Home Posts tagged #mangalore (Page 248)

ಚೌತಿ ಯ ಗಣಪನನ್ನೂ ಕಾಡಿದ ಜಿ ಎಸ್‍ ಟಿ : ತತ್ತರಿಸಿದ ಗಣಪತಿ ವಿಗ್ರಹ ತಯಾರಾಕರು

ದೇಶೆದೆಲ್ಲೆಡೆ ಚೌತಿ ಹಬ್ಬದ ವಿಗ್ರಹ ತಯಾರಿ ಈಗಾಗಲೇ ಆರಂಭಗೊಂಡಿದೆ. ಈ ನಡುವೆ ಗಣೇಶನ ಮೂರ್ತಿಗೆ ಫೈನಲ್ ಟಚ್ ಕೊಡಲಾಗುತ್ತಿದೆ. ಇನ್ನು ಮಂಗಳೂರಿನಲ್ಲೂ ಗಣೇಶ ಹಬ್ಬದ ಪ್ರಯುಕ್ತ ಪೂರ್ವತಯಾರಿ ಜೋರಾಗಿದ್ದು, ಕಳೆದ 92 ವರ್ಷದಿಂದ ಪಾರಂಪರಿಕವಾಗಿ ಗಣೇಶ ವಿಗ್ರಹ ತಯಾರಿ ಮಾಡುತ್ತಿರೋ ಸಹೋದರರ ಕೆಲಸ ಎಲ್ಲರ ಗಮನಸೆಳೆದಿದೆ. ಹಾಗಾದ್ರೆ ಇದು ಎಲ್ಲಿ ಅಂತೀರಾ ಇಲ್ಲಿದೆ.

ಆಗಸ್ಟ್ 14ರಂದು ಲೋಕ ಅದಾಲತ್

ಜಿಲ್ಲೆಯಾದ್ಯಂತ ಆಗಸ್ಟ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಕಕ್ಷಿದಾರರಿಗೆ ರಾಜಿ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿರುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪೃಥ್ವಿರಾಜ್ ವರ್ಣೇಕರ್ ತಿಳಿಸಿದರು. ಅವರು ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಲೋಕ ಅದಾಲತ್‍ನಲ್ಲಿ ರಾಜಿ ಮೂಲಕ ಪರಿಹರಿಸಲಾದ ಪ್ರಕರಣಗಳಲ್ಲಿ ಮೇಲ್ಮನವಿಗೆ

ಕರಾವಳಿಯ ಮೂವರಿಗೆ ಸಚಿವ ಸ್ಥಾನ

ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ29 ಶಾಸಕರು ಸೇರ್ಪಡೆಗೊಂಡಿದ್ದು, ರಾಜಭವನದ ಗಾಜಿನ ಮನೆಯಲ್ಲಿ ಪದಗ್ರಹಣ ಮಾಡಿದರು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಮೊದಲಿಗೆ ಗೋವಿಂದ ಕಾರಜೋಳ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಳಿಕ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಬಿ.ಶ್ರೀರಾಮುಲು, ವಿ.ಸೋಮಣ್ಣ, ಉಮೇಶ್ ಕತ್ತಿ, ಎಸ್. ಅಂಗಾರ, ಜೆ.ಸಿ.ಮಾಧುಸ್ವಾಮಿ, ಅರಗಜ್ಞಾನೇಂದ್ರ, ಡಾ. ಅಶ್ವಥ ನಾರಾಯಣ, ಸಿ.ಸಿ.ಪಾಟೀಲ್, ಆನಂದ್ ಸಿಂಗ್, ಕೋಟಾ

ಕೂಡಲೇ ಬಿಸಿಯೂಟ ನೌಕರರ ಬಾಕಿ ವೇತನ ನೀಡಬೇಕು: ಮಾಲಿನಿ ಮೇಸ್ತಾ

ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬಿಸಿಯೂಟ ನೌಕರರ ಸಮ್ಮೇಳನವು ಜರಗಿತು. ಸಮ್ಮೇಳನವನ್ನು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತಾರವರು ಉದ್ಘಾಟಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣ ರಂಗಕ್ಕೆ ಆದ್ಯತೆ ನೀಡುತ್ತಿಲ್ಲ. ಖಾಸಗೀಕರಣವೇ ಸರ್ಕಾರದ ವೇದ ವಾಕ್ಯ ವಾಗಿದೆ. ಸರಕಾರದ ಕೋರೋನಾ ಲಾಕ್ ಡೌನ್ ಮಕ್ಕಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರಿದೆ. ಬಿಸಿಯೂಟ ತಯಾರಿಸಿ ಬಡಿಸುವ ಕಾರ್ಮಿಕರಿಗೆ ಬಾಕಿ

ಮಂಗಳಮುಖಿಯರಿಗೆ ಹಲ್ಲೆ ನಡೆಸಿದ್ದ ಪ್ರಕರಣ: ನವಸಹಜ ಅಧ್ಯಕ್ಷ ನಿಖಿಲ್ ಬಂಧನ

ಮಂಗಳೂರು: ಮಂಗಳಮುಖಿಯರಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ನವಸಹಜ ಸಂಘಟನೆಯ ಅಧ್ಯಕ್ಷ ನಿಖಿಲ್ ಎಂಬಾತನನ್ನು ಪಣಂಬೂರು ಪೊಲೀಸರು ಉಡುಪಿಯಲ್ಲಿ ಬಂಧಿಸಿದ್ದಾರೆ. ಸಂಘಟನೆಯ ಇತರ ಆರೋಪಿಗಳು ತಪ್ಪಿಸಿಕೊಂಡಿದ್ದು ಪೊಲೀಸರು ಅವರ ಹುಡುಕಾಟ ನಡೆಸುತ್ತಿದ್ದಾರೆ. ಜುಲೈ 26ರಂದು ರಾತ್ರಿ ನಿಖಿಲ್ ತನ್ನ ಇತರ ಸಂಗಡಿಗರಾದ ಅರುಂಧತಿ, ರಾಶಿ, ರೇಖಾ, ಪ್ರೀಯಾ ಮತ್ತಿತರು ಸೇರಿ ಶಾಂತಾ ಪೂರ್ಣಿಮಾ, ನೀಲಾ, ಹುಲಿಗೆಮ್ಮ ಮತ್ತು ಪಾರ್ವತಿ ಎಂಬವರ ಮೇಲೆ ಬೈಕಂಪಾಡಿ ರೈಲ್ವೆ ಗೇಟ್ ಬಳಿ

ವಿದ್ಯಾರ್ಥಿಗಳ ಭವಿಷ್ಯದಲ್ಲಿ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ: ಶಾಸಕ ಯು.ಟಿ. ಖಾದರ್

ಮಂಗಳೂರು: ರಾಜ್ಯ ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಪಟ್ಟಂತೆ ಸ್ಪಷ್ಟಯೋಜನೆ ರೂಪಿಸಬೇಕೆಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ವಿದ್ಯಾರ್ಥಿಗಳು, ಹೆತ್ತವರು ಮಾನಸಿಕ ಒತ್ತಡದಲ್ಲಿಯೇ ಜೀವನ ಸಾಗಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ನೇರ ಕಾರಣ ಬಿಜೆಪಿ ಸರ್ಕಾರ ಎಂದು ಅವರು ದೂರಿದರು. ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತಿಲ್ಲ ಇನ್ನು

 ಕದ್ರಿ ಪಾರ್ಕ್ ಮುಂಭಾಗದಲ್ಲಿ ಅಕ್ರಮ ಗೂಡಂಗಡಿಗಳ ತೆರವು : ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪಾರ್ಕ್ ಮುಂಭಾಗದಲ್ಲಿ ಅಕ್ರಮ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆದಿದೆ. ಪಾಲಿಕೆ ಕಮೀಷನರ್ ಅಕ್ಷಯ್ ಶ್ರೀಧರ್ ಅವರ ಸೂಚನೆ ಮೇರೆಗೆ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ನಡೆಸಲಾಯ್ತು. ಪಾರ್ಕ್ ಮುಂಭಾಗದಲ್ಲಿ ಸುಮಾರು 10ಕ್ಕೂ ಅಧಿಕ ಅಕ್ರಮ ಗೂಡಂಗಡಿಗಳ ತೆರವು ಮಾಡಲಾಗಿದೆ. ಇನ್ನು ಈ ಪ್ರದೇಶದಲ್ಲಿ ಸ್ಮಾಟ್ ಸಿಟಿ ಯೋಜನೆಯಲ್ಲಿ ರಸ್ತೆ ಕಾಮಗಾರಿ ಹಾಗೂ ಫುಡ್ ಕೋರ್ಟ್ ಗಳ ಕಾಮಗಾರಿ ನಡೆಸಲಾಗುತ್ತದೆ. ಈ

ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗೆ ಆಗ್ರಹ : ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ವಿದ್ಯಾರ್ಥಿಗಳು ಧರಣಿಯನ್ನು ನಡೆಸಿದರು. ಮೆಡಿಕಲ್ ಕಾಲೇಜಿಗಾಗಿ ಹೋರಾಟ ಕೇವಲ ಕ್ಯಾಂಪಸ್ ಫ್ರಂಟ್ ನ ಹೋರಾಟವಲ್ಲ. ಇದು ಜಿಲ್ಲೆಯ ಜನತೆಯ ಹೋರಾಟವಾಗಿದೆ. ಇದು ಸಂಸದರು, ಶಾಸಕರ ನಿರ್ಲಕ್ಷ್ಯವಾಗಿದ್ದು, ಪ್ರತಿಯೊಂದು ಸಂಘಟನೆಯ ನಾಯಕರು ಈ ಹೋರಾಟಕ್ಕೆ

ಮರವೂರು ಸೇತುವೆ ದುರಸ್ತಿ ಕಾಮಗಾರಿ ಪೂರ್ಣ

ಮಂಗಳೂರು: ಕುಸಿದಿದ್ದ ಮರವೂರು ಸೇತುವೆ ದುರಸ್ತಿ ಪೂರ್ಣಗೊಂಡು ಶುಕ್ರವಾರ ಸಾಯಂಕಾಲದಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನೇರ ಸಂಪರ್ಕ ಕಲ್ಪಿಸಲು ಸಹಕಾರಿಯಾಗಿದ್ದ ಮರವೂರು ಸೇತುವೆ ಒಂದುವರೆ ತಿಂಗಳ ಹಿಂದೆ ಎರಡು ಅಡಿಯಷ್ಟು ಕುಸಿದಿತ್ತು. ಬೆಂಗಳೂರಿನಿಂದ ಬಂದ ತಜ್ಞ ಇಂಜಿನಿಯರ್‌ಗಳು ಪರಿಶೀಲಿಸಿ, ಸರಿಪಡಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬಹುದು ಎಂದು

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷರಾಗಿ ಶ್ರೀನಿವಾಸ ನಾಯಕ್ ಇಂದಾಜೆ ಅವಿರೋಧ ಆಯ್ಕೆ

ಮಂಗಳೂರು:ಪತ್ರಕ ರ್ತರ ಗೃಹ ನಿರ್ಮಾಣ ಸಹಕಾರ ಸಂಘ ಮಂಗಳೂರು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಯ ಪ್ರಕ್ರೀಯೆಯನ್ನು ಸಹಕಾರ ಸಂಘದ ಹಿರಿಯ ನಿರೀಕ್ಷಕರಾದ ಶಿವಲಿಂಗಯ್ಯ.ಎಂ ಚುನಾವಣಾಧಿಕಾರಿಯಾಗಿ ನಡೆಸಿಕೊಟ್ಟರು.ಸಂಘದ ನಿರ್ದೇಶಕರಾದ ಕೇಶವ ಕುಂದರ್ ,ಪುಷ್ಪರಾಜ್ ಬಿ.ಎನ್,ಇಬ್ರಾಹಿಂ