Home Posts tagged #Karavali (Page 6)

ಬೈಂದೂರು: ಅಕಾಲಿಕ ಮಳೆಯಿಂದಾಗಿ ಭತ್ತದ ಕೃಷಿಗೆ ಜಲ ದಿಗ್ಬಂಧನ

ಬೈಂದೂರು ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಭತ್ತದ ಫಸಲು ಸಂಪೂರ್ಣ ನಾಶವಾಗಿದೆ. ಇದರಿಂದಾಗಿ ಕೃಷಿಕರು ಕಂಗಾಲಾಗಿ ದಿಕ್ಕು ತೋಚದಂತಾಗಿದೆ. ಮಳೆಯಿಂದಾಗಿ ಕಟಾವಿಗೆ ಬಂದ ಭತ್ತದ ಪೈರುಗಳು ಹಾಗೂ ಕಟಾವಿನ ನಂತರ ಜಾನುವಾರುಗಳ ಒಣ ಹುಲ್ಲುಗಳು, ಜೊತೆಗೆ ಕಟಾವಿನ ನಡುವೆ ದ್ವಿದಳ ಧಾನ್ಯಗಳನ್ನು ಸಹ ಈಗಾಗಲೇ ಬಿತ್ತನೆ ಮಾಡಿದ್ದು, ಅದು ಕೂಡ ಮಳೆಯಿಂದ ಹಾನಿಯಾಗಿ ಅಪಾರವಾದ ಬೆಳೆ

ಬ್ರಹ್ಮಾವರ|| ಅಂಬೇಡ್ಕರ್ ಭವನದಲ್ಲಿ ಭರ್ಜರಿ ಎಣ್ಣೆ ಪಾರ್ಟಿ: ವಿಡಿಯೋ ಮಾಡಿದ ಮಹಿಳೆಗೆ ಬೆದರಿಕೆ, ದೂರು ದಾಖಲು

ಬ್ರಹ್ಮಾವರದ ವಾರಂಬಳ್ಳಿ ತೆಂಕು ಬಿರ್ತಿಯ ದಲಿತ ಮುಖಂಡರ ಪುತ್ರ ರಾಷ್ಟ್ರೀಯ ಕ್ರೀಡಾ ಕೂಟದಲ್ಲಿ ಅಯ್ಕೆಯಾದ ಹಿನ್ನಲೆಯಲ್ಲಿ, ಅಭಿನಂದನಾ ಸಮಾರಂಭವನ್ನು ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿತ್ತು. ಅದೇ ದಿನ ಸಂಜೆ ಕಾರ್ಯಕ್ರಮದ ಯಶಸ್ವಿಯ ಹಿನ್ನಲೆಯಲ್ಲಿ ಅಂಬೇಡ್ಕರ್ ಭವನದಲ್ಲಿ ಎಣ್ಣೆ ಪಾರ್ಟಿ ನಡೆಸಿದ್ದರು. ಈ ವಿಚಾರ ತಿಳಿದ ಸ್ಥಳೀಯ ಮಹಿಳೆ ಸವಿತಾ ಎನ್ನುವವರು ಅಂಬೇಡ್ಕರ್ ಭವನಕ್ಕೆ ತೆರಳಿ ಮದ್ಯಪಾನ ಮಾಡುತ್ತಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿ, ವಿಡಿಯೋ

ಅಲೆವೂರು: ಟೆಂಪೋ ಬೈಕ್ ಡಿಕ್ಕಿ ಯುವಕ ಸಾವು

ಅಲೆವೂರು: ಟೆಂಪೋ ಮತ್ತು ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಅಲೆವೂರು ವಿಠಲ ಸಭಾಭವನದ ಬಳಿ ನಡೆದಿದೆ. ಘಟನೆಯಲ್ಲಿ ಪ್ರಗತಿ ನಗರದ ಮೊಹಮ್ಮದ್ ತನ್ಸಿಲ್ ( 28) ಮೃತ ದುರ್ದೈವಿಯಾಗಿದ್ದಾರೆ.

ಕುಂದಾಪುರ: ಕೊಲ್ಲೂರಿನಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಕರವೇಯಿಂದ ಅಭಿಯಾನ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ. ಎ ನಾರಾಯಣ ಗೌಡರ ಆದೇಶದಂತೆ ಕರವೇ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿಯವರ ನೇತೃತ್ವದಲ್ಲಿ ಉಡುಪಿ ತಾಲೂಕು ಅಧ್ಯಕ್ಷ ಅ,ರಾ ಪ್ರಭಾಕರ್ ಪೂಜಾರಿ ಮುಂದಾಳತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಘಟಕದ ವತಿಯಿಂದ ಕೊಲ್ಲೂರಿಗೆ ಭೇಟಿ ನೀಡಿ ಅಂಗಡಿ ಮುಂಗಟ್ಟುಗಳ ನಾಮ ಫಲಕದಲ್ಲಿ 70% ಕನ್ನಡ ಹಾಗೂ ಉಳಿದ ಭಾಷೆಗಳಿಗೆ ಶೇಕಡಾ 30/ ಕಡ್ಡಾಯಗೊಳಿಸುವಂತೆ ಅಭಿಯಾನ ಹಮ್ಮಿಕೊಳ್ಳಲಾಯಿತು. ಅಭಿಯಾನ ಉದ್ದೇಶಿಸಿ ಮಾತನಾಡಿದ ಅ.ರಾ

ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ – ನವೆಂಬರ್ 7

ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ – ಪ್ರತಿ ವರ್ಷ ಭಾರತದಾದ್ಯಂತ ನವಂಬರ್ 7 ರಂದು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ ಎಂದು ಆಚರಿಸಿ ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ, ಆರಂಭಿಕ ಹಂತದಲ್ಲಿ ಗುರುತಿಸುವುದರ ಮಹತ್ವ ಮತ್ತು ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಬಗ್ಗೆ ಮಾರ್ಗದರ್ಶನ ಮಾಡುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಮಾಡಲಾಗುತ್ತದೆ. ರಾಷ್ಟ್ರೀಯ ಕ್ಯಾನ್ಸರ್ ನಿಯಂತ್ರಣ ಕಾರ್ಯಕ್ರಮ ಭಾರತದಲ್ಲಿ 1975 ರಲ್ಲಿ ಆರಂಭವಾಯಿತು. ಆದರೆ

ಪಡುಬಿದ್ರಿ: ಜನತೆಗೆ ಸಮಸ್ಯೆಯೊಡುತ್ತಿರುವ ಜೈಹಿಂದ್ ಸ್ಟೀಲ್ ಕಂಪನಿ ವಿರುದ್ಧ ಸಿಡಿದ್ದೆದ್ದ ಜನತೆ: ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಜನರಿಗೆ ಸಮಸ್ಯೆಯೊಡ್ಡುತ್ತಿರುವ ಸುಜ್ಲಾನ್ ಕಂಪನಿಯ ಸಮೀಪದ ಜೈಹಿಂದ್ ಟ್ಯೂಬ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ವಿರುದ್ಧ ಸಿಡಿದ್ದೇದ್ದ ಜನರು ಕಂಪನಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದು, ಇಪ್ಪತ್ತು ದಿನದೊಳಗೆ ಸಮಸ್ಯೆ ಇತ್ಯರ್ಥ ಮಾಡದೇ ಇದ್ದಲ್ಲಿ ಕಂಪನಿಯ ಮುಂಭಾಗ ಬೃಹತ್ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಪಡುಬಿದ್ರಿ-ಹೆಜಮಾಡಿ ಗಡಿಭಾಗದಲ್ಲಿ ಇರುವ ಈ ಕಂಪನಿಗೆ ಪರವಾನಿಗೆ ಯಾರು ನೀಡ ಬೇಕೆಂಬ ಸ್ಪಷ್ಟತೆ ಇಲ್ಲ, ಸ್ಥಳೀಯರು ಅವಳಿ ಗ್ರಾಮ

ಪಡುಬಿದ್ರಿ: ಮರವಂತೆಯ ಮಗುವಿನ ಚಿಕಿತ್ಸಾ ವೆಚ್ಚಕ್ಕಾಗಿ ಬಣ್ಣ ಹಚ್ಚಿದ ಯುವಕರು..!!

ಪರರ ನೋವಿಗೆ ಸ್ಪಂದಿಸುವ ಮನಸ್ಸು ನಮ್ಮಲ್ಲಿದ್ದರೆ ಜಾತಿ ಮತ ಭೇದಕ್ಕೆ ಜಾಗವೇ ಇಲ್ಲ ಎಂಬುದನ್ನು ಪಡುಬಿದ್ರಿಯ ಯುವಕರ ತಂಡವೊಂದು ತೋರಿಸಿಕೊಟ್ಟಿದ್ದಾರೆ. ಪುಟ್ಟ ಅನಾರೋಗ್ಯ ಪೀಡಿತ ಮಗುವಿನ ಚಿಕಿತ್ಸೆಗಾಗಿ ಬಣ್ಣ ಹಚ್ಚಿ ಅದರಿಂದ ಸಂಗ್ರಹಗೊಂಡ ಹಣನ್ನು ಆ ಮಗುವಿನ ಕುಟುಂಬಕ್ಕೆ ಹಸ್ತಾಂತರ ಮಾಡುವ ಮೂಲಕ ಸಾಭೀತು ಪಡಿಸಿದ್ದಾರೆ. ಮರವಂತೆಯ ಬಡ ಕುಟುಂಬದ ಶಂಕರ ಪೂಜಾರಿ ಎಂಬವರ ಏಳರ ಹರೆಯದ ಪುಟ್ಟ ಬಾಲೆ ವೈಷ್ಣವಿಗೆ ಕಾಲು ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ವೈದ್ಯರಲ್ಲಿ

ಮಂಗಳೂರು: ಪ್ರೆಸ್‍ಕ್ಲಬ್ ಅತಿಥಿಯಾಗಿ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಗೌರವ

ಬೆಂಗಳೂರಿನ ಅರಮನೆ ಮೈದಾನದಲ್ಲಿ ನ. 25 ಮತ್ತು 26ರಂದು ನಡೆಯಲಿರುವ ‘ಬೆಂಗಳೂರು ಕಂಬಳ- ನಮ್ಮ ಕಂಬಳ’ಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಈಗಾಗಲೇ ಒಂದು ಹಂತದ ಕಂಬಳ ಕರೆಗಳ ನಿರ್ಮಾಣವಾಗಿದ್ದು, ಅದನ್ನು ನೋಡಲೆಂದೇ ದಿನವೊಂದಕ್ಕೆ ಸಾವಿರಾರು ಜನ ಸೇರುತ್ತಿದ್ದಾರೆ ಎಂದು ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಮಂಗಳೂರು ಪ್ರೆಸ್‍ಕ್ಲಬ್ ನ ಗೌರವ ಅತಿಥಿಯಾಗಿ ಭಾಗವಹಿಸಿ ಗೌರವ ಸ್ವೀಕರಿಸಿದ ಅವರು ಬೆಂಗಳೂರು

ಮಂಗಳೂರು: ಮತದಾರರ ಪಟ್ಟಿ ಪರಿಷ್ಕೃತ ಕರಡು ಪ್ರತಿ ಬಿಡುಗಡೆ: ಡಿ.9ರ ವರೆಗೆ ಹಕ್ಕು-ಆಕ್ಷೇಪಣೆಗೆ ಅವಕಾಶ

ಮಂಗಳೂರು: ಭಾರತೀಯ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ಪರಿಷ್ಕೃತ ಕರಡು ಪ್ರತಿ ಬಿಡುಗಡೆ ಮಾಡಿದೆ. ಡಿಸೆಂಬರ್ 09ರ ವರೆಗೆ ಹಕ್ಕು – ಆಕ್ಷೇಪಣೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಮತದಾರರ ಪಟ್ಟಿಗೆ ವಿಶೇಷ ನೋಂದಣಿ ಅಭಿಯಾನಕ್ಕೆ ಎರಡು ಶನಿವಾರ ಮತ್ತು ಎರಡು ಭಾನುವಾರ ದಿನ ನಿಗದಿ ಪಡಿಸಿದೆ. ನವೆಂಬರ್ 18 ಮತ್ತು19, ಡಿಸೆಂಬರ್ 2 ಮತ್ತು 3

ಕುಂದಾಪುರ: ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರ ಮನೆ ಮೇಲೆ ಲೋಕಾಯುಕ್ತ ದಾಳಿ

ಕುಂದಾಪುರ ಸಲೀಂ ಅಲಿ ರಸ್ತೆಯ ನಿವಾಸಿ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ರಾಜೇಶ್ ಬೆಳ್ಕೆರೆ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ರಾಜೇಶ್ ಬೆಳ್ಕೆರೆಗೆ ಸಂಬಂಧಪಟ್ಟಂತೆ ಮೂರು ಕಡೆ ತಪಾಸಣೆ ನಡೆಸಲಾಗುತ್ತಿದೆ. ಸೋಮವಾರ ಬೆಳಿಗ್ಗೆ ಕುಂದಾಪುರದ ಸಲೀಂ ಅಲಿ ರಸ್ತೆಯಲ್ಲಿರುವ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ರಾಜೇಶ್ ಬೆಳ್ಕೆರೆ ಹಲವು ವರ್ಷದಿಂದ