Home Posts tagged #mangalore (Page 412)

ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ: ಶಾಸಕರಿಂದ ಪಂಚಾಯತ್ ಗಳೊಂದಿಗೆ ನಿರಂತರ ಸಭೆ

ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯುವ ರೈತರಿಗೆ ಸರಕಾರ ಸೂಕ್ತ ಸೌಲಭ್ಯ ನೀಡಲಿದೆ. ಇದರ ಪ್ರಯೋಜನವನ್ನು ಪಡೆದು ಸರಕಾರದ ” ಹಡೀಲು ಗದ್ದೆಯಲ್ಲಿ ಭತ್ತ ಬೆಳೆಯೋಣ” ಯೋಜನೆ ಯಶಸ್ವಿಗೊಳಿಸಬೇಕು ಎಂದು ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹೇಳಿದರು. ಅವರು ಎಡಪದವು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳ, ಅಧಿಕಾರಿಗಳ ಸಭೆಯಲ್ಲಿ ಈ

ಮಂಗಳೂರು: ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು: ಆರೋಪಿಯ ಬಂಧನ

ಮಂಗಳೂರು: ನಗರದ ಮಹಿಳೆಯೋರ್ವರ ಚಿನ್ನಾಭರಣವಿದ್ದ ಬ್ಯಾಗ್ ಕಳವುಗೈದ ಆರೋಪಿಯನ್ನು ಬಂಧಿಸಿರುವ ಕದ್ರಿ ಠಾಣೆ ಪೊಲೀಸರು 2.50 ಲಕ್ಷ ರೂ. ಮೌಲ್ಯದ 53 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿದ್ದಾರೆ. ಭದ್ರಾವತಿ ಮೂಲದ ಪ್ರಸ್ತುತ ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ನಿವಾಸಿ ಪಿ.ಜ್ಞಾನರತ್ನಂ ಕೃಪಾ ರಾವ್ ಬಂಧಿತ. ನಗರದ ನವಭಾರತ ಸರ್ಕಲ್ ಬಳಿಯಿರುವ ಮೌರಿಷ್ಕ್ ಪಾರ್ಕ್ ಅಪಾರ್ಟ್‌ಮೆಂಟ್ ನಲ್ಲಿ ವಾಸವಾಗಿರುವ ವಸಂತಾ ಎಂಬವರು 2021  ಮಾರ್ಚ್ 10ರಂದು ಭದ್ರಾವತಿಯಿಂದ ಮಂಗಳೂರಿಗೆ

ವಿಭಿನ್ನವಾಗಿ ಮಾಡಿ ಅಥವಾ ವಿಭಿನ್ನವಾದುದನ್ನು ಮಾಡಿ-ವೇಣು ಶರ್ಮ

ಬದಲಾವಣೆ ಎನ್ನುವುದು ಕಷ್ಟಕರ ಮತ್ತು ಪ್ರತಿರೋಧ ಪೂರಿತವಾಗಿದ್ದರೂ ಅದು ಪ್ರಕೃತಿ ಸಹಜ ಹಂತ. ತಿಕ್ಕಾಡುವ ಬದಲು ಅಭಿವೃದ್ಧಿಯತ್ತ ಮುಖಮಾಡಿದಾಗ ಬದಲಾವಣೆ ಸುಲಭ. ದೂರವಾಣಿ ಸಂಪರ್ಕ ಕಂಪೆನಿಗಳಿಂದ ಹಿಡಿದು ಪ್ರತೀ ಮನೆ – ಕುಟುಂಬಗಳಲ್ಲಿ ನಾವು ಮರೆತಿರುವ ದಿನಚರಿಯೂ ಕೂಡಾ ನಮಗೆ ಹೊಸತನ್ನು ನೀಡಿದೆ. ಪರಿವರ್ತನೆ ಅನ್ನುವುದು ನಮ್ಮ ಅಂತರಾತ್ಮದಿಂದ ಪ್ರಾರಂಭಗೊಂಡಾಗ ಮಾತ್ರ ಜಗತಿಗೆ ಧನಾತ್ಮಕತೆಯನ್ನು ಪಸರಿಸಲು ಸಾಧ್ಯ ಎಂಬುದಾಗಿ ಮೈ ಅಂತರಾತ್ಮ ಮತ್ತು ಆಡ್ ಐಡಿಯಾ

ಲಾಕ್‌ಡೌನ್ ಸಂಕಷ್ಟಕ್ಕೀಡಾದ ರೈತ ಸಮುದಾಯ: ನೆರವಿನ ಹಸ್ತ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ

ಕೋವಿಡ್ ಲಾಕ್‌ಡೌನ್‌ನಿಂದಾಗಿ ರೈತ ಸಮುದಾಯ ಸಂಕಷ್ಟಕ್ಕೀಡಾಗಿದ್ದು, ಈ ಸಂಕಷ್ಟದ ಪರಿಹಾರಕ್ಕೆ ಒತ್ತಾಯಿಸಿ ರಾಜ್ಯ ರೈತ ಸಂಘದ ಕರೆಯ ಮೇರೆಗೆ ರಾಜ್ಯಾದ್ಯಂತ ಎಲ್ಲಾ, ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ರೈತರಿಂದ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದು ಮಂಗಳೂರಿನಲ್ಲೂ ರೈತ ಮುಖಂಡರು ಅಪರ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ ಪುಣಚ ಅವರು, ಕೊರೊನಾ ಮೊದಲ ಅಲೆಯು

ಪಚ್ಚನಾಡಿ ತ್ಯಾಜ್ಯ ಕುಸಿತ ಪುನರಾರ್ವತನೆಯಾಗದಂತೆ ನಿರ್ಣಯ :ಪಾಲನಾ ಸಭೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿ

ಮುಂಗಾರು ಮಳೆಯ ಅವಧಿಯಲ್ಲಿ ಪಚ್ಚನಾಡಿಯ ಘನತ್ಯಾಜ್ಯ ಲ್ಯಾಂಡ್ ಫೀಲ್ ಘಟಕದ ತ್ಯಾಜ್ಯ ಕುಸಿತ ದುರಂತ ಈ ಬಾರಿ ಪುನರಾವರ್ತನೆಗೊಳ್ಳದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕಳೆದ ವಾರ ಈಗಾಗಲೇ ಸಭೆ ನಡೆದಿದ್ದು, ಆ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಪಾಲನೆ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಯಿತು. ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಮೇಯರ್

ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ: ಧರೆಗುರುಳಿದ ವಿದ್ಯುತ್ ಕಂಬ

ಕರಾವಳಿಯಲ್ಲಿ ಬಿರುಸುಗೊಂಡ ಮಳೆಯಿಂದಾಗಿ ಅಲ್ಲಲ್ಲಿ ವ್ಯಾಪಕವಾಗಿ ಹಾನಿಯಾಗುತ್ತಿದ್ದು, ನಗರದ ಮಂಗಳಾದೇವಿ ಸಮೀಪದ ರಾಮಕೃಷ್ಣ ಮಿಷನ್ ಬಳಿಯಲ್ಲಿ ಗಾಳಿಮಳೆಗೆ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ನಡೆದಿದೆ. ಇಂದು ಬೆಳಗ್ಗೆ ಸುಮಾರು 5.30 ರ ವೇಳೆಗೆ ಈ ಘಟನೆ ನಡೆದಿದ್ದು, ೫ ವಿದ್ಯುತ್ ಕಂಬಗಳು ಧರೆಗುರಳಿದ್ದು, ವಾಹನ ಸಂಚಾರಕ್ಕೆ ತೊಡಕ್ಕುಂಟಾಗಿತ್ತು. ಇನ್ನು ಘಟನೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ

 ಅರ್ಕುಳ ಶ್ರೀ ವರದೇಶ್ವರ ದೇವಸ್ಥಾನದ ಡ್ರೈನೇಜ್ ಸಮಸ್ಯೆ: ಶಾಸಕ ಡಾ ವೈ ಭರತ್ ಶೆಟ್ಟಿ ಭೇಟಿ

ಇತಿಹಾಸ ಪ್ರಸಿದ್ಧ ಸುಮಾರು 800 ವರ್ಷಗಳಷ್ಟು ಪ್ರಾಚೀನ ಸ್ವಯಂಭೂ ಅರ್ಕುಳ  ಶ್ರೀವರದೇಶ್ವರ ದೇವಸ್ಥಾನ ಬಳಿ ರೈಲ್ವೆ ಇಲಾಖೆಯವರು ಗೋಡೆಕಟ್ಟುವ ಕಾಮಗಾರಿ ಸಂದರ್ಭದಲ್ಲಿ ದೇವಸ್ಥಾನದ ಡ್ರೈನೇಜ್ ವ್ಯವಸ್ಥೆಗೆ ಲೋಪವಾಗಿತ್ತು. ಇದರ ಪರಿಣಾಮ ದೇವಸ್ಥಾನದ ಅಂಗಣ ತುಂಬಾ ಮಳೆನೀರು ತುಂಬಿಕೊಂಡಿತ್ತು. ಈ ವಿಷಯವನ್ನು ಅರ್ಕುಳ  ಗ್ರಾಮಸ್ಥರು ಶಾಸಕರಾದ ಡಾ ವೈ ಭರತ್ ಶೆಟ್ಟಿಯವರಲ್ಲಿ ತಿಳಿಸಿದಾಗ  ಕೂಡಲೇ ಸ್ಪಂದಿಸಿ  ರೈಲ್ವೆ ಇಲಾಖೆಯವರೊಂದಿಗೆ ಮಾತನಾಡಿ ತ್ವರಿತ ವಾಗಿ

ಮಂಗಳೂರಿನಲ್ಲಿ ಮತ್ತೊಂದು ಪುರಾತನ ಬಾವಿ ಪತ್ತೆ

ಮಂಗಳೂರಿನ ನವಭಾರತ್ ಸರ್ಕಲ್ ನ್ನು ಸ್ಮಾರ್ಟ್ ಸಿಟಿ ಕಾಮಗಾರಿಯಡಿ ಹೊಸದಾಗಿ ನಿರ್ಮಿಸಲು ಶುಕ್ರವಾರ ರಾತ್ರಿ ನೆಲಸಮ ಮಾಡಲಾಗಿತ್ತು. ಇಂದು ಕಾಮಗಾರಿಗೆ ಕೆಲಸ ನಡೆಯುತ್ತಿದ್ದ ವೇಳೆ ಸಿಮೆಂಟ್ ಸ್ಲ್ಯಾಬ್ ನ ಕೆಳಗೆ ಬಾವಿಯೊಂದು ಪತ್ತೆಯಾಗಿದೆ. ಸುಮಾರು 20 ವರ್ಷಗಳ ಹಿಂದಿನ ಬಾವಿಯಾಗಿರಬಹುದು ಎಂದು ಅಂದಾಜಿಸಲಾಗಿದೆ. ಬಾವಿಯನ್ನು ಕಾಂಕ್ರಿಟ್ ಸ್ಲ್ಯಾಬ್ ಹಾಕಿ ಮುಚ್ಚಲಾಗಿತ್ತು, ಕಾಮಗಾರಿ ವೇಳೆ ಮಣ್ಣು ಕುಸಿದು ಬಾವಿ ಕಾಣಿಸಿಕೊಂಡಿದ್ದು ಸಾರ್ವಜನಿಕರಿಗೆ ಆಶ್ಚರ್ಯ

ಉಚಿತವಾಗಿ ಲಸಿಕೆ ನೀಡುವ ಯೋಜನೆ ರೂಪಿಸುವಂತೆ ದ.ಕ. ಜಿಲ್ಲಾಧಿಕಾರಿಯವರಿಗೆ ಮನವಿ

ಕೊವಿಡ್ ಲಸಿಕೆಯ ಕುರಿತಂತೆ ಎಷ್ಟೇ ತಾರ್ಕಿಕ ಚರ್ಚೆಗಳು ನಡೆಯುತ್ತಿದ್ದರೂ, ಕೊರೊನ ಸೋಂಕು ಹರಡದಂತೆ ತಡೆಯುವ ಸದ್ಯಕ್ಕಿರುವ ಏಕೈಕ ಉಪಾಯ ಲಭ್ಯವಿರುವ ಲಸಿಕೆಯನ್ನು ಹಾಕಿಸಿಕೊಳ್ಳುವುದೆಂಬುದು ಎಲ್ಲ ತಜ್ಞರ ಒಮ್ಮತದ ಸಲಹೆಯಾಗಿದೆ. ಆದ್ದರಿಂದಲೇ ನಮ್ಮ ಕೇಂದ್ರ ಮತ್ತು ರಾಜ್ಯ ಸರಕಾರಗಳೂ ವ್ಯಾಕ್ಸಿನೇಸನ್ ಅಭಿಯಾನವನ್ನ ಸಮರೋಪಾದಿಯಲ್ಲಿ ನಡೆಸುತ್ತಿವೆ. ಎಲ್ಲ ದೇಶಗಳೂ ಉಚಿತ ವ್ಯಾಕ್ಸಿನೇಸನ್ ಮಾಡುತ್ತಿದ್ದು, ನಮ್ಮ ದೇಶದಲ್ಲೂ ಉಚಿತ ಲಸಿಕೆ ಎಲ್ಲರಿಗೂ ಸಿಗಬೇಕೆಂಬುದು ಜನರ

ಕಾರ್ಮಿಕರ ಕೊರತೆಯ ನಡುವೆಯೂ ಕಾಮಗಾರಿಗೆ ವೇಗ – ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು ಮಹಾನಗರ ಪಾಲಿಕೆಯ ಕಂಬ್ಳ ವಾರ್ಡ್ ಹಾಗೂ ಡೊಂಗರಕೇರಿ ವಾರ್ಡಿಗೆ ಸಂಬಂಧಪಟ್ಟ ಶಾರದಾ ವಿದ್ಯಾಲಯ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮೇಯರ್ ಪ್ರೇಮಾನಂದ ಶೆಟ್ಟಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಶಾಸಕ ಕಾಮತ್, ಕೋವಿಡ್ ಕಾರಣದಿಂದ ಕಾರ್ಮಿಕರು ಊರಿಗೆ ತೆರಳಿದರೂ ಕಾಮಗಾರಿ ಸ್ಥಗಿತಗೊಳಿಸದಂತೆ ಎಚ್ಚರವಹಿಸಲಾಗಿದೆ. ಒಳಚರಂಡಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಹಾಗೂ ಮಳೆ ನೀರು ಹಾದು ಹೋಗುವ ಚರಂಡಿಯ ಕಾಮಗಾರಿ, ರಸ್ತೆ