Home Posts tagged #kaupu (Page 3)

ಕಾಪು ಬೀಚ್‍ನಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗರ ರಕ್ಷಣೆ

ಕಾಪು ಲೈಟ್ ಹೌಸ್ ಬೀಚ್ ಬಳಿ ಸಮುದ್ರದಲ್ಲಿ ನೀರು ಪಾಲಾಗುತ್ತಿದ್ದ ಹೈದರಾಬಾದ್ ಮೂಲದ ಇಬ್ಬರು ಪ್ರವಾಸಿಗರನ್ನು ಕಾಪು ಬೀಚ್‍ನ ಲೈಫ್ ಗಾರ್ಡ್‍ಗಳು ರಕ್ಷಿಸಿದ್ದಾರೆ. ಹೈದರಾಬಾದ್‍ನ ನವೀನ್ (25) ಮತ್ತು ಸಾಯಿತೇಜ (27) ಕಾಪು ಬೀಚ್‍ನಲ್ಲಿ ಸಮುದ್ರ ಪಾಲಾಗುತ್ತಿದ್ದ ವೇಳೆ ಲೈಫ್ ಗಾರ್ಡ್‍ಗಳಿಂದ ಜೀವದಾನ ಪಡೆದ ಪ್ರವಾಸಿಗರು.

ಮುಖ್ಯಮಂತ್ರಿ ಆಗಮನ ಹಿನ್ನಲೆ ಕಾಪುವಿನಲ್ಲಿ ವ್ಯಾಪಾರಿಗಳಿಗೆ ಸಮಸ್ಯೆ ಇಲ್ಲ : ಎಸ್. ಅಂಗಾರ

ಕಾಪುವಿನಲ್ಲಿ ನಡೆಯಲಿರುವ ಬಿಜೆಪಿಯ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿಗಳು ಬರುವವರಿದ್ದು, ಕಾರ್ಯಕ್ರಮ ಕಾಪುವಿನಲ್ಲಿ ನಡೆಯುತ್ತಿದ್ದರೂ ವ್ಯಾಪಾರಿಗಳಿಗೆ ಯಾವುದೇ ಸಮಸ್ಯೆಯಾಗದು ಎಂಬುದಾಗಿ ಉಸ್ತುವಾರಿ ಸಚಿವ ಅಂಗಾರ ಹೇಳಿದರು.ಅವರು ಕಾಪುವಿನ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ ಸುದ್ಧಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಇದು ಪಕ್ಷದ ಕಾರ್ಯಕ್ರಮ ಆಗಿದ್ದು ಪೇಟೆ ಒಳಭಾಗದಲ್ಲಿ ನಡೆಯುತ್ತಿದ್ದರೂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು

ಕಾಪು : ಪೋಷಣ್ ಅಭಿಯಾನ-ಪೋಷಣ್ ಮಾಸಾಚರಣೆ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾಪು ಪುರಸಭೆ, ಡೇ ನಲ್ಮ್ ಯೋಜನೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು, ಶ್ರೀ ದೇವಿ ಸ್ಪೋರ್ಟ್ ಮತ್ತು ಕಲ್ಟರಲ್ ಕ್ಲಬ್ ಕಾಪು, ಅರಣ್ಯ ಇಲಾಖೆ ಪಡುಬಿದ್ರಿ ವಲಯ ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪು ಹಾಗೂ ಆರೋಗ್ಯ ನಿರ್ವಹಣೆ ಮತ್ತು ಸಂಶೋಧನಾ ಸಂಸ್ಥೆ ಬೆಂಗಳೂರು, ಯುನಿಸೆಫ್ ಇವರ ಸಹಯೋಗದೊಂದಿಗೆ

ಬಾವಿಗೆ ಬಿದ್ದ ದನವನ್ನು ರಕ್ಷಿಸಿದ ಅಗ್ನಿಶಾಮಕ ದಳ

ಕಾಪುವಿನ ಉದ್ಯಾವರದಲ್ಲಿ ತೆರೆದ ಬಾವಿಗೆ ಬಿದ್ದ ದನವನ್ನು ಉಡುಪಿಯ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.ಉದ್ಯಾವರದ ಕೆಮ್ ತೂರು ಶಾರದಾ ಭಜನಾ ಮಂಡಳಿಯ ಸಮೀಪ ತೆರೆದ ಬಾವಿಗೆ ಈ ದನ ಬಿದ್ದಿತ್ತು.ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು.ಸ್ಥಳಕ್ಕೆ ಧಾವಿಸಿ ಬಂದ ಉಡುಪಿ ಜಿಲ್ಲಾ ಅಗ್ನಿಶಾಮಕ ದಳದ ಸಿಬ್ಬಂದಿ,ಬಾವಿಗೆ ಹಗ್ಗ ಇಳಿಸಿ ಉಪಾಯದಿಂದ ದನವನ್ನು ಮೇಲೆ ಹಾಕುವ ಮೂಲಕ ರಕ್ಷಣೆ ಮಾಡಿದ್ದಾರೆ. ಸದ್ಯ ದನ ಆರೋಗ್ಯವಾಗಿದ್ದು ಆರೈಕೆ

ಬೆಳಪು : ಸಾವಿನಲ್ಲೂ ಒಂದಾದ ದಂಪತಿ

ಮದುವೆಯಾಗಿ ಐದು ದಶಕಗಳ ಕಾಲ ಜೊತೆಯಾಗಿ ಬಾಳಿ ಸಿಹಿ ಕಹಿ, ನೋವು ನಲಿವು ಸವಾಲುಗಳನ್ನು ಎದುರಿಸಿದ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಕಾಪುವಿನ ಬೆಳಪುವಿನಲ್ಲಿ ನಡೆದಿದೆ. ಬೆಳಪು ಗ್ರಾಮದ ಧೂಮಪ್ಪ ಶೆಟ್ಟಿ ಮನೆ ಕೃಷ್ಣ ಯಾನೆ ಕುಟ್ಟಿ ಶೆಟ್ಟಿ (80) ಮತ್ತು ಅವರ ಪತ್ನಿ ಮುಂಡ್ಕೂರು ಅಂಗಡಿಗುತ್ತು ರೇವತಿ ಕೆ. ಶೆಟ್ಟಿ (75) ಸಾವಿನಲ್ಲೂ ಒಂದಾದ ದಂಪತಿ.ಕೃಷ್ಣ ಯಾನೆ ಕುಟ್ಟಿ ಶೆಟ್ಟಿ ಅವರು ವಯೋ ಸಹಜ ಕಾರಣಗಳಿಂದಾಗಿ ಮಂಗಳವಾರ ಮುಂಜಾನೆ ಮೃತಪಟ್ಟಿದ್ದು ಮಕ್ಕಳು

ಜೀವಂತ ನಾಗರ ಹಾವಿಗೆ ತನು ಎರೆದು ನಾಗರಪಂಚಮಿ ಆಚರಣೆ

ಕಾಪು ಸಮೀಪದ ಮಜೂರಿನ ಗೋವರ್ಧನ ಭಟ್ ಅವರು ಜೀವಂತ ನಾಗರ ಹಾವಿಗೆ ತನು ಎರೆದು,ಆರತಿ ಬೆಳಗಿಸಿ ಮಂಗಳವಾರ ನಾಗರಪಂಚಮಿ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು. ಪ್ರತೀ ವರ್ಷ ನಾಗರ ಪಂಚಮಿಯಂದು ತನ್ನ ಮನೆಯಲ್ಲಿ ಶುಶ್ರೂಷೆಯಲ್ಲಿರುವ ನಾಗರ ಹಾವುಗಳಿಗೆ ತನು ಎರೆಯುವ ಗೋವರ್ಧನ ಭಟ್ ಅವರು ಈ ಬಾರಿ ಒಂದು ಹಾವಿಗೆ ಮನೆಯವರ ಜೊತೆಗೂಡಿ ತನು ಎರೆದು, ಪೂಜೆ ಮಾಡಿ, ನಾಗರ ಪಂಚಮಿ ಆಚರಿಸಿದರು. ಕಾಪು ಪರಿಸದಲ್ಲಿ ಅಪಾಯಕ್ಕೆ ಸಿಲುಕಿ ಗಾಯಗೊಳ್ಳುವ ನಾಗರ ಹಾವುಗಳನ್ನು ಮನೆಗೆ

ಮೀನುಗಾರಿಕೆ ತೆರಳಿದ್ದ ನಾಡದೋಣಿಯ ಇಂಜಿನ್ ನಲ್ಲಿ ತಾಂತ್ರಿಕ ದೋಷ : ಬಂಡೆಗೆ ಬಡಿದ ದೋಣಿ

ಮೀನುಗಾರಿಕೆ ತೆರಳಿದ್ದ ನಾಡದೋಣಿಯ ಇಂಜಿನ್ ನಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ಬಂಡೆಗೆ ಬಡಿದು ದೋಣಿ ಮುಗುಚಿ ಬಿದ್ದು, ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಉಡುಪಿ ಜಿಲ್ಲೆಯ ಕಾಪು ಲೈಟ್ ಹೌಸ್ ಬಳಿ ನಡೆದಿದೆ. ಇಂದು ಬೆಳಗ್ಗೆ ಐದು ಮಂದಿ ಮೀನುಗಾರರು, ನಾಡದೋಣಿಯಲ್ಲಿ ಕಾಪುವಿನಿಂದ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರದಲ್ಲಿ ದೋಣಿಯ ಇಂಜಿನ್ ತಾಂತ್ರಿಕ ದೋಷ ಉಂಟಾಗಿ, ಕಾಪು ಲೈಟ್ ಹೌಸ್ ತಲುಪುತ್ತಿದ್ದಂತೆ, ಬಂಡೆಗೆ ಬಡಿದಿದೆ. ಈ ವೇಳೆ ದೋಣಿ ಮಗುಚಿ

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಗೆ ಖಂಡನೆ : ಕಾಪುವಿನಲ್ಲಿ ಎಸ್‍ಡಿಪಿಐ ವತಿಯಿಂದ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಬೆಲೆ ಏರಿಕೆ ಹಾಗೂ ಜಿಎಸ್‍ಟಿ ನೀತಿಯ ವಿರುದ್ಧ ಕಾಪುಪೇಟೆಯಲ್ಲಿ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಪ್ರತಿಭಟನಾ ಸಭೆ ನೆರವೇರಿತು. ಎಸ್ಡಿಪಿಐ ಕಾಪು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹನೀಫ್ ಮೂಳೂರು ಮಾತನಾಡಿ, ಕೇಂದ್ರದ ತೆರಿಗೆ ನೀತಿಯಿಂದ ಬಡವರು ತಿನ್ನುವ ಅನ್ನದ ಬಟ್ಟಲಿಗೆ ಟ್ಯಾಕ್ಸ್ ಹಾಕಿದ್ದಾರೆ. ಹಾಲು, ಮಜ್ಜಿಗೆ, ಮೊಸರಿಗೆ ಜಿಎಸ್‍ಟಿ ಹಾಕಿ ಜನರನ್ನು ಬದುಕದಂತೆ

ಕಾಪು : ರಸ್ತೆ ಹೊಂಡಕ್ಕೆ ಬಿದ್ದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಕಾರು

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಂಡ ಬಿದ್ದ ಪರಿಣಾಮ ಪದೇ ಪದೇ ಅಪಘಾತಗಳು ಸಂಭವಿಸುತ್ತಲೇ ಇದೆ. ಇಂದು ಹೊಂಡ ತಪ್ಪಿಸಲು ಹೋಗಿ ಕಾರೊಂದು ಡಿವೈಡರ್ ಏರಿ ನಿಂತ ಘಟನೆ ಕಾಪುವಿನಲ್ಲಿ ನಡೆದಿದೆ. ಕಾರೊಂದು ರಸ್ತೆಯ ಹೊಂಡಕ್ಕೆ ಬಿದ್ದು, ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಕಾರು ಚಾಲಕಿ ಅಪಾಯದಿಂದ ಪಾರಾದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಮೇಲಿದ್ದ ಹೊಂಡದಲ್ಲಿ ನೀರು ತುಂಬಿ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದೆ.

ಕಾಪು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ಮಾಹಿತಿ ಕಾರ್ಯಾಗಾರ

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುದರಂಗಡಿ ಪ. ಪೂ. ಕಾಲೇಜಿನಲ್ಲಿ ಪತ್ರಿಕಾ ಮಾಹಿತಿ ಕಾರ್ಯಗಾರ ನೆರವೇರಿತು.ಪತ್ರಿಕಾ ಕಾರ್ಯಗಾರವನ್ನು ಸಂಪನ್ಮೂಲ ವ್ಯಕ್ತಿ ಉಡುಪಿ ಎಂಜಿಎಂ ಕಾಲೇಜು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಸುಚಿತ್ ಕೋಟ್ಯಾನ್ ಉದ್ಘಾಟಿಸಿ ಮಾತನಾಡಿ, ಪತ್ರಕರ್ತರಾಗ ಬೇಕಾದವರು ಪ್ರಮುಖವಾಗಿ ಯಾವುದೇ ವಿಚಾರವನ್ನು ಸೂಕ್ಷ್ಮವಾಗಿ ಗಮನಿಸ ಬೇಕಾಗಿರುವುದು ಅತ್ಯಗತ್ಯವಾಗಿದೆ. ವೃತ್ತಿ ಬದುಕಿನಲ್ಲಿ ಪತ್ರಕರ್ತರಿಗಿರುವಷ್ಟು ಹೊಸತನ,