Home Posts tagged #kapu

65 ಲಕ್ಷ ರೂಪಾಯಿ ವೆಚ್ಚದ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಶಾಸಕರಿಂದ ಗುದ್ದಲಿ ಪೂಜೆ

ಕಾಪು:ಕಾಪು ವಿಧಾನಸಭಾ ಕ್ಷೇತ್ರದ ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 65 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ದಿನಾಂಕ 07-01-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ

ಮೆಸ್ಕಾಂ ಕಾಪು ವಿಭಾಗದ ವತಿಯಿಂದ ಕಾಪು ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ

ಕಾಪು ಪುರಸಭೆ, ಕಾಪುಗ್ರಾಮ ಪಂಚಾಯತ್ ಬೆಳಪು/ಮಜೂರು/ಶಿರ್ವ/ಕಟಪಾಡಿ/ಕೋಟೆಬಡಾ/ಕುತ್ಯಾರು/ಎಲ್ಲೂರು, ಕುರ್ಕಾಲು/ಮುದರಂಗಡಿ/ಇನ್ನಂಜೆ ತೆಂಕ ಎರ್ಮಾಳು/ಹೆಜಮಾಡಿ/ಪಲಿಮಾರು/ಪಡುಬಿದ್ರಿ ನೇತೃತ್ವದಲ್ಲಿ ದಿನಾಂಕ 20.12.2025 ರಂದು ಮೆಸ್ಕಾಂ ಕಾಪು ವಿಭಾಗದ ವತಿಯಿಂದ ಕಾಪು ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ ನಡೆಯಲಿದೆ. ದಿನಾಂಕ 20.12.2025 ರಂದು ಸಮಯ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 12:00 ರವರೆಗೆ ಮೆಸ್ಕಾಂ ನಿಯಮಿತ ಕಾಪು ಉಪವಿಭಾಗದ ವತಿಯಿಂದ ಕಾಪು

ಅಟಲ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ ಪೂರ್ವಭಾವಿಯಾಗಿ ಕಾರ್ಯಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು “ಕಾಪು ಕಡಲ ಪರ್ಬ” ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 13-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಚರ್ಚಿಸಿದರು. 3 ದಿನಗಳ ಕಾಲ ನಡೆಯುವ ಈ ಕಡಲ ಪರ್ಬ ಕಾರ್ಯಕ್ರಮದಲ್ಲಿ ಬೀಚ್ ಉತ್ಸವ, ಅಹಾರ ಮೇಳ,

ನಂದಾ ದೀಪ ಸೇವಾ ಟ್ರಸ್ಟ್ ವತಿಯಿಂದ ದಾನಿಗಳ ನೆರವಿನಿಂದ ದಿನಸಿ ವಿತರಣೆ

ಕಾಪು:ನಂದಾ ದೀಪ ಸೇವಾ ಟ್ರಸ್ಟ್ ನ ಸದಸ್ಯರಾದ ರವಿ ಶೆಟ್ಟಿ ಪಡುಬಿದ್ರಿಯವರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ಕಾಪುವಿನ ತೀರಾ ಬಡತನದಿಂದ ಬಳಲುತ್ತಿರುವ ಗಂಗಮ್ಮ ಶೆಟ್ಟಿಯವರಿಗೆ ದಿನಸಿ ಸಾಮಾನುಗಳನ್ನು ದಿನಾಂಕ 08/12/2025 ರ ಸೋಮವಾರದಂದು ವಿತರಣೆ ಮಾಡಲಾಯಿತು. ಕಳೆದ 3 ತಿಂಗಳಿಂದ ಗಂಗಮ್ಮ ಶೆಟ್ಟಿಯವರಿಗೆ ಮನೆಯ ದಿನಸಿ ಸಾಮಾನುಗಳನ್ನು ನೀಡುತ್ತಾ ಬರುತ್ತಿದ್ದು ಈ ತಿಂಗಳ ದಿನಸಿಯನ್ನು ನಂದಾ ದೀಪ ಸೇವಾ ಟ್ರಸ್ಟ್ ನ ಸದಸ್ಯರಾದ ಸಾದಿಕ್ ಕಂಚಿನಡ್ಕ ವತಿಯಿಂದ

ಕಾಪು ಪುರಸಭೆ ಬೀಡುಬದಿ ವಾರ್ಡಿನ ರಸ್ತೆ ಅಭಿವೃದ್ಧಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ

ಕಾಪು ಪುರಸಭಾ ವ್ಯಾಪ್ತಿಯ ಬೀಡುಬದಿ ವಾರ್ಡಿನ ಶ್ರೀ ಕೃಷ್ಣ ಪೂಜಾರಿ ಅವರ ಮನೆಯಿಂದ ಸಾದು ಶೆಟ್ಟಿ ಮನೆ ವರೆಗೆ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು 20-11-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಪುರಸಭೆಯ

ಬೆಳ್ಳೆ ಗ್ರಾಮ ಪಂಚಾಯತ್ ಸಂತೃಪ್ತಿ ನಗರದಲ್ಲಿ “ಹೈ- ಮಾಸ್ಟ್ ದೀಪ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

ಕಾಪು:ಬೆಳ್ಳೆ ಗ್ರಾಮ ಪಂಚಾಯತ್ ಮತ್ತು ಹೃದಯಂ ಫೌಂಡೇಶನ್ ಸಹಯೋಗದೊಂದಿಗೆ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂತೃಪ್ತಿ ನಗರದ ಬಳಿ ಅಳವಡಿಸಲಾದ “ಹೈ- ಮಾಸ್ಟ್ ದೀಪದ ಎಂದರು ಉದ್ಘಾಟನೆಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟನೆ ನೆರವೇರಿಸಿ ಹೈ ಮಾಸ್ಟ್ ದೀಪದವನ್ನು ಕೊಡಮಾಡಿದ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಬೆಳ್ಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿವ್ಯಾ ಆಚಾರ್ಯ,

ಮಲ್ಲಾರು ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಎಂ.ಆ‌ರ್.ಪಿ.ಎಲ್‌ (ಸಿಎಸ್ಆರ್) ಫಂಡ್‌ನಿಂದ 12.45 ಲಕ್ಷ ರೂಪಾಯಿ ಮಂಜೂರು

ಕಾಪು:ಕಾಪು ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ಮಲ್ಲಾರು ಆಯುಷ್ಮಾನ್ ಆರೋಗ್ಯ ಕೇಂದ್ರದ ದುರಸ್ತಿ ಕಾಮಗಾರಿಗಳಿಗೆ ಶಾಸಕರ ಶಿಫಾರಸ್ಸಿನ ಮೇರೆಗೆ ಎಂ.ಆ‌ರ್.ಪಿ.ಎಲ್‌ (ಸಿಎಸ್ಆರ್) ಫಂಡ್‌ನಿಂದ 12.45ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಈ ಕಾಮಗಾರಿಗೆ ಇಂದು ದಿನಾಂಕ 29-10-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ಸ್ಥಾಯಿ

ಕಾಪು: ಸಮಾಜ ಸೇವಕ ಲೀಲಾಧರ್ ಶೆಟ್ಟಿ ದಂಪತಿ ಆತ್ಮಹತ್ಯೆ

ರಂಗ ಕಲಾವಿದ, ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ (68) ಹಾಗೂ ವಸುಂಧರಾ ಶೆಟ್ಟಿ (58) ದಂಪತಿ ಮಂಗಳವಾರ ತಡರಾತ್ರಿ ಮನೆಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿಟ್ಟಿದ್ದು ಪೆÇಲೀಸರು ತನಿಖೆ ನಡೆಸುತ್ತಿದ್ದಾರೆ. ಲೀಲಾಧರ ಶೆಟ್ಟಿ ಕಲೆ, ಸಂಸ್ಕೃತಿ, ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದವರು. ಸಮಾಜಮುಖಿ ಕಾರ್ಯಗಳಿಂದ ಕಾಪು

ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಯುಧಗಳಿಂದ ಹಲ್ಲೆಗೆ ಯತ್ನ : ನಟೋರಿಯಸ್ ಕ್ರಿಮಿನಲ್ ಗಳಿಗೆ ಸುಪಾರಿ ನೀಡಿದ ಸ್ಥಳೀಯ ಕಾಂಗ್ರೆಸ್ ಮುಖಂಡ

ಉಡುಪಿ : ಇತ್ತೀಚೆಗೆ ಉಡುಪಿ ಜಿಲ್ಲೆಯ ಉದ್ಯಾವರದ ಬೊಳ್ಜೆ ಪರಿಸರದಲ್ಲಿ ಬಿಜೆಪಿ ಕಾರ್ಯಕರ್ತ ರಕ್ಷಿತ್ ಸಾಲಿಯಾನ್ ಮೇಲೆ ಅಪರಿಚಿತರಾದ ಮೂವರು ಮಾರಕಾಯುಧಗಳಿಂದ ಹಲ್ಲೆ ಮಾಡಲು ಯತ್ನಿಸಿದ ಘಟನೆ ವರದಿಯಾಗಿತ್ತು. ಈ ಬಗ್ಗೆ ಉಡುಪಿ ಜಿಲ್ಲೆಯ ಕಾಪು ಪೋಲಿಸ್ ಠಾಣೆಯುಲ್ಲಿ ದೂರು ದಾಖಲಾಗಿದ್ದು ಈ ಕುರಿತಂತೆ ಪೋಲೀಸರು ವಿಚಾರಣೆ ನಡೆಸಲು ಪ್ರಾರಂಭಿಸಿದಾಗ ಈ ಹಿಂದೆ ಹಲವಾರು ದರೋಡೆ, ಕಳ್ಳತನ ಕೊಲೆ ಇತ್ಯಾದಿ ಆರೋಪಗಳನ್ನು ಹೊತ್ತು, ಇದೀಗ ಜಾಮೀನಿನ ಮೇಲೆ ತಿರುಗಾಡುತ್ತಿರುವ

ಕಾಪುವಿನಲ್ಲಿ ಕೆರೆಯಂತಾದ ಹೆದ್ದಾರಿ

ಕಾಪು ವಿದ್ಯಾನಿಕೇತನ ವಿದ್ಯಾಸಂಸ್ಥೆಯ ಬಳಿಯ ಹೆದ್ದಾರಿ ಕೆರೆಯಾಗಿ ರೂಪುಗೊಂಡಿದ್ದು, ಸಾರ್ವಜನಿಕರು ಸಮಸ್ಯೆ ಅನುಭವಿಸುವಂತಾಗಿದೆ. ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯ ಫಲವಾಗಿ ಇಲ್ಲಿ ನಿರಂತರ ಸಮಸ್ಯೆ ಅನುಭವಿಸುವಂತ್ತಾಗಿದ್ದು, ಸಣ್ಣ ಮಳೆಗೂ ರಸ್ತೆಯ ಈ ಭಾಗ ಜಲಾವೃತವಾಗುತ್ತಿದ್ದು, ಪಕ್ಕದ ಬಸ್ ತಂಗುದಾಣದಲ್ಲಿ ಬಸ್ ಕಾಯಲು ನಿಂತ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಮೇಲೆ ಮಳೆಯ ಕೆಸರು ಮಿಶ್ರಿತ ನೀರು ಎರಚಿ ನಿರಂತರ ಸಮಸ್ಯೆ ಅನುಭವಿಸುತ್ತಿದ್ದಾರೆ.