Home Posts tagged #kannada

ರಾಜ್ಯೋತ್ಸವದ ತಿಂಗಳಿನ ಕನ್ನಡ ಕೂಗುಗಳು

ನವೆಂಬರ್ ತಿಂಗಳನ್ನು ರಾಜ್ಯೋತ್ಸವ ಆಚರಣೆಯ ತಿಂಗಳು ಎಂದೇ ತಿಳಿಯಲಾಗಿದೆ. ಹುಟ್ಟಿದ ದಿನ ನವೆಂಬರ್ ಒಂದು ಆದರೂ ಇಡೀ ತಿಂಗಳು ಏನು ಆಚರಣೆ ಎಂಬುದನ್ನೆಲ್ಲ ಕೇಳಬಹುದು. ಉತ್ತರಿಸುವವರು ಯಾರೂ ಇರುವುದಿಲ್ಲ. ನಿಂದನೆ ಬೇಕಾದರೆ ಸಿಗಬಹುದು. ಆದರೆ ಇಲ್ಲಿ ಕನ್ನಡ ಹೇಗಿದೆ? ನವೆಂಬರ್ ಒಂದು ಕನ್ನಡ ನಾಡು ಹುಟ್ಟಿದ ದಿನ ಸಂತೋಷ. ಆದರೆ ಅಂದು ತುಳುನಾಡು, ಕೊಡವನಾಡು ಸತ್ತ ದಿನ

ಮೂಡುಬಿದಿರೆ : ಕನ್ನಡ ಭಾಷಾ ಬೋಧಕರಿಗೆ ಕಾರ್ಯಾಗಾರ

ಶಿಕ್ಷಕರಿಗೆ ಕನ್ನಡ ಸಾಹಿತ್ಯ ಚರಿತ್ರೆ, ಭಾರತದ ಎಲ್ಲ ಮತಧರ್ಮಗಳು, ಸಾಹಿತ್ಯ, ಸಂಗೀತಾದಿ ಸಾಂಸ್ಕೃತಿಕ ಪರಿಚಯ ಒಂದಿಷ್ಟು ಇರಬೇಕಾಗಿದೆ; ಶರೀರ ಭಾಷೆಯನ್ನೂ ಬೋಧನೆಯ ಮಾಧ್ಯಮವಾಗಿ ಬಳಸುವ, ನೋಟ್ಸ್ ಕೊಡದೆ ಸ್ವಂತಿಕೆ ಬೆಳೆಸುವ, ಪಾಠ ಬಿಟ್ಟು ಅನ್ಯ ಲೇಖನಗಳ ಕಾಪಿ ಬರೆಸುವ, ಉಚ್ಚಾರ ಹೇಳಿಕೊಡುವ, ಪಾಠವನ್ನು ವಿಷಯದ ದೃಷ್ಟಿಗಿಂತಲೂ ಭಾಷೆಯ ದೃಷ್ಟಿಯಿಂದ ನೋಡುವ , ಕಲಿಸುವ ಸಾಮರ್ಥ್ಯವನ್ನು ಹೊಂದಿರಬೇಕಾಗಿದೆ ಎಂದು ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ

ದುಬೈನಲ್ಲಿ ಕನ್ನಡ ಭವನ ಮತ್ತು ಕಲಿಕೆಗೆ ಸಮರ್ಥನೆ ವ್ಯಕ್ತಪಡಿಸಿದ ಕನ್ನಡ ಸಾಹಿತ್ಯ ಪರಿಷತ್ತು

ಕನ್ನಡ ಮಿತ್ರರು ಯು ಎ ಯಿ ದುಬೈನಲ್ಲಿ ನಡಸುತ್ತಿರುವ ಕನ್ನಡ ಪಾಠ ಶಾಲೆ ದುಬೈನ ಮಹಾ ಪೋಷಕರಾದ ಶ್ರೀಯುತ ಪ್ರವೀಣ್ ಕುಮಾರ್ ಶೆಟ್ಟಿ, ಅಧ್ಯಕ್ಷರಾದ ಶ್ರೀಯುತ ಶಶಿಧರ್ ನಾಗರಾಜಪ್ಪ, ಉಪಾದ್ಯಕ್ಷ ಶ್ರೀಯುತ ಸಿದ್ದಲಿಂಗೇಶ್, ಕಾರ್ಯದರ್ಶಿ ಶ್ರೀಯುತ ಗವಸ್ಕರ್, ಖಜಾಂಚಿ ನಾಗರಾಜ್ ರಾವ್ ಸಂಸ್ಥಾಪಕ ಸದಸ್ಯ, ಚಂದ್ರಶೇಖರ್ ಸಂಕೋಲೆ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಯುತ ಮಹೇಶ್ ಜೋಷಿ ಅವರನ್ನು ಬೆಂಗಳೂರಿನ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಪತ್ರ

ಕನ್ನಡೇತರರಿಗೆ ಕನ್ನಡ ಕಲಿಸಲು ವಾರಕ್ಕೆ ಒಂದು ಗಂಟೆ ಮೀಸಲಿಡಿ: ಹಿರಿಯ ನಟ ರಮೇಶ್ ಭಟ್

ಕನ್ನಡೇತರರಿಗೆ ಕನ್ನಡ ಕಲಿಸಲು ವಾರಕ್ಕೆ ಒಂದು ದಿನ ಮೀಸಲಿರಿಸುವಂತೆ ಹಿರಿಯ ಚಿತ್ರ ರಮೇಶ್ ಭಟ್ ಸಲಹೆ ಮಾಡಿದ್ದಾರೆ. ಕರ್ನಾಟಕ ಯೂಥ್ ವೆಲ್ ಫೇರ್ ಅಸೋಸಿಯೇಷನ್ ನಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಆಯೋಜಿಸಿದ್ದ 67 ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಗಣ್ಯರಿಗೆ ಜೀವಮಾನ ಶ್ರೇಷ್ಠ ಸಾಧನೆ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಕನ್ನಡ ಭಾಷೆಗೆ ಭವ್ಯ ಇತಿಹಾಸವಿದೆ.

ಪುತ್ತೂರು ಮಿನಿ ವಿಧಾನಸೌಧದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಗೀತ ಗಾಯನ

ಪುತ್ತೂರು: 10 ಜನಕ್ಕೂ ಹೆಚ್ಚಿರುವ ಸರ್ಕಾರಿ ಕಚೇರಿಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲೆಡೆ ರಾಷ್ಟ್ರಕವಿ ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಮವ’, ಪ್ರೊ.ಕೆ.ಎಸ್. ನಿಸಾರ್ ಅಹಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು’ ಈ ಮೂರು ಗೀತೆಗಳನ್ನು ಅ.28ರಂದು ಬೆಳಿಗ್ಗೆ ಗಂಟೆ 11ಕ್ಕೆ ಏಕಕಾಲಕ್ಕೆ ಹಾಡಬೇಕೆಂಬ ನಿರ್ದೇಶನದಂತೆ ಪುತ್ತೂರು ಮಿನಿ ವಿಧಾನ ಸೌಧ ಸಭಾಂಗಣ ದಲ್ಲಿ ಲಕ್ಷ ಕಂಠಗಳ ಗೀತ ಗಾಯನ

ಕಾರ್ಕಳದಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮ

ಕಾರ್ಕಳ:ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆದೇಶದಂತೆ ಕನ್ನಡ ಅಭಿಮಾನವನ್ನು ವೃದ್ಧಿಸುವ ನಿಟ್ಟಿನಲ್ಲಿ ಕನ್ನಡ ಗೀತ ಗಾಯನವು ಕಾರ್ಕಳದಲ್ಲಿ ನಡೆಯಿತು. ಕಾರ್ಕಳದ ಬಾಹುಬಲಿ ಬೆಟ್ಟದ ತಪ್ಪಲಲ್ಲಿರುವ ಚತುರ್ಮುಖ ಬಸದಿಯ ಆವರಣದಲ್ಲಿ ನೂರಾರು ಶಾಲಾ ಮಕ್ಕಳು ಕನ್ನಡ ನಾಡಗೀತೆ ಹಾಡಿದರು. ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ರೂಪ ಶೆಟ್ಟಿ, ಮುಖ್ಯ ಕ್ಷೇತ್ರ ಶಿಕ್ಷಣಾಧಿಕಾರಿ, ಸಂಗೀತ ಶಿಕ್ಷಕರಾದ ಶ್ರೀ ಕೃಷ್ಣ, ಅನಂತ ಪದ್ಮನಾಭ ಭಟ್, ಮುನಿರಾಜ ರೆಂಜಾಳ, ಶಾಲಾ,

ಅ.9ರಂದು ಕನ್ನಡಸೇನೆ ಕರ್ನಾಟಕ ದ.ಕ ಜಿಲ್ಲಾ ಕಚೇರಿ ಉದ್ಘಾಟನೆ

ಕನ್ನಡ ನಾಡು ನುಡಿ,ಜಲ ಸಂರಕ್ಷಣೆ, ಸ್ಥಳೀಯರಿಗೆ ಉದ್ಯೋಗ ಮತ್ತಿತರ ನ್ಯಾಯಯುತ ಬೇಡಿಕೆಗೆಹೋರಾಟ ನಡೆಸುತ್ತಾ ಬರುತ್ತಿರುವ ಕನ್ನಡ ಸೇನೆ ಕರ್ನಾಟಕ ಇದರ ದಕ್ಷಿಣಕನ್ನಡ ಜಿಲ್ಲಾ ಕಚೇರಿ” ಉದ್ಘಾಟನೆ ಸಮಾರಂಭ ಅ.9ರಂದು ಬೆಳಗ್ಗೆ 11.೦೦ ಗಂಟೆಗೆ ಕೂಳೂರಿನ ವ್ಯವಸಾಯ ಸೇವಾ ಸಹಕಾರಿ ಸಭಾಂಗಣದಲ್ಲಿ ಜರಗಲಿದೆ ಎಂದು ಕನ್ನಡ ಸೇನೆ ದ.ಕ ಜಿಲ್ಲಾ ಕಾರ್ಯಾಧ್ಯಕ್ಷ ಗುರುಚಂದ್ರ ಹೆಗ್ಡೆ ಗಂಗಾರಿ ಕೂಳೂರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು ಉದ್ಘಾಟನೆಯನ್ನು ಆಳ್ವಾಸ್ ಶಿಕ್ಷಣ