Home Posts tagged #mangalore (Page 5)

ಬಂಟ್ವಾಳ: V4 ನ್ಯೂಸ್‌ನ ವರದಿಗಾರ ಸಂದೀಪ್ ಸಾಲ್ಯಾನ್‌ಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆ ಪ್ರಯುಕ್ತ ಮಾ.24ರಂದು ಬಂಗ್ಲೆ ಮೈದಾನದಲ್ಲಿ ಜರುಗಲಿರುವ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಪ್ರದಾನ ನಡೆಯಲಿದೆ. V4 ನ್ಯೂಸ್ ಬಂಟ್ವಾಳ ವರದಿಗಾರ ಸಂದೀಪ್ ಸಾಲ್ಯಾನ್ ಮಾಧ್ಯಮ ಕ್ಷೇತ್ರದ

ಮಂಗಳೂರು : ಮಾ.23ರಂದು ಬೋಳೂರಿನ ಪಾದೆಮನೆ ಶ್ರೀ ಕಲ್ಲುರ್ಟಿ ಕಲ್ಕುಡ ಆದಿ ದೈವಸ್ಥಾನ ದಲ್ಲಿ ವರ್ಷಾವಧಿ ನೇಮೋತ್ಸವ

ಮಂಗಳೂರಿನ ಬೋಳೂರಿನ ಪಾದೆಮನೆ ಶ್ರೀ ಕಲ್ಲುರ್ಟಿ-ಕಲ್ಕುಡ ಆದಿ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವವು ಮಾರ್ಚ್ 23ರಂದು ಧಾರ್ಮಿಕ ವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಮಂಗಳೂರು ತಾಲೂಕಿನಲ್ಲಿ ಕಲ್ಲುರ್ಟಿ ದೈವಕ್ಕೆ ಆದಿ ಸ್ಥಳವಾದ ಪಾದೆಮನೆಯಲ್ಲಿ ದಿವಂಗತ ಸೋಮಪ್ಪ ಪೂಜಾರಿ ಅವರ ಮನೆಯಲ್ಲಿ ಉಗಣಬೈದೆದಿ ಕಾಲದಿಂದ ನಂಬಿಕೊಂಡ ಬಂದಂತಹ ಮಹಾ ಕಟಾಕ್ಷದ ಶ್ರೀ ಕಲ್ಲುರ್ಟಿ ಕಲ್ಕುಡ ಮತ್ತು ಗುಳಿಗ ಪಂಜಿರ್ಲಿ ಹಾಗೂ ರಾಹು ದೈವಗಳ ವರ್ಷಾವಧಿ ನೇಮೋತ್ಸವ

ಮೂಡುಬಿದಿರೆ : ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಮಾಜಿ ಅಧ್ಯಕ್ಷೆ ಪ್ರಭಾವತಿ ಆಚಾರ್ಯ ನಿಧನ

ಮೂಡುಬಿದಿರೆ : ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದ ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಮಾಜಿ ಅಧ್ಯಕ್ಷೆ, ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಪುತ್ತಿಗೆಮನೆ ಎಂ. ಗೋಪಾಲ ಆಚಾರ್ಯರ ಪತ್ನಿ ಪ್ರಭಾವತಿ ಜಿ. ಆಚಾರ್ಯ (75) ಅವರು ಬುಧವಾರ ಮುಂಜಾನೆ ನಿಧನ ಹೊಂದಿದರು.ಮೂಡುಬಿದಿರೆ ಇನ್ನರ್ ವೀಲ್ ಕ್ಲಬ್ ನಲ್ಲಿ ಸಕ್ರಿಯರಾಗಿದ್ದಾಗ ಪಲ್ಸ್ ಪೋಲಿಯೋ ಕುರಿತಾದ ಪ್ರಹಸನ ಸಹಿತ ಮನೆ ಮನೆಗೆ ಮಾಹಿತಿ ನೀಡುವ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.ಆನೆಗುಡ್ಡೆ ಚರ್ಚ್ ನಲ್ಲಿ ನಡೆದ

ಪಡುಬಿದ್ರಿಯಲ್ಲಿ ಆತಂಕ ಸೃಷ್ಟಿಸಿದ ಬೆಂಕಿ ಅನಾಹುತ

ದೇವಳದ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರ ಇಕ್ಕೆಲಲ್ಲಿ ಬೃಹತ್ತಾಗಿ ಕಾಣಿಸಿಕೊಂಡ ಬೆಂಕಿ ಕೆಲ ಹೊತ್ತು ಆತಂಕ ಸೃಷ್ಟಿಸಿದೆ. ಜಿಯೋ ನೆಟ್‌ವರ್ಕ್ ಕಂಪನಿಯು ಬಳಕೆ ಮಾಡಿ ಹೆಚ್ಚುವರಿಯಾದ ಕೇಬಲ್ ಬಂಡಲನ್ನು ರಸ್ತೆಯಂಚಿನಲ್ಲಿ ಉಳಿಸಿ ಹೋಗಿದ್ದು, ಆ ಕೇಬಲ್ ರಾಶಿಗೆ ಬೆಂಕಿ ತಗುಲಿ ಪರಿಸವೆಲ್ಲಾ ಪಸರಿಸಿದೆ. ತೀರ ಸಮೀಪದಲ್ಲೇ ವಾಸದ ಮನೆಗಳಿದ್ದು ಆತಂಕ ಸೃಷ್ಟಿಯಾಗಿದ್ದು, ಪಡುಬಿದ್ರಿ ಪೊಲೀಸರು, ಗ್ರಾ.ಪಂ. ಪ್ರತಿನಿಧಿಗಳು, ಹೆಜಮಾಡಿ ಟೋಲ್ ಸಿಬ್ಬಂದಿಗಳು ಹಾಗೂ

ಉಳ್ಳಾಲ : ಲಾರಿ ನಂಬರ್ ಪ್ಲೇಟ್ ಗ್ರೀಸ್ ಹಚ್ಚಿ ಮರಳು ಸಾಗಾಟ

ಮಂಗಳೂರು : ಲಾರಿಗಳ ನಂಬರ್ ಪ್ಲೇಟ್‌ಗೆ ಗ್ರೀಸ್ ಹಚ್ಚಿ ಹಾಗೂ ಸ್ಟಿಕ್ಕರ್ ಬಳಸಿ ಮರೆಮಾಚಿಸಿ ರಾತ್ರಿಯಿಡೀ ವ್ಯಾಪಕವಾಗಿ ಮರಳು ಸಾಗಾಟವನ್ನು ಕೊಣಾಜೆ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆಗಳ ಸರಹದ್ದಿನಲ್ಲಿ ಪೊಲೀಸರ ಸಮ್ಮುಖದಲ್ಲೇ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ನಿನ್ನೆ ತಡರಾತ್ರಿ ಅಡ್ಯಾರ್ ಕಣ್ಣೂರು ಸಮೀಪ ನಂಬರ್ ಪ್ಲೇಟ್ ಮಾಸಿದ ಮರಳು ಸಾಗಾಟದ ಲಾರಿ ಡಿವೈಡರಿಗೆ ಢಿಕ್ಕಿ ಹೊಡೆದ ಪರಿಣಾಮ ಸಾರ್ವಜನಿಕರು ಲಾರಿಗಳನ್ನು ತಡೆಹಿಡಿದು ನಡೆಸಿದ

ಮೂಡಬಿದಿರೆ : ಮಾ. 23ರಂದು ದೊಡ್ಡಮನೆ ರಸ್ತೆಯಲ್ಲಿ 39ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ

ಸಾರ್ವಜನಿಕ ಶ್ರೀ ಶನಿಪೂಜಾ ಸಮಿತಿ ದೊಡ್ಡಮನೆ ರಸ್ತೆ ಮೂಡಬಿದಿರೆ ಇದರ ಆಶ್ರಯದಲ್ಲಿ 39ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯು ಮಾರ್ಚ್ 23ರಂದು ದೊಡ್ಡಮನೆ ರಸ್ತೆಯ ಅಶ್ವತ್ಥಕಟ್ಟೆಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಮಾರೂರು ಖಂಡಿಗ ಶ್ರೀಯುತ ರಾಮದಾಸ ಅಸ್ರಣ್ಣ ಅವರ ನೇತೃತ್ವದಲ್ಲಿ ಶನಿಪೂಜೆಯು ನಡೆಯಲಿದ್ದು, ಬೆಳಿಗ್ಗೆ 9 ಗಂಟೆಗೆ ಕಟ್ಟೆಯಲ್ಲಿ ನಾಗಬನಕ್ಕೆ ನಾಗತಂಬಿಲ, ಸಂಜೆ 6 ಗಂಟೆಗೆ ಕಲಶ ಪ್ರತಿಷ್ಠೆ, ಸಂಜೆ 6.30ಕ್ಕೆ ಶನಿಪೂಜೆ ಪ್ರಾರಂಭ, ರಾತ್ರಿ

ಸುಳ್ಯ : ಅಭಿವೃದ್ಧಿ ಕಾಣದ ರಸ್ತೆ: ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಸುಳ್ಯ ತಾಲೂಕಿನ ಕಳಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ 1ನೇ ವಾರ್ಡ್‌ನ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರಿಸುವುದಾಗಿ ಎಚ್ಚರಿಕಾ ಬ್ಯಾನರನ್ನು ಸಾರ್ವಜನಿಕ ಸ್ಥಳದಲ್ಲಿ ಅಳವಡಿಸುವ ಮೂಲಕ ರಾಜಕಾರಣಿಗಳನ್ನು, ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ. ಕಳಂಜ ಗ್ರಾ.ಪಂ. ವ್ಯಾಪ್ತಿಯ ಒಂದನೇ ವಾರ್ಡ್ ಪಂಜಿಗಾರ್ ಮಣಿಮಜಲು ಸಂಪರ್ಕ ರಸ್ತೆ ಹಾಗೂ ಪೂರಕ ದಾರಿದೀಪಗಳಿಲ್ಲದೆ ಗ್ರಾಮಸ್ಥರಾದ ನಾವು ಸಂಕಷ್ಟ ಅನುಭವಿಸುತ್ತಿದ್ದು, ಈ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೂ ಸಹಿತ ಕಳಂಜ

ಮಂಗಳೂರು : ಕರಾವಳಿಯಲ್ಲಿ ಮೂರು ದಿನಗಳ ಕಾಲ ಮಳೆ

ಕರ್ನಾಟಕದ ಕರಾವಳಿ ಮತ್ತು ಮಲೆನಾಡು, ತೆಂಕಣ ಒಳನಾಡಿನಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರಾವಳಿಯಲ್ಲಿ ಮೋಡ ಮುಚ್ಚಿದ ವಾತಾವರಣ ಮುಂದುವರಿಯಲಿದೆ. ಗಾಳಿ ಕೂಡ ಬಲವಾಗಿ ಬೀಸಲಿದೆ ಎನ್ನಲಾಗಿದೆ. ಕರ್ನಾಟಕದ ಬಡಗಣ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಕೊಪ್ಪಳದಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅದು ಆ ಸುತ್ತ ಕೆಲ ದಿನಗಳ ಕಾಲ ‌ಮುಂದುವರಿಯುತ್ತದೆ ಎಂದೂ ತಿಳಿಸಲಾಗಿದೆ.

ಲೋಕಸಭಾ ಚುನಾವಣೆ: ಉಡುಪಿ ಚಿಕ್ಕಮಗಳೂರಿಗೂ ಸದಾನಂದ ಗೌಡರ ಹೆಸರು

ಮಾಜೀ ಮುಖ್ಯಮಂತ್ರಿ ಸದಾನಂದ ಗೌಡರ ಹೆಸರು ಈಗ ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೂ ಕೇಳಿ ಬರುತ್ತಿದೆ. ಅವರು ಹಿಂದೆ ಅಲ್ಲಿ ಸಂಸದರಾಗಿದ್ದರು. 2009ರ ಲೋಕಸಭಾ ಚುನಾವಣೆಯಲ್ಲಿ ಡಿ. ಕೆ. ಸದಾನಂದ ಗೌಡರು ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ಆದರೆ ಅವರಿಗೆ ದಿಢೀರನೆ ಮುಖ್ಯಮಂತ್ರಿ ಆಗುವ ಅವಕಾಶ ಬಂದುದರಿಂದ ರಾಜೀನಾಮೆ ನೀಡಿದ್ದರು. ಉಪ ಚುನಾವಣೆಯಲ್ಲಿ ಜಯಪ್ರಕಾಶ್ ಹೆಗ್ಡೆ ಗೆದ್ದಿದ್ದರು. ಈಗ ಜಯಪ್ರಕಾಶ್ ಹೆಗ್ಡೆ ಅವರ ಜೊತೆಗೆ ಸದಾನಂದ

ಉಳ್ಳಾಲ: ಮಾದಕ ವಸ್ತು ಕೋಕೆನ್ ಪತ್ತೆ ಇಬ್ಬರು ಆರೋಪಿಗಳ ಸೆರೆ

ಉಳ್ಳಾಲ: ಗೋವಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್ ನ್ನು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿದ ಸಿಸಿಬಿ ಪೊಲೀಸರ ತಂಡ 35 ಗ್ರಾಂ ಕೋಕೆನ್ ನ್ನು ವಶಪಡಿಸಿಕೊಂಡಿದ್ದಾರೆ‌. ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಅಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿಯಲ್ಲಿ ದ್ವಿಚಕ್ರ ವಾಹನದಲ್ಲಿ