Home Posts tagged #mangalore (Page 231)

ಪುತ್ತೂರು: ಗೃಹರಕ್ಷಕದಳ ಕಛೇರಿ ಕಟ್ಟಡಕ್ಕೆ ಸರಕಾರದಿಂದ ಜಾಗ ಮಂಜೂರು

  ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಪುತ್ತೂರು ಘಟಕವು ಸುಮಾರು 50 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಹೊಸ ಕಛೇರಿ ನಿರ್ಮಿಸುವ ಸಲುವಾಗಿ ಸರಕಾರದಿಂದ 10 ಸೆಂಟ್ಸ್ ಖಾಲಿ ಜಾಗ ಕೊಟೆಚಾ ಸಭಾಂಗಣದ ಸಮೀಪದ ಶಿವನಗರದಲ್ಲಿ ಮಂಜೂರಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಪುತ್ತೂರು ಘಟಕಕ್ಕೆ ಭೇಟಿ ನೀಡಿ ಹೊಸತಾಗಿ

ಭಾರತದ 508 ರೈಲು ನಿಲ್ದಾಣ ಪುನರಾಭಿವೃದ್ಧಿ: ಪ್ರಧಾನಿ ಮೋದಿ ಚಾಲನೆ

ಅಮೃತ್ ಭಾರತ್ ಸ್ಟೇಷನ್ ಸ್ಕೀಮ್ ಅಡಿಯಲ್ಲಿ ಭಾರತದಾದ್ಯಂತ 508 ರೈಲು ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಅಡಿಪಾಯ ಹಾಕಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅವರು ಕಾರ್ಯಕ್ರಮ ನಡೆಸಿಕೊಟ್ಟರು.   ಕರ್ನಾಟಕದ ಮಂಗಳೂರು, ಅರಸೀಕೆರೆ, ಹರಿಹರ ಸೇರಿ 15 ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. “ಅಭಿವೃದ್ಧಿಯ ಗುರಿಯತ್ತ ಸಾಗುತ್ತಿರುವ ಭಾರತವು ತನ್ನ ಅಮೃತ ಕಾಲದ ಆರಂಭದಲ್ಲಿದೆ. ಹೊಸ ಶಕ್ತಿ,

ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಆ.26ರಂದು ಉದ್ಯೋಗ ಮೇಳ

ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಮಂಗಳೂರು, ಬಿಇಡಬ್ಲ್ಯುಎಸ್ ಯುವವಾಹಿನಿ ಕೇಂದ್ರ ಸಮಿತಿ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳವು ಆಗಸ್ಟ್ ೨೬ರಂದು ನಡೆಯಲಿದೆ.ಮಂಗಳೂರಿನ ಮಣ್ಣಗುಡ್ಡೆಯಲ್ಲಿರುವ ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಆಗಸ್ಟ್ 26ರಂದು ನಡೆಯಲಿದೆ. ದೇಶದ ವಿವಿಧ ಕಡೆಗಳಿಂದ ಪ್ರತಿಷ್ಠಿತ ಕಂಪೆನಿಗಳು ಈ ಮೇಳದಲ್ಲಿ ಭಾಗವಹಿಸಲಿದೆ. ಉದ್ಯೋಗ ಮೇಳವನ್ನು ಬಿಎಸ್‌ಡಬ್ಲ್ಯುಎಸ್ ಮಂಗಳೂರಿನ ಅಧ್ಯಕ್ಷರಾದ ಅಶೋಕ್ ಕುಮಾರ್ ಉದ್ಘಾಟಿಸಲಿದ್ದಾರೆ. ಯುವವಾಹಿನಿ

ಮೂಡುಬಿದಿರೆ : ಆಳ್ವಾಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಭತ್ತದ ನಾಟಿ

ಮೂಡುಬಿದಿರೆ: ಸಾಂಪ್ರಾದಾಯಿಕ ಕೃಷಿ ಪದ್ಧತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಳ್ವಾಸ್ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಮಿಜಾರು ಇಲ್ಲಿನ ತುಳು ಸಂಘವು ಸಾಂಪ್ರಾದಾಯಿಕ ಬತ್ತದ ನಾಟಿ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಿತು.   ಡಾ.ಪ್ರಮೀಳ ಕೊಳಕೆ ಮತ್ತು ಪ್ರೊ.ಪ್ರಮೋದ್ ಕಾರಂತ್ ಅವರ ನೇತೃತ್ವದಲ್ಲಿ ಎಡಪದವು ಕಣ್ಣೂರಿ ಮಾಧವ ಗೌಡ ಮತ್ತು ವಾಮನ ಗೌಡ ಅವರ ಗದ್ದೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ  ತುಳು ಸಂಘದ ಸದಸ್ಯರು ಬಹಳ

ಮೂಡುಬಿದರೆ: ಮಣಿಪುರ ಘಟನೆಯನ್ನು ಖಂಡಿಸಿ ಪ್ರತಿಭಟನೆ

  ಮೂಡುಬಿದಿರೆ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸೆಯನ್ನು  ಖಂಡಿಸಿ ಮೂಡುಬಿದಿರೆ ತಾಲೂಕಿನ ಶಿರ್ತಾಡಿ ಮೌಂಟ್ ಕಾರ್ಮೆಲ್ ಚರ್ಚ್ ಹಾಗೂ ಸೌಹಾರ್ದ ಫ್ರೆಂಡ್ಸ್ ಶಿರ್ತಾಡಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ಶಿರ್ತಾಡಿ ಬಸ್ ಸ್ಟ್ಯಾಂಡ್ ಆವರಣದಲ್ಲಿ ಪ್ರತಿಭಟನಾ ಸಭೆ ನಡೆಯಿತು.  ಮೂಡುಬಿದಿರೆ ವಲಯ ಕಥೋಲಿಕ್ ಸಭಾದ ರಾಜಕೀಯ ಸಂಚಾಲಕ ರಾಜೇಶ್ ಕಡಲಕೆರೆ ದಿಕ್ಸೂಚಿ ಭಾಷಣ ಮಾಡಿ ನಾವು ಬೇರೆ ಬೇರೆ ತಂಡಗಳಾಗುವ ಹೊತ್ತಲ್ಲ ಇದು ಎಲ್ಲರೂ ಒಂದಾಗುವ ಹೊತ್ತು. ಯಾಕೆಂದರೆ

  ಸಿಎಂ ಸಿದ್ದರಾಮಯ್ಯ ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 1ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.   ಆಗಸ್ಟ್ 1ರಂದು ಬೆಳಿಗ್ಗೆ 11ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಉಡುಪಿಗೆ ತೆರಳುವರು. 12.30ಕ್ಕೆ ಉಡುಪಿ ಜಿಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಸಂಜೆ 4.15ಕ್ಕೆ ದ.ಕ. ಜಿಲ್ಲೆಯ ಪ್ರಗತಿ ಪರಿಶೀಲನೆಯನ್ನು ದ.ಕ.ಜಿಪಂ ಸಭಾಂಗಣದಲ್ಲಿ ನಡೆಸಲಿದ್ದಾರೆ. ರಾತ್ರಿ 9.50ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ

V4 ನ್ಯೂಸ್ ಸನ್ ಪ್ರೀಮಿಯಮ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ 4: ಸಂತ ಆಲೋಶಿಯಸ್ ಕಾಲೇಜಿನಲ್ಲಿ ಚಾಲನೆ

V4 ನ್ಯೂಸ್ ಸನ್ ಪ್ರೀಮಿಯಮ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ 4 ಗೆ ಮಂಗಳೂರಿನ ಸಂತ ಆಲೋಶಿಯಸ್ ಕಾಲೇಜು ಸಭಾಂಗಣದಲ್ಲಿ ಸಂಭ್ರಮದ ಚಾಲನೆ ದೊರೆತಿದೆ.    V4 ನ್ಯೂಸ್ ಮತ್ತು ಮಂಗಳೂರಿನ ಸಂತ ಆಲೋಸಿಯಸ್ ಕಾಲೇಜಿನ ಪತ್ತಿಕೋಧ್ಯಮ, ಸಮೂಹ ಸಂವಹನ ಹಾಗೂ ದೃಶ್ಯ ಸಂವಹನ ವಿಭಾಗದ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪತ್ರಿಕಾ ಕ್ಷೇತ್ರದ ಸಾಧಕರಾದ ಮನೋಹರ್ ಪ್ರಸಾದ್, ಕ್ರೀಡಾಕ್ಷೇತ್ರದ ಸಾಧಕರಾದ ದಿನೇಶ್ ಕುಂದರ್, ವ್ಯಂಗಚಿತ್ರ ಸಾಧಕರಾದ

ಮಣಿಪುರ ಹಿಂಸಾಚಾರ: ಕೆಥೋಲಿಕ್ ಸಭಾದಿಂದ ಮೌನ ಪ್ರತಿಭಟನೆ

ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ಮಂಗಳೂರು ಧರ್ಮಕ್ಷೇತ್ರ ವತಿಯಿಂದ ಮಣಿಪುರ ರಾಜ್ಯದಲ್ಲಿ ಭುಗಿಲೆದ್ದ ಹಿಂಸಾಚಾರ ಖಂಡಿಸಿ ಕೆಥೋಲಿಕ್ ಸಭಾ ಖಂಡನೆ ವ್ಯಕ್ತಪಡಿಸಿದರು.   124 ಚರ್ಚ್ ಗಳಲ್ಲಿಯೂ ಮೌನ ಪ್ರತಿಭಟನೆ ನಡೆಸಿದರು. ಸೈಂಟ್ ಪೌಲ್ ಚರ್ಚ್ ದೇಲಂತಬೆಟ್ಟು, ಅವರ್ ಲೇಡಿ ಆಫ್ ಫಾತಿಮಾ ಚರ್ಚ್ ಮತ್ತು ಮದರ್ ಆಫ್ ಗಾಡ್ ಚರ್ಚ್ ಮೊಗರ್ನಾಡು ಹಾಗೂ ವಿವಿಧ ಚರ್ಚ್ಗಳ ಮುಂಭಾಗದಲ್ಲಿ ಕ್ರೈಸ್ತ ಬಾಂಧವರು ಮೌನ ಪ್ರತಿಭಟನೆ ನಡೆಸಿದರು.  

ಕೊಣಾಜೆ ಗ್ರಾ.ಪಂ ಮಾಜಿ ಅಧ್ಯಕ್ಷ ದೇವಪ್ಪ ಗಟ್ಟಿ ನಿಧನ

ಉಳ್ಳಾಲ: ಕೊಣಾಜೆ ಗ್ರಾಮ ಪಂಚಾಯತ್‍ನ ಮಾಜಿ ಅಧ್ಯಕ್ಷ ಬೆಳ್ಮ ಕಟ್ಟಪುಣಿ ನಿವಾಸಿ ದೇವಪ್ಪ ಗಟ್ಟಿ (90) ಅಲ್ಪಕಾಲದ ಅಸೌಖ್ಯದಿಂದ ಜು.22ರಂದು ಶನಿವಾರ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರಿಯರು, ಮೂವರು ಪುತ್ರರನ್ನು ಅಗಲಿದ್ದಾರೆ. ಸೋಮೇಶ್ವರ ಸೋಮನಾಥ ದೇವಸ್ಥಾನದ ಬೃಹ್ಮಕಲಶೋತ್ಸವ, ಸಮಿತಿ ಉಪಾಧ್ಯಕ್ಷರಾಗಿ, ಗಟ್ಟಿ ಸಮಾಜ ಶ್ರೀ ಸೋಮನಾಥ ಸೇವಾ ಸಮಿತಿ ಅಧ್ಯಕ್ಷರಾಗಿ, ಮುಲಾರ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದ ಅಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ,

ಉಳ್ಳಾಲ : ಮಟ್ಕಾ ಅಡ್ಡೆಗೆ ದಾಳಿ: ಐವರ ಬಂಧನ 

ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಓಳಪೇಟೆ ಬಳಿ ಖಾಸಗಿ ಜಾಗದಲ್ಲಿ ಮಟ್ಕಾ ಅಡ್ಡೆಗೆ ದಾಳಿ ನಡೆಸಿದ ಉಳ್ಳಾಲ ಠಾಣಾ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಲ್ಯಾನ್ಸಿ ವೇಗಸ್, ನವಾಝ್ , ಸತೀಶ್ ಗಟ್ಟಿ, ನಾಸೀರ್ ಮತ್ತು ಮಧು ಯಾನೆ ಮನು ಎಂದು ಗುರುತಿಸಲಾಗಿದೆ. ಬಂಧಿತರಿಂದ 7040ರೂ .ನಗದು, ಐದು ಮೊಬೈಲ್ ಹಾಗೂ ಜೂಜಾಟಕ್ಕೆ ಬಳಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉಳ್ಳಾಲದಲ್ಲಿ ಮಟ್ಕಾ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಆಯುಕ್ತ