Home Posts tagged #mangalore (Page 343)

ಜಿಲ್ಲಾಧಿಕಾರಿಯವರ ಮೊಬೈಲ್ ನಂಬರ್ ಹ್ಯಾಕ್:ಮೋಸ ಹೋಗದಂತೆ ಡಿಸಿ ಮನವಿ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ‌.ವಿ. ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದ್ದು,8590710748 ಮೊಬೈಲ್ ನಂಬರ್ ನಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಹೆಸರು ಹಾಗೂ ಫೋಟೋ ಬಳಸಿ ವಾಟ್ಸ್ ಅಪ್ ಮೂಲಕ ಸಂದೇಶ ಕಳುಹಿಸಿ ಅಪರಿಚಿತರು ಸಹಾಯ ಅಥವಾ ಹಣವನ್ನು ವರ್ಗಾಯಿಸಲು ಕೇಳಬಹುದು. ಆ ನಂಬರ್ ಜಿಲ್ಲಾಧಿಕಾರಿಯವರದ್ದಾಗಿರುವುದಿಲ್ಲ ಆದಕಾರಣ ಯಾರೂ

ಅ.18ರಂದು ಸುರತ್ಕಲ್ ಟೋಲ್ ತೆರವಿಗೆ ತೀರ್ಮಾನಿಸಿದ ಪ್ರತಿಭಟನಾಕಾರರು

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿನ ದಿನಾಂಕ ಘೋಷಣೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಟೋಲ್ ಗೇಟ್ ಹೋರಾಟ ಸಮಿತಿ ನೇತೃತ್ವದಲ್ಲಿ ಒಂದು ದಿನದ ಧರಣಿ ಸುರತ್ಕಲ್ ಟೋಲ್ ಗೇಟ್ ಬಳಿ ನಡೆಯಿತು. ಧರಣಿ ಸ್ಥಳಕ್ಕೆ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ಲಿಂಗೇಗೌಡ ಭೇಟಿ ನೀಡಿದ್ರು. ಇದೇ ವೇಳೆ ಪ್ರತಿಭಟನಾ ನಿರತರು ಟೋಲ್ ಗೇಟ್ ತೆರವು ದಿನಾಂಕ ಘೋಷಣೆ ಮಾಡುವಂತೆ ಅವರನ್ನು ಆಗ್ರಹಿಸಿದರು. ಪೇಪರ್ ವರ್ಕ್ ನಡೆಯುತ್ತಿದೆ. 20 ದಿನಗಳಿಂದ

ಶಿರ್ವ :ಮೆಸ್ಕಾಂ ಸಿಬ್ಬಂದಿಗಳ ಮೇಲೆ ನುಗ್ಗಿದ ಕಾರು

ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿಯಲ್ಲಿ ಮೆಸ್ಕಾಂ ಸಿಬ್ಬಂದಿ ಗಳು ಟ್ರಾನ್ಸ್ಪರ್ಮಾರ್ ಅಳವಡಿಸುತ್ತಿದ್ದ ವೇಳೆ ಬರುತ್ತಿದ್ದ ವಾಹನಗಳನ್ನು ನಿಲ್ಲಿಸುತ್ತಿದ್ದರೂ ಮುನ್ನಗ್ಗಿ ಬಂದ ಕಾರೊಂದು ಕಾರ್ಯನಿರತ ಮೆಸ್ಕಾಂ ಸಿಬ್ಬಂದಿಗಳಿಗೆ ಗುದ್ದಿದ ಮೂವರು ಗಾಯಗೊಂಡಿದ್ದಲ್ಲದೆ, ವಿದ್ಯುತ್ ಕಂಬ ಕಾರಿನ ಮೇಲೆ ಬಿದ್ದ ಘಟನೆ ಶಿರ್ವದಲ್ಲಿ ಸಂಭವಿಸಿದೆ. ಶಿರ್ವ ನ್ಯಾರ್ಮ ಎಂಬಲ್ಲಿ ಟ್ರಾನ್ಸ್ಫಾರ್ಮರ್ ಕೆಲಸ ಪ್ರಗತಿಯಲ್ಲಿದ್ದು, 12 ಮಂದಿ ಮೆಸ್ಕಾಂ ಸಿಬ್ಬಂದಿ ಕೆಲಸ

ಅಡುಗೆ ಅನಿಲ ವಿತರಣೆಯಲ್ಲಿ ಅಕ್ರಮ ಆರೋಪ : ವೀಡಿಯೋ ವೈರಲ್

ಮಂಜೇಶ್ವರಂ: ಮಂಜೇಶ್ವರ ಹೊಸಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಅನಂತ ಗ್ಯಾಸ್ ಏಜೆನ್ಸಿ ಮೂಲಕ ವಿತರಿಸಲಾಗುತ್ತಿರುವ ಅಡುಗೆ ಅನಿಲ ವಿತರಣೆಯಲ್ಲಿ ತೂಕ ಕಡಿಮೆ ಇರುವುದಾಗಿ ಆರೋಪಿಸಿ ಗ್ರಾಹಕರೊಬ್ಬರು ವೀಡಿಯೋ ಒಂದನ್ನು ವೈರಲ್ ಮಾಡಿದ ಬೆನ್ನಲ್ಲೇ ಗ್ರಾಹಕರಲ್ಲಿ ಭಾರೀ ಆತಂಕ ಸೃಷ್ಟಿಯಾಗಿತ್ತು.ಆದರೆ ಏಜನ್ಸಿ ಕಚೇರಿ ಮುಂಬಾಗದಲ್ಲಿ ಇರಿಸಲಾಗಿದ್ದ ತೂಕ ಕಡಿಮೆ ಕಂಡು ಬಂದ ಅಡುಗೆ ಅನಿಲವನ್ನು ಬೇರೆಯೇ ಇಡಲಾಗಿತ್ತೆಂದೂ ಅದನ್ನು ವಿತರಿಸುವ ಉದ್ದೇಶವಿರಲಿಲ್ಲವೆಂದೂ ಗ್ಯಾಸ್

ಕಾರ್ಕಳ:ಕೆಲವೆಡೆ ಬೀಸಿದ ಸುಂಟರ ಗಾಳಿ, ಹಲವು ಮನೆಗಳಿಗೆ ಹಾನಿ

ಕಾರ್ಕಳ: ಕಾರ್ಕಳದ ದುರ್ಗಾ ಗ್ರಾಮದ ಕುಕ್ಕಜ ಪಲ್ಕೆ ಎಂಬಲ್ಲಿ ಬೀಸಿದ ಸುಂಟರಗಾಳಿಗೆ ರಿಯಾಜ್ ಎಂಬವರ ಮನೆ ಹಂಚು ಹಾಗೂ ಚಾವಣಿ ಹಾರಿ ಹೋಗಿ ಸುಮಾರು ಐವತ್ತು ಸಾವಿರದಷ್ಟು ನಷ್ಟ ಉಂಟಾಗಿದೆ. ಅದಲ್ಲದೆ ಸಾಕಿದ ಕುರಿಯ ಮೇಲೆ ಚಾವಣಿ ತಗಡು ಬಿದ್ದು ಸುಮಾರು ಏಳು ಸಾವಿರ ರೂಪಾಯಿ ಮೌಲ್ಯದ ಕುರಿ ಸಾವನಪ್ಪಿದೆ. ಅದೇ ರೀತಿ ಜಹೀರ್ ಎಂಬವರ ಮನೆ ಚಾವಣಿ ಹಾರಿ ಹೋಗಿ ಸುಮಾರು 25,000 ನಷ್ಟ ಉಂಟಾಗಿದೆ. ಅಲ್ಲಿ ಸಮೀಪ ಮುನಾವರ್ ಸಾಹೇಬರ ಮನೆ ಚಾವಣಿ ಹಾರಿ […]

ಜಿಲ್ಲಾ ಮಟ್ಟದ ಕರೋಕೆ ಸಂಗೀತ ರಿಯಾಲಿಟಿ ಶೋ ಸ್ಪರ್ಧೆ : ಬಂಟ್ವಾಳದ ಸಾತ್ವಿಕ್ ವಿನ್ನರ್

ಮೂಡುಬಿದಿರೆ: ಜೇಸಿಐ ಮೂಡುಬಿದಿರೆ ತ್ರಿಭುವನ್ ವತಿಯಿಂದ ಜೇಸಿ ಸಪ್ತಾಹದಂಗವಾಗಿ ನಿಶ್ಮಿತಾ ಪ್ಯಾರಡೈಸ್‍ನಲ್ಲಿ ನಡೆದ ಅವಿಭಜಿತ ದ.ಕ.ಜಿಲ್ಲಾ ಮಟ್ಟದ ಕರೋಕೆ ಸಂಗೀತ ರಿಯಾಲಿಟಿ ಶೋ ಸ್ಪರ್ಧೆಯಲ್ಲಿ ಬಂಟ್ವಾಳದ ಸಾತ್ವಿಕ್ ವಿನ್ನರ್ ಆಗಿ ಮೂಡಿ ಬಂದರು. ಹೆಬ್ರಿಯ ಸಂದೀಪ್ ರನ್ನರ್ ಅಪ್ ಹಾಗೂ ಮಂಗಳೂರಿನ ಅಭಿನವ್ ಎಸ್. ಭಟ್ ತೃತೀಯ ಬಹುಮಾನ ಗಳಿಸಿದರು. ರವಿ ಮಿಜಾರು, ಮುರಾರಿ ರಾವ್ ಹೊಸಬೆಟ್ಟು ಹಾಗೂ ಅನುಷಾ ಉಡುಪಿ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದರು. ಸಂಜೆ

19ನೇ ರಾಜ್ಯಮಟ್ಟದ ಕರಾಟೆ ಕೆಲರಾಯ್ ರೆಡ್‍ಕ್ಯಾಮೆಲ್‍ಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ : ಶೋರಿನ್ ರಿಯೂ ಕರಾಟೆ ಅಸೋಸಿಯೇಷನ್, ಎಂಕೆ ಅನಂತರಾಜ್ ಕಾಲೇಜು ಓಫ್ ಫಿಸಿಕಲ್ ಎಜುಕೇಶನ್ ಹಾಗೂ ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸೆಂಟರ್ ಜಂಟಿಯಾಗಿ ಸಮಾಜಮಂದಿರದಲ್ಲಿ ಆಯೋಜಿಸಿದ 19ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ಕೆಲರಾಯ ರೆಡ್ ಕ್ಯಾಮಲ್ ಇಂಗ್ಲಿಷ್ ಮೀಡಿಯಂ ಶಾಲೆಯು ಸಮಗ್ರ ತಂಡ ಪ್ರಶಸ್ತಿಯನ್ನು ಗಳಿಸಿದೆ. ಅಡ್ಯಾರ್ ಕಣ್ಣೂರಿನ ಬರಕ ಇಂಟರ್ನಾಷನಲ್ ಶಾಲೆಯು ತಂಡ ರನ್ನರ್ಸ್ ಗೆದ್ದುಕೊಂಡಿದೆ. ತೃತೀಯ ಸ್ಥಾನವನ್ನು

ಶ್ರೀ ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ : ಗೃಹ ನಿರ್ಮಾಣಕ್ಕೆ ರೂ 15 ಲಕ್ಷ ಸಾಲ

ಮೂಡುಬಿದಿರೆ : ಶ್ರೀ ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ(ಸಿ)ಯು 2021-22ನೇ ಸಾಲಿನಲ್ಲಿ ರಲ್ಲಿ ಹದಿಮೂರು ಲಕ್ಷದ ಎರಡು ಸಾವಿರದ ಐನೂರ ಅರವತ್ತ ಒಂಭತ್ತು ರಷ್ಟು ಲಾಭಾಂಶವನ್ನು ಹೊಂದಿರುತ್ತದೆ. ಈ ಸಾಲಿನ ಸದಸ್ಯರಿಗೆ ಶೇ 12 ಡಿವಿಡೆಂಡ್ ನೀಡಲು ಆಡಳತ ಮಂಡಳಿ ಶಿಫಾರಸ್ಸು ಮಾಡಿದೆ ಹಾಗೂ ಈ ಹಿಂದೆ ಸಂಘದ ಸದಸ್ಯರುಗಳಿಗೆ ಮನೆ ರಿಪೇರಿಗಾಗಿ ರೂ ಲಕ್ಷವನ್ನು 5 ನೀಡುತ್ತಿತ್ತು ಇದೀಗ ಈ ವರ್ಷದಿಂದ ನಮ್ಮ ಗ್ರಾಹಕರಿಗೆ ಅತೀ ಕಡಿಮೆ ಬಡ್ಡಿ ದರದಲ್ಲಿ ಮನೆ

ಟೋಲ್‍ಗೇಟ್ ಹೋರಾಟ ಸಮಿತಿಯಿಂದ ಸಾಮೂಹಿಕ ಧರಣಿ ಆರಂಭ

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿನ ದಿನಾಂಕ ಘೋಷಣೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಟೋಲ್ ಗೇಟ್ ಹೋರಾಟ ಸಮಿತಿ ನೇತೃತ್ವದಲ್ಲಿ ಒಂದು ದಿನದ ಧರಣಿ ಸುರತ್ಕಲ್ ಟೋಲ್ ಗೇಟ್ ಬಳಿ ನಡೆಯಿತು. ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ, ಟೋಲ್ ಗೇಟ್ ನಿಂದ ಶಾಸಕರಾದ ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶೇ.40 ಕಮಿಷನ್ ಪಡೆಯುತ್ತಿದ್ದಾರೆ ಎಂದು ನೇರ ಆರೋಪ ಮಾಡಿದರು.

ಕಮರಿಗೆ ಉರುಳಿದ ರಿಕ್ಷಾ : ಚಾಲಕ ಮೃತ್ಯು

ಉಳ್ಳಾಲ: ರಿಕ್ಷಾ ಕಮರಿಗೆ ಉರುಳಿ ಚಾಲಕ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆ ಸಮೀಪದ ಪಾನೀರು ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಸೋಮೇಶ್ವರ ದೇವಸ್ಥಾನ ಬಳಿಯ ನಿವಾಸಿ ಆನಂದ್ ಸಪಲ್ಯ (70)ಮೃತರು. ಕೋಟೆಕಾರು ರಿಕ್ಷಾ ಪಾಕ್9ನಲ್ಲಿ ರಿಕ್ಷಾ ಚಲಾಯಿಸುತ್ತಿದ್ದ ಅವರು ನಿನ್ನೆ ರಾತ್ರಿ ದೇರಳಕಟ್ಟೆ ಕಡೆಗೆ ಬಾಡಿಗೆಗೆ ತೆರಳಿ ವಾಪಸ್ಸಾಗುತ್ತಿದ್ದಾಗ ಪಾನೀರು ಅಸಿಸ್ಸಿ ಶಾಲೆ ಬಳಿ ಕಮರಿಗೆ ಉರಳಿ ತಲೆಗೆ ಗಾಯಗಳಾಗಿ ಸಾವನ್ನಪ್ಪಿದ್ದಾರೆ.ಮೃತರು ಪತ್ನಿ ಪುತ್ರ