ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಹಳೆನೂಜಿ ಎಂಬಲ್ಲಿ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಹಾನಿ ಉಂಟಾದ ಘಟನೆ ಸಂಭವಿಸಿದೆ. ಹಳೆನೂಜಿ ಬಾಬು ಗೌಡರ ಮಗ ಹೊನ್ನಪ್ಪ ಗೌಡ ಎಂಬವರು ವಾಸ್ತವ್ಯವಿದ್ದ ಮನೆಗೆ ಆಕಸ್ಮಿಕವಾಗಿ ಬೆಂಕಿಬಿದ್ದಿದ್ದು, ಘಟನೆಯಲ್ಲಿ ಕೊಠಡಿಯ ಪೀಠೋಪಕರಣ, ವಸ್ತುಗಳು ಬೆಂಕಿ ತಗುಲಿ ಹಾನಿಗೊಳಗಾಗಿದೆ. ಕೊಠಡಿಯಲ್ಲಿದ್ದ ಮೂರು
ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜಯಂತಿ ಆಚರಣೆ ಕಡಬ ತಹಶಿಲ್ದಾರ್ ಕಛೇರಿಯಲ್ಲಿ ನಡೆಯಿತು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ತಹಶಿಲ್ದಾರ್ ಅನಂತಶಂಕರ್ ಮಾತನಾಡಿ ಗಾಂಧೀಜಿವರು ತತ್ವಾದರ್ಶ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವಲ್ಲಿ ಇಂದಿನ ಯುವಜನತೆ ಹಿಂದೆ ಬೀಳುತ್ತಿದೆ. ಸಮಗ್ರಭಾರತವನ್ನು ಸದೃಢವಾಗಿ ಕಟ್ಟುವಲ್ಲಿ ಯವಜನರ ಪಾತ್ರ
ಕಡಬ : ಈ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ಥೆಯಾಗಿದ್ದ ಅಪ್ರಾಪ್ತೆ ಯುವತಿಯನ್ನು ತನ್ನಕಾಮದಾಟಕ್ಕೆ ಬಳಸಿಕೊಂಡಿದ್ದ ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಶಿವರಾಜ್ ವಿರುದ್ದ ಕೊನೆಗೂ ದೂರು ನೀಡಲಾಗಿದೆ, ಯುವತಿಯೇ ತಂದೆ ದೂರು ನೀಡಿದ್ದು ತನ್ನ ಮಗಳನ್ನು ಬಲತ್ಕಾರ ಮಾಡಿ ಅತ್ಯಾಚಾರ ಎಸಗಿ ಇದೀಗ ಗರ್ಭವತಿಯಾಗಲು ಕಾರಣನಾಗಿದ್ದು, ಗರ್ಭಪಾತ ನಡೆಸುವ ಸಲುವಾಗಿ ಯುವತಿಯನ್ನು ಮಂಗಳೂರಿನಲ್ಲಿ ಅಜ್ಞಾತ ಸ್ಥಳದಲ್ಲಿರಿಸಿದ್ದಾನೆ, ಅಲ್ಲದೆ ಗರ್ಭಪಾತ ನಡೆಸಲು ಹಣವನ್ನು ಕೂಡ
ಕಡಬ ಸೆಪ್ಟಂಬರ್ 22ರಂದು ಸ್ನಾನಕ್ಕೆಂದು ನದಿ ತೀರಕ್ಕೆ ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಗುರುವಾರದಂದು ಪತ್ತೆಯಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಡಬ ತಾಲೂಕು ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ ಚಂದಪ್ಪ ಗೌಡ(67) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ಮನೆ ಸಮೀಪ ಹರಿಯುತ್ತಿರುವ ಕುಮಾರಧಾರ ನದಿಗೆ ಸ್ನಾನಕ್ಕೆಂದು ಹೋದವರು ಕಾಣೆಯಾಗಿದ್ದರು. ಈ ಬಗ್ಗೆ ಮೃತರ ಪುತ್ರಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು
ಕರಾವಳಿಯ ಹೆಮ್ಮೆಯ ಕಲೆಯಾಗಿರುವ ಯಕ್ಷಗಾನ ಕ್ಷೇತ್ರದ ತೆಂಕುತಿಟ್ಟಿನ ಹೆಸರಾಂತ ಹಿಮ್ಮೇಳ ವಾದಕರಾದ ಕಡಬ ನಾರಾಯಣ ಆಚಾರ್ಯರ ಸ್ಮರಣಾರ್ಥ ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ- 2021ನ್ನು ಮಂಗಳೂರಿನ ಹಿರಿಯ ಹಿಮ್ಮೇಳನ ವಾದಕರಾದ ಮೋಹನ್ ಶೆಟ್ಟಿಗಾರ್ ಮಿಜಾರು ಇವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕಡಬ ಸ್ಮಾರಕ ಸಮಿತಿಯ ಬೆಳುವಾಯಿ ಸುಂದರ ಆಚಾರಿ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.
ವಿದ್ಯಾರ್ಥಿ ನಿಲಯದಿಂದ ಅಪ್ರಾಪ್ತ ವಿದ್ಯಾರ್ಥಿಯೊಬ್ಬ ಕಾಣೆಯಾದ ಬಗ್ಗೆ ನಿನ್ನೆ ವರದಿಯಾಗಿತ್ತು, ಇಂದು ಆತ ಸಂಬಂಧಿಕರ ಮನೆಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ನಿನ್ನೆ ಕಡಬದ ಶ್ರೀ ರಾಮಕುಂಜೆಶ್ವರ ಪದವಿ ಪೂರ್ವ ಕಾಲೇಜು ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಂಜನ್ ಸಿ.ಎಮ್ ಎಂಬ ಅಪ್ರಾಪ್ತ ಬಾಲಕ ಬೆಳಿಗ್ಗೆ 9 ಗಂಟೆಗೆ ಕಾಲೇಜಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದು, ನಂತರ ಮಧ್ಯಾಹ್ನ 12.40 ಕ್ಕೆ ಕಾಲೇಜು
ಕಡಬ ಎಸ್.ಐ. ರುಕ್ಮ ನಾಯ್ಕ್ ಪ್ರಯಾಣಿಸುತ್ತಿದ್ದ ಜೀಪು ಹಾಗೂ ಬೊಲೆರೋ ಮಧ್ಯೆ ಡಿಕ್ಕಿ ಸಂಭವಿಸಿದ್ದು ಎರಡು ವಾಹನಗಳು ನುಜ್ಜುಗುಜ್ಜಾದ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ. ಪೊಲೀಸ್ ಜೀಪು ಹಾಗೂ ಬೊಲೇರೋ ಕಾರಿನ ಚಾಲಕರಿಬ್ಬರು ಅಪಾಯದಿಂದ ಪಾರಾಗಿದ್ದಾರೆ.
ಉಪ್ಪಿನಂಗಡಿ: ಕಡಬ ತಾಲೂಕಿನ ಆಲಂಕಾರು ಸಮೀಪ ಪೊಲೀಸರು ವ್ಯಕ್ತಿಯೊಬ್ಬನನ್ನು ಮಕ್ಕಳ ಎದುರೇ ಕಾಲರ್ ಪಟ್ಟಿ ಹಿಡಿದೆಳೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಕಡಬ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಪೇಟೆ ಸಮೀಪ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ಸಮಯದಲ್ಲಿ ತನ್ನ ಮಕ್ಕಳೊಂದಿಗೆ ವ್ಯಕ್ತಿಯೊಬ್ಬ ದಾರಿಯಲ್ಲಿ ಬಂದಿದ್ದು, ಮಕ್ಕಳು ಮಾಸ್ಕ್ ಧರಿಸಿರಲಿಲ್ಲ
ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿರುವ ಕಡಬ ಪೊಲೀಸರು 4೦ ಕೆಜಿ ದನದ ಮಾಂಸ, ಕಟ್ಟಿ ಹಾಕಿದ್ದ 4 ಕರುಗಳು ಸೇರಿದಂತೆ ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದು, ಇಬ್ಬರು ಪರಾರಿಯಾದ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕಳಾರ ನಿವಾಸಿ ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದೆ. ಕಳಾರ ಇಸ್ಮಾಯಿಲ್ ಎಂಬವರ ಪಾಳು ಬಿದ್ದ ಶೆಡ್ ನಲ್ಲಿ ಅಕ್ರಮವಾಗಿ ಮಾಂಸ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಡಬ ಎಸ್ಐ ರುಕ್ಮನಾಯ್ಕ್ ಹಾಗೂ
ಕಡಬ: ಬೈಕಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಡಬ- ಸುಬ್ರಹ್ಮಣ್ಯ ರಸ್ತೆಯ ಮರ್ಧಾಳದಲ್ಲಿ ನಡೆದಿದೆ. ಬಂಟ್ರ ಗ್ರಾಮದ ಕಂಪ ತುಂಬಿ ಮನೆ ನಿವಾಸಿ ಮೋನಪ್ಪ ಗೌಡ (60 )ಗಾಯಗೊಂಡವರು. ಕಲ್ಲಾಜೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮರ್ಧಾಳ ಜಂಕ್ಷನ್ ಬಳಿಯ ತಿರುವಿನಲ್ಲಿ ಬೈಕಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ


















