Home Posts tagged #mangalore (Page 16)

ಬಿಹಾರದಲ್ಲಿ ಕಟ್ಟುತ್ತಿದ್ದ ಸೇತುವೆ ಕುಸಿತ- ಒಂದು ಸಾವು, ಹಲವರಿಗೆ ಗಾಯ

ಬಿಹಾರದ ಸುಪೌಲ್ ಎಂಬಲ್ಲಿ ಕಟ್ಟುತ್ತಿದ್ದ ಸೇತುವೆ ಕುಸಿದುದರಿಂದ ಒಬ್ಬ ವ್ಯಕ್ತಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಇನ್ನೂ ಅವಶೇಷಗಳಡಿ ಹಲವರು ಸಿಕ್ಕಿ ಹಾಕಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.ಕೋಸಿ ನದಿಗೆ 984 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸೇತುವೆ ಕಟ್ಟಲಾಗುತ್ತಿದೆ. ಇತ್ತೀಚೆಗೆ ಬಾಗಲ್ಪುರದಲ್ಲೂ ಕಟ್ಟುತ್ತಿದ್ದ ಸೇತುವೆಯೊಂದು ಹೀಗೇ ಕುಸಿದು

ಮಂಗಳೂರು : ಮತದಾರರ ಜಾಗೃತಿ ಅಭಿಯಾನಕ್ಕೆ ಚಾಲನೆ

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶ್ವವಿದ್ಯಾನಿಲಯ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಗರದ ವಿಶ್ವವಿದ್ಯಾನಿಲಯ ಕಾಲೇಜು ಆವರಣದ ರವೀಂದ್ರ ಕಲಾಭನವನದಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಅಭಿಯಾನವನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಡಾ. ಆನಂದ್ ಕೆ.,

ಮೂಡುಬಿದಿರೆ ತಾ.ಪಂಗೆ ಅಧಿಕೃತ EO ಯಾರು?

ಮೂಡುಬಿದಿರೆ : ಇಲ್ಲಿನ ತಾಲೂಕು ಪಂಚಾಯತ್ ನಲ್ಲಿ ಇದೀಗ ಇಬ್ಬರು ಕಾರ್ಯನಿರ್ವಾಹಕ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದು ಅಧಿಕೃತ ಕಾರ್ಯನಿರ್ವಾಹಕ ಅಧಿಕಾರಿ ಯಾರೆಂಬುದು ಸಾರ್ವಜನಿಕರಲ್ಲಿ ಗೊಂದಲ ಮೂಡಿದೆ.ಶಿಕ್ಷಣ ಇಲಾಖೆಯಿಂದ ಕಳೆದ ಏಳು ತಿಂಗಳ ಹಿಂದೆ ಮೂಡುಬಿದಿರೆ ತಾ.ಪಂ.ಗೆ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದ ಲೊಕೇಶ್ ಸಿ.ಅವರನ್ನು ಚುನಾವಣಾ ಆದೇಶದ ಹಿನ್ನಲೆಯಲ್ಲಿ ವರ್ಗಾವಣೆ ಮಾಡಲಾಗಿದೆ. ಇಲ್ಲಿಗೆ ಕೋಲಾರದ ವೆಂಕಟಾಚಲಪತಿ ರಾಜ್

ಕೊಂಡೆವೂರು ಮಠದಲ್ಲಿ ನವಗ್ರಹ ಪ್ರತಿಷ್ಠೆ ಮತ್ತು ಅಷ್ಟೋತ್ತರ ಸಹಸ್ರ ನವಗ್ರಹ ಯಾಗ

ಶ್ರೀ ನಿತ್ಯಾನಂದ ಯೋಗಾಶ್ರಮ, ಕೊಂಡೆವೂರು ಮಠದಲ್ಲಿ ದಿ. 24.03.2024 ನೇ ರವಿವಾರ ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಗಳವರ ನೇತೃತ್ವದಲ್ಲಿ, ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕರಾದ ಬ್ರಹ್ಮ ಶ್ರೀ ಅನಂತಪದ್ಮನಾಭ ಆಸ್ರಣ್ಣರ ನಿರ್ದೇಶನದೊಂದಿಗೆ ಮತ್ತು ಬ್ರಹ್ಮ ಶ್ರೀ ಕಮಲಾದೇವೀ ಪ್ರಸಾದ ಆಸ್ರಣ್ಣರವರ ಆಚಾರ್ಯತ್ವದಲ್ಲಿ ನವಗ್ರಹ ಪ್ರತಿಷ್ಠೆ ಮತ್ತು ಲೋಕ ಕಲ್ಯಾಣಾರ್ಥವಾಗಿ ‘‘ಅಷ್ಟೋತ್ತರ ಸಹಸ್ರ ನವಗ್ರಹ ಯಾಗ’’ ವು ಜರಗಲಿರುವುದು.

ಬಂಟ್ವಾಳ: V4 ನ್ಯೂಸ್‌ನ ವರದಿಗಾರ ಸಂದೀಪ್ ಸಾಲ್ಯಾನ್‌ಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆ ಪ್ರಯುಕ್ತ ಮಾ.24ರಂದು ಬಂಗ್ಲೆ ಮೈದಾನದಲ್ಲಿ ಜರುಗಲಿರುವ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಪ್ರದಾನ ನಡೆಯಲಿದೆ. V4 ನ್ಯೂಸ್ ಬಂಟ್ವಾಳ ವರದಿಗಾರ ಸಂದೀಪ್ ಸಾಲ್ಯಾನ್ ಮಾಧ್ಯಮ ಕ್ಷೇತ್ರದ ಸಾಧನೆಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಉದ್ಯಮಿ ಅಬ್ದುಲ್ ಕುಂಞ, ಮಾಜಿ ಸಚಿವ

ಮಂಗಳೂರು : ಮಾ.23ರಂದು ಬೋಳೂರಿನ ಪಾದೆಮನೆ ಶ್ರೀ ಕಲ್ಲುರ್ಟಿ ಕಲ್ಕುಡ ಆದಿ ದೈವಸ್ಥಾನ ದಲ್ಲಿ ವರ್ಷಾವಧಿ ನೇಮೋತ್ಸವ

ಮಂಗಳೂರಿನ ಬೋಳೂರಿನ ಪಾದೆಮನೆ ಶ್ರೀ ಕಲ್ಲುರ್ಟಿ-ಕಲ್ಕುಡ ಆದಿ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವವು ಮಾರ್ಚ್ 23ರಂದು ಧಾರ್ಮಿಕ ವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಮಂಗಳೂರು ತಾಲೂಕಿನಲ್ಲಿ ಕಲ್ಲುರ್ಟಿ ದೈವಕ್ಕೆ ಆದಿ ಸ್ಥಳವಾದ ಪಾದೆಮನೆಯಲ್ಲಿ ದಿವಂಗತ ಸೋಮಪ್ಪ ಪೂಜಾರಿ ಅವರ ಮನೆಯಲ್ಲಿ ಉಗಣಬೈದೆದಿ ಕಾಲದಿಂದ ನಂಬಿಕೊಂಡ ಬಂದಂತಹ ಮಹಾ ಕಟಾಕ್ಷದ ಶ್ರೀ ಕಲ್ಲುರ್ಟಿ ಕಲ್ಕುಡ ಮತ್ತು ಗುಳಿಗ ಪಂಜಿರ್ಲಿ ಹಾಗೂ ರಾಹು ದೈವಗಳ ವರ್ಷಾವಧಿ ನೇಮೋತ್ಸವ

ಮೂಡುಬಿದಿರೆ : ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಮಾಜಿ ಅಧ್ಯಕ್ಷೆ ಪ್ರಭಾವತಿ ಆಚಾರ್ಯ ನಿಧನ

ಮೂಡುಬಿದಿರೆ : ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಮಾಜಿ ಅಧ್ಯಕ್ಷೆ, ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಪುತ್ತಿಗೆಮನೆ ಎಂ. ಗೋಪಾಲ ಆಚಾರ್ಯರ ಪತ್ನಿ ಪ್ರಭಾವತಿ ಜಿ. ಆಚಾರ್ಯ (75) ಅವರು ಬುಧವಾರ ಮುಂಜಾನೆ ನಿಧನ ಹೊಂದಿದರು.ಮೂಡುಬಿದಿರೆ ಇನ್ನರ್ ವೀಲ್ ಕ್ಲಬ್ ನಲ್ಲಿ ಸಕ್ರಿಯರಾಗಿದ್ದಾಗ ಪಲ್ಸ್ ಪೋಲಿಯೋ ಕುರಿತಾದ ಪ್ರಹಸನ ಸಹಿತ ಮನೆ ಮನೆಗೆ ಮಾಹಿತಿ ನೀಡುವ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.ಆನೆಗುಡ್ಡೆ ಚರ್ಚ್ ನಲ್ಲಿ ನಡೆದ

ಪಡುಬಿದ್ರಿಯಲ್ಲಿ ಆತಂಕ ಸೃಷ್ಟಿಸಿದ ಬೆಂಕಿ ಅನಾಹುತ

ದೇವಳದ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರ ಇಕ್ಕೆಲಲ್ಲಿ ಬೃಹತ್ತಾಗಿ ಕಾಣಿಸಿಕೊಂಡ ಬೆಂಕಿ ಕೆಲ ಹೊತ್ತು ಆತಂಕ ಸೃಷ್ಟಿಸಿದೆ. ಜಿಯೋ ನೆಟ್‌ವರ್ಕ್ ಕಂಪನಿಯು ಬಳಕೆ ಮಾಡಿ ಹೆಚ್ಚುವರಿಯಾದ ಕೇಬಲ್ ಬಂಡಲನ್ನು ರಸ್ತೆಯಂಚಿನಲ್ಲಿ ಉಳಿಸಿ ಹೋಗಿದ್ದು, ಆ ಕೇಬಲ್ ರಾಶಿಗೆ ಬೆಂಕಿ ತಗುಲಿ ಪರಿಸವೆಲ್ಲಾ ಪಸರಿಸಿದೆ. ತೀರ ಸಮೀಪದಲ್ಲೇ ವಾಸದ ಮನೆಗಳಿದ್ದು ಆತಂಕ ಸೃಷ್ಟಿಯಾಗಿದ್ದು, ಪಡುಬಿದ್ರಿ ಪೊಲೀಸರು, ಗ್ರಾ.ಪಂ. ಪ್ರತಿನಿಧಿಗಳು, ಹೆಜಮಾಡಿ ಟೋಲ್ ಸಿಬ್ಬಂದಿಗಳು ಹಾಗೂ

ಉಳ್ಳಾಲ : ಲಾರಿ ನಂಬರ್ ಪ್ಲೇಟ್ ಗ್ರೀಸ್ ಹಚ್ಚಿ ಮರಳು ಸಾಗಾಟ

ಮಂಗಳೂರು : ಲಾರಿಗಳ ನಂಬರ್ ಪ್ಲೇಟ್‌ಗೆ ಗ್ರೀಸ್ ಹಚ್ಚಿ ಹಾಗೂ ಸ್ಟಿಕ್ಕರ್ ಬಳಸಿ ಮರೆಮಾಚಿಸಿ ರಾತ್ರಿಯಿಡೀ ವ್ಯಾಪಕವಾಗಿ ಮರಳು ಸಾಗಾಟವನ್ನು ಕೊಣಾಜೆ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆಗಳ ಸರಹದ್ದಿನಲ್ಲಿ ಪೊಲೀಸರ ಸಮ್ಮುಖದಲ್ಲೇ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ನಿನ್ನೆ ತಡರಾತ್ರಿ ಅಡ್ಯಾರ್ ಕಣ್ಣೂರು ಸಮೀಪ ನಂಬರ್ ಪ್ಲೇಟ್ ಮಾಸಿದ ಮರಳು ಸಾಗಾಟದ ಲಾರಿ ಡಿವೈಡರಿಗೆ ಢಿಕ್ಕಿ ಹೊಡೆದ ಪರಿಣಾಮ ಸಾರ್ವಜನಿಕರು ಲಾರಿಗಳನ್ನು ತಡೆಹಿಡಿದು ನಡೆಸಿದ

ಮೂಡಬಿದಿರೆ : ಮಾ. 23ರಂದು ದೊಡ್ಡಮನೆ ರಸ್ತೆಯಲ್ಲಿ 39ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ

ಸಾರ್ವಜನಿಕ ಶ್ರೀ ಶನಿಪೂಜಾ ಸಮಿತಿ ದೊಡ್ಡಮನೆ ರಸ್ತೆ ಮೂಡಬಿದಿರೆ ಇದರ ಆಶ್ರಯದಲ್ಲಿ 39ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯು ಮಾರ್ಚ್ 23ರಂದು ದೊಡ್ಡಮನೆ ರಸ್ತೆಯ ಅಶ್ವತ್ಥಕಟ್ಟೆಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಮಾರೂರು ಖಂಡಿಗ ಶ್ರೀಯುತ ರಾಮದಾಸ ಅಸ್ರಣ್ಣ ಅವರ ನೇತೃತ್ವದಲ್ಲಿ ಶನಿಪೂಜೆಯು ನಡೆಯಲಿದ್ದು, ಬೆಳಿಗ್ಗೆ 9 ಗಂಟೆಗೆ ಕಟ್ಟೆಯಲ್ಲಿ ನಾಗಬನಕ್ಕೆ ನಾಗತಂಬಿಲ, ಸಂಜೆ 6 ಗಂಟೆಗೆ ಕಲಶ ಪ್ರತಿಷ್ಠೆ, ಸಂಜೆ 6.30ಕ್ಕೆ ಶನಿಪೂಜೆ ಪ್ರಾರಂಭ, ರಾತ್ರಿ