Home Posts tagged #kadaba (Page 7)

ಕಡಬ : ಲೈನ್ ಮ್ಯಾನ್ ಮೃತಪಟ್ಟ ಪ್ರಕರಣ: ಮೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಕಡಬ: ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೆಸ್ಕಾಂ ಅಧಿಕಾರಿಗಳ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಸಮೀಪದ ಮುಳಿಮಜಲು ಎಂಬಲ್ಲಿ ಬಾಗಲಕೋಟೆ ಮೂಲದ ದ್ಯಾವಣ್ಣ ದೊಡ್ಡಮನಿ ಎಂಬವರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟಿದ್ದರು. ಮೃತ

ಹಠಾತ್ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಕಡಬ: ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬಳು ಹಠಾತ್ ಅನಾರೋಗ್ಯದಿಂದ ನಿಧನ ಹೊಂದಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನಿಡ್ಮೇರು ಎಂಬಲ್ಲಿ ನಡೆದಿದೆ. ರೆಂಜಿಲಾಡಿಯ ನಿಡ್ಮೇರು‌ ನಿವಾಸಿ ರವೀಂದ್ರ ಅವರ ಪುತ್ರಿ ಕು.ರಶ್ಮಿತಾ‌ (18) ಮೃತ ವಿದ್ಯಾರ್ಥಿನಿ. ಮೃತ ರಶ್ಮಿತಾ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆ ವೇಳೆ

kadaba : ಕಾಡಾನೆ ದಂತದಿಂದ ತಿವಿದು ಬಸ್‌ಗೆ ಹಾನಿ

ಕಡಬ : ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪರ್ ಬಸ್ಸೊಂದಕ್ಕೆ ಕಾಡಾನೆ ದಂತದಿಂದ ತಿವಿದು ಬಸ್‌ಗೆ ಹಾನಿಯಾದ ಘಟನೆ ಕುಕ್ಕೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯದ ಮೂಲಕ ಬೆಂಗಳೂರಿಗೆ ಬಸ್ ತೆರಳುತ್ತಿದ್ದ ಸಂದರ್ಭದಲ್ಲಿ ಅನಿಲ ಎಂಬಲ್ಲಿ ರಸ್ತೆ ಬದಿ ಕಾಡಾನೆ ನಿಂತಿತ್ತು. ಆನೆಯನ್ನು ನೋಡಿದ ಬಸ್ ಚಾಲಕ ಅನಾಹುತ ತಪ್ಪಿಸಲು ಯತ್ನಿಸಿದ್ದಾರೆ.

ಕಡಬ : ವಿದ್ಯುತ್ ಲೈನ್‍ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್‍ಮ್ಯಾನ್ ಸಾವು

ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಓರ್ವರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಕಡಬ ಮೆಸ್ಕಾಂ ಲೈನ್‍ಮ್ಯಾನ್ ಬಾಗಲಕೋಟೆ ಮೂಲದ ದ್ಯಾಮಣ್ಣ ದೊಡ್ಮನಿ ಮೃತಪಟ್ಟವರು. ಕಡಬದ ಮುಳಿಮಜಲು ಸಮೀಪದ ಕಾಯರಡ್ಕ ಎಂಬಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯನ್ನು ಕಂಡು ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ ಹೊಡೆದಿದೆ. ಗಂಭೀರ ಗಾಯಗೊಂಡ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ

ಕಡಬ – ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ಕಡಬದ ಆಲಂಕಾರು ಶ್ರೀ ದುರ್ಗಾಂಬಾ ಜನರಲ್ ಸ್ಟೋರ್‍ನ ಮಾಲಕ, ಆಲಂಕಾರು ನಿವಾಸಿ ಚಂದ್ರಶೇಖರ ಪೂಜಾರಿ ಶಾಂತಿಮೊಗರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ 5 ಗಂಟೆ ವೇಳೆಗೆ ಮನೆಯಲ್ಲಿ ಚೀಟಿ ಬರೆದು ತನ್ನ ಕಾರಿನಲ್ಲಿ ಶಾಂತಿಮೊಗರುಗೆ ಹೋದವರು ಅಲ್ಲಿ ಸೇತುವೆ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿಕೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಚಂದ್ರಶೇಖರ ಅವರು ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ

ಕಡಬ ; ಬೆಂಗಳೂರಿನಿಂದ ರಜೆಯಲ್ಲಿ ಬಂದಿದ್ದ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ದಾರುಣ ಸಾವು

ಕೇನ್ಯ ಗ್ರಾಮದ ಕಣ್ಕಲ್ ಬಳಿಯ ಪಳ್ಳ ಎಂಬಲ್ಲಿ ಕುಮಾರಧಾರ ಹೊಳೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಮೇ.8 ರಂದು ಸಂಜೆ 4 ಗಂಟೆಗೆ ನಡೆದಿದೆ. ಸತೀಶ್ ಅಮ್ಮಣ್ಣಾಯ ಎಂಬವರ ಮಕ್ಕಳಾದ ಹಂಷಿತ (14 ವರ್ಷ) ಮತ್ತು ಅವಂತಿಕಾ (10 ವರ್ಷ) ಎಂದು ಗುರುತಿಸಲಾಗಿದೆ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಇಲಾಖೆ, ಸ್ಥಳೀಯರ ಸಹಕಾರದಿಂದ ಇಬ್ಬರ ಮೃತ ದೇಹ ಪತ್ತೆ ಹಚ್ಚಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಸತೀಶ್ ಅಮ್ಮಣ್ಣಾಯ

ಕಡಬ: ಮದ್ಯ ಮುಕ್ತ ಮತದಾನದ ಸಂಕಲ್ಪ ಗ್ರಾಮಾಭಿವೃಧ್ಧಿ ಯೋಜನೆಯ ಧ್ಶೇಯ: ರವಿಪ್ರಸಾದ್ ಆಲಾಜೆ

 ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಕಡಬ ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಮದ್ಯ ಮುಕ್ತ ಮತದಾನ ದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕುರಿತು ದೊಡ್ಡಕೊಪ್ಪ ಒಕ್ಕೂಟದ ಸದಸ್ಶರಿಗೆ ತಿಳುವಳಿಕೆ ನೀಡಿ ಕರಪತ್ರ ಹಂಚಲಾಯಿತು. ವಿಧಾನ ಸಭಾ ಚುನಾವಣಾ ವೇಳೆ ಮದ್ಯಪಾನದ ಆಮಿಷಕ್ಕೆ ಒಳಗಾಗಿ ಮತದಾನವನ್ನು ಮಾಡುವುದು ಹಾಗೂ ಮದ್ಯ ಪಾನದ ಆಸೆಯನ್ನು ತೋರಿಸಿ ಮತಕೇಳುವುದು ಇವೆರಡೂ ಸಮಾಜ ಘಾತುಕ ಚಟುವಟಿಕೆಗಳೇ ಆಗಿದ್ದು, ಇಂತಹ

Kadaba : ಅಸ್ವಸ್ಥಗೊಂಡಿದ್ದ ಕಾಡಾನೆ ಸಾವು

ಕೊಂಬಾರಿನ ಕೆಂಜಾಳ ಬಗ್ಪುಣಿ ಭಾಗದ ಹೊಳೆಯ ನೀರಿನಲ್ಲಿ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದ ಕಾಡಾನೆ ಗುರುವಾರ ತಡರಾತ್ರಿ ಮೃತಪಟ್ಟಿದೆ.ನಿಶ್ಶಕ್ತಿಯಿಂದಾಗಿ ಮೇಲೆ ಬರಲು ಸಾಧ್ಯವಾಗದೇ ಹೊಳೆಯಲ್ಲಿಯೇ ನಿಂತಿದ್ದ ಆನೆಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಕಡಬದ ಪಶು ವೈದ್ಯಾಧಿಕಾರಿ ಡಾ| ಅಜಿತ್ ಹಾಗೂ ಹುಣಸೂರಿನಿಂದ ಅರಣ್ಯ ಇಲಾಖೆಯ ಪಶು ವೈದ್ಯ ಡಾ| ಮುಜೀಬ್ ಅವರನ್ನು ಸ್ಥಳಕ್ಕೆ ಕರೆಸಲಾಗಿತ್ತು. ಆನೆಯನ್ನು ಪರಿಶೀಲಿಸಿದ ಅವರು ಅದಕ್ಕೆ ಸುಮಾರು 50 ವರ್ಷ

ಮುಖ್ಯಮಂತ್ರಿ ಆಶೀರ್ವಾದ ಪಡೆದ ಭಾಗೀರಥಿ ಮುರುಳ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಮುಖ್ಯಮಂತ್ರಿ ಅವರಿಗೆ ಹೂ ನೀಡಿ, ಆಶೀರ್ವಾದ ಪಡೆದರು.ಶುಭವಾಗಲಿ ಎಂದು ಸಿಎಂ ಆಶೀರ್ವದಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಭಾಗೀರಥಿ ಮುರುಳ್ಯ ಅವರು, ಸಾಮಾನ್ಯ ಕಾರ್ಯಕರ್ತೆ ಆಗಿರುವ ನನಗೆ ಚುನಾವಣೆ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಿದೆ. ಪಕ್ಷದ ಹಿರಿಯ ಮಾರ್ಗದರ್ಶನದಲ್ಲಿ ಕೆಲಸ

ಆತೂರು ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಅಚ್ಚರಿ : ಗಾಳಿಯ ವಿರುದ್ಧ ದಿಕ್ಕಿನಲ್ಲಿ ಸಾಗಿದ ಗಂಧದ ಕಡ್ಡಿಯ ಹೊಗೆ

ಕಡಬ: ಗಾಳಿ ಇರುವ ದಿಕ್ಕಿನಲ್ಲಿಯೇ ಹೊಗೆ ಸಾಗುವುದು ಸಾಮಾನ್ಯ. ಆದರೆ, ಇಲ್ಲೊಂದು ದೇವಸ್ಥಾನದಲ್ಲಿ ದೇವರಿಗೆ ಪೂಜೆ ಸಲ್ಲಿಸಿದ್ದ ಗಂಧದ ಕಡ್ಡಿಯ ಹೊಗೆಯು ಗಾಳಿಯ ವಿರುದ್ಧ ದಿಕ್ಕಿನಲ್ಲಿ ಸಾಗಿದೆ. ಈ ಮೂಲಕ ನೆರೆದಿದ್ದ ಭಕ್ತರಲ್ಲಿ ಅಚ್ಚರಿ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಈ ಘಟನೆ ನಡೆಸಿದೆ. ವಿಶೇಷ ಪೂಜೆಯ ಸಂದರ್ಭದಲ್ಲಿ ದೇವರಿಗಾಗಿ ಹಚ್ಚಿದ ಗಂಧದ ಕಡ್ಡಿಯಿಂದ ಹೊರಹೊಮ್ಮಿದ