐ.ಎ ಗೆ ಸಿಗಲಿದ್ದು ಸ್ಪಷ್ಟ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಅನುಷ್ಠಾನ ಮಾಡಿರುವ ಎಲ್ಲ ಗ್ಯಾರಂಟಿಗಳನ್ನು ದೇಶದಲ್ಲಿ ಅನುಷ್ಠಾನ ಮಾಡಲಾಗುವುದು ಎಂದು ತರಲಾಗುವುದೆಂದು ಕೆಪಿಸಿಸಿ ರಾಜ್ಯ ವಕ್ತಾರ ಪದ್ಮಪ್ರಸಾದ್ ಜೈನ್ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಮಂಗಳವಾರ

ಶಿವಮೊಗ್ಗದಲ್ಲಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ಅವರ ಸೋಮವಾರ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನಾಮಪತ್ರ ಸ್ವೀಕರಿಸಿದರು. ಗೀತಾರ ಪತಿ ನಟ ಶಿವರಾಜಕುಮಾರ್, ಮಾಜೀ ಮಂತ್ರಿ ಕಿಮ್ಮನೆ ರತ್ನಾಕರ್, ಮಂಜುನಾಥ ಭಂಡಾರಿ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು. ಅಭಿಮಾನಿಗಳು ಶಿವಣ್ಣ ಶಿವಣ್ಣ ಎಂದು ಹೊರಗೆ ಜಮಾಯಿಸಿದ್ದರು.ಅನಂತರ ರಾಮಣ್ಣ ಶ್ರೇಷ್ಟಿ ಉದ್ಯಾನದಲ್ಲಿ ಮೆರವಣಿಗೆ ಮತ್ತು

ಪುತ್ತೂರು:ಪದ್ಮರಾಜ್ ಪರಿವಾರ ವಾಟ್ಸ್‌ಆಪ್ ಗ್ರೂಪ್ ವಿವಾದ: ನಾರಾಯಣ್ ಪ್ರಲಾಪಕ್ಕೆ ಅಮಳ ರಾಮಚಂದ್ರ ಕಿಡಿ

ಪುತ್ತೂರು: ಕೋತಿ ಬೆಣ್ಣೆ ತಿಂದು ಬೆಕ್ಕಿನ ಮುಖಕ್ಕೆ ಒರೆಸಿದ ಹಾಗೆ ತಮ್ಮ ಮುಖ ಉಳಿಸಿಕೊಳ್ಳಲು ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿರುವ ಬಿಜೆಪಿ ಹಿಂದುಳಿದ ವರ್ಗದ ರಾಜ್ಯ ಕಾರ್ಯದರ್ಶಿ ಆರ್.ಸಿ ನಾರಾಯಣ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಹೇಳಿದ್ದಾರೆ. “ಪದ್ಮರಾಜ್ ಪರಿವಾರ” ವಾಟ್ಸ್‌ಆಪ್ ಗ್ರೂಪ್ ವಿವಾದಕ್ಕೆ ಸಂಬಂಧಪಟ್ಟಂತೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಮಲ ರಾಮಚಂದ್ರ ಮಾತನಾಡಿ ನಾನು

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಕೆದಂಬಾಡಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಕೆದಂಬಾಡಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಅಶೋಕ್ ರೈ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಮುಖಂಡರಾದ ಮುರಳೀಧರ್ ರೈ, ಕೆದಂಬಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಪುರಂದರ್ ರೈ ಮೊದಲಾದವರು ಇದ್ದರು.