Home Posts tagged #crime news

ಕಾರ್ಕಳ: ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿದ ಪತ್ನಿ

ಕಾರ್ಕಳ: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್ ಮಾಡಿದ ರೀಲ್ಸ್ ರಾಣಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿ ಕೊಂದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ  ದೆಪ್ಪುಜೆಯಲ್ಲಿ ನಡೆದಿದೆ. ಪ್ರತಿಮಾ ಎಂಬಾಕೆಯೇ ತನ್ನ ಪತಿಗೆ ವಿಷವುಣಿಸಿ ಕೊಂದ ಅರೋಪಿಯಾಗಿದ್ದಾಳೆ.ಈಕೆಗೆ ಕೆಲವು ವರ್ಷಗಳ ಹಿಂದೆ ಬಾಲಕೃಷ್ಣ ಎನ್ನುವವರ ಜೊತೆಗೆ

ಮೂಡುಬಿದಿರೆಯಲ್ಲಿ ಮಹಿಳೆಯ ಸರ ಎಗರಿಸಿ ಪರಾರಿ

ಮೂಡುಬಿದಿರೆ: ಪರಿಚಯಸ್ಥನಂತೆ ನಟಿಸಿ ಮಹಿಳೆಯ ಜತೆ ಮಾತನಾಡಿ ಆಕೆಯ ಮೂರೂವರೆ ಪವನಿನ ಸರವನ್ನು ವ್ಯಕ್ತಿಯೊಬ್ಬ ಎಗರಿಸಿ ಪರಾರಿಯಾದ ಘಟನೆ ಸೋಮವಾರ ಮಧ್ಯಾಹ್ನದ ವೇಳೆ ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಅಶ್ವತ್ಥಪುರದಲ್ಲಿರುವ ತನ್ನ ಮಗಳ ಮನೆಗೆ ಹೋಗಲು ನಾರಾವಿಯಿಂದ ಬಂದಿದ್ದ ಮಧ್ಯ ವಯಸ್ಸಿನ ಮಹಿಳೆಯು ಬಸ್ಸಿನಿಂದ ಇಳಿದು ಬರುತ್ತಿದ್ದಾಗ ಚಿಕ್ಕಮ್ಮನೆಂದು ಕರೆದು ಪರಿಚಯಿಸಿಕೊಂಡಿದ್ದ ಅಲ್ಲದೆ ಮಹಿಳೆಯ ಮನೆಯವರ ಪರಿಚಯವನ್ನೆಲ್ಲಾ ಹೇಳಿದ ಅಲ್ಲದೆ ಆಕೆಯನ್ನು

ಉಳ್ಳಾಲ: ಮಾಜಿ ಪ್ರಿಯತಮೆಯ ಕೊಲೆಯತ್ನ: ಆರೋಪಿಗೆ 18 ವರ್ಷ ಸಜೆ, 2 ಲಕ್ಷ ರೂ ದಂಡ

ಉಳ್ಳಾಲ: ಮಾಜಿ ಪ್ರೇಯಸಿಯನ್ನು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ 2 ನೇ ಹೆಚ್ಚುವರಿ ನ್ಯಾಯಾಲಯ ಒಟ್ಟು 18 ವರ್ಷ 1 ತಿಂಗಳ ಸಜೆ ಹಾಗೂ ಸಂತ್ರಸ್ತೆಗೆ ರೂ. 2 ಲಕ್ಷ ರೂ ನೀಡುವಂತೆ ಆದೇಶ ನೀಡಿದೆ.2019ರ ಜೂ.28 ರಂದು ದೇರಳಕಟ್ಟೆಯ ಬಗಂಬಿಲ ರಸ್ತೆಯಲ್ಲಿನ ಶಾಂತಿಧಾಮ ಬಳಿ ಆರೋಪಿ ಸುಶಾಂತ್ ಯಾನೆ ಶಾನ್ (31) ಕಾಲೇಜಿನಿಂದ ಬರುತ್ತಿದ್ದ ಸಂತ್ರಸ್ತೆಯನ್ನು ಹಿಂಬಾಲಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಬಂದಿದ್ದ. ಶಾಂತಿಧಾಮ ಬಳಿ ಅಡ್ಡಗಟ್ಟಿ

ಉಡುಪಿ: ನಟೋರಿಯಸ್ ಬನಿಯನ್ ಗ್ಯಾಂಗ್!: ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರಿಂದ ತನಿಖೆ

ಇತ್ತೀಚೆಗೆ ಉಡುಪಿಯ ಸಂತಕಟ್ಟೆ ಬಳಿ ನಡೆದ ದರೋಡೆ ಪ್ರಕರಣದ ತನಿಖೆ  ಕೈಗೆತ್ತಿಕೊಂಡ ಉಡುಪಿ ಪೊಲೀಸರಿಗೆ ಶಾಕ್ ಕಾದಿತ್ತು. ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯ ಪರಿಶೀಲಿಸಿದಾಗ ಅದರಲ್ಲಿ ಕಂಡ ದೃಶ್ಯಗಳನ್ನು ಕಂಡು ಪೊಲೀಸರು  ಬೆಚ್ಚಿ ಬಿದ್ದಿದ್ದರು. ದಿಲ್ಲಿ ಕ್ರೈಮ್-2 ವೆಬ್ ಸೀರೀಸ್‌ನ ಕಚ್ಚಾ ಬನಿಯನ್ ಗ್ಯಾಂಗ್ ಮಾದರಿಯಲ್ಲೇ.. ಬರೀ ಚೆಡ್ಡಿ ಧರಿಸಿ, ಮೈಗೆ ಎಣ್ಣೆ ಹಚ್ಚಿಕೊಂಡು, ಸೊಂಟದಲ್ಲೊಂದು ಚಪ್ಪಲಿ ಕಟ್ಟಿಕೊಂಡು ಈ ಗ್ಯಾಂಗ್   ದರೋಡೆ ನಡೆಸುತ್ತೆ.  ಬಳಿಕ

ಪುತ್ತೂರು: ಮನೆಮಂದಿಯನ್ನು ಕಟ್ಟಿಹಾಕಿ ದರೋಡೆ ಪ್ರಕರಣ, ಆರು ಮಂದಿ ಆರೋಪಿಗಳ ಬಂಧನ

ಪುತ್ತೂರು: ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಕುದ್ಕಾಡಿ ಎಂಬಲ್ಲಿ ಮನೆ ಮಂದಿಯನ್ನು ಕಟ್ಟಿಹಾಕಿ ದರೋಡೆ ನಡೆಸಿದ ಪ್ರಕರಣವನ್ನು ಪತ್ತೆ ಹಚ್ಚಿದ ಪೊಲೀಸರು ಕೇರಳ ಮೂಲದ ಐವರು ಸೇರಿದಂತೆ ಒಟ್ಟು ಆರು ಮಂದಿಯನ್ನು ಬಂಧಿಸಿ, ದರೋಡೆ ನಡೆಸಿದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ತಿಳಿಸಿದ್ದಾರೆ. ಅವರು ಪುತ್ತೂರು ಎಎಸ್‍ಪಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರಕರಣವನ್ನು ಭೇದಿಸಿದ ಬಗ್ಗೆ

ಬಾಲ ಮಂದಿರದಿಂದ ಬಾಲಕರು ನಾಪತ್ತೆ

ನಗರದ ಬೋಂದೆಲ್‌ನಲ್ಲಿರುವ ಬಾಲಕರ ಬಾಲ ಮಂದಿರದಿಂದ ನ.26 ರ ರವಿವಾರ ಮುಂಜಾನೆ ಶ್ಯಾಮವೆಲ್ ಟೊಪ್ಪು (16) ಮತ್ತು ವಡಲಮನಿ ಚಿರಂಜೀವ (16) ಎಂಬವರು ನಾಪತ್ತೆಯಾಗಿರುವ ಬಗ್ಗೆ ಕಾವೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಯಾಮುವೆಲ್ 150 ಸೆಂ.ಮೀ ಎತ್ತರವಿದ್ದು, ಬಿಳಿ ಮೈಬಣ್ಣ, ಕೋಲುಮುಖ, ಸಾಧಾರಣ ಮೈಕಟ್ಟು ಹೊಂದಿದ್ದಾನೆ. ಎದುರಿನಲ್ಲಿ ಹಳದಿ ಬಣ್ಣದ ಪಟ್ಟಿ ಇರುವ ತಿಳಿನೀಲಿ ಬಣ್ಣದ ಟೀಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾನೆ. ವಡಲಮನಿ ಚಿರಂಜೀವಿ 150 ಸೆಂ.ಮೀ

ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಳ್ಳು ದೂರು ನೀಡಿದ್ದ ಪತ್ನಿ ಸೇರಿ ಐವರು ಅರೆಸ್ಟ್!

ಕುಂದಾಪುರ: ಇಲ್ಲಿನ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಅಂಪಾರಿನಲ್ಲಿ ಮಂಗಳವಾರದಂದು ಬೆಳಕಿಗೆ ಬಂದಿದ್ದ ವಿವಾಹಿತನೋರ್ವನ ಆತ್ಮಹತ್ಯೆ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಅಂಪಾರು ಗ್ರಾಮದ ಮೂಡುಬಗೆಯ ವಿವೇಕ ನಗರದ ನಿವಾಸಿ ನಾಗರಾಜ (36) ಕೊಲೆಯಾದ ದುರ್ದೈವಿ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಾಜ್ ಅವರ ಪತ್ನಿ ಸೇರಿದಂತೆ ಐವರನ್ನು ಶಂಕರನಾರಾಯಣ ಪೊಲೀಸರು ಬಂಧಿಸುವಲ್ಲಿ

ಕುಂದಾಪುರ: ತಲವಾರಿನಿಂದ ಹಲ್ಲೆ: ಗಾಯಾಳು ಯುವಕರು ಆಸ್ಪತ್ರೆಗೆ ದಾಖಲು

ಕುಂದಾಪುರ: ಬಾರ್ ಮ್ಯಾನೇಜರೋರ್ವರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಜರಿಗಾಗಿ ಸ್ಥಳಕ್ಕೆ ತೆರಳಿದ್ದ ವೇಳೆ ಆರೋಪಿಗಳ ತಂಡ ಏಕಾಏಕಿಯಾಗಿ ತಲವಾರು ದಾಳಿ ನಡೆಸಿದ ಪರಿಣಾಮ ಇಬ್ಬರು ಯುವಕರು ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ.ತಲವಾರು ದಾಳಿಗೊಳಗೊಳಗಾದ ಕಾಲ್ತೋಡು ನಿವಾಸಿ ರವಿ ಶೆಟ್ಟಿ ಹಾಗೂ ಪ್ರಶಾಂತ್ ಶೆಟ್ಟಿ ಇದೀಗ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಶಿರೂರು ಗ್ರಾಮದ

ಉಳ್ಳಾಲ: ಪೊಲೀಸರಿಗೆ ತಲವಾರು ತೋರಿಸಿದ ರೌಡಿಶೀಟರ್

ಉಳ್ಳಾಲ: ವಾರೆಂಟ್ ಆರೋಪಿಯನ್ನು ಹಿಡಿಯಲು ಹೋದ ಉಳ್ಳಾಲ ಠಾಣೆಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ರೌಡಿಶೀಟರ್ ತಲವಾರು ತೋರಿಸಿ ಪರಾರಿಯಾದ ಘಟನೆ ಉಳ್ಳಾಲದ ಧರ್ಮನಗರದಲ್ಲಿ ನಡೆದಿದೆ. ಧರ್ಮನಗರ ನಿವಾಸಿ ಮುಕ್ತಾರ್ ಮುಕ್ತಾರ್ ಅಹ್ಮದ್ ಎಂಬಾತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಈತನ ಮೇಲೆ ಹತ್ತಕ್ಕೂ ಹೆಚ್ಚು ಕೇಸುಗಳಿದ್ದು, ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಉಳ್ಳಾಲ ಪೊಲೀಸರು ಕೋರ್ಟಿನಿಂದ ವಾರಂಟ್ ಪಡೆದು ಇಂದು ಬೆಳಗ್ಗೆ ಬಂಧಿಸಲು

ಉಳ್ಳಾಲದಲ್ಲಿ ಯುವಕನಿಗೆ ಚೂರಿ ಇರಿತ

ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಉಳ್ಳಾಲದಲ್ಲಿ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ. ಉಳ್ಳಾಲದಲ್ಲಿ ಗ್ಯಾಸ್ ಸ್ಟವ್‌ಗೆ ಸಂಬಂಧಿಸಿದ ಸಾಮಗ್ರಿಗಳನ್ನು ಹೊಂದಿರುವ ಅಂಗಡಿ ಮಾಲಕ ಹರೀಶ್ ಗಾಣಿಗ ಚೂರಿ ಇರಿತಕ್ಕೊಳಗಾಗಿರುವವರು. ಆರೋಪಿಯು ಈ ಹಿಂದೆ ಹರೀಶ್ ಜೊತೆ ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿ ಗಲಾಟೆ ಮಾಡಿದ್ದನೆನ್ನಲಾಗಿದೆ. ಈ ಬಗ್ಗೆ ಹರೀಶ್ ಗಾಣಿಗ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಇದರಿಂದ ಕೋಪಗೊಂಡ ಆರೋಪಿ ಮಂಗಳವಾರ ಹರೀಶ್