Home Posts tagged #mangalore (Page 364)

ವೇಯ್ಟ್‍ಲಿಫ್ಟಿಂಗ್ ಕಂಚು ಗೆದ್ದು ಹುಟ್ಟೂರಿಗೆ ಆಗಮಿಸಿದ ಗುರುರಾಜ್

ಕುಂದಾಪುರ: ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆದ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ವೇಯ್ಟ್ ಲಿಫ್ಟಿಂಗ್ 61 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಭಾನುವಾರ ಹುಟ್ಟೂರಿಗೆ ಆಗಮಿಸಿದ ತಾಲೂಕಿನ ಗುರುರಾಜ್ ಪೂಜಾರಿ ಅವರನ್ನು ಕುಂದಾಪುರದ ಶಾಸ್ತ್ರೀವೃತ್ತದಲ್ಲಿ ಚಂಡೆ ವಾದನಗಳ ಸಹಿತ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಉಡುಪಿಯಲ್ಲಿ ಜಿಲ್ಲಾಡಳಿತ

ವೈ ಕೆ ಮುದ್ದುಕೃಷ್ಣ ಅವರ ಕೃತಿ ಬಿಡುಗಡೆ

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ , ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ, ಹಾಗೂ ರಂಗಸಂಗಾತಿ ಮಂಗಳೂರು ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ನಿರ್ದೇಶಕ ಹಾಗೂ ಕನ್ನಡ ಸುಗಮ ಸಂಗೀತ ಪರಿಷತ್ತಿನ ಅಧ್ಯಕ್ಷ ವೈ ಕೆ ಮುದ್ದುಕೃಷ್ಣ ಅವರ ಆತ್ಮಕಥನ ‘ಹಾಡು ಹಿಡಿದ ಜಾಡು ‘ ಕೃತಿ ಅನಾವರಣವು ಶನಿವಾರ ಉಡುಪಿಯ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಶಾಖೆಯಲ್ಲಿ ಲೋಕಾರ್ಪಣೆಗೊಂಡಿತು. ಕೃತಿಯನ್ನು ಚಲನಚಿತ್ರ ನಿರ್ದೇಶಕ ಹಾಗೂ

ಪೆರುವಾಜೆ ಭಾವೈಕ್ಯ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಪ್ರಮೀಳಾ ಶೆಟ್ಟಿ , ಕಾರ್ಯದರ್ಶಿ ಸುಮಲತಾ ಸುನಿಲ್ , ಪೆರುವಾಜೆ ಗ್ರಾಮದ ಭಾವೈಕ್ಯ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆಯು ಆ.08 ರಂದು ನಡೆಯಿತು. ಮಹಿಳಾ ಮಂಡಲದ ಅಧ್ಯಕ್ಷರಾಗಿ ಪ್ರಮೀಳಾ ಶೆಟ್ಟಿ, ಉಪಾಧ್ಯಕ್ಷರಾಗಿ ಭಾಗ್ಯಲಕ್ಷ್ಮಿ ಅರ್ನಾಡಿ, ಕಾರ್ಯದರ್ಶಿಯಾಗಿ ಸುಮಲತಾ ಸುನಿಲ್, ಜತೆ ಕಾರ್ಯದರ್ಶಿಯಾಗಿ ಯಶೋಧಾ, ಕೋಶಾಧಿಕಾರಿಯಾಗಿ ರಾಗಿಣಿ ಆಯ್ಕೆಯಾದರು. ನಿರ್ದೇಶಕರಾಗಿ ಪ್ರೇಮ ಕೊಲ್ಯ, ವನಿತಾ ಸಾರಕೆರೆ, ಸುಜಾತ ಪದ್ಮನಾಭ, ವೀಣಾ ಕೊಲ್ಯ,

ಲಯನ್ಸ್ ಕ್ಲಬ್ ಪಂಪ್ ವೆಲ್ : ಆರೋಗ್ಯಮಾಹಿತಿ ಕಾರ್ಯಗಾರ ಯು.ಟಿ.ಖಾದರ್ ರಿಂದ ಚಾಲನೆ

ಲಯನ್ಸ್ ಕ್ಲಬ್ ಮಂಗಳೂರು ಪಂಪ್ ವೆಲ್ ಕಲ್ಪವೃಕ್ಷ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸೇವಾ ಸಪ್ತಾಹ 8-8-2022ರಿಂದ 15.8.22ರ ವರೆಗೆ ಆರೋಗ್ಯಮಾಹಿತಿ ಕಾರ್ಯಗಾರ, ಆರ್ಥಿಕ ,ವೈದ್ಯಕೀಯ, ಶೈಕ್ಷಣಿಕ ನೆರವು, ಹಾಗೂ ಶಾಲಾ ವಠಾರ ನೈರ್ಮಲೀಕರಣ ಕಾರ್ಯಕ್ರಮ ನಡೆಯಲಿದ್ದು, ಸೋಮವಾರ ದ.ಕ.ಜಿಲ್ಲಾ ಪಂ. ಇರಿಯ ಪ್ರಾಥಮಿಕ ಶಾಲೆ ಬಗಂಬಿಲದಲ್ಲಿ ನಡೆಯಿತು. ಶಾಲಾ ವಠಾರ ನೈರ್ಮಲೀಕರಣ ಕಾರ್ಯಕ್ರಮಕ್ಕೆ ಶಾಸಕ ಯು.ಟಿ.ಖಾದರ್ ಚಾಲನೆ ನೀಡಿದರು. ಬಳಿಕ ಮಾತನಾಡಿದ

ಉಡುಪಿ : ಭಯದ ವಾತಾವರಣ ಸೃಷ್ಟಿಸಿದ ಮಾನಸಿಕ ಅಸ್ವಸ್ಥ ಚಿಕಿತ್ಸೆಗೆ ದಾಖಲು.

ಉಡುಪಿ ಆ.7, ಉಡುಪಿ ನಗರದ ಪುತ್ತೂರಿನಲ್ಲಿ ಕಳೆದ ಎರಡು ದಿನಗಳಿಂದ ಸಾರ್ವಜನಿಕರ ಮನೆಗಳಿಗೆ ರಾತ್ರಿ ಹೊತ್ತು ಪ್ರವೇಶ ಮಾಡಲು ಪ್ರಯತ್ನಿಸುವ ಹಾಗೂ ಭಯದ ವಾತಾವರಣ ಸೃಷ್ಟಿಸಿದ ಮಾನಸಿಕ ಯುವಕನನ್ನು ವಿಶು ಶೆಟ್ಟಿ ವಶಕ್ಕೆ ಪಡೆದು ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ ಘಟನೆ ಆ.7ರ ರಾತ್ರಿ ನಡೆದಿದೆ. ರಕ್ಷಣಾ ಕಾರ್ಯದಲ್ಲಿ ಪುತ್ತೂರಿನ ತೌಫಿಕ್ ಸಹಕರಿಸಿದ್ದಾರೆ. ಯುವಕನು ತನ್ನ ಹೆಸರು ಬಸವನ್ ತಂದೆ ನಂಜುಂಡ ತಾಯಿ ರುದ್ರಮ್ಮ ಹಾಗೂ ಮನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್

ಉಚ್ಚಿಲ ದಸರಾ ಉತ್ಸವದ ರೂಪುರೇಷೇಗಳ ಬಗ್ಗೆ ಸಭೆ

ಇದೇ ಬರುವ ಸೆಪ್ಟೆಂಬರ್ 26 ರಿಂದ ಅಕ್ಟೊಬರ್ 5 ರವರೆಗೆ ನವರಾತ್ರಿಯ ಪ್ರಯುಕ್ತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುವ “ಉಚ್ಚಿಲ ದಸರಾ ಉತ್ಸವ-2022″ದ ರೂಪುರೇಷೆಗಳ ನಾಡೋಜ ಡಾ. ಜಿ. ಶಂಕರ್ ಅವರ ನೇತೃತ್ವದಲ್ಲಿ ಹಾಗೂ ದ. ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ. ಸಿ. ಕೋಟ್ಯಾನ್ ಉಪಸ್ಥಿತಿಯಲ್ಲಿ ದಸರಾ ಸಮಿತಿಯ ಸದಸ್ಯರ ಸಭೆ ನಡೆಸಲಾಯಿತು. ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ಈ ಬಾರಿ ನವರಾತ್ರಿ ಉತ್ಸವವನ್ನು ದಸರಾ ರೀತಿಯಲ್ಲಿ

ಮಂಗಳೂರು ರಾತ್ರಿ : ನಿರ್ಬಂಧ ವಾಪಸ್

ಕನ್ನಡ ಜಿಲ್ಲೆಯಲ್ಲಿ ಕಡೆಗೂ ರಾತ್ರಿ ನಿರ್ಬಂಧ ವಾಪಸ್ , ಮದ್ಯದಂಗಡಿ ಸೇರಿದಂತೆ ಎಲ್ಲ ವ್ಯಾಪಾರ ಕೇಂದ್ರಗಳಿಗೂ ನಿರ್ಬಂಧ ಮುಕ್ತ, ರಾತ್ರಿ 9 ಗಂಟೆ ಬಳಿಕದ ನಿರ್ಬಂಧ ಆದೇಶ ಹಿಂಪಡೆದ ದ.ಕ. ಜಿಲ್ಲಾಧಿಕಾರಿ

ಪಡುಬಿದ್ರಿಯ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ: ವಿಶೇಷ ಕಟ್ಟದಪ್ಪ ಸೇವೆ

ಪಡುಬಿದ್ರಿಯ ಪುರಾಣ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದಲ್ಲಿ ವಿಶೇಷ ಕಟ್ಟದಪ್ಪ ಸೇವೆ ಜರಗಿತು.ಅವಿಭಜಿತ ಜಿಲ್ಲೆಯಲ್ಲದೆ ದೇಶ ವಿದೇಶಗಳ ಭಕ್ತರು ಇಲ್ಲಿ ನಡೆಯುವ ವಿಶೇಷ ಕಟ್ಟದಪ್ಪ ಸೇವೆಯಲ್ಲಿ ಪಾಲ್ಗೊಳ್ಳುವುದು ಇಲ್ಲಿನ ವಿಶೇಷತೆ. ಶ್ರೀಕ್ಷೇತ್ರದಲ್ಲಿ ನಿರಂತರ ನಡೆಯುವ ಬೆಲ್ಲದಪ್ಪ ಮತ್ತು ಪೆÇಟ್ಟಪ್ಪ ಸೇವೆಗಳು ಇಲ್ಲಿನ ವಿಶೇಷ ಸೇವೆ. ಈ ದಿನ ನಡೆಯುವುದು ಸಾರ್ವಜನಿಕ ಕಟ್ಟದಪ್ಪ(ಕಟಾಹಪೂಪ)ಸೇವೆ. ಪಡುಬಿದ್ರಿ ಗ್ರಾಮದ ಕಲ್ಲಟ್ಟೆ ಎಂಬ ಪ್ರದೇಶದಲ್ಲಿ

ಬಿಗ್‍ಬಾಸ್ ಒಟಿಟಿ ಸೀಸನ್-1, ಕರಾವಳಿಯ ಕುವರ ನಟ ರೂಪೇಶ್ ಶೆಟ್ಟಿ ಎಂಟ್ರಿ

ಕಿರುತೆರೆ ಲೋಕದ ದೊಡ್ಡ ರಿಯಾಲಿಟಿ ಶೋ ಎನಿಸಿಕೊಂಡಿರುವ ಬಿಗ್ ಬಾಸ್ ಒಟಿಟಿ ಸೀಸನ್-1 ಆರಂಭಗೊಂಡಿದೆ. ಈ ಬಾರಿ ಕರಾವಳಿಯ ಕುವರ ನಟ ಹಾಗೂ ನಿರೂಪಕ ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ. ರೂಪೇಶ್ ಶೆಟ್ಟಿ ಅವರ ತುಳು ಮೂವಿ ಆಗಿರುವ ಗಿರಿಗಿಟ್ ಈಗಾಗಲೇ ಯಶಸ್ವಿ ಪ್ರದರ್ಶನ ಕಂಡಿದೆ. ಸದ್ಯದಲ್ಲೇ ಸರ್ಕಸ್ ತುಳು ಮೂವಿ ಕರಾವಳಿಯಾದ್ಯಂತ ಬಿಡುಗಡೆಗೊಳ್ಳಲು ಸಜ್ಜಾಗಿದೆ.. ಕಲರ್ಸ್ ವಾಹಿನಿಯ ಬಿಗ್ ಬಾಸ್ ಕನ್ನಡದ ಒಟಿಟಿ

ಫಾಝಿಲ್ ಸ್ಮರಣಾರ್ಥ ಸಾರ್ವಜನಿಕ ರಕ್ತದಾನ ಶಿಬಿರ

ಇತ್ತೀಚಿಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಫಾಝಿಲ್ ಮಂಗಳಪೇಟೆ ಸ್ಮರಣಾರ್ಥವಾಗಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯಿಂದ ಆ. 7 ರಂದು ಆದಿತ್ಯವಾರ ಜಿಲ್ಲೆಯ ವಿವಿಧೆಡೆ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಸ್ವತಃ ರಕ್ತದಾನಿಯಾಗಿದ್ದ ಮೃತ ಫಾಝಿಲ್ ಅವರು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ಸಕ್ರಿಯ ಸದಸ್ಯನಾಗಿದ್ದುಕೊಂಡು ತುರ್ತು ಸಂದರ್ಭ ರಕ್ತ ಪೂರೈಕೆಯಲ್ಲಿ ಮೂಂಚೂಣಿಯಲ್ಲಿದ್ದರು. ಅವರ ಸ್ಮರಣಾರ್ಥವಾಗಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ