ಮೂಲ್ಕಿ:ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿ (ರಿ.)ಇದರ ರಜತ ಮಹೋತ್ಸವವು ಮಾರ್ಚ್ 10ರಂದು ನಡೆಯಲಿದ್ದು, ಇದರ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಸಭಾಂಗಣದಲ್ಲಿ ನಡೆಯಿತು. ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ.ರಾಜಶೇಖರ ಕೋಟ್ಯಾನ್ ರವರು ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಮಯದಲ್ಲಿ ಉಡುಪಿ
ಮಂಗಳೂರಿನ ಕೊಟ್ಟಾರದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸ್ಕೂಟರ್ಗೆ ಲಾರಿಯೊಂದು ಢಿಕ್ಕಿಯಾಗಿದ್ದು, ರಸ್ತೆಗೆ ಎಸೆಯಲ್ಪಟ್ಟ ಸ್ಕೂಟರ್ ಸವಾರನ ಮೇಲೆ ಲಾರಿ ಹರಿದು ಈ ದುರ್ಘಟನೆ ಸಂಭವಿಸಿದೆ.
ದರ್ಗಾ ಸಂದರ್ಶನಗೈಯ್ಯಲು ಬಂದಿದ್ದ ಚಿಕ್ಕಮಗಳೂರು ಮೂಲದ ಮೂವರು ಯುವಕರು ಸಮುದ್ರಪಾಲಾಗುತ್ತಿದ್ದು, ಈ ಪೈಕಿ ಓರ್ವನನ್ನು ರಕ್ಷಿಸಲಾಗಿದೆ. ಇನ್ನಿಬ್ಬರು ಸಮುದ್ರಪಾಲಾಗಿದ್ದು ಓರ್ವನ ಶವ ಪತ್ತೆಯಾಗಿದೆ. ಚಿಕ್ಕಮಗಳೂರು ನಿವಾಸಿಗಳಾದ ಬಶೀರ್ (23), ಸಲ್ಮಾನ್ (19), ಸೈಫ್ ಆಲಿ (27) ಎಂಬವರು ಉಳ್ಳಾಲ ದರ್ಗಾ ಸಂದರ್ಶನಕ್ಕೆಂದು ಬಂದವರು ಉಳ್ಳಾಲದ ಸಮುದ್ರ ತೀರಕ್ಕೆ ತೆರಳಿದ್ದಾರೆ. ಅಲ್ಲಿ ಸಮುದ್ರದ ನೀರಲ್ಲಿ ಆಟವಾಡುತ್ತಿದ್ದ ಸಂದರ್ಭ ಮೂವರು ಅಲೆಗಳ
ಅಕ್ರಮವಾಗಿ ಕೋಳಿಯಂಕ ನಡೆಯುತ್ತಿದ್ದ ಕಾಪು ಮಲ್ಲಾರಿನ ಗರಡಿ ಪ್ರದೇಶಕ್ಕೆ ದಾಳಿ ಮಾಡಿದ ಕಾಪು ಪೊಲೀಸರು ಒಂಭತ್ತು ಕೋಳಿ ಸಹಿತ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಬಲೆಗೆ ಬಿದ್ದವರು ಕೈಪುಂಜಾಲು ನಿವಾಸಿಗಳಾದ ವಿಜಿಸ್ಟನ್(42), ಫೆಡ್ರಿಕ್ ಅನ್ಮಣ್ಣ(32), ಕಟ್ ಹೌಸ್ ಮಲ್ಲಾರು ನಿವಾಸಿ ಸಂದೇಶ್(37), ಬೆಳಪು ನಿವಾಸಿ ನಿತಿನ್(30), ಇನ್ನಂಜೆ ನಿವಾಸಿ ಅಭಿಷೇಕ್ (21), ಉಡುಪಿ ಕೊಡವೂರು ನಿವಾಸಿ ಸಚಿನ್ ಕೋಟ್ಯಾನ್ (26) ಹಾಗೂ ಮಲ್ಲಾರು ನಿವಾಸಿ
ಪಡುಬಿದ್ರಿ: ಕಾಪು ಬಿರುವೆರ್ ಸೇವಾ ಸಮಿತಿ ಆಶ್ರಯದಲ್ಲಿ ಅವಳಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಕೂಟ ಸಮಾಜ ಸೇವಾ ಹಿತದೃಷ್ಟಿಯಿಂದ ಡಿ.30 ಮತ್ತು 31ಕ್ಕೆ ಕಾಪು ದಂಡತೀರ್ಥ ಮೈದಾನದಲ್ಲಿ ನಡೆಯಲಿದೆ ಎಂಬುದಾಗಿ ಸಮಿತಿಯ ಅಧ್ಯಕ್ಷ ಬಾಲಕೃಷ್ಣ ಕೋಟ್ಯಾನ್ ಹೇಳಿದ್ದಾರೆ. ಅವರು ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಸುದ್ದಿಗೋಷ್ಠಿಯ ತಿಳಿಸಿದ್ದಾರೆ. ಪಂದ್ಯಾಕೂಟ ಬಿಲ್ಲವ ಸಮಾಜದ ಯುವಕರಿಗಾಗಿ ನಡೆಯಲಿದ್ದು, ಹತ್ತು ತಂಡಗಳು ಭಾಗವಹಿಸಲಿದೆ. ಸಮಾಜದ 160 ಸದಸ್ಯರು
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭವು ಪಾಂಡೇಶ್ವರದ ಡಿಎಆರ್ ಪೆರೇಡ್ ಮೈದಾನ ಜರುಗಿತು.ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮುಖ್ಯ ಅಗ್ನಿಶಾಮಕ ಅಧಿಕಾರಿಗಳಾದ ತಿರುಮಲೇಶ್ ಬಿ.ಎಂ., ಕ್ರೀಡಾಪಟುಗಳು ಬಹಳ ಆಸಕ್ತಿಯಿಂದ ಭಾಗವಹಿಸಿರುತ್ತಾರೆ. ಕ್ರೀಡೆಯಿಂದ ದೇಹ ಮತ್ತು ಮನಸ್ಸಿನ ನೆಮ್ಮದಿ ಮತ್ತು ಆರೋಗ್ಯಕ್ಕೆ ಒಳಿತು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ
ವಿಜ್ಞಾನಿಗಳು ಜಗತ್ತಿನಲ್ಲಿ 3,90,900 ಹೂಬಿಡುವ ಸಸ್ಯಗಳನ್ನು ಗುರುತಿಸಿದ್ದಾರೆ. ಭಾರತದಲ್ಲಿ ಬೊಟಾನಿಕಲ್ ಸರ್ವೇ ಆಫ್ ಇಂಡಿಯಾ 46,000 ಹೂಬಿಡುವ ಸಸ್ಯಗಳನ್ನು ಗುರುತಿಸಿದೆ. ಸಸ್ಯಗಳಲ್ಲಿ ಸಾಮಾನ್ಯ ಮತ್ತು ಕ್ಷಣಿಕ ಅವಧಿಯವು ಎಂದು ಎರಡು ವಿಧ. ನಾವು ಕಾಡು ಗುಡ್ಡಗಳಲ್ಲಿ ಗುರುತೇ ಇಲ್ಲದ ಎಷ್ಟೋ ಹೂ ಗಿಡ ಕಾಯಿಗಳನ್ನು ಕಂಡಿದ್ದೇವೆ. ಮಂಗಳೂರಿನ ಯೆಯ್ಯಾಡಿ ಬಾರೆಬಯ್ಲು ರಸ್ತೆ ಬದಿ ಅರ್ಧ ಕಿಲೋಮೀಟರ್ನಲ್ಲಿ ಕಂಡ ಕೆಲವು ಹೆಸರು ತಿಳಿಯದ ಹೂವುಗಳು ಇವು.
ಓಮ್ನಿ ಹಾಗೂ ಕ್ರೆಟಾ ಕಾರು ಢಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟು, ಓಮ್ನಿಯಲ್ಲಿದ್ದ 8 ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಡಿ.23ರ ಶನಿವಾರ ಮಧ್ಯಾಹ್ನ ನಡೆದಿದೆ. ಓಮ್ನಿ ಚಲಾಯಿಸುತ್ತಿದ್ದ ಸೋಮವಾರ ಪೇಟೆಯ ಚೌಡ್ಲು ಗ್ರಾಮದ ಕೆಂಚುಮನೆ ನಿವಾಸಿ ರವಿ (53) ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ. ರವಿ ಅವರ ತಾಯಿ ಮಣಿಯಮ್ಮ(75), ಪತ್ನಿ ವಾಣಿ (47), ಪುತ್ರಿ ರಿಷಾ (19), ಪುತ್ರ ಶರಣ್
ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ವ್ಯಕ್ತಿಗಳನ್ನು ನೋಡಿಕೊಳ್ಳುವ ಪ್ರಮುಖ ಸಂಸ್ಥೆಯಾದ ಸ್ನೇಹಾಲಯ ಮಾನಸಿಕ-ಸಾಮಾಜಿಕ ಪುನರ್ವಸತಿ ಕೇಂದ್ರವು ಡಿಸೆಂಬರ್ 21 ರಂದು ತನ್ನ ನಿವಾಸಿಗಳಿಗೆ ಕ್ರಿಸ್ಮಸ್ ಆಚರಣೆಯನ್ನು ಏರ್ಪಡಿಸಿತ್ತು. ನಿವಾಸಿಗಳು ಮತ್ತು ಸಿಬ್ಬಂದಿ ವರ್ಣರಂಜಿತ ಹಬ್ಬದ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು. ಸಿಬ್ಬಂದಿ ಮತ್ತು ನಿವಾಸಿಗಳು ಪ್ರದರ್ಶಿಸಿದ ಆಕರ್ಷಕ ಕ್ರಿಸ್ಮಸ್ ಸ್ಕಿಟ್ನೊಂದಿಗೆ ಆಚರಣೆಯು ಪ್ರಾರಂಭವಾಯಿತು. ಕ್ರಿಸ್ಮಸ್ ಕ್ಯಾರೋಲ್ಗಳಿಗೆ
ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಐಸಿಯುವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22ರ ತಡ ರಾತ್ರಿ ನಡೆದಿದ್ದು ಅದೃಷ್ಟವಶಾತ್ ಹೆಚ್ಚಿನ ಅನಾಹುತವೊಂದು ತಪ್ಪಿದೆ. ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ದಟ್ಟ ಹೊಗೆ ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ಭದ್ರತಾ ಸಿಬ್ಬಂದಿಗಳು ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರಿಂದ ರೋಗಿಗಳು ಅಪಾಯದಿಂದ