Home Posts tagged #karkala (Page 12)

ಕಾರ್ಕಳ : ವಿಶ್ವ ಹೃದಯ ದಿನಾಚರಣೆ, ಹೃದಯಕ್ಕಾಗಿ ನಡಿಗೆ ,ಓಟ

ಕಾರ್ಕಳ ರೋಟರಿ ಕ್ಲಬ್ ರಾಕ್ ಸಿಟಿ ಡಾ. ಟಿಎಂಎ. ಆಸ್ಪತ್ರೆ ಕಾರ್ಕಳ ಇವರ ಆಶ್ರಯದಲ್ಲಿ ವಿಶ್ವ ಹೃದಯ ಆರೋಗ್ಯ ದಿನದ ಅಂಗವಾಗಿ ನೂರಾರು ಶಾಲಾ ವಿದ್ಯಾರ್ಥಿಗಳು ಹಲವಾರು ಸಂಘಟನೆಗಳು ಅನಂತಶಯನ ವೃತ್ತದಿಂದ ಕಾರ್ಕಳ ಬಂಡಿ ಮಠ ಬಸು ನಿಲ್ದಾಣದವರೆಗೆ ಹೃದಯಕ್ಕಾಗಿ ನಡಿಗೆ ಓಟವನ್ನು ಆಯೋಜಿಸಿದ್ದರು. ಸಮಾರೋಪ ಸಮಾರಂಭದಲ್ಲಿ ಪ್ರಾಸ್ತಾವಿಕ ಭಾಷಣ ಮಾತನಾಡಿದ ಡಾ. ಭರತೇಶ್

ತಪ್ಪಿದರೆ ಸುನಿಲ್ ಪೇ ಪೋಸ್ಟರ್ ಬಿಡುಗಡೆ : ಕಾಂಗ್ರೆಸ್ ವಕ್ತಾರ ಶುಭದರಾವ್ ಎಚ್ಚರಿಕೆ

ವಿಪಕ್ಷ ನಾಯಕರಾದ ಸಿದ್ದರಾಮಯ್ಯರನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿರುವ ಸಚಿವ ಸುನೀಲ್ ಕುಮಾರ್ ಅವರು ಭ್ರಷ್ಟಾಚಾರ ದಾಖಲೆ ಬಹಿರಂಗಪಡಿಸಬೇಕು ಇಲ್ಲವೆ ಕ್ಷಮೆಯಾಚಿಸಬೇಕು ತಪ್ಪಿದ್ದಲ್ಲಿ PAYCM ಮಾದರಿಯಲ್ಲಿ SUNILPAY ಪೋಸ್ಟರ್ ಬಿಡುಗಡೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಾರ್ಕಳದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯರವರು ಈ ರಾಜ್ಯ ಕಂಡ ಶ್ರೇಷ್ಠ ರಾಜಕಾರಣಿ, ಯಾವುದೇ ಲೋಪಗಳಿಲ್ಲದ ಭ್ರಷ್ಟಾಚಾರ ರಹಿತ ಪೂರ್ಣ ಅವಧಿಯ

ವಿ4 ನ್ಯೂಸ್‍ನಲ್ಲಿ ನೀರಿನ ಘಟಕದ ದುರಸ್ತಿ ಕುರಿತು ವರದಿ ಬಿತ್ತರ : ಎಚ್ಚೆತ್ತ ಅಧಿಕಾರಿಗಳು

ಕಾರ್ಕಳದ ಮುಖ್ಯ ಬಸ್ ನಿಲ್ದಾಣದಲ್ಲಿ ಸುಮಾರು ಎರಡು ವರ್ಷಗಳ ಹಿಂದೆ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಿಂದ ಪ್ರಯಾಣಿಕರಿಗಾಗಿ ಶುದ್ಧ ಕುಡಿಯುವ ನೀರಿಗಾಗಿ ಸುಮಾರು ಒಂದು ಲಕ್ಷ ರೂಪಾಯಿಯ ವೆಚ್ಚದಲ್ಲಿ ನೀರಿನ ಘಟಕ ಅಳವಡಿಸಲಾಗಿತ್ತು. ಉದ್ಘಾಟನೆಗೊಂಡ ಒಂದೇ ತಿಂಗಳ ಅವಧಿಯಲ್ಲಿ ನೀರಿನ ಘಟಕ ಕೆಟ್ಟು ಹೋಗಿ ಅದನ್ನು ದುರಸ್ತಿ ಮಾಡುವ ಗೋಜಿಗೆ ಪುರಸಭೆಯಾಗಲಿ, ಸಂಬಂಧಪಟ್ಟ ಇಲಾಖೆ ತಲೆಕೆಡಿಸಿಕೊಂಡಿಲ್ಲ ಈ ಬಗ್ಗೆ ಸೆಪ್ಟಂಬರ್ 16ರಂದು ವಿ4 ನ್ಯೂಸ್‍ನಲ್ಲಿ

ಕಾರ್ಕಳ :ಪ್ರಮುಖ ರಸ್ತೆಗಳು ಹೊಂಡ-ಗುಂಡಿ , ಪುರಸಭೆ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆ

ಕಾರ್ಕಳ: ನಗರದ ಮಂಗಳೂರು ರಸ್ತೆ ಅಭಿವೃದ್ಧಿಯ ಕುರಿತು ಕಾರ್ಕಳ ಪುರಸಭೆ ನಿರ್ಲಕ್ಷಿಸಿದ ಪರಿಣಾಮವಾಗಿ ರಸ್ತೆ ಪೂರ್ತಿ ಹೊಂಡ ಗುಂಡಿಗಳು ತೆರದುಕೊಂಡು ವಾಹನ ಸಂಚಾರಕ್ಕೆ ಅಯೋಗ್ಯವೆನಿಸಿದೆ. ಇದರ ಕುರಿತು ಆಡಳಿತಕ್ಕೆ ಎಚ್ಚರಿಕೆಯ ಪ್ರಯತ್ನಿಸಿದರೆ ಆಡಳಿರೂಢ ಪಕ್ಷವು ನಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನದೋಂದಿಗೆ ರಾಜಕೀಯಗೊಳಿಸುತ್ತಿದೆ ಎಂದು ಪುರಸಭಾ ಸದಸ್ಯ ಶುಭದರಾವ್ ವಾಗ್ದಾಳಿ ನಡೆಸಿದರು. ಭವಾನಿ ಮಿಲ್‍ನಿಂದ ಮೂರು ಮಾರ್ಗದ ತನಕ ವರೆಗಿನ ಮಂಗಳೂರು

ಉದ್ಘಾಟನೆಗೊಂಡು ಒಂದು ತಿಂಗಳ ಒಳಗೆ ಕೆಟ್ಟುಹೋದ ನೀರಿನ ಘಟಕ

ಕಾರ್ಕಳ: ಮುಖ್ಯ ಬಸ್ ನಿಲ್ದಾಣದಲ್ಲಿ ಸುಮಾರು ಎರಡು ವರ್ಷಗಳ ಹಿಂದೆ ಮಾನ್ಯ ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಿಂದ ಪ್ರಯಾಣಿಕರಿಗೆ ಸುಮಾರು ಒಂದು ಲಕ್ಷ ರೂಪಾಯಿ ವೆಚ್ಚದಲ್ಲಿ ಕುಡಿಯುವ ಶುದ್ಧ ನೀರಿನ ಘಟಕದ ವ್ಯವಸ್ಥೆಯನ್ನು ಮಾಡಿರುತ್ತಾರೆ ಆದರೆ ಇದನ್ನ ಅಳವಡಿಸಿದ ಒಂದು ತಿಂಗಳ ಒಳಗೆ ಕೆಟ್ಟು ಹೋಗಿ ಇದು ಯಾರಿಗೂ ಬೇಡವಾದ ಘಟಕವಾಗಿದೆ. ಈ ನಿಟ್ಟಿನಲ್ಲಿ ನಾವು ಹಲವಾರು ಬಾರಿ ಪುರಸಭೆಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೂ ತಂದರು ನಮಗೂ ಈ ಸಮಸ್ಯೆಗೂ ಯಾವುದೇ

ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಪ್ರಗತಿಪರ ಕೃಷಿಕರಾದ ಭಾಸ್ಕರ್ ಹೆಗ್ಡೆ ತಮ್ಮ ಮನೆಯಲ್ಲಿ ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ತೆಳ್ಳಾರಿನಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ನೀಲೆಬೆಟ್ಟು ಗುತ್ತು ಮನೆ ನಿವಾಸಿ ಭಾಸ್ಕರ ಹೆಗ್ಡೆ (63) ಆತ್ಮಹತ್ಯೆ ಮಾಡಿಕೊಂಡವರು. ಇಂದು ಬೆಳಗ್ಗೆ ಪತ್ನಿ ಅಡುಗೆ ಮನೆಯಲ್ಲಿದ್ದ ವೇಳೆ ಭಾಸ್ಕರ ಹೆಗ್ಡೆ ಮನೆಯಲ್ಲಿದ್ದ ನಾಡಕೋವಿಯಿಂದ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕಾರ್ಕಳ:ಕೆಲವೆಡೆ ಬೀಸಿದ ಸುಂಟರ ಗಾಳಿ, ಹಲವು ಮನೆಗಳಿಗೆ ಹಾನಿ

ಕಾರ್ಕಳ: ಕಾರ್ಕಳದ ದುರ್ಗಾ ಗ್ರಾಮದ ಕುಕ್ಕಜ ಪಲ್ಕೆ ಎಂಬಲ್ಲಿ ಬೀಸಿದ ಸುಂಟರಗಾಳಿಗೆ ರಿಯಾಜ್ ಎಂಬವರ ಮನೆ ಹಂಚು ಹಾಗೂ ಚಾವಣಿ ಹಾರಿ ಹೋಗಿ ಸುಮಾರು ಐವತ್ತು ಸಾವಿರದಷ್ಟು ನಷ್ಟ ಉಂಟಾಗಿದೆ. ಅದಲ್ಲದೆ ಸಾಕಿದ ಕುರಿಯ ಮೇಲೆ ಚಾವಣಿ ತಗಡು ಬಿದ್ದು ಸುಮಾರು ಏಳು ಸಾವಿರ ರೂಪಾಯಿ ಮೌಲ್ಯದ ಕುರಿ ಸಾವನಪ್ಪಿದೆ. ಅದೇ ರೀತಿ ಜಹೀರ್ ಎಂಬವರ ಮನೆ ಚಾವಣಿ ಹಾರಿ ಹೋಗಿ ಸುಮಾರು 25,000 ನಷ್ಟ ಉಂಟಾಗಿದೆ. ಅಲ್ಲಿ ಸಮೀಪ ಮುನಾವರ್ ಸಾಹೇಬರ ಮನೆ ಚಾವಣಿ ಹಾರಿ […]

ಕಲಾವಿದನ ಬದುಕಿಗೆ ಜೀವ ತುಂಬುವವರು ಕಲಾಭಿಮಾನಿಗಳು : ಕಟೀಲ್‍ನ ಹರಿನಾರಾಯಣ ಅಸ್ರಣ್ಣರು ಅಭಿಪ್ರಾಯ

ಕಾರ್ಕಳ: ಯಕ್ಷಗಾನವೆಂಬುದು ಕರಾವಳಿಯ ಮಣ್ಣಿನ ಕಲೆಯಾಗಿದೆ ಈ ಕಲೆಯು ಸ್ವರ್ಗವನ್ನ ಭೂಮಿಯಲ್ಲಿ ಭಾಸವಾಗುವಂತೆ ಸ್ಪರ್ಶವಿಲ್ಲದೆ ನಿಭಾಯಿಸುವಂತೆ ಮಾಡುತ್ತದೆ ಕಲಾವಿದನ ಬದುಕಿಗೆ ಕಲಾ ಸಂಘಟಕರು ಕಲಾ ಕಲಾಭಿಮಾನಿಗಳು ಜೀವ ತುಂಬುವವರು ಆಗಿರುತ್ತಾರೆ. ಎಂದು ಕಟೀಲ್‍ನ ಹರಿನಾರಾಯಣ ಅಸ್ರಣ್ಣರು ಹೇಳಿದರು. ಅವರು ನಾರಾವಿಯ ಧರ್ಮ ಶ್ರೀ ಸಭಾಭವನದ ಬಲಿಪ ಪ್ರಸಾದ ಭಟ್ ವೇದಿಕೆಯಲ್ಲಿ ಜರುಗಿದ ಯಕ್ಷ ತೀರ್ಥ ಸಂಭ್ರಮ 2022ರ ಕಾರ್ಯಕ್ರಮವನ್ನು ಉದ್ಘಾಟಿಸಿ, ಉದ್ದೇಶಿಸಿ

ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ನಿರ್ಮಿಸಿದ್ದ ಆಧಾರ ಕಂಬಗಳಿಗೆ ತುಕ್ಕು

ಕಾರ್ಕಳದಲ್ಲಿ 2015ರಲ್ಲಿ ಜರುಗಿದ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಪುರಸಭೆಯ ವತಿಯಿಂದ ಸ್ವಾಗತ ಕಮಾನು ಅಂಚೆ ಇಲಾಖೆಗೆ ಸೇರಿದ ನಿವೇಶನ ಇರಿಸಲಾಗಿದೆ. ಸುಮಾರು ಏಳು ವರ್ಷಗಳು ಕಳೆದರೂ ಕಬ್ಬಿಣದ ಆಧಾರ ಸ್ತಂಭಗಳು ತುಕ್ಕು ಹಿಡಿದು ಹೋಗಿದ್ದು, ತೆರಿಗೆ ಹಣ ಪೋಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಅಶ್ಪಕ್ ಅಹಮ್ಮದ್ ಆರೋಪಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅಶ್ಪಕ್ ಅಹಮ್ಮದ್ ಅವರು, ಸ್ವಾಗತ ಕಮಾನುವಿಗೆ 2 ಲಕ್ಷ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾಗಿತ್ತು.

ಕಾರ್ಕಳ : ಚಾಣಕ್ಯ ಕದೀಮರಿಬ್ಬರ ಸೆರೆ

ಒಡವೆ ಕಳ್ಳತನ ಸಹಿತ ವಾಹನಗಳ ಕಳ್ಳತನ ನಡೆಸಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಕದೀಮ ಕಳ್ಳರಿಬ್ಬರನ್ನು ಕಾರ್ಕಳ ಪೊಲೀಸ್ ಉಪಾಧೀಕ್ಷರ ಹಾಗೂ ವೃತ ನಿರೀಕ್ಷಕರ ತಂಡ ಬಂಧಿಸಿದೆ. ಬಂಧಿತರ ಮೇಲೆ ರಾಜ್ಯಾದ್ಯಂತ ಬಹಳಷ್ಟು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಮೂಲತಃ ಬಜಪೆ ನಿವಾಸಿ ಇದೀಗ ಮೂಳೂರುಎಸ್.ಎಸ್. ರಸ್ತೆಯ ಶ್ರೀ ಸಾಯಿ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದ ವಾಜೀದ್ ಜೆ.(25) ಹಾಗೂ ಉಡುಪಿ ಕಡಿಯಾಳಿ ಆಚಾರ್ಯ ರಸ್ತೆಯ ಬಾಡಿಗೆ ಮನೆ ನಿವಾಸಿ ಶಹನಾಜ್ (32)