ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಗೆ ಸಾಗಿಬಂತು.
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶ್ವವಿದ್ಯಾನಿಲಯ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಗರದ ವಿಶ್ವವಿದ್ಯಾನಿಲಯ ಕಾಲೇಜು ಆವರಣದ ರವೀಂದ್ರ ಕಲಾಭನವನದಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಅಭಿಯಾನವನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಡಾ. ಆನಂದ್ ಕೆ.,