Home Posts tagged #mangalore (Page 240)

ಕಲ್ಕೂರ ಪ್ರತಿಷ್ಠಾನದಿಂದ ಕಾರಂತ ಹುಟ್ಟುಹಬ್ಬ:ಡಾ. ಸಂಧ್ಯಾ ಎಸ್. ಪೈ ಅವರಿಗೆ ಕಾರಂತ ಪ್ರಶಸ್ತಿ ಪ್ರದಾನ

ಕಲ್ಕೂರ ಪ್ರತಿಷ್ಟಾನವು ವರ್ಷಂಪ್ರತಿಯಂತೆ ಅಕ್ಟೋಬರ್ 10ರಂದು ಕಡಲತೀರದ ಭಾರ್ಗವರೆಂದೇ ಪ್ರಸಿದ್ಧರಾಗಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬವನ್ನು ಆಚರಿಸಲಿದ್ದೇವೆ. ಕೊಡಿಯಾಲ್ ಗುತ್ತುವಿನ ಪತ್ತುಮುಡಿ ಸಭಾ ಭವನದಲ್ಲಿ ಕಾರ್ಯಕ್ರಮ ಜರುಗಲಿದ್ದು, ಈ ವರ್ಷದ ಕಾರಂತ ಪ್ರಶಸ್ತಿಯನ್ನು ಖ್ಯಾತ ವಾರಪತ್ರಿಕೆ ತರಂಗದ ವ್ಯವಸ್ಥಾಪಕ

ಭಾರತದ ರಾಯಭಾರಿ ಪಿಯೂಷ್ ಶ್ರೀವಾಸ್ತವ ಅವರನ್ನು ಭೇಟಿಯಾದ ಕನ್ನಡ ಸಂಘ ಬಹರೈನ್ ನಿಯೋಗದ ಸದಸ್ಯರು

ಕನ್ನಡ ಸಂಘ ಬಹ್ರೈನ್‌ನ ನಿಯೋಗದ ಸದಸ್ಯರು ಇಂದು ಬಹ್ರೈನ್‌ನಲ್ಲಿರುವ ಭಾರತದ ರಾಯಭಾರಿ ಪಿಯೂಷ್ ಶ್ರೀವಾಸ್ತವ ಅವರನ್ನು ಭೇಟಿ ಮಾಡಿದರು. ನಿಯೋಗದಲ್ಲಿ ಸಂಘದ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕಿರಣ್ ಉಪಾಧ್ಯಾಯ, ಮಾಜಿ ಅಧ್ಯಕ್ಷರು ಮತ್ತು ಕನ್ನಡ ಭವನ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಆಸ್ಟಿನ್ ಸಂತೋಷ್, ಕಟ್ಟಡ ನಿಧಿ ಸಂಗ್ರಹಣೆ ಸಮಿತಿಯ ಅಧ್ಯಕ್ಷರಾದ ಅಮರನಾಥ್ ರೈ ಇದ್ದರು. ಭೇಟಿಯ ಸಂದರ್ಭದಲ್ಲಿ ನೂತನ ಕಟ್ಟಡ ನಿರ್ಮಾಣ, ಕರ್ನಾಟಕ

ನಿಟ್ಟೆ ಡಾ. ಶಂಕರ್ ಅಡ್ಯಂತಾಯ ಸ್ಮಾರಕ ಕಾಲೇಜು: ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಉಳ್ಳಾಲ: ಮಂಗಳೂರಿನ ನಂತೂರಿನಲ್ಲಿ ಕಾರ್ಯಚರಿಸುತ್ತಿರುವ ನಿಟ್ಟೆ ಡಾ. ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಸೋಮೇಶ್ವರ ಕಡಲ ಕಿನಾರೆಯ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಶಾಸಕ ಯು.ಟಿ ಖಾದರ್ ಸ್ವಚ್ಛ ಭಾರತ ಅಭಿಯಾನ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕಾಲೇಜಿನಲ್ಲಿ ಕಲಿತ ಪಾಠಗಳು ಆತನ ವ್ಯಕ್ತಿತ್ವ ರೂಪಿಸುತ್ತದೆ. ಅಲ್ಲಿ ಪಡೆದ ಶಿಕ್ಷಣವೇ ಅವರ ಮುಂದಿನ ಸಾಮಾಜಿಕ ಕಾರ್ಯಗಳಿಗೆ ಪ್ರೇರಣೆಯಾಗಬಲ್ಲದು.

ತುಳು ಭಾಷೆಗೆ ಮಾನ್ಯತೆ ಸಿಗಬೇಕೆಂದು ಪ್ರತಿಭಟನೆ ಮಾಡದಂತೆ ನೋಟಿಸ್ ಬೇಸರ ತಂದಿದೆ : ಯೋಗೀಶ್ ಶೆಟ್ಟಿ ಜೆಪ್ಪು

ದಕ್ಷಿಣ ಕನ್ನಡ ಜಿಲ್ಲೆಯ ತುಳು ಅಧಿಕೃತ ಭಾಷೆ ಪೊರಂಬಾಟ್ ಸಮಿತಿ ವತಿಯಿಂದ ತುಳು ಭಾಷೆಗೆ ಮಾನ್ಯತೆ ಸಿಗಬೇಕೆಂದು ಪ್ರತಿಭಟನೆ ಹಮ್ಮಿಕೊಂಡಿದ್ದೇವು. ಆದರೆ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದರಿಂದ ಪ್ರತಿಭಟನೆಯನ್ನು ರದ್ದುಮಾಡಬೇಕಿತ್ತು. ರಾಜಕೀಯ ಕಾರ್ಯಕ್ರಮ, ರಾಜಕೀಯ ಪ್ರತಿಭಟನೆಗೆ ಅವಕಾಶ ಕೊಡುತ್ತಾರೆ. ಆದರೆ ನಮ್ಮ ತುಳುವರ ಶಾಂತಿಯುತ ಪ್ರತಿಭಟನೆಗೆ ಯಾಕೆ ಅವಕಾಶ ನೀಡಿಲ್ಲ ಎಂದು ಯೋಗೀಶ್ ಶೆಟ್ಟಿ ಜೆಪ್ಪು ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿ

ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ

ಮಂಗಳೂರಿನ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವವು ಅಕ್ಟೋಬರ್ 7 ರಿಂದ ಅಕ್ಟೋಬರ್ 16ರ ವರೆಗೆ ನಡೆಯಲಿದೆ. ನವರಾತ್ರಿಯ ಸಂದರ್ಭ ಪ್ರತಿದಿನ ವಿಶೇಷ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಜರುಗಲಿರುವುದು.  ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,ಸುದ್ದಿಗೋಷ್ಟಿಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ಪಿ ರಾಮನಾಥ ಹೆಗ್ಡೆ ರಘುರಾಮ ಉಪಾದ್ಯಾಯ, ಅರುಣ ಐತಾಳ್ ರಾಮನಾಯ್ಕ ಉಪಸ್ಥಿತರಿದ್ದರು.

ಅಮೆಝಾನ್ ಲೀಗಲ್ ಫೀ ಪ್ರಕರಣ: ಪ್ರಧಾನಿ ಮೋದಿ ಸ್ಪಷ್ಟನೆ ನೀಡಲಿ: ಡಾ. ಅಮೀ ಯಜ್ಞಿಕ್

 ಇ ಕಾಮರ್ಸ್ ಸಂಸ್ಥೆಯಾದ ಅಮೆಝಾನ್‌ನ ಕಾನೂನು ಸಲಹೆಗಾರರು ಭಾರತದ ಸರಕಾರದ ಅಧಿಕಾರಿಗಳಿಗೆ ನೀಡಿದ್ದಾರೆನ್ನುವ ೮,೫೪೬ ಕೋಟಿ ರೂ.ಗಳು ಲಂಚ ಪ್ರಕರಣವಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸ್ಪಷ್ಟ ಪಡಿಸಬೇಕು ಎಂದು ಎಐಸಿಸಿ ವಕ್ತಾರೆ, ರಾಜ್ಯಸಭಾ ಸದಸ್ಯೆ ಡಾ. ಅಮೀ ಯಜ್ಞಿಕ್ ಆಗ್ರಹಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಇದೊಂದು ಬಹುದೊಡ್ಡ ಹಗರಣವಾಗಿದೆ. ಈ ಹಣ ಎಲ್ಲಿಗೆ ಹೋಗುತ್ತಿದೆ.

ಆಜಾದಿ ಕಾ ಅಮೃತ್ ಮಹೋತ್ಸವ ಹಿನ್ನೆಲೆ: ವಿಂಟೇಜ್ ಕಾರು, ಸೈಕಲ್ ರ್‍ಯಾಲಿಗೆ ಚಾಲನೆ

ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಪ್ರಯುಕ್ತ ವಿಂಟೇಜ್ ಕಾರು, ಸೈಕಲ್ ರ್‍ಯಾಲಿಗೆ ಚಾಲನೆ ನೀಡಲಾಯಿತು. ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ರ್‍ಯಾಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಚಾಲನೆ ನೀಡಿದರು. ಮ್ಯಾರಥಾನ್ ಮೂಲಕ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪು ಮಾಡಲು ಇದೊಂದು ಉತ್ತಮ ಕಾರ್ಯಕ್ರಮ. ಬಹಳ ಅದ್ಭುತವಾಗಿ ಸ್ಮಾರ್ಟ್ ಸಿಟಿಯಿಂದ

ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ವಿಲೇವಾರಿಗೆ ಕ್ರಮ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು:  ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಕೇಂದ್ರದ ಯುವಜನ ಹಾಗೂ ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ಅಕ್ಟೋಬರ್ ಮಾಹೆಯಾದ್ಯಂತ ಸ್ವಚ್ಛ ಭಾರತ (ಕ್ಲೀನ್ ಇಂಡಿಯಾ) ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ, ಈ ಚಟುವಟಿಕೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ಅದರ ವಿಲೇವಾರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ  ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು. ಅವರು

ಸುರತ್ಕಲ್ ನಲ್ಲಿ ನಡೆದ ವೈದ್ಯ ವಿದ್ಯಾರ್ಥಿಗಳ ಮೇಲಿನ ದಾಳಿ ಪ್ರಕರಣಕ್ಕೆ ಶಾಸಕ ಯು.ಟಿ. ಖಾದರ್ ಖಂಡನೆ

ಮಂಗಳೂರು:ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ವೈದ್ಯ ವಿದ್ಯಾರ್ಥಿಗಳ ಮೇಲಿನ ದಾಳಿ ಪ್ರಕರಣವನ್ನು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಖಂಡಿಸಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲಿ ಯಾವನೋ ಒಬ್ಬ ರೌಡಿ ಹೊಡಿತಾನೆ ಅಂದರೆ ಏನೆನ್ನಬೇಕು..? ಹಾಡಹಗಲೇ ಇಂತಹ ಘಟನೆ ನಡೆದರೆ ಏನೆನ್ನಬೇಕು. ಪೊಲೀಸ್ ಇಲಾಖೆ ಧೈರ್ಯ, ರಕ್ಷಣೆ ಕೊಡುವ ಕೆಲಸ

ಮಂಗಳೂರಿನಲ್ಲಿ ಮತ್ತೆ ಅನೈತಿಕ ಪೊಲೀಸ್‍ಗಿರಿ ಪ್ರಕರಣ

ಮಂಗಳೂರಿನಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿಯ ಪ್ರಕರಣ ಬೆಳಕಿಗೆ ಬಂದಿದ್ದು, . ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಹೋಗಿ ವಾಪಾಸ್ ಬರುವಾಗ ಅವರ ವಾಹನವನ್ನು ತಡೆದು ಗುಂಪೊಂದು ಅನೈತಿಕಗಿರಿ ತೋರಿಸಿದೆ ಎಂದು ಆರೋಪಿಸಲಾಗಿದೆ. ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿ ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಹೋಗಿ ವಾಪಾಸ್ ಬರುವಾಗ ಅವರ ವಾಹನವನ್ನು ತಡೆದು ಗುಂಪೊಂದು