Home Posts tagged #kadaba (Page 9)

ಕಡಬದ ಹಳೆನೇರಂಕಿ ಗ್ರಾಮದ ಶ್ರೀಚಕ್ರವರ್ತಿ ಕೊಡಮಣಿತ್ತಾಯ ದೈವಸ್ಥಾನ ಜಾತ್ರೋತ್ಸವ

ಕಡಬ ತಾಲೂಕಿನ ಹಳೆನೇರೆಂಕಿ ಗ್ರಾಮದ ನೇರೆಂಕಿಗುತ್ತು ಶ್ರೀಚಕ್ರವರ್ತಿ ಕೊಡಮಣಿತ್ತಾಯ ದೈವಸ್ಥಾನ ಮತ್ತು ಬ್ರಹ್ಮಬೈದರ್ಕಳ ನೇಮೋತ್ಸವ ಮತ್ತು ಶ್ರೀ ಬ್ರಹ್ಮಬೈದರ್ಕಳ ಜಾತ್ರೋತ್ಸವ ಪ್ರಯುಕ್ತ ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಬೆಳಿಗ್ಗೆ ಹಳೆನೇರಂಕಿ ಪೇಟೆಯಿಂದ ಚೆಂಡೆ, ವಾದ್ಯದೊಂದಿಗೆ ಹೊರೆಕಾಣಿಕೆ ಮೆರವಣಿಗೆಯು ದೈವಸ್ಥಾನದ ಸನ್ನಿಧಿಗೆ ಆಗಮಿಸಿತು.

ಕುಟ್ರುಪ್ಪಾಡಿ ಗ್ರಾ.ಪಂ.ನ ಜಾಗಕ್ಕೆ ಅಗಳು ನಿರ್ಮಾಣಕ್ಕೆ ವಿರೋಧ : ತೀವ್ರ ವಿರೋಧದ ಹಿನ್ನೆಲೆಯಲ್ಲಿ ಸ್ಥಗಿತಗೊಂಡ ಕಾರ್ಯಾಚರಣೆ

ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಹೊಸ್ಮಠ ಬಲ್ಯದಲ್ಲಿರುವ ಕಾಡಿಗೆ ಮನ್ನಾ ಜಾಗಕ್ಕೆ ಬೇಲಿ ನಿರ್ಮಿಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಅಗಳು ನಿರ್ಮಾಣಕ್ಕೆ ಮುಂದಾದಾಗ ಇಲ್ಲಿನ ಇನ್ನೊಂದು ಗುಂಪು ಅದಕ್ಕೆ ತೀವೃ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು. ಶುಕ್ರವಾರ ಮಧ್ಯಾಹ್ನದ ಹೊತ್ತಿಗೆ ಪಂಚಾಯಿತಿಯವರು ಪಂಚಾಯಿತಿ ಅಧ್ಯಕ್ಷ ಮೋನಪ್ಪ ಗೌಡ(ಮೋಹನ ಗೌಡ) ಕೆರೆಕೋಡಿ ಅವರ ನೇತೃತ್ವದಲ್ಲಿ

ಭಜನೆ ಮತ್ತು ಭಜಕರ ಬಗ್ಗೆ ನಿಂದನಾ ಪೋಸ್ಟ್ ವಿಚಾರ : ಸಂಜೀವ ಪೂಜಾರಿಯನ್ನು ಬಂಧಿಸದಿದ್ದರೆ ಬೀದಿಗಿಳಿದು ಹೋರಾಟ

ಕಡಬ: ಭಜನೆ ಮತ್ತು ಭಜಕರ ಹಾಗು ಹಿಂದೂ ಧರ್ಮದ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ನಿರಂತರ ಪೋಸ್ಟ್ಗಳನ್ನು ಹಾಕುತ್ತಿರುವ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ದ ಜಾಮೀನು ರಹಿತ ಪ್ರಕರಣ ದಾಖಲಾದರೂ ಆವರನ್ನು ಇನ್ನೂ ಪೊಲೀಸರು ಬಂಧಿಸಿಲ್ಲ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷದ್ ಭಜರಂಗದಳ ಕಡಬ ಪ್ರಖಂಡ ನೇತೃತ್ವದಲ್ಲಿ ಕಡಬ ಠಾಣಾ ಮುಂಭಾಗದ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಬಿಜೆಪಿ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಕಡಬ: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ನಾಗಾರಾಧನೆಯ ಪುಣ್ಯ ತಾಣ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಕುಟುಂಬ ಸಮೇತರಾಗಿ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಸಚಿವರು ಆರಂಭದಲ್ಲಿ ಸಂಕಲ್ಪ ನೆರವೇರಿಸಿದರು. ಬಳಿಕ ಶ್ರೀ ದೇವರ ದರುಶನ ಪಡೆದು ಪಂಚಾಮೃತ ಮಹಾಭಿಷೇಕ ಸೇವೆಯನ್ನು ಸಮರ್ಪಿಸಿದರು. ನಂತರ ಮದ್ಯಾಹ್ನ ಶ್ರೀ ದೇವರ ಮಹಾಪೂಜೆ ವೀಕ್ಷಿಸಿ ಮಹಾಪೂಜಾ ಸೇವೆ ನೆರವೇರಿಸಿದರು.ಬಳಿಕ ಪ್ರಾರ್ಥನೆ

ಕುರುಂಜಿ ವೆಂಕಟ್ರಮಣ ಗೌಡರ ಸ್ಮರಣಾರ್ಥ ವಾರ್ಷಿಕ ಕ್ರೀಡಾಕೂಟ

ಕಡಬ: ಕುರುಂಜಿ ವೆಂಕಟ್ರಮಣ ಗೌಡರ ಸ್ಮರಣಾರ್ಥ ಒಕ್ಕಲಿಗ ಗೌಡ ಸೇವಾ ಸಂಘ ಕಡಬ ವಲಯ ಇದರ ಆಶ್ರಯದಲ್ಲಿ ಕಡಬ ಸಂತ ಜೋಕಿಮರ ಶಾಲಾ ಮೈದಾನದಲ್ಲಿ ಕಡಬ ವಲಯ ಮಟ್ಟದ ವಾರ್ಷಿಕ ಕ್ರೀಡಾಕೂಟ ನಡೆಯಿತು.ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಬಿಳಿನೆಲೆ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕಡಬ ವಲಯ ಅಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ ಅವರು ಸಭೆಯ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಕಡಬ ವಲಯ

ಕಡಬದಲ್ಲಿ ಶ್ರೀ ದುರ್ಗಾ ಜ್ಯುವೆಲ್ಲರ್ಸ್ ಶುಭಾರಂಭ

ಪಂಜ ರಸ್ತೆಯ ಕಡಬದ ಯೋಗಕ್ಷೇಮ ಸಂಕೀರ್ಣ ಸಿ.ಎ ಬ್ಯಾಂಕ್ ಬಿಲ್ಡಿಂಗ್‍ನಲ್ಲಿ ಶ್ರೀ ದುರ್ಗಾ ಜ್ಯುವೆಲ್ಲರ್ಸ್ ( ಗೋಲ್ಡ್ ಅಂಡ್ ಸಿಲ್ವರ್ ) ಶುಭಾರಂಭಗೊಂಡಿತು. ಸಂಸ್ಥೆಯನ್ನು ಉದ್ಘಾಟಿಸಿ, ದೀಪ ಬೆಳಗಿಸಿದ ಕಡಬದ ಶಾಸ್ತ್ರಿ ಕ್ಲಿನಿಕ್ ವೈದ್ಯರಾದ ಡಾ. ಸಿಎ ಶಾಸ್ತ್ರಿ ಯವರು ದೇವರ ಕೃಪೆಯಿಂದ ಸಂಸ್ಥೆ ಇನ್ನಷ್ಟು ಅಭಿವೃದ್ಧಿಗೊಳ್ಳಲಿ ಎಂದು ಶುಭ ಹಾರೈಸಿದರು. ಸಂಸ್ಥೆಯ ಮಾಲಕ ರಮೇಶ್ ಪಾದರೆ ಎಲ್ಲರ ಸಹಕಾರ ಕೋರಿದರು. ಸಂಸ್ಥೆಯ ಮಾಲಕರ ಧರ್ಮಪತ್ನಿಯಾದ ಶ್ರುತಿ ಟಿ

ಕಡಬ ಪ.ಪಂ. ವ್ಯಾಪ್ತಿಗೆ ನಗರೋತ್ಥಾನ ಯೋಜನೆಯಡಿ ವಿಶೇಷ ಅನುದಾನ

ಕಡಬ:ಸಚಿವ ಎಸ್. ಅಂಗಾರ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ಸರಕಾರದಿಂದ ನಗರೋತ್ಥಾನ ಯೋಜನೆಯಡಿ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಮಂಜೂರಾದ 5 ಕೋಟಿ ರೂ. ಹಾಗೂ ಗ್ರಾಮೀಣ ಅಭಿವೃದ್ಧಿ ಇಲಾಖೆಯಡಿ ಮಂಜೂರಾದ 2.90 ಕೋಟಿ ರೂ. ಕಾಮಗಾರಿಗಳಿಗೆ ಸಚಿವ ಎಸ್. ಅಂಗಾರ ಅವರು ಚಾಲನೆ ನೀಡಿದರು. ಬಳಿಕ ಕಡಬ ಸಿ.ಎ.ಬ್ಯಾಂಕ್ ವಠಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಈ ಹಿಂದೆ ದೇಶ ಮತ್ತು ರಾಜ್ಯವನ್ನು ಆಳಿದ ಕಾಂಗ್ರೆಸ್ ಸರಕಾರದ ಇಚ್ಚಾಶಕ್ತಿಯ ಕೊರತೆಯಿಂದ ಅಭಿವೃದ್ದಿ

ಕಡಬ ; ದಲಿತ ಮಹಿಳೆಯ ಮಾನಭಂಗ ಯತ್ನ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು : ರಾಕೇಶ್ ರೈ ಕೆಡೆಂಜಿ

ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ದೋಳ್ಪಾಡಿ ಗ್ರಾಮದ ಕಟ್ಟ ಎಂಬಲ್ಲಿ ಬಟ್ಟೆ ವ್ಯಾಪಾರಿಗಳ ಸೋಗಿನಲ್ಲಿ ಬಂದ ಇಬ್ಬರು ದಲಿತ ಮಹಿಳೆಯ ಮಾನಭಂಗ ಯತ್ನ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು, ವಿರೋಧ ಪಕ್ಷಗಳು ಆರೋಪಿಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕು ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಹೇಳಿದರು. ಕಡಬದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಒಂಟಿ ಮಹಿಳೆ ಮನೆಯಲ್ಲಿ ಒಬ್ಬರೇ

ಕಡಬ : ರೈಲು ಇಂಜಿನ್ ಢಿಕ್ಕಿಯಾಗಿ ವ್ಯಕ್ತಿ ಗಂಭೀರ

ಕಡಬ: ರೈಲು ನಿಲ್ದಾಣದ ಬಳಿ ಆಕಸ್ಮಿಕವಾಗಿ ರೈಲು ಇಂಜಿನ್ ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಡಬದ ಸುಬ್ರಹ್ಮಣ್ಯ ರೋಡ್ (ನೆಟ್ಟಣ) ನೆಟ್ಟಣದಲ್ಲಿ ನಡೆದಿದೆ. ಐತ್ತೂರು ಗ್ರಾಮದ ಓಟೆಕಜೆ ನಾಗಣ್ಣ ಗಂಭೀರ ಗಾಯಗೊಂಡ ವ್ಯಕ್ತಿ. ರೈಲು ಇಂಜಿನ್ ಢಿಕ್ಕಿಯಾದ ರಭಸಕ್ಕೆ ಒಂದು ಕಾಲು ಮತ್ತು ಒಂದು ಕೈ ತುಂಡಾಗಿದ್ದು ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮಂಗಳೂರಿನಲ್ಲಿ

ಕಾರುಗಳೆರಡರ ಓವರ್ ಟೇಕ್ ಭರದಲ್ಲಿ ಕೆಎಸ್ಆರ್ ಟಿಸಿ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅವಘಡ

ಕಡಬ : ಕಾರುಗಳೆರಡರ ಓವರ್ ಟೇಕ್ ಭರದಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅವಘಡವೊಂದು ತಪ್ಪಿದ ಘಟನೆ ಕಡಬ ಸಮೀಪದ ಮರ್ಧಾಳದ ಬ್ರಾಂತಿಕಟ್ಟೆ ಎಂಬಲ್ಲಿ ಭಾನುವಾರದಂದು ನಡೆದಿದೆ. ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್ಪ್ರೆಸ್ ಬಸ್ ಗೆ ಬ್ರಾಂತಿಕಟ್ಟೆ ತಿರುವಿನಲ್ಲಿ ಕಾರೊಂದು ಓವರ್ಟೇಕ್ ಮಾಡುವಾಗ ಹೊಡೆದು ಮುಂದೆ ಸಾಗಿದ್ದು, ಅಪಾಯವನ್ನರಿತ ಬಸ್ ಚಾಲಕ ರಸ್ತೆಯಿಂದ ಬಸ್ಸನ್ನು ಕೆಳಗಿಳಿಸಿ ನಿಯಂತ್ರಿಸಿದ