Home Posts tagged #kadaba (Page 5)

ಮೋಹನ್ ಕೋಡಿಂಬಾಳ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ

ಕಡಬ : ಜೇಸಿಐ ಭಾರತದ ಪ್ರತಿಷ್ಠಿತ ಘಟಕವಾದ ಜೇಸಿಐ ಕಡಬ ಕದಂಬದ ಮಾಜಿ ಅಧ್ಯಕ್ಷರಾದ ಮೋಹನ್ ಕೋಡಿಂಬಾಳ ರವರಿಗೆ ಜೇಸಿಐ ವಲಯ-15 ನೀಡುವ ಪ್ರತಿಷ್ಠಿತ ‘ಉದ್ಯೋಗ ರತ್ನ’ ಪ್ರಶಸ್ತಿ ಲಭಿಸಿದೆ. ಜೇಸಿಐ ಶಂಕರನಾರಾಯಣ ಘಟಕದ ಆಶ್ರಯದಲ್ಲಿ ಹಾಲಾಡಿಯ ಶಾಲಿನಿ ಜಿ.ಶಂಕರ ಕನ್ವೆನ್ಸನ್‌ ಸೆಂಟರ್‌ನಲ್ಲಿ ನಡೆದ ವಲಯ 15ರ ಬೆಳವಣಿಗೆ ಮತ್ತು ಅಭಿವೃದ್ಧಿ ಸಮ್ಮೇಳನದಲ್ಲಿ

ದ.ಕ. ಜಿಲ್ಲೆಯಲ್ಲಿ ಮಳೆಯ ಅವಾಂತರ : ಹರಿಹರ, ಪಲ್ಲತಡ್ಕ, ಗುಂಡಡ್ಕ ಸೇತುವೆ ಮುಳುಗಡೆ

ಕಡಬ: ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕದ ಬಳಿಯ ಗುಂಡಡ್ಕ ಸೇತುವೆ ಮುಳುಗಡೆ ಹಾಗೂ ರಸ್ತೆಗೆ ಬಂಡೆ ಬಿದ್ದು, ಬರೆ ಜರಿದು ರಸ್ತೆ ಸಂಚಾರವು ಸ್ಥಗಿತಗೊಂಡಿದೆ. ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದೇವರ ಗದ್ದೆ ಎಂಬಲ್ಲಿ ರಸ್ತೆಗೆ ಮಣ್ಣು ಕುಸಿದಿದೆ, ದೇವರಗದ್ದೆ ಎಂಬಲ್ಲಿ ಬಂಡೆ ಬಿದ್ದಿದ್ದು, ವಿದ್ಯುತ್ ಕಂಬಗಳು ಮುರಿದು ಬಿದ್ದ ಘಟನೆ ನಡೆದಿದೆ. ಕಳೆದೆರಡು

ಕಡಬ : ಒಂದುವರೆ ವರ್ಷಗಳ ನಂತರ ಕಳ್ಳತನದ ಆರೋಪಿಗಳ ಬಂಧನ

ಕಡಬದಲ್ಲಿ ಅಟೋಮೊಬೈಲ್ ಬಿಡಿ ಭಾಗಗಳ ಅಂಗಡಿ ಮಾಲಿಕನಾಗಿರುವ ವರ್ಗೀಸ್ (ಶಾಜನ್) ಎಂಬವರ ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಆರೋಪಗಳನ್ನು ಸುಮಾರು ಒಂದುವರೆ ವರ್ಷಗಳ ನಂತರ ಕಡಬ ಪೊಲೀಸರು ಬಂಧಿಸಿದ್ದಾರೆ. ಪೇರಡ್ಕ ಪೆಲತ್ರಾಣೆ ನಿವಾಸಿ ಸದ್ದಾಂ ಮತ್ತು ಮೀನಾಡಿ ನಿವಾಸಿ ತಾಜುದ್ದೀನ್ ಬಂಧಿತ ಆರೋಪಿಗಳು. ಇವರಲ್ಲಿ ಸದ್ದಾಂ ಎಂಬಾತನು ಈ ಹಿಂದೆ ನಡೆದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ಆರೋಪಿಯಾಗಿದ್ದಾನೆ.ಈತನ ಮೊಬೈಲ್ ಸಿಡಿಆರ್

ಜೈನ ಮುನಿಯ ಹತ್ಯೆ ಪ್ರಕರಣ : ಕಡಬದಲ್ಲಿ ಜೈನ ಸಮುದಾಯದವರಿಂದ ಪ್ರತಿಭಟನೆ

ಹಿರೇಕೋಡಿ ನಂದಿ ಪರ್ವತ ಆಶ್ರಮದ ಆಚಾರ್ಯ 108 ಶ್ರೀ ಕಾಮಕುಮಾರ ನಂದಿ ಮುನಿಶ್ರೀ ಮಹಾರಾಜರ ಹತ್ಯೆಯನ್ನು ಖಂಡಿಸಿ, ಘಟನೆಯ ಸಮಗ್ರ ತನಿಖೆಗಾಗಿ ಮತ್ತು ಮುಂದಿನ ದಿನಗಳಲ್ಲಿ ಜೈನ ಮುನಿಗಳಿಗೆ ಸೂಕ್ತ ರಕ್ಷಣೆಯನ್ನು ಒದಗಿಸುವಂತೆ ಆಗ್ರಹಿಸಿ ಕಡಬ ತಾಲೂಕಿನ ಜೈನ ಸಮಾಜ ಬಾಂಧವರು ಕಡಬ ತಾಲೂಕು ಆಡಳಿತ ಸೌಧದ ಮುಂದೆ ಮೌನ ಪ್ರತಿಭಟನೆ ನಡೆಸಿದರು. ಕಡಬದ ಸಿ.ಎ.ಬ್ಯಾಂಕ್ ವಠಾರದಿಂದ ಕಡಬದ ಮುಖ್ಯರಸ್ತೆಯಲ್ಲಿ ಮೌನ ಮೆರವಣಿಗೆಯ ಮೂಲಕ ಸಾಗಿದ ಪ್ರತಿಭಟನಾಕಾರರು ಕಡಬ ತಾಲೂಕು ಆಡಳಿತ

ಕಡಬದಲ್ಲಿ ಪ್ರಕೃತಿ ವಿಕೋಪದ ಮುನ್ನೆಚ್ಚರಿಕೆ ಕ್ರಮದ ಕುರಿತು ಸಭೆ

ನೆರೆಪೀಡಿತ ಪ್ರದೇಶಗಳನ್ನು ಗುರುತಿಸಿಕೊಂಡು ಅವುಗಳಲ್ಲಿ ಸಮಸ್ಯೆಗಳು ಉದ್ಬವವಾಗದಂತೆ ಮುನ್ನೆಚ್ಚರಿಕೆವಹಿಸುವ ಕಾರ್ಯ ಗ್ರಾಮ ಮಟ್ಟದಿಂದಲೇ ಆಗಬೇಕು ಎಂದು ದ.ಕ. ಜಿಲ್ಲಾಧಿಕಾರಿ ಮುಲೈ ಮುಹಿಲನ್ ಹೇಳಿದರು. ಅವರು ಕಡಬ ತಾಲೂಕು ಸೌಧದಲ್ಲಿ ಪ್ರಕೃತಿವಿಕೋಪ ಮುನ್ನೆಚ್ಚರಿಕೆ ಕ್ರಮವಹಿಸುವ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಗ್ರಾಮ ಮಟ್ಟದಲ್ಲಿಯೇ ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ಎಲ್ಲೆಲ್ಲಿ ಪ್ರಕೃತಿವಿಕೋಪಗಳು ನಡೆದ ಪ್ರದೇಶಗಳನ್ನು ಗುರುತಿಸಿ

ಕಡಬ: ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಯುವ ಬ್ರಿಗೇಡ್‌ನಿಂದ ಸರಕಾರಕ್ಕೆ ಮನವಿ

ಕಡಬ: ಟಿ.ನರಸೀಪುರದಲ್ಲಿ ಹಿಂದೂ ಕಾರ್ಯಕರ್ತ ಯುವ ಬ್ರಿಗೇಡ್‌ನ ವೇಣುಗೋಪಾಲ್ ಹಾಗೂ ಚಿಕ್ಕೋಡಿಯಲ್ಲಿ ಜೈನ ಮುನಿಗಳ ಅವರ ಬರ್ಭರ ಹತ್ಯೆಯನ್ನು ಖಂಡಿಸಿ ಮತ್ತು ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ನೀಡುವಂತೆ ಆಗ್ರಹಿಸಿ ಕಡಬ ಯುವಬ್ರಿಗೇಡ್ ವತಿಯಿಂದ ಮನವಿ ಸಲ್ಲಿಸಲಾಯಿತು. ಕಡಬ ಉಪತಹಸೀಲ್ದಾರ್ ಮನೋಹರ ಕೆ.ಟಿ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಎರಡು ಹತ್ಯೆಗಳು ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವಂತೆ ಮಾಡಿದ್ದು ಭಯದ ವಾತಾವರಣ

Subramanya : ಭಾರೀ ಮಳೆಗೆ ಮುಳುಗಡೆಯಾದ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಇರುವ ಕುಮಾರ ಧಾರ ನದಿ ಉಕ್ಕಿ ಹರಿಯುತ್ತಿದೆ. ನದಿಯಲ್ಲಿ ರಭಸದಿಂದ ನೀರು ಹರಿಯುತ್ತಿರುವುರಿಂದ ಪವಿತ್ರ ಸ್ನಾನ ಘಟ್ಟ ಮುಳುಗಡೆಯಾಗಿದೆ.ಹೀಗಾಗಿ ಭಕ್ತಾದಿಗಳಿಗೆ ನೀರಿಗಿಳಿಯದಂತೆ ಸೂಚನೆ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ದ.ಕ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಹಾನಿಯಾಗಿರುವ ಬಗ್ಗೆಯೂ ವರದಿಯಾಗಿದೆ.ಈಗಾಗ್ಲೆ ದ.ಕ. ಜಿಲ್ಲೆಯಲ್ಲಿ ಜಿಲ್ಲಾ ನೈಸರ್ಗಿಕ ವಿಕೋಪ ಮುನ್ಸೂಚನೆಯಂತೆ ಆರೆಂಜ್ ಅಲರ್ಟ್

ಕಡಬ : ಬೃಹತ್ ಗಾತ್ರದ ಕಾಡುಕೋಣದ ಮೃತದೇಹ ಪತ್ತೆ

ಬೃಹತ್ ಗಾತ್ರದ ಕಾಡುಕೋಣದ ಮೃತದೇಹವು ಕಡಬ ಸಮೀಪದ ಕೋಡಿಂಬಾಳದ ಪುಳಿಕುಕ್ಕು ಎಂಬಲ್ಲಿ ಶನಿವಾರದಂದು ಕಂಡುಬಂದಿದೆ. ಪುಳಿಕುಕ್ಕು ಸೇತುವೆಯ ಬಳಿ ನದಿಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಕಾಡುಕೋಣದ ಮೃತದೇಹವು ಕಂಡುಬಂದಿದ್ದು, ಸ್ಥಳೀಯರು ವೀಡಿಯೋ ಮಾಡಿದ್ದಾರೆ. ಇದೀಗ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅರಣ್ಯ ಇಲಾಖೆಯವರು ಕಾಡುಕೋಣದ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ.

ಕಡಬ : 40ಕೆಜಿ ತೂಕದ ಆಡನ್ನೇ ನುಂಗಲು ಯತ್ನಿಸಿದ ಹೆಬ್ಬಾವು

ಕಡಬ ತಾಲೂಕಿನ ಐತ್ತೂರು ಗ್ರಾಮದ ಬ್ರಾಂತಿಕಟ್ಟೆ ಕೊಡೆಂಕಿರಿ ಎಂಬಲ್ಲಿ ಭಾರೀ ಗಾತ್ರದ ಹೆಬ್ಬಾವೊಂದು ಆಡೊಂದನ್ನು ನುಂಗಲು, ಸುಮಾರು ಒಂದು ತಾಸು ಸೆಣಸಿ ವಿಫಲ ಯತ್ನ ನಡೆಸಿದ ಘಟನೆ ನಡೆದಿದೆ. ಸ್ಥಳೀಯರಾದ ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಸುಮಾರು 40 ಕೆಜಿ ತೂಕದ ಗಂಡು ಆಡು ಹೆಬ್ಬಾವಿನ ಉರುಳಿಗೆ ಸಿಕ್ಕಿ ಉಸಿರುಗಟ್ಟಿ ಪ್ರಾಣ ಬಿಟ್ಟಿದೆ. ಆಡಿನ ತಲೆಯ ಭಾಗವನ್ನು ನುಂಗಿದರೂ ಉಳಿದ ಭಾಗವನ್ನು ನುಂಗಲು ಸಾಧ್ಯವಾಗದೆ ಸೋತು, ಸತ್ತ ಆಡನ್ನು ಸ್ಥಳದಲ್ಲೇ ಬಿಟ್ಟು

ಕಡಬ : ಅನಾರೋಗ್ಯದಿಂದ ಯುವಕ ನಿಧನ

ಕಡಬ: ಕುಟ್ರುಪ್ಪಾಡಿ ಗ್ರಾಮದ ಹೊಸಮಠ ಉಳಿಪು ನಿವಾಸಿ ಗಿರಿಯಪ್ಪ ಗೌಡ ಅವರ ಪುತ್ರ ಸುಮಂತ್(32ವ.)ರವರು ಅನಾರೋಗ್ಯದಿಂದ ಜೂ.22ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುಮಂತ್ ಅವರು ಕಳೆದ ಎರಡು ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಕೆಲ ದಿನಗಳಿಂದ ಅವರ ಆರೋಗ್ಯದಲ್ಲಿ ಮತ್ತಷ್ಟೂ ಏರುಪೇರಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದವರು ಚಿಕಿತ್ಸೆಗೆ ಸ್ಪಂದಿಸದೆ ಜೂ.22ರಂದು ರಾತ್ರಿ ನಿಧನರಾಗಿದ್ದಾರೆ.