Home Posts tagged #mangaluru (Page 13)

ಕೀರ್ತನೆಯ ಹರಿಕಾರ ಸಂತಶ್ರೇಷ್ಠ ಕನಕದಾಸ ಜಯಂತಿ

ಆಲೂರು:ಪಟ್ಟಣದ ಮುಖ್ಯರಸ್ತೆಯಲ್ಲಿ ಕನಕದಾಸರ ಭಾವಚಿತ್ರ ಮೆರವಣಿಗೆ ಮಾಡಿ ನಂತರ ವೇದಿಕೆ ಕಾರ್ಯಕ್ರಮವನ್ನು ತಾಲ್ಲೂಕುವಕಚೇರಿ ಆವರಣದಲ್ಲಿ ಆಯೋಜಿಸಿದ್ದು,ಕಾರ್ಯಕ್ರಮವನ್ನು ಆಲೂರು ಸಕಲೇಶಪುರ ಕಟ್ಟಾಯ ವಿಧಾನಸಭಾ ಶಾಸಕರಾದ ಸಿಮೆಂಟ್ ಮಂಜು ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕನಕದಾಸರ ಜನ್ಮ

ಇಂದಿರಾ ಹೆಗ್ಗಡೆ ಅವರ ಕ್ಷೇತ್ರ ಕಾರ್ಯ ದಾಖಲೀಕರಣ ತುಳುವಿಗೆ ಮಾರ್ಗದರ್ಶಿ ಕೃತಿ: ಡಾ.ಆಶಾಲತಾ ಸುವರ್ಣ

ಮಂಗಳೂರು: ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ ಅವರು ತನ್ನ ಜಾನಪದೀಯ ಸಂಶೋಧನೆಯ ಕ್ಷೇತ್ರ ಕಾರ್ಯದ ಅನುಭವಗಳನ್ನು ದಾಖಲಿಸಿರುವ ಮೂಲಕ ಸಂಶೋಧನಾ ಕ್ಷೇತ್ರಕ್ಕೆ ಬರುವವರಿಗೆ ಬಹುದೊಡ್ಡ ಮಾರ್ಗದರ್ಶಿ ಕೊಡುಗೆಯನ್ನು ನೀಡಿದ್ದಾರೆ, ತುಳುವಿನಲ್ಲಿ ಇದೊಂದು ಮಹತ್ವದ ಕೃತಿಯಾಗಲಿದೆ ಎಂದು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಆಶಾಲತಾ ಸುವರ್ಣ ಅವರು ಹೇಳಿದರು. ಅವರು ತುಳು ಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ಡಾ.ಇಂದಿರಾ ಹೆಗ್ಗಡೆ ಅವರ ‘ಬಾರಗೆರೆ

ಲಯನ್ಸ್ ಜಿಲ್ಲಾ 317D ‘ಸನ್ಮಿತ್ರ’ ಡೈರೆಕ್ಟರಿ ಬಿಡುಗಡೆ

ರೋಹನ್ ಕಾರ್ಪೊರೇಶನ್ ಸಂಸ್ಥೆಯ ಸ್ಥಾಪಕ ಡಾ.ರೋಹನ್ ಮೊಂತೆರೋ ರವರು ಲಯನ್ಸ್ ಜಿಲ್ಲಾ 317D ರ ‘ಸನ್ಮಿತ್ರ’ ಜಿಲ್ಲಾ ಡೈರೆಕ್ಟರಿಯನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಯನ್ಸ್ ಕ್ಲಬ್‌ಗಳು ಕೈಗೊಂಡಿರುವ ವಿವಿಧ ಸೇವಾ ಚಟುವಟಿಕೆಗಳನ್ನು ಮೆಚ್ಚಿಕೊಂಡು, “ಲಯನ್ಸ್ ಜಿಲ್ಲಾ 317D ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ನನಗೆ ಸಂತೋಷವಾಗಿದೆ” ಎಂದು ಹೇಳಿದರು. ಈ ಜಿಲ್ಲೆಯಲ್ಲಿ ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಹಾಗೂ

ಕಿನ್ನಿಗೋಳಿಯಲ್ಲಿ ಐದು ಮಹಾಶಕ್ತಿ ಕೇಂದ್ರಗಳ ಬಿಎಲ್ ಬಿ-2 ಕಾಯಾ೯ಗಾರ

ಮೂಡುಬಿದಿರೆ : ಬಿಜೆಪಿ ಮೂಲ್ಕಿ – ಮೂಡುಬಿದಿರೆ ಮಂಡಲದ ಕಿನ್ನಿಗೋಳಿ, ಮೂಲ್ಕಿ, ಹಳೆಯಂಗಡಿ, 62ನೇ ತೋಕೂರು ಹಾಗೂ ಬಜ್ಪೆ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬಿಎಲ್ ಎ-2 ಕಾರ್ಯಾಗಾರ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಬುಧವಾರ ನಡೆಯಿತು. ದ. ಕ ಲೋಕಸಭಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಉಮಾನಾಥ ಎ.ಕೋಟ್ಯಾನ್, ಜಿಲ್ಲಾ‌ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಸುನೀಲ್ ಅಳ್ವ, ಶಾಂತಿಪ್ರಸಾದ್ ಹೆಗ್ಡೆ, ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಮಂಡಲ

ಶ್ರೀ ರಾಮಕೃಷ್ಣ ಶಾಲೆಯ ವಾರ್ಷಿಕ ಕ್ರೀಡೋತ್ಸವ

ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನ ಶ್ರೀ ರಾಮಕೃಷ್ಣ ಶಾಲೆಯ ವಾರ್ಷಿಕ ಕ್ರೀಡೋತ್ಸವವು ಮಂಗಳಾ ಕ್ರೀಡಾಂಗಣದಲ್ಲಿ ಜರುಗಿತು. ಶಾಲೆಯ ಹಳೆ ವಿದ್ಯಾರ್ಥಿಗಳಾದ ಅಂತರರಾಷ್ಟಿçÃಯ ಈಜು ಪಟುಗಳಾದ ಸಾನ್ಯ ಡಿ. ಶೆಟ್ಟಿ ಮತ್ತು ರಚನ ರಾವ್ ಅತಿಥಿಗಳಾಗಿ ಆಗಮಿಸಿದ್ದರು. ವೇದಿಕೆಯಲ್ಲಿ ಶಾಲಾ ಪ್ರಾಂಶುಪಾಲೆ ಪ್ರೆಸಿಲ್ಲ ಡಿಸೋಜಾ, ಉಪಪ್ರಾಂಶುಪಾಲೆ ರೂಪ ಮತ್ತು ಹಳೆ ವಿದ್ಯಾರ್ಥಿ ಸಂಘದ ಸದಸ್ಯ ಗೌತಮ್ ಭಂಡಾರಿ, ಪೋಷಕರು ಮತ್ತು ರಕ್ಷಕ ಶಿಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು.

ರಾಷ್ಟ್ರೀಯ ಕಚೇರಿ ನಿರ್ಲಕ್ಷ್ಯದಿಂದ ಯುವಕರ ಉತ್ಸಾಹ ಕುಂಠಿತ: ಪಿ.ಜಿ.ಆರ್. ಸಿಂಧಿಯಾ ಅಸಮಾಧಾನ

ಮೂಡುಬಿದಿರೆ: ಕರ್ನಾಟಕ ಘಟಕವು ಹಲವು ವರ್ಷಗಳಿಂದ ಮಾಡುತ್ತಿರುವ ನಿಸ್ವಾರ್ಥ ಸೇವೆಗೆ ಅಗತ್ಯ ಬೆಂಬಲ ಹಾಗೂ ಮೆಚ್ಚುಗೆ ಸಿಗುತ್ತಿಲ್ಲ ಎಂದು ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧಿಯಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಭಾನುವಾರ ಮೂಡಬಿದಿರೆಯ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕನ್ನಡಭವನದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ಕರ್ನಾಟಕ ರಾಜ್ಯ ಘಟಕ, ದಕ್ಷಿಣ ಕನ್ನಡ ಘಟಕ ಹಾಗೂ

ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾಗಿ ಸೂರ್ಯಕಾಂತ್ ಜೆ.ಸುವರ್ಣ ಆಯ್ಕೆ

ಮೂಲ್ಕಿ:ಜಯ ಸಿ ಸುವರ್ಣ ‌ಸ್ಥಾಪಿತ ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮುಲ್ಕಿ ಇದರ ನೂತನ ಅಧ್ಯಕ್ಷರಾಗಿ ಸೂರ್ಯಕಾಂತ್ ಜೆ ಸುವರ್ಣ ಆಯ್ಕೆಯಾಗಿದ್ದಾರೆ. ದಿನಾಂಕ 26/10/2025ರ ಭಾನುವಾರದಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿಯಲ್ಲಿ ನಡೆದ ಈ ಪ್ರಕ್ರಿಯೆಯಲ್ಲಿನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಉಪಾಧ್ಯಕ್ಷರಾಗಿ ಬಿ.ಎನ್.ಶಂಕರ ಪೂಜಾರಿ ಬ್ರಹ್ಮಾವರ, ಪ್ರಭಾಕರ ಬಂಗೇರ ಕಾರ್ಕಳ, ಪ್ರಧಾನ ಕಾರ್ಯದರ್ಶಿ ಜಯಾನಂದ ಮಂಗಳೂರು, ಜತೆ ಕಾರ್ಯದರ್ಶಿ ಗಣೇಶ್

ಮಂಗಳೂರು: ಕುಂಜತ್ತಬೈಲ್‌ನ ಮುಡಾ ಲೇಔಟ್‌ಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ, ಪರಿಶೀಲನೆ

ಮಂಗಳೂರು ಕುಂಜತ್ತಬೈಲ್ ನ ಮೂಡಾ ಲೇಔಟ್ ಗೆ ದ.ಕಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.ಇದೇ ವೇಳೆ ಮುಡಾ ಆಯುಕ್ತರಾದ ಮುಹಮ್ಮದ್ ನಜೀರ್ ಅವರಿಂದ ಮಾಹಿತಿಯನ್ನ ಪಡೆದುಕೊಂಡರು. ಈ ವೇಳೆ ಜಿಲ್ಲಾಧಿಕಾರಿ ದರ್ಶನ್, ಮುಡಾ ಅಧ್ಯಕ್ಷ ಸದಾಶಿವ, ಮತ್ತಿತರರು ಉಪಸ್ಥಿತರಿದ್ದರು.

ಕುಂದಾಪುರ: ಶ್ರೀ ಸಾಯಿ ಆಸ್ಪತ್ರೆಯಲ್ಲಿ24 ಗಂಟೆ ಅಪಘಾತ ಮತ್ತು ತುರ್ತು ಚಿಕಿತ್ಸಾ ಘಟಕದ ಉದ್ಘಾಟನೆ ಸಮಾರಂಭ

ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಜಯಕರ ಶೆಟ್ಟಿ ಶ್ರೀ ಸಾಯಿ ಆಸ್ಪತ್ರೆಯಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗ, ಟ್ರಾಮಾ ಮತ್ತು ತುರ್ತು ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ ಕು೦ದಾಪುರದ೦ತಹ ಅಭಿವೃದ್ಧಿ ಹೊಂದುತ್ತಿರುವ ಪ್ರದೇಶಗಳಿಗೆ ತುರ್ತು ಮತ್ತು ಅಪಘಾತ ಚಿಕಿತ್ಸಾ ಸೇವೆಗಳನ್ನು ವಿಸ್ತರಿಸುವುದು ಜೀವ ರಕ್ಷಣೆಯಲ್ಲಿ ಅತ್ಯಂತ ಪ್ರಮುಖ ಹೆಜ್ಜೆ ತುರ್ತು ಪರಿಸ್ಥಿತಿಗಳಲ್ಲಿ ಸಮಯೋಚಿತ ವೈದ್ಯಕೀಯ ಪ್ರತಿಕ್ರಿಯೆ

ದುಬೈಯಲ್ಲಿ ಅಕ್ಟೋಬರ್ 25 ರಂದು “ದುಬೈ ಗಡಿನಾಡ ಉತ್ಸವ -2025”

ದುಬೈ : ಯುಎಇಯಲ್ಲಿ ಇರುವ ಎಲ್ಲಾ ಗಡಿನಾಡಿನ ಹಾಗೂ ಕರುನಾಡಿನ ಕನ್ನಡಿಗರನ್ನು ಒಟ್ಟುಗೂಡಿಸಿ “ದುಬೈ ಗಡಿನಾಡ ಉತ್ಸವ -2025″ವನ್ನು ಅದ್ದೂರಿಯಾಗಿ ಆಚರಿಸುವ ಹಾಗೂ ಈ ಕಾರ್ಯಕ್ರಮ ಒಳ್ಳೆಯ ರೀತಿಯಲ್ಲಿ ಮೂಡಿಬರಲಿ ಎಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ಗಲ್ಫ್ ನ ಅಧ್ಯಕ್ಷರಾದ ಅಶ್ರಫ್ ಶಾ ಮಾಂತುರು ರವರು ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡುತ್ತಾ ಶುಭವನ್ನು ಹಾರೈಸಿದರು.ಅಕ್ಟೋಬರ್ 25 ರಂದು ಸಂಜೆ ನಾಲ್ಕರಿಂದ ರಾತ್ರಿ ಹನ್ನೊಂದರ ವರೆಗೆ