Home Posts tagged #Election (Page 2)

ಬೇಲೂರು : ಮತದಾನದ ನಂತರ ವ್ಯಕ್ತಿಗೆ ಹೃದಯಘಾತ

ಬೇಲೂರು ತಾಲೂಕಿನ ಕೋಗಿಲೆ ಮನೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಚಿಕ್ಕೋಲೆ ಗ್ರಾಮದ ಮತಗಟ್ಟೆ ಸಂಖ್ಯೆ 211 ರಲ್ಲಿ ಮತದಾನ ಮಾಡಿದ ಜಯಣ್ಣ ಎಂಬುವ 48 ವರ್ಷದ ವ್ಯಕ್ತಿ ಮತದಾನದ ನಂತರ ಮತದಾನ ಕೇಂದ್ರದ ಹೊರಗಡೆ ಹೃದಯಘಾತದಿಂದ ಮೃತಪಟ್ಟಿದ್ದಾರೆ

ದಿ.ಆಸ್ಕರ್ ಫೆರ್ನಾಂಡಿಸ್ ಪತ್ನಿ ಬ್ಲೋಸಮ್ ಮತದಾನ

ಕೇಂದ್ರದ ಮಾಜಿ ಸಚಿವರಾಗಿದ್ದ ದಿವಂಗತ ಆಸ್ಕರ್ ಫೆರ್ನಾಂಡಿಸ್ ಅವರ ಪತ್ನಿ ಬ್ಲೋಸಮ್ ಮತ್ತು ಮಗಳು ಓಶಾನಿ ಫರ್ನಾಂಡಿಸ್ ಅವರು ಮತಚಲಾಯಿಸಿದರು. ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು.

ರಾಜ್ಯಾದ್ಯಂತ ಮತದಾನ ಪ್ರಾರಂಭ

 ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಾರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6ಗಂಟೆಯ ವರೆಗೆ 37,777 ಸ್ಥಳಗಳಲ್ಲಿ ಒಟ್ಟು 58,545 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಈಗಾಗಲೇ ಮತಗಟ್ಟೆಗಳಲ್ಲಿ ಮತದಾನ ಆರಂಭವಾಗಿದೆ. ಕೆಲವು ಮತಗಟ್ಟೆಗಳ ಮುಂದೆ ಬೆಳಗ್ಗೆಯೇ ಮತದಾರರು ಸಾಲುಗಟ್ಟಿರುವುದು ಕಂಡು ಬಂದಿದ್ದು, ಈ ಬಾರಿಯ ಮಾದರಿ ಮತಗಟ್ಟೆಗಳು ಮತದಾರರನ್ನು ಕೈಬೀಸಿ ಸೆಳೆಯುವಂತಿದೆ. ಇನ್ನು ರಾಜ್ಯದ ಒಟ್ಟು

ಮೇ 10ರ ಮತದಾನ, ಮತಗಟ್ಟೆಗಳಿಗೆ ಚುನಾವಣಾ ಅಧಿಕಾರಿ, ಸಿಬ್ಬಂದಿ ನಿಯೋಜನೆ

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1,9061 ಮತದಾರರಿದ್ದು, ನಾಳೆ ಜರಗಲಿರುವ 29 ಮತಗಟ್ಟೆಗಳಿಗೆ ಚುನಾವಣೆ ಕರ್ತವ್ಯಕ್ಕಾಗಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಮತಗಟ್ಟೆ ಅಧಿಕಾರಿಗಳನ್ನು ಸಿಬ್ಬಂದಿಗಳನ್ನು ಕಳಿಸಲು ಕಾರ್ಕಳ ಮಂಜುನಾಥ ಪೈ ಕಾಲೇಜಿನಿಂದ ವ್ಯವಸ್ಥೆ ಮಾಡಲಾಗಿದ್ದು ಬೆಳಗಿನಿಂದಲೇ ಪೆÇಲೀಸ್, ಅರೆ ಸೈನಿಕ ಪಡೆ, ಸ್ಥಳದಲ್ಲಿ ಹಾಜರಿದ್ದು, ಬೀಗು ಭದ್ರತೆಯೊಂದಿಗೆ ಚುನಾವಣೆ ಯಂತ್ರಗಳನ್ನು ಚುನಾವಣೆ ಕೇಂದ್ರಗಳಿಗೆ ಕಳುಹಿಸುವ ಕೆಲಸ

ಮೂಲ್ಕಿ ,ಮೂಡಬಿದಿರೆ ವಿಧಾನ ಸಭಾ ಕ್ಷೇತ್ರ : ಉಮಾನಾಥ ಕೋಟ್ಯಾನ್ ಗೆ ಗ್ರಾಮಸ್ಥರ ಬೆಂಬಲ

ಚುನಾವಣೆ ಪ್ರಚಾರ ಇಂದು ಕೊನೆಯ ದಿನವಾಗಿದ್ದು, ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಇರುವೈಲು ಗ್ರಾಮದ ಜನರು ಒಕ್ಕೊರಲಿನಿಂದ ಈ ಬಾರಿಯೂ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಗೆಲ್ಲುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 20 ವರ್ಷಗಳಲ್ಲಿ ಆಗದ ಕೆಲಸ ಕಾರ್ಯಗಳು ಕೇವಲ 5 ವರ್ಷದಲ್ಲಿ ಬಹಳಷ್ಟು ಅಭಿವೃದ್ಧಿಯನ್ನು ಕಂಡಿದೆ. ಇರುವೈಲು ಗ್ರಾಮಕ್ಕೆ ಮೊಟ್ಟ ಮೊದಲ ಬಾರಿಗೆ 7 ಕೋಟಿಗೂ ಅಧಿಕ ವೆಚ್ಚದ ಅನುದಾನ ಬಿಡುಗಡೆಗೊಂಡು ಉತ್ತಮ ರೀತಿಯಲ್ಲಿ

ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ, ಗುತ್ತಿಗಾರು ಪೇಟೆಯಲ್ಲಿ ಚುನಾವಣಾ ಪ್ರಚಾರ

ಭಾರತೀಯ ಜನತಾ ಪಾರ್ಟಿಯ ಚುನಾವಣಾ ಪ್ರಚಾರ ಪ್ರವಾಸದ ಸಲುವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ತಾಲೂಕಿನ ಗುತ್ತಿಗಾರು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಗುತ್ತಿಗಾರು ಪೇಟೆಯಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರೊಂದಿಗೆ ತೆರಳಿ ಬಹಿರಂಗ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

ರಮಾನಾಥ ರೈ ಅವರ ಗೆಲುವು ನಿಶ್ಚಿತ : ಚುನಾವಣಾ ಉಸ್ತುವಾರಿ ಸುಭಾಶ್ಚಂದ್ರ ಶೆಟ್ಟಿ

ವಿಟ್ಲ: ಕಳೆದ ಐದು ವರುಷದ ಅವಧಿಯ ಆಡಳಿತ ಅನುಭವ ಹೊಂದಿರುವ ಬಂಟ್ವಾಳ ಕ್ಷೇತ್ರದ ಮತದಾರರು ಮತ್ತೊಮ್ಮೆ ರಮಾನಾಥ ರೈಯವರನ್ನು ಕ್ಷೇತ್ರದ ಶಾಸಕರನ್ನಾಗಿ ಆಯ್ಕೆ ಮಾಡುವ ನಿರ್ಧಾರದಲ್ಲಿದ್ದಾರೆ ಎಂದು ಬಂಟ್ವಾಳ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಚುನಾವಣಾ ಉಸ್ತುವಾರಿಯಾಗಿರಯವ ಪಂಚಾಯತ್ ರಾಜ್ ಘಟಕದ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲುರವರು ಹೇಳಿದರು. ಅವರು ಕೊಳ್ನಾಡು ವಲಯ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಚುನಾವಣೆ

ಮೂಡಬಿದಿರೆ ವಿಧಾನಸಭಾ ಕ್ಷೇತ್ರ – ಉಮಾನಾಥ ಕೋಟ್ಯಾನ್ ರೋಡ್ ಶೋ

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಮೂಡುಬಿದಿರೆಯ ವಿವಿಧೆಡೆ ರೋಡ್ ಶೋ ನಡೆಸಿ ಗಮನಸೆಳೆದರು. ಉಮಾನಾಥ ಕೋಟ್ಯಾನ್ ಅವರು ನೀರುಡೆ ಚರ್ಚ್ ಬಳಿಯಿಂದ ಮತಯಾಚನೆ ಆರಂಭಿಸಿದರು. ನೀರುಡೆಯಲ್ಲಿ ಕೃಷಿಕರೇ ಹೆಚ್ಚಿದ್ದು ಈ ಭಾಗದಲ್ಲಿ ತೀವ್ರ ನೀರಿನ ಸಮಸ್ಯೆ ಇತ್ತು. ಇಲ್ಲಿ ಹರಿಯುವ ನೀರಿಗೆ ಕಿಂಡಿ ಅಣೆಕಟ್ಟು ನಿರ್ಮಿಸುವ ಮೂಲಕ ಈ ಭಾಗದ ನೀರಿನ ಸಮಸ್ಯೆಯನ್ನು ಬಗೆಹರಿಸಿದ್ದು, ಈ ಭಾಗದ ಕೃಷಿಕರಿಗೆ ಹೆಚ್ಚಿನ ಅನುಕೂಲವಾಗಿದೆ. ಮುಂದಿನ

ಕರಾವಳಿಯ ಭಾಗದ ಮೀನುಗಾರರು ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕು

ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕರಾವಳಿಯ ಭಾಗದ ಮೀನುಗಾರರು ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕೆಂದು ರಾಜ್ಯ ಬಿ.ಜೆ.ಪಿ ವಿಷೇಶ ಕಾರ್ಯಕಾರಿಣ ಸದಸ್ಯರಾದರಾಮಚಂದರ್‌ ಬೈಕಂಪಾಡಿ ಮನವಿ ಮಾಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಕರಾವಳಿಯಲ್ಲಿ ಕಳೆದ ಐದು ವರ್ಷಗಳಲ್ಲಿ ಮೀನುಗಾರಿಕಾ ಅಭಿವೃದ್ಧಿ ಕ್ಷೇತ್ರದಲ್ಲಿ ಬಿ. ಎಸ್. ಯೇಡಿಯೂರಪ್ಪ ಮತ್ತು ಬಸವರಾಜ್ ಬೊಮ್ಮಾಯಿ ಮಾಡಿದ ಅಭೂತ ಪೂರ್ವ ಮೀನುಗಾರಿಕಾ ಅಭಿವೃದ್ಧಿಗೆ

ಮಂಗಳೂರು ನಗರ ದಕ್ಷಿಣ ಬಿಜೆಪಿ ಅಭ್ಯರ್ಥಿ ಶ್ರೀ ಡಿ.‌ವೇದವ್ಯಾಸ್ ಕಾಮತ್ ಮನೆ ಮನೆಗೆ ತೆರಳಿ ಮತಯಾಚನೆ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಡಿ.‌ವೇದವ್ಯಾಸ್ ಕಾಮತ್ ಅವರು ಕೊಡಿಯಾಲ್ ಬೈಲ್, ಪೋರ್ಟ್ ವಾರ್ಡ್, ಅಳಪೆ ದಕ್ಷಿಣ, ಕಂಕನಾಡಿ, ಪದವು ಸೆಂಟ್ರಲ್ ವಾರ್ಡ್ ಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ಇದೇ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಜನಾಂಗಕ್ಕೆ ದೇಶ ಸಾಗುತ್ತಿರುವ ಹಾದಿಯ ಬಗ್ಗೆ ಹೆಮ್ಮೆ ಇದೆ. ಅವರ ಉನ್ನತ ಕಲ್ಪನೆಯ ದಿಕ್ಕಿನೆಡೆಗೆ ರಾಜ್ಯವನ್ನು ಕೊಂಡೊಯ್ಯುವುದು ನಮ್ಮೆಲ್ಲರ ಜವಾಬ್ದಾರಿ. ಇವೆಲ್ಲದರ ಜೊತೆಗೆ