Home Posts tagged #kadaba (Page 11)

ಕಡಬ : ಮರದ ಕೊಂಬೆ ಕಡಿಯುವಾಗ ವಿದ್ಯುತ್ ತಗುಲಿ ವ್ಯಕ್ತಿ ಸಾವು

ಮರದ ಕೊಂಬೆ ಕಡಿಯುವಾಗ ವಿದ್ಯುತ್ ತಗುಲಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಕಡಬದಲ್ಲಿ ನಡೆದಿದೆ. ಕುಂತೂರು ಕಾಲಾಯಿಲ್ ನಿವಾಸಿ ಮನೋಜ್(43) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.ಮನೋಜ್ ಅವರು ಮರದ ಕೊಂಬೆಯೊಂದು ಕಡಿಯುವಾಗ 33 kv ವಿದ್ಯುತ್ ತಂತಿ ತಾಗಿ ದುರ್ಮರಣ ಸಂಭವಿಸಿದೆ. ಮನೋಜ್ ಮೃತದೇಹ ಮರದಲ್ಲೇ ನೇತಾಡುತ್ತಿತ್ತುಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು,

ಸುಬ್ರಹ್ಮಣ್ಯ: ಕುಲ್ಕುಂದಲ್ಲಿ ರಸ್ತೆ ಕಾಮಗಾರಿಗೆ ಸಚಿವ ಅಂಗಾರರಿಂದ ಗುದ್ದಲಿ ಪೂಜೆ

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್ ಅಂಗಾರ ಅವರು ಕುಲ್ಕುಂದದಲ್ಲಿ ಇಂದು 22 ಕೋಟಿಯ ರಾಜ್ಯ ಹೆದ್ದಾರಿ ಅಭಿವೃದ್ಧಿಯ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ನಾಲ್ಕನೇ ಹಂತದ ಎರಡನೇ ಘಟ್ಟದ ಯೋಜನೆ ಅಡಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಸುಬ್ರಹ್ಮಣ್ಯ ಉಡುಪಿ ರಾಜ್ಯ ಹೆದ್ದಾರಿ 37ರ ಕುಲ್ಕುಂದದಿಂದ ವೆಂಕಟಪುರ ಮತ್ತು ಕೈಕಂಬದಿಂದ ನೆಟ್ಟಣ ಒಟ್ಟಾಗಿ 7.08

ಕಡಬ : ಮನೆಯಿಂದ ಚಿನ್ನಾಭರಣ ಹಾಗೂ ನಗದು ಕಳ್ಳತನ

ಕಡಬ ತಾಲೂಕಿನ ಗೋಳಿ ತೊಟ್ಟು ಗ್ರಾಮದ ಆರಂತಬೈಲು ಎಂಬಲ್ಲಿ ನಿನ್ನೆ ತಡರಾತ್ರಿ ಮನೆಯಲ್ಲಿ ಯಾರು ಇಲ್ಲದ ಸಮಯ ಮನೆಗೆ ನುಗ್ಗಿದ ಕಳ್ಳರು 105 ಗ್ರಾಂ ಚಿನ್ನ ಹಾಗೂ 8 ಸಾವಿರ ರೂ ನಗದು ಸೇರಿ ಒಟ್ಟು 5.30 ಲಕ್ಷ ಮೌಲ್ಯದ ವಸ್ತುವನ್ನು ದೋಚಿ ಪರಾರಿಯಾಗಿದ್ದಾರೆ.ಮನೆಯ ಮಾಲೀಕ ರಮ್ಲತ್ ಹಾಗೂ ಅವರ ಪತ್ನಿ ಖತೀಜಮ್ಮ ರವರು ದುಬೈಯಿಂದ ಬರುವ ತಮ್ಮ ಪುತ್ರನನ್ನು ಕರೆ ತರಲು ನಿನ್ನೆ ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ವಾಪಸ್ ತಡರಾತ್ರಿ ಮನೆಗೆ ಬಂದ […]

ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಮೃತ್ಯು!

ಕಡಬ: ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣ ದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ.ಧ್ವಜಾರೋಹಣವನ್ನು ಹೊಸಮಠ ಸಿ.ಎ.ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ದತೆ ಮಾಡುತ್ತಿದ್ದಾಗ ಅವರಿಗೆ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ದ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣ ಕ್ಕೆ

ಸುಬ್ರಹ್ಮಣ್ಯ ಮೃತ ಮಕ್ಕಳ ಮನೆಗೆ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ರವರು ಭೇಟಿ

ಸುಬ್ರಹ್ಮಣ್ಯದಲ್ಲಿ ದುರಂತ ಸಂಭವಿಸಿ ಮೃತಪಟ್ಟ ಮಕ್ಕಳ ಮನೆಗೆ ಉಸ್ತುವಾರಿ ಸಚಿವ ಸುನಿಲ್ ರವರು ಇಂದು ಭೇಟಿ ನೀಡಿದರು.ಮನೆಗಾಗಿ 95 ಸಾವಿರ ನೀಡಿದ್ದೇವೆ. ಇನ್ನು ಮನೆ ಕಟ್ಟುವುದಿದ್ರೆ 4 ಲಕ್ಷ ಕೊಡಲಾಗುವುದು, ಅಂಗಡಿಗಳಿಗೆ ನೀರು ನುಗ್ಗಿ ಹಾನಿ ಯಾಗಿದ್ರೆ ಹಣ ಕೊಡುವ ಪ್ರಾವಿಶನ್ ಇಲ್ಲ, ಆದ್ರೂ ಮುಖ್ಯ ಮಂತ್ರಿಗಳ ಗಮನಕ್ಕೆ ತಂದು ವಿಶೇಷ ಪ್ಯಾಕೇಜ್ ಘೋಷಣೆ ನೀಡಿ ಅಂಗಡಿಗಳಿಗೂ ಪರಿಹಾರ ನೀಡಲಿದ್ದೇವೆ ಎಂದು ಸುನಿಲ್‌ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ

ಕಡಬ : ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ

ಕಡಬ: ಇನ್ನೋವಾ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಶನಿವಾರ ಬೆಳಿಗ್ಗೆ ಪಂಜ – ಕಡಬ ರಸ್ತೆಯ ಕೋಡಿಂಬಾಳದಲ್ಲಿ ನಡೆದಿದೆ.ಧರ್ಮಸ್ಥಳ ಮೂಲದವರಿದ್ದ ಇನ್ನೋವಾ ಕಾರು ಹಾಗೂ ಬೆಂಗಳೂರಿನಿಂದ ಪಂಜ ಮಾರ್ಗವಾಗಿ ಕಡಬಕ್ಕೆ ಬರುತ್ತಿದ್ದ ಸುಗಮ ಸಂಸ್ಥೆಗೆ ಸೇರಿದ ಖಾಸಗಿ ಬಸ್ ನಡುವೆ ಕೋಡಿಂಬಾಳ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಇನ್ನೋವಾ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಪವಾಡಸದೃಶ ಅಪಾಯದಿಂದ ಪಾರಾಗಿದ್ದಾರೆ.

ಸವಣೂರಿನಲ್ಲಿ ಸಸಿ ಮತ್ತು ತರಕಾರಿ ಬೀಜ ವಿತರಣೆ : ಕೃಷಿ ಅರಣ್ಯ ರೈತ ಸಹಾಯಧನದ ಬಗ್ಗೆ ಮಾಹಿತಿ ಕಾರ್ಯಗಾರ

ಕಡಬ,ಸವಣೂರು : ಮಾತೃಭೂಮಿ ಸಾವಯವ ಕೃಷಿ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ.) ಕಡಬ ,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,ಅರಣ್ಯ ಇಲಾಖೆ ಪುತ್ತೂರು ,ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ ಇದರ ವತಿಯಿಂದ ಸವಣೂರು ಯುವಕ ಮಂಡಲದ ಯುವ ಸಭಾಭವನದಲ್ಲಿ ಸಸಿ ಮತ್ತು ತರಕಾರಿ ಬೀಜ ವಿತರಣೆ ಹಾಗೂ ಕೃಷಿ ಅರಣ್ಯ ರೈತ ಸಹಾಯಧನದ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯಪ್ಪ ಮಾತನಾಡಿ,

ಕಡಬದಲ್ಲಿ ದಾರಿ ತಕರಾರು ಪರಿಶೀಲಿಸಿದ ಜಿಲ್ಲಾಧಿಕಾರಿ

ಕಡಬದಲ್ಲಿ ಜರಗಿದ ಡಿಸಿ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ 45ಕ್ಕೂ ಹೆಚ್ಚು ಅರ್ಜಿಗಳನ್ನು ಪರಿಶೀಲಿಸಿದರು. ದಾರಿ ತಕರಾರುಗಳ ಅರ್ಜಿಗಳನ್ನು ಪರಿಶೀಲಿಸಿದ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಸಂಬಂಧಪಟ್ಟ ಪಿಡಿಓಗಳು ಹಾಗೂ ಕಂದಾಯ ಅಧಿಕಾರಿಗಳಿಗೆ ಆದೇಶಿಸಿದರು. 11 ಇ ಅರ್ಜಿಗಳ ವಿಲೇವಾರಿಗೆ ವೇಗ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದವರು ಆ

ಆಕಸ್ಮಿಕ ಬೆಂಕಿ : ಸುಟ್ಟು ಹೋದ ಕಾರು

ಕಡಬ : ಆಲ್ಟೋ ಕಾರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಹೋದ ಘಟನೆ ಬುಧವಾರ ಸಂಜೆ ವೇಳೆ ಬಳ್ಪ ಸಮೀಪ ಸಂಭವಿಸಿದೆ. ಪಂಜ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಬಳ್ಪ ಎಂಬಲ್ಲಿಯ ಪಾದೆ ಬಳಿ ಘಟನೆ ಸಂಭವಿಸಿದೆ. ಪಂಜದ ಕೃಷ್ಣನಗರ ಕೇಶವ ಆಚಾರಿ ಎಂಬವರು ತಮ್ಮ ಕಾರಿನಲ್ಲಿ ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿರುವಾಗ ಪಾದೆ ಬಳಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಿಂದ ಇಳಿದು ನೋಡಬೇಕು ಎನ್ನವ ಕ್ಷಣ ಮಾತ್ರದಲ್ಲಿ

ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಶ್ಲಾಘನೀಯ -ಡಾ.ಕುಮಾರ್

ಕಡಬ: ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಪತ್ರಕರ್ತರ ಪ್ರಯತ್ನ ಶ್ಲಾಘನೀಯ ಎಂದು ದ.ಕ.ಜಿಲ್ಲಾ ಮುಖ್ಯ ಕಾರ್ಯ ನಿರ್ವಹ ಣಾಧಿಕಾರಿ ಡಾ.ಕುಮಾರ್ ತಿಳಿಸಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕೊಂಬಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿಂದು ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಸಿರಿಬಾಗಿಲು-ಕೊಂಬಾರು ಗ್ರಾಮಗಳ ವ್ಯಾಪ್ತಿಗೊಳಪಟ್ಟ ನಾಲ್ಕು ಶಾಲೆಗಳ ಮಕ್ಕಳಿಗೆ ಕೆಐಓಸಿಲ್ ಸಿಎಸ್