Home Posts tagged #Karavali (Page 14)

ಮಂಗಳೂರು: ಅದ್ಯಪಾಡಿ ಬೀಬಿಲಚ್ಚಿಲ್ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಮಂಗಳೂರಿನ ಅದ್ಯಪಾಡಿ ಶ್ರೀ ಬೀಬಿಲಚ್ಚಿಲ್ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ನಡೆಯಿತು. ಕ್ಷೇತ್ರದ ಪ್ರಧಾನ ಅರ್ಚಕರಾದ ಗೋಪಾಲ ಕೃಷ್ಣ ಭಟ್ ಹಾಗೂ ಪ್ರಸಾದ್ ಭಟ್ ಅವರು, ಪೂಜ ವಿಧಿ ವಿಧಾನ ನೆರವೇರಿಸಿದರು. ಊರ ಪರ ವೂರ ಹಾಗೂ ಬೈಲು ಮಾಗಣೆಯ ಸಮಸ್ತ ಭಕ್ತಾದಿಗಳು ಪೂಜೆಯಲ್ಲಿ ಪಾಲ್ಗೊಂಡರು. ಈ ಸಂದರ್ಭ ಕ್ಷೇತ್ರದ ಆಡಳಿತ ಮಂಡಳಿಯವರು ಹಾಗೂ

ಮೂಡುಬಿದಿರೆ|| ಪಡಂದಡ್ಕದಲ್ಲಿ ಖಾಸಗಿ ಬಸ್ ಪಲ್ಟಿ-ಇಬ್ಬರಿಗೆ ಗಂಭೀರ ಗಾಯ

ಮೂಡುಬಿದಿರೆ: ಮೂಡುಬಿದಿರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಹೊಸಂಗಡಿ ಸಮೀಪದ ಪಡಂದಡ್ಕದಲ್ಲಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ನಡೆದಿದೆ. ಬಸ್‍ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಉಳಿದಂತೆ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಂಭೀರ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವೇಣೂರು ಪೆÇಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಸೌಜನ್ಯ ಪ್ರಕರಣ: ಮರು ತನಿಖೆಗಾಗಿ ಕೇಂದ್ರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ಸಿದ್ಧ..!

ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ನೇತೃತ್ವದ ಸರಕಾರ ಮರು ತನಿಖೆ ಕುರಿತು ಮಹತ್ವದ ನಿರ್ಧಾರ ತಳೆದಿದೆ. ಈ ವಿಚಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಸೌಜನ್ಯ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ಸಿದ್ಧವಿದ್ದು, ಅದಕ್ಕೂ ಮುನ್ನ ಸೌಜನ್ಯ ಪೋಷಕರು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಮನವಿ

ಕಾಪು: ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್‍ಗೆ ಪ್ರಾರ್ಥಿಸಿ ದಂಡತೀರ್ಥ ಮಠದಲ್ಲಿ ನವಗ್ರಹ ಯಾಗ

ಇಸ್ರೋ ನೇತೃತ್ವದಲ್ಲಿ ಉಡಾವಣೆಯಾದ ಚಂದ್ರಯಾನ – 3 ಇದರ ಯಶಸ್ವಿ ಕಕ್ಷೆ ತಲುಪುವಿಕೆಗೆ ಆಶಿಸಿ ಮತ್ತು ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸಿ ಪರ್ಯಾಯ ಉಡುಪಿ ಶ್ರೀ ಕೃಷ್ಣಾಪುರ ಮಠದ ಆಡಳಿತಕ್ಕೊಳಪಟ್ಟಿರುವ ಕಾಪು ದಂಡತೀರ್ಥ ಮಠದಲ್ಲಿ ನವಗ್ರಹ ಯಾಗ ಪುರಸ್ಸರ ಚಂದ್ರಶಾಂತಿ ನಡೆಯಿತು. ದಂಡತೀರ್ಥ ಮಠದ ಆಡಳಿತ ಮೊಕ್ತೇಸರ ಡಾ. ಸೀತಾರಾಮ್ ಭಟ್ ನೇತೃತ್ವದಲ್ಲಿ, ವೇದ ಮೂರ್ತಿ ನಾಗಭೂಷಣ್ ಭಟ್, ವಾಗೀಶ್ ಭಟ್, ಕ್ಷೇತ್ರದ ಅರ್ಚಕರಾದ ಶ್ರೀನಿವಾಸ್ ಭಟ್ ಪೌರೋಹಿತ್ವದಲ್ಲಿ

ಚಂದ್ರಯಾನ-3 ಯಶಸ್ವಿ ಉಡಾವಣೆಗೆ, ಕೇಂದ್ರ ಸಚಿವೆ ಶೋಭಾ, ಶಾಸಕ ಯಶ್ಪಾಲ್ ಶುಭ ಹಾರೈಕೆ

ದೇಶದ ಹೆಮ್ಮೆಯ ಇಸ್ರೋದ ಚಂದ್ರಯಾನ-3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಲು ಕ್ಷಣಗಣನೆ ಆರಂಭವಾಗಿದೆ. ಚಂದ್ರಯಾನ-3 ಯಶಸ್ವೀಗೆ ದೇಶಾದ್ಯಂತ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಅವರು ಚಂದ್ರಯಾನ-3 ಯಶಸ್ವಿಗೆ ಶುಭ ಹಾರೈಸಿದ್ದಾರೆ. ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕೇಂದ್ರದ ಸಚಿವೆ ಶೋಭಾ ಕರಂದ್ಲಾಜೆ ಅವರು, ಇಸ್ರೋ ಭಾರತದ ಹೆಮ್ಮೆಯ ಸಂಸ್ಥೆ.

ಬ್ರಹ್ಮಾವರ: ಅಗ್ನಿಪಥ್ ತರಬೇತಿಗೆ ರಾಜ್ಯ ಸರಕಾರ ಅಸ್ತು- ಗೊಂದಲ ಕಡೆಗೂ ದೂರವಾಯ್ತು!

ಬ್ರಹ್ಮಾವರ: ಹಿಂದಿನ ಬಿಜೆಪಿ ರಾಜ್ಯ ಸರಕಾರದ ಅವಧಿಯಲ್ಲಿ ಆರಂಭವಾಗಿದ್ದ ಕೇಂದ್ರ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆ “ಅಗ್ನಿ ಪಥ್” ಸೇನಾಪೂರ್ವ ತರಬೇತಿಯ ಮರು ಚಾಲನೆಗೆ ಕಾಂಗ್ರೆಸ್ ರಾಜ್ಯ ಸರಕಾರ ಅಸ್ತು ಎಂದಿದೆ. ರಾಜ್ಯದ ಕರಾವಳಿಯ 3 ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡದಲ್ಲಿ ಕಳೆದ ವರ್ಷ “ಅಗ್ನಿ ಪಥ್” ಸೇನಾ ಪೂರ್ವ ತರಬೇತಿಗೆ ಚಾಲನೆ ನೀಡಲಾಗಿದ್ದು, ಈಗಾಗಲೇ 2 ತಂಡ ತರಬೇತಿ ಮುಗಿಸಿ ಅವರಲ್ಲಿ ಅನೇಕರು ಸೇನೆ

ಮಂಗಳೂರು – ರಾ.ಹೆದ್ದಾರಿಗೆ ಸ್ವಾಧೀನಪಡಿಸಿದ ಭೂಮಿಗೆ ಪರಿಹಾರಕ್ಕೆ ಆಗ್ರಹ

ಮಂಗಳೂರಿನ ನಂತೂರಿನಿಂದ ಮೂಡುಬಿದರೆಯ ತನಕ ರಾಷ್ಟ್ರೀಯ ಹೆದ್ದಾರಿಗಾಗಿ ಸ್ವಾಧೀನಪಡಿಸಿದ ಭೂಮಿಗೆ ಸೂಕ್ತ ಪರಿಹಾರ ನೀಡುವಲ್ಲಿ ವಿಳಂಬ ಆರೋಪಿಸಿ ಎನ್.ಎಚ್. 169 ಭೂ ಮಾಲೀಕರ ಹೋರಾಟ ಸಮಿತಿ ವತಿಯಿಂದ ನಂತೂರಿನ ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇಶಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಭೂ ಮಾಲಕರ ಹೋರಾಟ ಸಮಿತಿ ಅಧ್ಯಕ್ಷೆ ಮರಿಯಮ್ಮ ಥಾಮಸ್ ಅವರು, ರಾ.ಹೆದ್ದಾರಿ 169ರ ಅಗಲೀಕರಣಕ್ಕಾಗಿ ಭೂಸ್ವಾಧೀನಗೊಂಡವರಿಗೆ

ಬಂಟ್ವಾಳ – ಧರ್ಮದೈವ ಕ್ಷೇತ್ರ ಮತ್ತು ಶಾಸಕರ ಬಗ್ಗೆ ಅಪಪ್ರಚಾರ-ಕಕ್ಯಗುತ್ತಿನಲ್ಲಿ ಪ್ರಾರ್ಥನೆ

ಧರ್ಮದೈವಗಳ ಕ್ಷೇತ್ರಕ್ಕೆ ಅಪಚಾರವಾಗುವಂತೆ ಮತ್ತು ಬಂಟ್ವಾಳ ಶಾಸಕರ ಹೆಸರನ್ನು ಕೆಡಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿರುವ ಇಬ್ಬರು ವ್ಯಕ್ತಿಗಳಿಗೆ ದೈವದೇವರುಗಳು ಸರಿಯಾದ ಶಿಕ್ಷೆ ನೀಡಬೇಕು ಎಂದು ಕಕ್ಯಗುತ್ತಿನ ಭಂಡಾರದ ಮನೆಯವರು ಹಾಗೂ ಊರಿನ ಪ್ರಮುಖರು ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ಇಲ್ಲಿನ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೂಡ ದೇವರಲ್ಲಿ ಬೇಡಿಕೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಉಳಿ ಗ್ರಾಮಪಂಚಾಯತ್

ನಿವೃತ್ತ ಮುಖ್ಯ ಶಿಕ್ಷಕ ಸುರೇಶ ಭಂಡಾರಿಗೆ ಬೀಳ್ಕೊಡುಗೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳ್ಳಬೈಲು ಇಲ್ಲಿನ ನಿವೃತ್ತ ಮುಖ್ಯೋಪಾಧ್ಯಾಯ ಹಾಗೂ ಸಂಪನ್ಮೂಲ ವ್ಯಕ್ತಿ ಸುರೇಶ ಭಂಡಾರಿ ಮತ್ತು ಅವರ ಪತ್ನಿ ಶಾಂತಾ ಶೆಟ್ಟಿಯರವರನ್ನು ವೇದಮೂರ್ತಿ ಕೊಡಕಟ್ಟು ಮಂಜುನಾಥ ಉಪಾಧ್ಯಾಯ ಶಾಲಾ ವತಿಯಿಂದ ಹಾಗೂ ಊರವರ ಪರವಾಗಿ ಸನ್ಮಾನಿಸಲಾಯಿತು. ಸನ್ಮಾನಿತರು ಬೈಂದೂರು, ಕಮಲಶಿಲೆ ಮತ್ತಿತರ ಕಡೆಗಳಲ್ಲಿ ಶಿಕ್ಷಕರಾಗಿ, ಬ್ರಹ್ಮಾವರ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ತರಬೇತುದಾರರಾಗಿ ಸೇವೆ ಸಲ್ಲಿಸಿದ್ದು ವಿದ್ಯಾರ್ಥಿಗಳ ಮೆಚ್ಚುಗೆಗೆ

ಬೇಲೂರು ಕಸಬಾ ಹೋಬಳಿ ಎ ಮಟ್ಟದ ಕ್ರೀಡಾ ಕೂಟ

ಬೇಲೂರು ಕಸಬಾ ಹೋಬಳಿ ಎ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾ ಕೂಟವು ವಿದ್ಯಾವಿಕಾಸ್ ಶಾಲೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ನಡೆಯಿತು. ಕ್ರೀಡಾ ಕೂಟದಲ್ಲಿ ವಿದ್ಯಾವಿಕಾಸ ಶಾಲೆಯ ಬಾಲಕರು ವೈಯುಕ್ತಿಕ ಪ್ರಶಸ್ತಿ ಮತ್ತು ಸಮಗ್ರ ಪ್ರಶಸ್ತಿಯನ್ನು ವಿದ್ಯಾವಿಕಾಸ ಹಾಗೂ ಸರ್ವೋದಯ ಶಾಲೆಗಳು ಸಮನಾಗಿ ಪಡೆದುಕೊಂಡಿವೆ. ಬಾಲಕರ ವಿಭಾಗದಲ್ಲಿ ವಿದ್ಯಾವಿಕಾಸ ಶಾಲೆ, ಬಾಲಕೀಯರ ವಿಭಾಗದಲ್ಲಿ ಸರ್ವೋದಯ ಶಾಲೆ ತನ್ನದಾಗಿಸಿಕೊಂಡಿದೆ. ಈ ಕ್ರಿಡಾ ಕೂಟದ