ಕಡಬ ಪೇಟೆಯಲ್ಲಿ ವಿದ್ಯುತ್ ತಂತಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಪಾರಿವಾಳವೊಂದನ್ನು ಕಡಬ ಸಿಟಿ ಫೀಡರ್ ಪವರ್ಮ್ಯಾನ್ ಆಗಿರುವ ಪಿ.ಜೆ ಗುರುಮೂರ್ತಿ ಅವರು ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಕಡಬ ಪೇಟೆಯಲ್ಲಿ ಪಾರಿವಾಳವೊಂದರ ಕಾಲಿಗೆ ಪ್ಲಾಸ್ಟಿಕ್ ಹಗ್ಗವೊಂದು ತಗುಲಿ ನಂತರದಲ್ಲಿ ಆ ಪಾರಿವಾಳ ವಿದ್ಯುತ್ ತಂತಿಯಲ್ಲಿ ಸಿಲುಕಿ ಒದ್ದಾಡುತ್ತಿತ್ತು.
ಬಲ್ಯ ರಕ್ಷಿತಾರಣ್ಯದಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡಿದ ಮೂವರು ಆರೋಪಿಗಳನ್ನು ಕಡಬ ಪೋಲೀಸರು ಕುಂತೂರು ಬಳಿ ಬಂಧಿಸಿದ್ದಾರೆ. ಬಂಧಿತರನ್ನು ನೆಲ್ಯಾಡಿ ಮೂಲದ ಬಿನು, ದಿನೇಶ್ ಹಾಗೂ ನವೀನ್ ಎಂದು ಗುರುತಿಸಲಾಗಿದೆ. ಕಡಬ ಎಸ್ಐ ಆಂಜನೇಯ ರೆಡ್ಡಿ ಹಾಗೂ ಸಿಬ್ಬಂದಿಗಳು ಕುಂತೂರು ಬಳಿ ಬಂದಾಗ ಇನ್ನೋವ ಕಾರು ಅನುಮಾನಾಸ್ಪದವಾಗಿ ಚಲಾಯಿಸುತ್ತಿರುವುದು ಕಂಡು ವಾಹನ ನಿಲ್ಲಿಸಿ ತಪಾಸನೆ ಮಾಡಿದಾಗ ಕಾರಿನಲ್ಲಿ ಬೇಟೆಯಾಡಿದ ಪ್ರಾಣಿಗಳು ಕಂಡು ಬಂದಿದೆ. ಒಂದು ಮುಳ್ಳು
ಸುಬ್ರಹ್ಮಣ್ಯ: ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆಯ ಚಂದ್ರಯಾನ 3 ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವಳದ ಆಡಳಿದ ಮಂಡಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವರಿಗೆ ಇಸ್ರೋ ಹೆಸರಿನಲ್ಲಿ ಸೇವೆ ನೆರವೇರಿಸಿತು. ಭಾರತದ ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿಯ ಚಂದ್ರಯಾನ 3 ನೌಕೆಯು ಚಂದ್ರನ
ಹ್ಯಾಕರ್ ಗಳ ಕೈಗೆ ಸಿಲುಕಿ ವಿದೇಶದ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರೋ ಮಂಗಳೂರಿನ ವ್ಯಕ್ತಿಯನ್ನ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಿಡುಗಡೆಗೊಳಿಸುವಂತೆ ದ.ಕ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ದ.ಕ ಜಿಲ್ಲೆಯ ಕಡಬ ತಾಲೂಕು ಐತ್ತೂರು ಗ್ರಾಮದ ಮೂಜೂರು ದಿ.ಕೆಂಚಪ್ಪ ಗೌಡ ಮತ್ತು ಹೇಮಾವತಿ ದಂಪತಿ ಪುತ್ರ ಚಂದ್ರಶೇಖರ ಎಮ್.ಕೆ ರಿಯಾದ್ ನಲ್ಲಿರುವ ಅಲ್ಮಾನರ್ ಸೆರಾಮಿಕ್ಸ್ ಎಂಬ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಆದರೆ ಯಾವುದೋ ಹ್ಯಾಕರ್ ಗಳ
ಕಂದಾಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವವರು ಸಾರ್ವಜನಿಕರ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿ ಹಸನ್ಮುಖಿ ಸೇವೆ ನೀಡಿದಾಗ ಮಾತ್ರ ನಾವು ಮಾಡುವ ಸೇವೆ ಸಾರ್ಥಕವಾಗುತ್ತದೆ ಎಂದು ಕಡಬದಿಂದ ಗುಂಡ್ಲುಪೇಟೆಗೆ ವರ್ಗಾವಣೆಗೊಂಡ ತಹಸೀಲ್ದಾರ್ ಟಿ.ರಮೇಶ್ ಬಾಬು ಹೇಳಿದರು. ಅವರು ಶನಿವಾರ ಕಡಬ ತಾಲೂಕು ಆಡಳಿತ ಸೌಧದಲ್ಲಿ ಇಲ್ಲಿ ಸಿಬ್ಬಂದಿಗಳು ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಂದಾಯ ಇಲಾಖೆಗೆ ಸಾರ್ವಜನಿಕರು ತಮ್ಮ
ಕಡಬ : ಜೇಸಿಐ ಭಾರತದ ಪ್ರತಿಷ್ಠಿತ ಘಟಕವಾದ ಜೇಸಿಐ ಕಡಬ ಕದಂಬದ ಮಾಜಿ ಅಧ್ಯಕ್ಷರಾದ ಮೋಹನ್ ಕೋಡಿಂಬಾಳ ರವರಿಗೆ ಜೇಸಿಐ ವಲಯ-15 ನೀಡುವ ಪ್ರತಿಷ್ಠಿತ ‘ಉದ್ಯೋಗ ರತ್ನ’ ಪ್ರಶಸ್ತಿ ಲಭಿಸಿದೆ. ಜೇಸಿಐ ಶಂಕರನಾರಾಯಣ ಘಟಕದ ಆಶ್ರಯದಲ್ಲಿ ಹಾಲಾಡಿಯ ಶಾಲಿನಿ ಜಿ.ಶಂಕರ ಕನ್ವೆನ್ಸನ್ ಸೆಂಟರ್ನಲ್ಲಿ ನಡೆದ ವಲಯ 15ರ ಬೆಳವಣಿಗೆ ಮತ್ತು ಅಭಿವೃದ್ಧಿ ಸಮ್ಮೇಳನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿಯವರು ಪ್ರಶಸ್ತಿ ವಿತರಿಸಿದರು.
ಕಡಬ: ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕದ ಬಳಿಯ ಗುಂಡಡ್ಕ ಸೇತುವೆ ಮುಳುಗಡೆ ಹಾಗೂ ರಸ್ತೆಗೆ ಬಂಡೆ ಬಿದ್ದು, ಬರೆ ಜರಿದು ರಸ್ತೆ ಸಂಚಾರವು ಸ್ಥಗಿತಗೊಂಡಿದೆ. ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದೇವರ ಗದ್ದೆ ಎಂಬಲ್ಲಿ ರಸ್ತೆಗೆ ಮಣ್ಣು ಕುಸಿದಿದೆ, ದೇವರಗದ್ದೆ ಎಂಬಲ್ಲಿ ಬಂಡೆ ಬಿದ್ದಿದ್ದು, ವಿದ್ಯುತ್ ಕಂಬಗಳು ಮುರಿದು ಬಿದ್ದ ಘಟನೆ ನಡೆದಿದೆ. ಕಳೆದೆರಡು
ಕಡಬದಲ್ಲಿ ಅಟೋಮೊಬೈಲ್ ಬಿಡಿ ಭಾಗಗಳ ಅಂಗಡಿ ಮಾಲಿಕನಾಗಿರುವ ವರ್ಗೀಸ್ (ಶಾಜನ್) ಎಂಬವರ ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಆರೋಪಗಳನ್ನು ಸುಮಾರು ಒಂದುವರೆ ವರ್ಷಗಳ ನಂತರ ಕಡಬ ಪೊಲೀಸರು ಬಂಧಿಸಿದ್ದಾರೆ. ಪೇರಡ್ಕ ಪೆಲತ್ರಾಣೆ ನಿವಾಸಿ ಸದ್ದಾಂ ಮತ್ತು ಮೀನಾಡಿ ನಿವಾಸಿ ತಾಜುದ್ದೀನ್ ಬಂಧಿತ ಆರೋಪಿಗಳು. ಇವರಲ್ಲಿ ಸದ್ದಾಂ ಎಂಬಾತನು ಈ ಹಿಂದೆ ನಡೆದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ಆರೋಪಿಯಾಗಿದ್ದಾನೆ.ಈತನ ಮೊಬೈಲ್ ಸಿಡಿಆರ್
ಹಿರೇಕೋಡಿ ನಂದಿ ಪರ್ವತ ಆಶ್ರಮದ ಆಚಾರ್ಯ 108 ಶ್ರೀ ಕಾಮಕುಮಾರ ನಂದಿ ಮುನಿಶ್ರೀ ಮಹಾರಾಜರ ಹತ್ಯೆಯನ್ನು ಖಂಡಿಸಿ, ಘಟನೆಯ ಸಮಗ್ರ ತನಿಖೆಗಾಗಿ ಮತ್ತು ಮುಂದಿನ ದಿನಗಳಲ್ಲಿ ಜೈನ ಮುನಿಗಳಿಗೆ ಸೂಕ್ತ ರಕ್ಷಣೆಯನ್ನು ಒದಗಿಸುವಂತೆ ಆಗ್ರಹಿಸಿ ಕಡಬ ತಾಲೂಕಿನ ಜೈನ ಸಮಾಜ ಬಾಂಧವರು ಕಡಬ ತಾಲೂಕು ಆಡಳಿತ ಸೌಧದ ಮುಂದೆ ಮೌನ ಪ್ರತಿಭಟನೆ ನಡೆಸಿದರು. ಕಡಬದ ಸಿ.ಎ.ಬ್ಯಾಂಕ್ ವಠಾರದಿಂದ ಕಡಬದ ಮುಖ್ಯರಸ್ತೆಯಲ್ಲಿ ಮೌನ ಮೆರವಣಿಗೆಯ ಮೂಲಕ ಸಾಗಿದ ಪ್ರತಿಭಟನಾಕಾರರು ಕಡಬ ತಾಲೂಕು ಆಡಳಿತ
ನೆರೆಪೀಡಿತ ಪ್ರದೇಶಗಳನ್ನು ಗುರುತಿಸಿಕೊಂಡು ಅವುಗಳಲ್ಲಿ ಸಮಸ್ಯೆಗಳು ಉದ್ಬವವಾಗದಂತೆ ಮುನ್ನೆಚ್ಚರಿಕೆವಹಿಸುವ ಕಾರ್ಯ ಗ್ರಾಮ ಮಟ್ಟದಿಂದಲೇ ಆಗಬೇಕು ಎಂದು ದ.ಕ. ಜಿಲ್ಲಾಧಿಕಾರಿ ಮುಲೈ ಮುಹಿಲನ್ ಹೇಳಿದರು. ಅವರು ಕಡಬ ತಾಲೂಕು ಸೌಧದಲ್ಲಿ ಪ್ರಕೃತಿವಿಕೋಪ ಮುನ್ನೆಚ್ಚರಿಕೆ ಕ್ರಮವಹಿಸುವ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಗ್ರಾಮ ಮಟ್ಟದಲ್ಲಿಯೇ ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ಎಲ್ಲೆಲ್ಲಿ ಪ್ರಕೃತಿವಿಕೋಪಗಳು ನಡೆದ ಪ್ರದೇಶಗಳನ್ನು ಗುರುತಿಸಿ