ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್, ರಿ, ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇವರ ಸಹಯೋಗದೊಂದಿಗೆ ಆಲೂರು ವೀರಶೈವ ಸಮುದಾಯ ಭವನದಲ್ಲಿ ಅಕ್ಟೋಬರ್ 02 ರ ಗಾಂಧಿ ಜಯಂತಿ ಪ್ರಯುಕ್ತ ಗಾಂಧಿಸ್ಮೃತಿ ಹಾಗೂ ನವಜೀವನ ಸಮಿತಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು                         
        
              ಹಾಸನದಲ್ಲಿ ನಿನ್ನೆ ಕಾಸಗಿ ಶಾಲೆಯ ಶಿಕ್ಷಕಿಯನ್ನು ಅಪಹರಿಸಿದ್ದ ತಂಡವನ್ನು ಬೆನ್ನಟ್ಟಿ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯಲ್ಲಿ ಅಡ್ಡ ಹಾಕಿದ ಪೋಲೀಸರು ಶಿಕ್ಷಕಿ ಅರ್ಪಿತಳನ್ನು ಗಂಡಾಂತರದಿಂದ ಪಾರು ಮಾಡಿದರು. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಅರ್ಪಿತ ಟೀಚರಾಗಿ ದುಡಿಯುತ್ತಿದ್ದಳು. ಸಂಬಂಧಿಕರಾದ ರಾಮು ಮನೆಯವರು ಹದಿನೈದು ದಿನಗಳ ಹಿಂದೆ ಮದುವೆ ಪ್ರಸ್ರಾಪ ಮುಂದಿಟ್ಟಿದ್ದರು. ಆದರೆ ಅರ್ಪಿತ ಒಪ್ಪಿರಲಿಲ್ಲ. ಆದ್ದರಿಂದ ರಾಮು ಮತ್ತು ತಂಡದವರು ಆಕೆಯನ್ನು ಶಾಲೆಯ                         
        
              ಶ್ರವಣಬೆಳಗೊಳ ಹೋಬಳಿಯ ಹಡೇನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಹಾಲು ಉತ್ಪಾದಕರು ಸುಮಾರು 1000 ಲೀಟರ್ ಹಾಲನ್ನು ನೆಲಕ್ಕೆ ಸುರಿದು ಪ್ರತಿಭಟನೆ ನಡೆಸಿದ್ದಾರೆ. 23 ವರ್ಷಗಳ ಹಿಂದೆ ಆರಂಭಗೊಂಡಿರುವ ಈ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ಅಂದಿನಿಂದ ಇಂದಿನವರೆಗೂ ಇದೇ ಗ್ರಾಮದ ಜಯಂತಿ ಎಂಬುವವರು ಕಾರ್ಯದರ್ಶಿಯಾಗಿದ್ದಾರೆ. ಇತ್ತೀಚೆಗೆ ಹೊಸ ಆಡಳಿತ ಮಂಡಳಿ ರಚನೆಯಾಗಿದ್ದು, ಜಯಂತಿಯವರನ್ನು ಈವರೆಗಿನ ಖರ್ಚು ವೆಚ್ಚದ ವರದಿಯನ್ನು ಕೇಳಲಾಗಿದೆ. ಆದರೆ                         
        
              ಹಾಸನ ಜಿಲ್ಲೆ ಅರಸೀಕೆರೆ ತಿಪಟೂರು ನ್ಯಾಷನಲ್ ಹೈವೆ ಪಕ್ಕದ ಹೊನ್ನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಋಷಿಮುನಿಗಳು ಉಪಯೋಗಿಸುವಂತ ವಸ್ತುಗಳು ಸರಿಸಮಾನವಾಗಿ ಜೋಡಿಸಿರುವ ರೀತಿಯಲ್ಲಿ ಕಂಡುಬಂದಿದೆ. ಬೋರೇಗೌಡ ಎಂಬರಿಗೆ ಸೇರಿದ ಜಮೀನಿನಲ್ಲಿ ಈ ವಿಸ್ಮಯ ಘಟನೆ ನಡೆದಿದೆ. ತಕ್ಷಣ ಗ್ರಾಮಸ್ಥರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸುಮಾರು 12 ಜೊತೆ ಪಾದುಕೆಗಳು ಹಾಗೂ 28 ಕಮಂಡಲಗಳು ಪತ್ತೆಯಾಗಿವೆ. ಈ ಅಚ್ಚರಿಯ ಘಟನೆಯನ್ನು ವೀಕ್ಷಿಸಲು ಜನರು ಸಾಲು ಸಾಲಾಗಿ ಬರುತ್ತಿದ್ದರು.                        
        
              ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಶುಕ್ರವಾರ ನಡೆಯಲಿರುವ ಕರ್ನಾಟಕ ಬಂದ್ಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಆಲೂರು ಸಕಲೇಶಪುರ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ಹೇಳಿದರು. ಅವರು ಹಾಸನದಲ್ಲಿ ಮಾತನಾಡಿ, ಆಡಳಿತರೂಡ ಸರ್ಕಾರ ವಕೀಲರನ್ನು ಇಟ್ಟು ವಾದ ಮಾಡುವಲ್ಲಿ ವಿಫಲವಾಗಿದೆ. ನಮ್ಮ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿದ್ದಾರೆ. ನಮಗೆ ನೀರಿಲ್ಲದಿರುವಾಗ ಪರರಿಗೆ ನೀರು ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಸರ್ಕಾರವನ್ನು ಪ್ರಶ್ನಿಸಿದರು.                        
        
              “ಜನತಾ ದರ್ಶನ” ಕಾರ್ಯಕ್ರಮವು ರಾಜ್ಯ ಸರ್ಕಾರದ ಬಹುಮಹತ್ವಾಕಾಂಕ್ಷಿ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ, ನಿಗಧಿತ ಕಾಲಾವಧಿಯೊಳಗೆ ಸೂಕ್ತ ಪರಿಹಾರವನ್ನು ಒದಗಿಸುವ ಉದ್ದೇಶವನ್ನು ಹೊಂದಿರುತ್ತದೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ತಿಳಿಸಿದ್ದಾರೆ. ಹಾಸನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜನತಾ ದರ್ಶನ” ಕಾರ್ಯಕ್ರಮ ಕುರಿತು ಮಾಹಿತಿ ನೀಡಿದರು. ರಾಜ್ಯದ ಸಮಸ್ಯೆಗಳನ್ನು ಕುರಿತು ಮಾನ್ಯ                         
        
              ಹಾಸನ : ಬೆಂಗಳೂರು ನಗರದ ಸಂಚಾರ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಮೊಹಮ್ಮದ್ ಸುಜೀತಾ ಎಂ.ಎಸ್, ಐಪಿಎಸ್ (ಕೆಎನ್-2014) ರವರನ್ನು ಹಾಸನ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.ಹರಿರಾಮ್ ಶಂಕರ್ ಐಪಿಎಸ್ ವರ್ಗಾವಣೆ ಮಾಡಿದೆ.ಈ ಹಿಂದೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಗುಪ್ತಚರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.                        
        
              ಹಾಸನ ಜಿಲ್ಲೆಯ ಸಕಲೇಶಪುರ ಹೆಬ್ಬನಹಳ್ಳಿ ಸಮೀಪ ಇರುವ ಎತ್ತಿನಹೊಳೆ ಯೋಜನೆಯ ಕಚೇರಿಗೆ ಇಂದು ಭೇಟಿ ನೀಡಿದ ಉಪ ಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರಾದ ಡಿ.ಕೆ ಶಿವಕುಮಾರ್ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳನ್ನು ಕರೆಸಿ ಸಭೆ ನಡೆಸಿದರು. ಸಭೆಯಲ್ಲಿ ಯೋಜನೆ ಪ್ರಾರಂಭಕ್ಕೆ ಇರುವ ತೊಂದರೆಗಳ ಕುರಿತಾಗಿ ಚರ್ಚಿಸಿದ ಸಚಿವರು, ವಿದ್ಯುತ್ ಇಲಾಖೆ ಮತ್ತು ಭೂ ಸ್ವಾದೀನ ಪಡಿಸಿಕೊಳ್ಳಲು ಕಂದಾಯ ಇಲಾಖೆಯಿಂದ ಇರುವ ತೊಂದರೆ ಕುರಿತಾಗಿ ಚರ್ಚಿಸಿ ಭೂಮಿ ಯೋಜನೆಗಾಗಿ ಭೂಮಿ                         
        
              ಹಾಸನ ಜಿಲ್ಲೆ ಹೆಬ್ಬಾನಹಳ್ಳಿಯಲ್ಲಿ ಎತ್ತಿನಹೊಳೆ ಯೋಜನೆಯ ಕಾಮಗಾರಿಯ ವೀಕ್ಷಣೆಗೆಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆಗಮಿಸಿದ್ದರು. ಇದೇ ವೇಳೆ ಪೆÇಲೀಸರಿಂದ ಗೌರವ ಸಮರ್ಪಣೆ ಸ್ವೀಕರಿಸಿದರು. ನಂತರ ಯೋಜನೆ ಕುರಿತಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ. ಸಕಲೇಶಪುರ ವಿಧಾನಸಭಾ ಕ್ಷೇತ್ರದ ಪ್ರಗತಿ ಪರಿಶೀಲನೆಯನ್ನು ನಡೆಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾಡಾನೆ ಹಾವಳಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಭೆಯಲ್ಲಿ                         
        
              ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಳೆದ ಏಳು ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಬೈರಾಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಅಧಿಕಾರಿಗಳು ಆಗಮಿಸುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭಗೊಂಡು ಏಳು ವರ್ಷಗಳಾದರೂ ಇನ್ನೂ                         
        


























