ಮಂಗಳೂರು: ಶಿಕ್ಷಣದಲ್ಲಿ ಭಾರತೀಯತೆಯನ್ನು ತರುವ ಉದ್ಧೇಶದಿಂದ ಮತ್ತು ಮಕ್ಕಳ ಕೇಂದ್ರಿತ ಶಿಕ್ಷಣವನ್ನು ನೀಡುವ ಧ್ಯೇಯದೊಂದಿಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಲಾಗಿದೆ. ಮಾತೃ ಭಾಷೆ ಮತ್ತು ಸ್ಥಾನೀಯ ಭಾಷೆಯಲ್ಲೇ ಶಿಕ್ಷಣ ನೀಡುವ ಮೂಲಕ ಮಕ್ಕಳಲ್ಲಿ ಅದಾಗಲೇ ಅಡಗಿರುವ ಸೂಪ್ತ ಪ್ರತಿಭೆಯ ಅನಾವರಣಗೊಳಿಸುವ ಪ್ರಯತ್ನವಾಗುತ್ತಿದೆ. ಸರ್ಕಾರದ ಈ ಪ್ರಯತ್ನಗಳ
ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಆತ್ಮವಿಶ್ವಾಸ ವೃದ್ಧಿ ಹಾಗೂ ವಿದ್ಯಾರ್ಥಿ ಸಮುದಾಯದಲ್ಲಿ ಭಾಷೆ, ಸಾಹಿತ್ಯ ಮತ್ತು ಸಂಸ್ಕøತಿ ಕುರಿತ ಅರಿವನ್ನು ವಿಸ್ತರಿಸುವ ಉದ್ದೇಶದಿಂದ ಕೇಶವ ಸ್ಮøತಿ ಸಂವರ್ಧನ ಸಮಿತಿಯು ಕನ್ನಡ ಶಾಲಾ ಮಕ್ಕಳ ಹಬ್ಬವನ್ನು ನವೆಂಬರ್ 19 ಮತ್ತು 20ರಂದು ನಗರದ ಸಂಘನಿಕೇತನದಲ್ಲಿ ಬೃಹತ್ ವಿದ್ಯಾರ್ಥಿ ಸಮಾವೇಶದ ಮೂಲಕ ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಗತಿ ಸಮಿತಿಯ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಹೇಳಿದರು. ಅವರು ನಗರದ ಓಶಿಯನ್