Home Posts tagged #govt school

ಸಂಘಟಿತವಾಗಿ ಸರಕಾರಿ ಶಾಲೆಗಳನ್ನು ಉಳಿಸೋಣ – ಗಂಟಿಹೊಳೆ ಕರೆ

ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಸರಕಾರಿ ಶಾಲೆಗಳನ್ನು ಉಳಿಸುವ ವಿಶೇಷ ಯೋಜನೆ 300 ಟ್ರೀಸ್ ಇದರ ಸಮಾಲೋಚನ ಸಭೆ ನಡೆಸಿ, ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸುವಂತೆ ಮನವಿ ಮಾಡಿದರು. 300 ಟ್ರೀಸ್ ಸಮಿತಿ ರಚನೆ ಹಾಗೂ ಈ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅಳವಡಿಸುವ ಬಗ್ಗೆ ಶಿಕ್ಷಣ ಪ್ರೇಮಿಗಳು, ಅಧ್ಯಾಪಕರು, ದಾನಿಗಳು ಹಾಗೂ

ಬಿಎಂಆರ್ ಗೋಲ್ಡ್ & ಡೈಮಂಡ್ಸ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆ.14ರಂದು ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆ

ಸುರತ್ಕಲ್ ಕೃಷ್ಣಾಪುರದ ಬಿಎಂಆರ್ ಗೋಲ್ಡ್, ಗೋಲ್ಡ್ & ಡೈಮಂಡ್ಸ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕಾಟಿಪಳ್ಳದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಆಟೋಟ ಸ್ಪರ್ಧೆಗಳನ್ನು ಆಗಸ್ಟ್ 14ರಂದು ಆಯೋಜಿಸಲಾಗಿದೆ. ಬೆಳಿಗ್ಗೆ 9.30ಕ್ಕೆ ಸರಿಯಾಗಿ ಕಾರ್ಯಕ್ರಮವು ಆರಂಭವಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ 6ನೇ ಬ್ಲಾಕ್ ಕಾಟಿಪಳ್ಳದ ಮಕ್ಕಳಿಗೆ ಮಾತ್ರ

ಮೂಡುಬಿದಿರೆ: ಮಾಸ್ತಿಕಟ್ಟೆ ಶಾಲಾ ಮಕ್ಕಳಿಗೆ ಉಚಿತ ಕೊಡೆ, ಪುಸ್ತಕ ವಿತರಣೆ

ಮೂಡುಬಿದಿರೆ: ದ‌.ಕ.ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಮೂಡುಬಿದಿರೆ ಮತ್ತು ಸರ್ವೋದಯ ಫ್ರೆಂಡ್ಸ್ ಇವುಗಳ ವತಿಯಿಂದ ಮಾಸ್ತಿಕಟ್ಟೆ ಸರಕಾರಿ ಶಾಲೆಯ ಮಕ್ಕಳಿಗೆ ಉಚಿತ ಕೊಡೆ ಮತ್ತು ಪುಸ್ತಕವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪುರಸಭೆಯ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಗ್ಯಾರೇಜ್ ಮಾಲೀಕರ ಸಂಘದ ಅಧ್ಯಕ್ಷ ಗುರುಪ್ರಸಾದ್ ಭಂಡಾರಿ, ಪ್ರಧಾನ ಕಾರ್ಯದರ್ಶಿ ನವೀನ ಕುಂದರ್, ಉಪಾಧ್ಯಕ್ಷ ಗಿರೀಶ್ ನಾಯಕ್, ಕೋಶಾಧಿಕಾರಿ ಶಂಕರ ಕೋಟ್ಯಾನ್, ಯಶವಂತ್‌, ದೀರಜ್, ಸುಧಾಕರ,

ಸರ್ಕಾರಿ ಶಾಲೆಗೆ ಹೊಸ ಕಟ್ಟಡ ಹಾಲಾಡಿಯ ಎಚ್.ಎಸ್. ಶೆಟ್ಟಿಯವರ ಕೊಡುಗೆ

ಬ್ರಹ್ಮಾವರ: ಶಿಕ್ಷಣ ಕ್ರಾಂತಿಯ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ 129 ವರ್ಷದ ಸರಕಾರಿ ಹಿರೀಯ ಪ್ರಾಥಮಿಕ ಶಾಲೆಯಲ್ಲಿ 669 ವಿದ್ಯಾರ್ಥಿಗಳನ್ನು ಹೊಂದಿ ತರಗತಿ ಕೊಠಡಿಯ ಸಮಸ್ಯೆಗೆ ದಾನಿಯೊಬ್ಬರು 2 ಮಹಡಿಯ 8 ತರಗತಿ ಕೊಠಡಿಯನ್ನು ನಿರ್ಮಿಸಿ ಕೊಟ್ಟು ಈ ಶೈಕ್ಷಣಿಕ ವರ್ಷಕ್ಕೆ ಕೊಡುಗೆಯಾಗಲಿದೆ. ಗ್ರಾಮೀಣ ಭಾಗದ ಹಾಲಾಡಿಯ ಎಚ್ ಎಸ್ ಶೆಟ್ಟಿಯವರು ಸರಕಾರಿ ಕನ್ನಡ ಶಾಲೆಯಲ್ಲಿ ಕಲಿತು ವಿಶ್ವ ಮಟ್ಟದಲ್ಲಿ ಉದ್ಯಮಿಯಾಗಿ ಗುರುತಿಸಿಕೊಂಡು ಉಡುಪಿ ಜಿಲ್ಲೆ ಸೇರಿದಂತೆ ಅನೇಕ

ಮುಂಡ್ಕೂರು: ನೇಪಥ್ಯಕ್ಕೆ ಸರಿದ ಸಂಕಲಕರಿಯ ಹಿರಿಯ ಪ್ರಾಥಮಿಕ ಶಾಲೆ

ಸುಮಾರು ನೂರು ವರ್ಷಗಳ ಕಾಲ ಪ್ರಾಥಮಿಕ ಶಿಕ್ಷಣ ಕ್ಷೇತ್ರದಲ್ಲಿ ಸಹಸ್ರಾರು ವಿದ್ಯಾರ್ಥಿಗಳ ಭವಿಷ್ಯ ಬರೆದಿದ್ದು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಕೊರತೆಯಿಂದ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಂಕಲಕರಿಯ ಪ್ರಾಥಮಿಕ ಶಾಲೆ ಮುಚ್ಚಿ ಹೋಗಿದೆ. ಆಂಗ್ಲ ಮಾಧ್ಯಮ ಶಾಲೆಗಳ ವೈಭವೀಕರಣ ಹಾಗೂ ಪೋಷಕರಿಂದ ಆಂಗ್ಲ ಮಾಧ್ಯಮ ಶಾಲೆಗಳ ವ್ಯಾಮೊಹಗಳ ಕಾರಣದಿಂದ ವಿದ್ಯಾರ್ಥಿಗಳ ಕೊರತೆಯಿಂದಾಗಿ ಅನುಪಾತದ ಪರಿಣಾಮವಾಗಿ ಶಿಕ್ಷಕರ ಕೊರತೆಯಿಂದ ಶತಮಾನ ಕಂಡ ಶಾಲೆ, ಮುಚ್ಚಿ ಹೋಗಿದ್ದು

ಬಂಟ್ವಾಳ: ಕಾಮಾಜೆ ಸರ್ಕಾರಿ ಕಾಲೇಜಿನತ್ತ ವಿದ್ಯಾರ್ಥಿಗಳನ್ನು ಸೆಳೆಯಲು ಕಾರಿನಲ್ಲಿ ಸ್ಟಿಕ್ಕರ್ ಬರಹ

ಬಿ.ಸಿ.ರೋಡಿನ ಕಾಮಾಜೆಯಲ್ಲಿರುವ ಸರಕಾರಿ ಪದವಿ ಕಾಲೇಜಿನ ಉಪನ್ಯಾಸಕಿ ವೇದಶ್ರೀ ನಿಡ್ಯ ಅವರು ತನ್ನ ಸ್ವಂತ ಕಾರಿನಲ್ಲಿ ಹೀಗೊಂದು ಸ್ಟಿಕ್ಕರ್ ಬರಹವನ್ನು ಹಾಕಿಸಿಕೊಂಡು ಗಮನ ಸೆಳೆದಿದ್ದಾರೆ. ಜನರು ತಮ್ಮ ಸ್ವಂತ ವಾಹನಗಳಲ್ಲಿ ತಮ್ಮ ಇಷ್ಟದ ದೇವರ ಹೆಸರು, ಮಕ್ಕಳ ಹೆಸರು ಅಥವಾ ಇಷ್ಟದ ವಾಕ್ಯಗಳನ್ನು ಸ್ಟಿಕರ್ ಮೂಲಕ ಬರೆಸುವುದು ಸಾಮಾನ್ಯ. ಆದರೆ ಉಪನ್ಯಾಸಕಿ ವೇದಶ್ರೀ ಅವರು ತನ್ನ ವೇಗನ್ ಆರ್ ಕಾರಿನ ಹಿಂಭಾಗ ಹಾಗೂ ಮುಂಭಾಗದಲ್ಲಿ ತಾನು ಕರ್ತವ್ಯ ನಿರ್ವಹಿಸುತ್ತಿರುವ

ಕಾಸರಗೋಡು ಶಾಲೆಯಲ್ಲಿ ಕನ್ನಡಕ್ಕಾಗಿ ಹೋರಾಟ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನೆಮಾ ನೆನಪಿಸುವ ನೈಜ ದೃಶ್ಯ

ಕನ್ನಡ ಸರಿಯಾಗಿ ಬಾರದ ಶಿಕ್ಷಕಿಯೋರ್ವರನ್ನು ಕನ್ನಡ ಮಾಧ್ಯಮ ಶಾಲೆಗೆ ನಿಯುಕ್ತಿಗೊಳಿಸಿರುವುದನ್ನು ವಿರೋಧಿಸಿ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ ಘಟನೆ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಅಡೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ಇತ್ತೀಚೆಗೆ ಈ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕರಿಗೆ ಬೇರೆ ಶಾಲೆಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಕೇರಳ ಶಿಕ್ಷಣ ಇಲಾಖೆ ಆ ಜಾಗಕ್ಕೆ ಹೊಸ ಶಿಕ್ಷಕಿಯೋರ್ವರನ್ನು ನೇಮಿಸಿದೆ. ಆದರೆ ಈ ಶಿಕ್ಷಕಿಗೆ ಕನ್ನಡ ಸರಿಯಾಗಿ