ಕೆದಂಬಾಡಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಕೆದಂಬಾಡಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಅಶೋಕ್ ರೈ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್,
ಪುತ್ತೂರು: ನಮ್ಮದೇಶದ ಭೂಮಿಯನ್ನು ಚೀನಾ ಅತಿಕ್ರಮಿಸುತ್ತಲೇ ಇದೆ, ಹಲವಾರು ಚ.ಅಡಿ ಜಾಗವನ್ನು ಸದ್ದಿಲ್ಲದೆ ಒಳಗೆ ಹಾಕಿದ್ದಾರೆ ಆದರೆ ನಾವು ಇಲ್ಲಿ ಧರ್ಮಗಳ ವಿಚಾರದಲ್ಲಿ ಕಚ್ಚಾಡುವ ಕೆಲಸವನ್ನು ಮಾಡುತ್ತಿದ್ದು ಇದೇ ರೀತಿ ಮುಂದುವರೆದಲ್ಲಿ ದೇಶದ ಭದ್ರತೆಗೆ ಅಪಾಯ ಉಂಟಾಗಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.ದೇಶದಲ್ಲಿ ನಾವು ಪರಸ್ಪರ ಒಗ್ಗಟ್ಟಿನಿಂದ ಇರಬೇಕಿದೆ. ಧರ್ಮದ ಹೆಸರಿನಲ್ಲಿಮಾಡುವ ಕಚ್ಚಾಟವನ್ನು ನಿಲ್ಲಿಸಬೇಕು, ಯುವ ಜನತೆಯ ಕೈಗೆ ಉದ್ಯೋಗ ಕೊಡುವ
ಉಡುಪಿ: ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ತೆರಳಿದ ಜಯಪ್ರಕಾಶ್ ಹೆಗ್ಡೆ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಚಿಕ್ಕಮಗಳೂರು ಕಾಂಗ್ರೇಸ್ ಅಧ್ಯಕ್ಷ
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಇಂದು ನಾಮಪತ್ರ ಸಲ್ಲಿಸಿದ್ದು, ಅದಕ್ಕೂ ಮುಂಚಿತವಾಗಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾಮಪತ್ರಕ್ಕೆ ಪೂಜೆಯನ್ನು ಸಲ್ಲಿಸಿದರು. ನಂತರ ನಗರದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಏಪ್ರಿಲ್ 3ರಂದು ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಕೆ.ಜೆ. ಜಾರ್ಜ್ ನಾಮಪತ್ರ ಸಲ್ಲಿಕೆಯ ನೇತೃತ್ವ ವಹಿಸಲಿದ್ದಾರೆ. ಚಿಕ್ಕಮಗಳೂರಿನ ಕಾಂಗ್ರೆಸ್ ಶಾಸಕರಾದ ಹೆಚ್. ಡಿ ತಮ್ಮಯ್ಯ, ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಶೃಂಗೇರಿ ಟಿಡಿ ರಾಜೇಗೌಡ, ತರೀಕೆರೆ ಶಾಸಕ ಜಿ.ಹೆಚ್ ಶ್ರೀನಿವಾಸ್, ಎರಡು ಜಿಲ್ಲೆಯ ಜಿಲ್ಲಾಧ್ಯಕ್ಷರುಗಳು , ಸ್ಥಳೀಯ
ಬಂಟ್ವಾಳ: ದ.ಕ.ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಉಪಾಧ್ಯಕ್ಷ, ಸಾಮಾಜಿಕ ಹಾಗೂ ಆರ್ಟಿಐ ಕಾರ್ಯಕರ್ತ ಪದ್ಮನಾಭ ಸಾವಂತ ಅವರ ಸಾವು ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಂಡು ಬಂದರೂ ಸರಿಯಾಗಿ ಪರಿಶೀಲಿಸಿದರೆ ಇದೊಂದು ಕೊಲೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಆರೋಪಿಸಿದ್ದಾರೆ.ಬಿ.ಸಿ.ರೋಡಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪದ್ಮನಾಭ ಸಾಮಂತ್ ಆರ್ಟಿಐ
ಮೂಡುಬಿದಿರೆ: ದ.ಕ.ಜಿಲ್ಲೆಯಲ್ಲಿ ಕಳೆದ 32 ವರ್ಷಗಳಿಂದ ಬಿಜೆಪಿಯ ಸಂಸದರಿದ್ದರು. ಆದರೆ ಜಿಲ್ಲೆಯಲ್ಲಿ ಏನು ಅಭಿವೃದ್ಧಿ ಆಗಿದೆ. ಮನು ಸಂಸ್ಕೃತಿಯನ್ನು ಪ್ರತಿಪಾದಿಸುವ ಬಿಜೆಪಿಯು ಅಧಿಕಾರಕ್ಕೆ ಬರಬಾರದು ಆದ್ದರಿಂದ ನಾವು ಕಾಂಗ್ರೆಸ್ ನ ಪದ್ಮರಾಜ್ ಗೆ ಮತವನ್ನು ಹಾಕಿ ಬಿಜೆಪಿಯನ್ನು ಸೋಲಿಸಬೇಕು ಎಂದು ಸಿಪಿಐಎಂನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾದವ ಶೆಟ್ಟಿ ಕರೆ ನೀಡಿದರು. ಅವರು ಸಮಾಜ ಮಂದಿರದಲ್ಲಿ ನಡೆದ ಸಿಪಿಐಎಂ ಪಕ್ಷದ ಮೂಡುಬಿದಿರೆ ತಾಲೂಕು ಮಟ್ಟದ ರಾಜಕೀಯ
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಎ.3ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿ ಬಿ.ರಮಾನಾಥ ರೈ ತಿಳಿಸಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಸುವ ಮೊದಲು ಚರ್ಚ್, ಮಸೀದಿ, ದೇವಸ್ಥಾನ ಸೇರಿದಂತೆ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ
ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಬಹಳಷ್ಟು ಜನ ಪರ ಯೋಜನೆಗಳನ್ನು ದಕ್ಷಿಣ ಕನ್ನಡ ಜಿಲ್ಲೆಗೆ ನೀಡಿದೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದೆ ಅಭಿವೃದ್ಧಿ, ಬಡತನ ನಿರ್ಮೂಲನೆಗೆ ಪ್ರಾಶಸ್ತ್ಯವಿತ್ತು. ಆದ್ದರಿಂದಲೇ ಬಿಜೆಪಿ ಕಾಲಘಟ್ಟದಲ್ಲಿ ಯಾವ ಯೋಜನೆಗಳೂ ಬಾರದಿದ್ದರೂ, ಭಾವನಾತ್ಮಕವಾಗಿ ಅವರು ಜನರನ್ನು ಕೆರಳಿಸಿ ಚುನಾವಣೆಯಲ್ಲಿ ಗೆಲ್ಲುತ್ತಿದ್ದಾರೆ. ಆದ್ದರಿಂದ ಈ ಬಾರಿ ಹುರುಪಿನಿಂದ
ಮೂಡುಬಿದಿರೆ: ಕಾಂಗ್ರೆಸ್ ಯಾವತ್ತಿಗೂ ಹರಿಯುವ ನದಿ. ಕರ್ನಾಟಕದಲ್ಲಿ ಕಾಂಗ್ರೆಸನ್ನು ನಿರ್ನಾಮ ಮಾಡುವುದಾಗಿ ಹೇಳಿದ್ದ ಬಿಜೆಪಿ ಇಂದು ಅಧಿಕಾರವನ್ನು ಕಳೆದುಕೊಂಡಿದೆ. ಜನಸಾಮಾನ್ಯರಿಗೆ ಸದಾ ಸ್ಪಂದಿಸುವ ಗುಣ ಹೊಂದಿರುವ ಕಾಂಗ್ರೆಸನ್ನು ನಿರ್ನಾಮ ಮಾಡಲು ಸಾಧ್ಯವೇ ಇಲ್ಲ. ಈ ಬಾರಿ ಸಂಸತ್ ಚುನಾವಣೆಯಲ್ಲಿ ರಾಜ್ಯದಲ್ಲಿ ಅತೀ ಹೆಚ್ಚಿನ ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ. ಈ ಮೂಲಕ ಕರಾವಳಿ ಭಾಗದಲ್ಲೂ ಕಾಂಗ್ರೆಸ್ ಗೆಲುವು ಪಡೆದುಕೊಳ್ಳಲಿದೆ ಎಂದು ಮಾಜಿ ಸಚಿವ




























