ವಿಟ್ಲ: ಸಾಲೆತ್ತೂರು ಸಮೀಪದ ಮೆದು ಎಂಬಲ್ಲಿನ ಪೆಟ್ರೋಲ್ ಬಂಕ್ ಎದುರುಗಡೆ ನಿಲ್ಲಿಸಿದ್ದ ಬಾರೀ ಗಾತ್ರದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಲಾರಿಯ ಮುಂದಿನ ಭಾಗ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಪೆಟ್ರೋಲ್ ಬಂಕಿನ ಎದುರು ಈ ಘಟನೆ ನಡೆದಿದ್ದು, ಈ ಸಂದರ್ಬದಲ್ಲಿ ಸ್ಥಳೀಯರು ಹರಸಾಹಸಪಟ್ಟು ಬೆಂಕಿಯನ್ನು ನಂದಿಸಿ ಹೆಚ್ಚಿನ
ಊರಿಗೆ ಬಂದು ಉಪಟಳ ನೀಡಿ, ಇಬ್ಬರನ್ನೂ ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲು ಕಡಬ ಭಾಗದಲ್ಲಿ `ಆಫರೇಷನ್ ಎಲಿಫೆಂಟ್’ ಕಾರ್ಯಾಚರಣೆ ಆರಂಭಗೊಂಡಿದೆ. ಎಲ್ಲಾ ಸಿದ್ಧತೆಗಳೊಂದಿಗೆ ಮಂಗಳವಾರ ಬೆಳಿಗ್ಗಿನಿಂದಲೇ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಕಾಡಾನೆಯನ್ನು ಹಿಡಿಯಲು ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ 5 ಆನೆಗಳು ಆಗಮಿಸಿದೆ. ಕಾಡಾನೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು, ಪ್ರಶಾಂತ್, ಹರ್ಷ,ಕಂಜನ್ ಹಾಗು ಮಹೇಂದ್ರ ಎಂಬ
ಪುತ್ತೂರು: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಓಫನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ಇಬ್ಬರು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ರಿಶೋನ್ ಲಸ್ರಾದೊ ಕುಮಿಟೆ ವಿಭಾಗದಲ್ಲಿ ತೃತೀಯ ಮತ್ತು ರಿಯೋನ್ ಲಸ್ರಾದೋ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ಪುತ್ತೂರು ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ನಿವಾಸಿಗಳಾದ ರೋಶನ್ ಲಸ್ರಾದೋ ಮತ್ತು ಸುಶಾಂತಿ ರೋಡ್ರಿಗಸ್ ದಂಪತಿಗಳ ಪುತ್ರರಾಗಿದ್ದು, ಪುತ್ತೂರು ಬೆಂಥನಿ ಆಂಗ್ಲ
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರಾತ್ರಿ ವೇಳೆ ಜರುಗಬಹುದಾದ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ಹಾಗೂ ಅಪರಾಧಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ನೂತನ MCCTNS ( Mobile Crime and Criminal Tracking Network System) ಪೋರ್ಟಬಲ್ ಸ್ಕ್ಯಾನರ್ ಬಳಕೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದೆ. ಈ ನೂತನ ತಂತ್ರಜ್ಞಾನದ ಸ್ಕ್ಯಾನರ್ ಅನ್ನು ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳ
ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯ ದಂಪತಿಯ ಹಿರಿಯ ಪುತ್ರಿ ಧನ್ಯ(17) ಮೃತ ವಿದ್ಯಾರ್ಥಿನಿ. ಧನ್ಯ ನಗರದ ಕಾಲೇಜಿನಲ್ಲಿ ದ್ವಿತೀಯ ಪಿ.ಯು ವಿದ್ಯಾರ್ಥಿನಿಯಾಗಿದ್ದಳು.ಫೆ.14 ರಂದು ಮದ್ಯಾಹ್ನ ಧನ್ಯ ತಾಯಿ ಭವ್ಯ ಮನೆಗೆ ತೆರಳಿದಾಗ ರಜೆಯಲ್ಲಿದ್ದ ಮಗಳು ಮನೆಯಲ್ಲಿ ಇರಲಿಲ್ಲ.ಮದ್ಯಾಹ್ನ 3 ಗಂಟೆಗೆ ಧನ್ಯ ಮನೆಗೆ ಮರಳಿದ್ದು ಈ ವೇಳೆ ತಾಯಿ ಮಗಳಲ್ಲಿ ಎಲ್ಲಿಗೆ ಹೋಗಿದ್ದೆ ಎಂದು ಪ್ರಶ್ನಿಸಿದ್ದು ಗೆಳತಿ ಮನೆಗೆ ಓದಲು ತೆರಳಿದ್ದೆ
ಮಂಗಳೂರು ತಾಲೂಕಿನ ಹರೇಕಳ ಗ್ರಾಮದಲ್ಲಿ ಗೇಣಿದಾರ ರೈತರ, ಹೆಂಚು, ನೇಯ್ಗೆ, ಬೀಡಿ ಕಾರ್ಮಿಕರ ಹೋರಾಟದ ನೇತೃತ್ವ ವಹಿಸಿ ಕಮ್ಯೂನಿಸ್ಟ್ ಪಕ್ಷವನ್ನು ಮುನ್ನಡೆಸಿದ್ದ ಹಿರಿಯ ಸಂಗಾತಿ ಕಡೆಂಜ ಕಾಮಣ್ಣ ರೈಗಳ ಸ್ಮರಣಾರ್ಥವಾಗಿ ಹರೇಕಳದಲ್ಲಿ ಕಾಂ. ಕಾಮಣ್ಣ ರೈ ಭವನ ಡಿವೈಎಫ್ಐ ನವೀಕೃತ ಕಟ್ಟಡವು ನಿರ್ಮಾಣಗೊಳ್ಳುತ್ತಿದೆ. ಹರೇಕಳದಲ್ಲಿ ಡಿವೈಎಫ್ಐ 90 ರ ದಶಕದಲ್ಲಿ ಊರಿನ ಜನನಾಯಕ ಕಾಮ್ರೇಡ್ ಕಾಮಣ್ಣ ರೈ ನೆನಪಿನಲ್ಲಿ ಸ್ವಂತ ಕಟ್ಟಡವನ್ನು ಕಟ್ಟಿತು. ಈ ಕಟ್ಟಡ ನಂತರ ಗ್ರಾಮದ
ಸಾರಿಗೆ ಇಲಾಖೆಗೆ ಮತ್ತು ಸಾರಿಗೆ ಸಚಿವರಿಗೆ ಚಾಲಕರಿಗಾಗಿ 1. ಚಾಲಕರ ನಿಗಮ ಮಂಡಳಿ ಮಾಡಿ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಕುಟುಂಬ ನಿರ್ವಹಣೆಗೆ ಅನುಕೂಲ ಅನುಕೂಲ ಮಾಡಿಕೊಡುವಂತೆ 2. ಚಾಲಕರ ದಿನಾಚರಣೆ ಎಚ್ ಡಿ ಕುಮಾರಸ್ವಾಮಿ ಸರ್ಕಾರದಲ್ಲಿ ಘೋಷಣೆಯಾಗಿದ್ದು ಪ್ರತಿ ಜಿಲ್ಲೆಯಲ್ಲಿ 10 ಚಾಲಕರಿಗೆ ಸಾರಥಿ ನಂಬರ್ ಒನ್ ಪ್ರಶಸ್ತಿ ಜೊತೆಗೆ 25,000 ಧನಸಹಾಯ ನೀಡುವ ಕಾರ್ಯಕ್ರಮವನ್ನು ಬಜೆಟ್ ನಲ್ಲಿ ತೋರಿಸಿದರು ಕೂಡ ಈಡೇರಿಸಿದೆ ಇರುವುದು 3. ಓಲಾ ಉಬರ್ ನಂತಹ ಮಹಾ ವಂಚಕ
ಮೂಡುಬಿದಿರೆ: ಯಕ್ಷರಂಗದ ಭಾಗವತಿಕೆಯ ಭೀಷ್ಮ ಎಂದೇ ಖ್ಯಾತರಾಗಿರುವ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತರು(86) ಗುರುವಾರ ಸಾಯಂಕಾಲ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಾರೂರಿನಲ್ಲಿರುವ ನೂಯಿ ಸ್ವಗೃಹದಲ್ಲಿ ನಿಧನರಾದರು. ಕಳೆದ ಕೆಲವು ದಶಕಗಳಿಂದ ಯಕ್ಷಗಾನ ಭಾಗವತಿಕೆಯಲ್ಲಿ ತಮ್ಮ ಕಂಚಿನ ಕಂಠದ ಮೂಲಕ ಸುಪ್ರಸಿದ್ಧರಾಗಿದ್ದ ಅವರು ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದರು.ವರ್ಷ ಪ್ರಾಯದ ಭಾಗವತರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ ನಿಧನರಾಗಿದ್ದಾರೆ.ನಾಲ್ವರು
ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರು ಪ್ರಾಣ ಪ್ರತಿಷ್ಠೆ ಮಾಡಿರುವ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 2023ರ ಫೆಬ್ರವರಿ18 ರಂದು 15 ನೇ ಪ್ರತಿಷ್ಠಾ ವರ್ಧಂತ್ಯುತ್ಸವವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಅಂದು ಬೆಳಗ್ಗೆ 6 ಗಂಟೆಗೆ ಅಷ್ಟ ದ್ರವ್ಯ ಮಹಾಗಣಪತಿ ಹೋಮ, ರುದ್ರ ಮಂತ್ರ ಪಠನ,ಸಾಮೂಹಿಕ ಶ್ರೀ ಲಲಿತಾ ಸಹಸ್ರನಾಮಾರ್ಚನೆ, ಮಹಾ ಮೃತ್ಯುಂಜಯ ಹೋಮ,ಸತ್ಸಂಗ, ಮಹಾ ಸುದರ್ಶನ ಹೋಮ, ಕಳಶ ಪೂಜೆ,ಪಂಚಗವ್ಯ,ನವಕ, ಮಹಾ ಅಭಿಷೇಕ, ಧಾರಾ, ಆರತಿ
ಉಳ್ಳಾಲ: ಉಳ್ಳಾಲ್ ಕ್ರಿಕೆಟ್ ಬೋರ್ಡ್ ವತಿಯಿಂದ ಎಂಟನೇ ಅವಧಿಯ ಟೆನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಉಳ್ಳಾಲ್ ಪ್ರೀಮಿಯರ್ ಲೀಗ್ ಫೆ.20 ರಿಂದ ಫೆ.25 ರವರೆಗೆ ಐದು ದಿನಗಳ ಕಾಲ ವಿವಿಧ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳ ಜೊತೆಗೆ ಉಳ್ಳಾಲದ ಸೀಗ್ರೌಂಡ್ ನಲ್ಲಿ ನಡೆಯಲಿದೆ ಎಂದು ಉಳ್ಳಾಲ್ ಕ್ರಿಕೆಟ್ ಬೋರ್ಡ್ ಇದರ ಅಧ್ಯಕ್ಷ ಯು.ಬಿ ಸಲೀಂ ಹೇಳಿದರು. ಅವರು ತೊಕ್ಕೊಟ್ಟುವಿನ ಉಳ್ಳಾಲ ಪ್ರೆಸ್ಕ್ಲಬ್ ನಲ್ಲಿ ಆಯೋಜಿಸಿದ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ




























