Home Posts tagged #mangaluru (Page 25)

ಮಂಗಳೂರಿನಲ್ಲಿ ಕೇದಗೆ ಬದಲಿಗೆ ಮುಂಡೇವು ಮಾರಿದರು…!

ನಾಗನಿಗೆ ಪ್ರಿಯವಾದ ಕೇದಗೆಗೆ ನಾಗರ ಪಂಚಮಿಯಂದು ಭಾರೀ ಬೇಡಿಕೆಯಿದ್ದು ಇದೀಗ ಮಂಗಳೂರಿನ ಕಾರ್‍ಸ್ಟ್ರೀಟ್‍ನಲ್ಲಿ ಕೇದಗೆಯ ಬದಲಿಗೆ ಮುಂಡೇವು ಎಲೆಯನ್ನು ಭಕ್ತರಿಗೆ ಮಾರಾಟ ಮಾಡಿ ಯಾಮಾರಿಸಿದ ಕುರಿತ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಾಗರಪಂಚಮಿ ದಿನದಂದು ನಾಗಾರಾಧನೆಗೆ ಕೇದಗೆ ಎಂದು ಖರೀದಿಸಿ ತಂದ ಬಳಿಕ ಭಕ್ತರೊಬ್ಬರು

ಮಂಗಳೂರು: ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಕೇಶದಾನ ಮಾಡಿ ಮೆಚ್ಚುಗೆಗೆ ಪಾತ್ರರಾದ ಚಿನ್ನು ಕೊಟ್ಟಾರಿ

ತುಳುನಾಡ ಭಾರ್ಗವ ಎಂದು ಬಿರುದು ಪಡೆದ ಚಿನ್ನು ಕೊಟ್ಟಾರಿಯವರು ತುಳು ಚಿತ್ರರಂಗ ಹಾಗೂ ಡ್ಯಾನ್ಸ್ ಕೊರಿಯೋಗ್ರಾಫರ್ ಆಗಿ ಹೆಸರುವಾಸಿಯಾಗಿದ್ದು, ತನ್ನದೇ ಆದ ವಿಶಿಷ್ಟ ಕೇಶವಿನ್ಯಾಸದಿಂದ ಗುರುತಿಸಲ್ಪಟ್ಟಿದ್ದ ಚಿನ್ನು ಕೊಟ್ಟಾರಿ ಅವರು, 2018 ಮಿಸ್ಟರ್ ಬಿಯಾರ್ಡ್ ಟೈಟಲ್‍ನ್ನು ಮುಡಿಗೇರಿಸಿಕೊಂಡಿದ್ದರು. ಸರಿಸುಮಾರು 10 ವರ್ಷಗಳಿಂದ ತಾನು ಬಿಟ್ಟ ಕೇಶವನ್ನು ಕ್ಯಾನ್ಸರ್ ಪೀಡಿತ ರೋಗಿಗಳಿಗೆ ವಿಶ್ವಹಿಂದೂ ಪರಿಷತ್ ಮುಖಾಂತರ ಕೇಶದಾನ ಮಾಡಿ ಮೆಚ್ಚುಗೆಗೆ

ಮೂಲಭೂತ ಸೌಕರ್ಯ ವಂಚಿತ ಸರ್ಕಾರಿ ಶಾಲೆ

ಬೆಂಗ್ರೆ: ಬೇಂಗ್ರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕೆಂದು ಎಸ್.ಐ.ಓ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಬೆಂಗ್ರೆಯ ಶಾಲೆಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಶಾಲೆಯ ಸುತ್ತಮುತ್ತಲಿನ ಜನರು ಮತ್ತು ಆ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಪೆÇೀಷಕರು ಭಾಗವಹಿಸಿ ತಮ್ಮ ಮಕ್ಕಳ ಶೈಕ್ಷಣಿಕ ಹಕ್ಕಿನ ಲಭಿಸುವಿಕೆಗೆ ಎಸ್.ಐ.ಓ ಸಂಘಟನೆಯೊಂದಿಗೆ ಜೊತೆಗೂಡಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ

ಸುರತ್ಕಲ್ ; ಸೌಹಾರ್ದ ಆಟಿಕೂಟ, ಗ್ರಾಮೀಣ ಆಟೋಟ ಸ್ಪರ್ಧೆ

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಸುರತ್ಕಲ್ ಬ್ಲಾಕ್ ಕಿಸಾನ್ ಘಟಕದ ವತಿಯಿಂದ ಸುರತ್ಕಲ್ ಪಡ್ರೆಯಲ್ಲಿ ಸೌಹಾರ್ದ ಆಟಿಕೂಟ, ಗ್ರಾಮೀಣ ಆಟೋಟ ಸ್ಪರ್ಧೆ ನಡೆಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರು ಸೌಹಾರ್ದ ಆಟಿಕೂಟಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪರಿಸ್ಪರ ಅರಿತು ಬಾಳುವ, ಸೌಹಾರ್ದತೆಯಿಂದ ಬಾಂಧವ್ಯವನ್ನು ಬೆಳೆಸುವ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು. ಸುರತ್ಕಲ್ ಬ್ಲಕ್ ಕಾಂಗ್ರೆಸ್ ಅಧ್ಯಕ್ಷ

ಮಂಗಳೂರು – ಮಹಿಳೆಯರಿಗಾಗಿ ವಿಶೇಷ ಆಟೋಟ ಸ್ಪರ್ಧೆ ಉದ್ಘಾಟನಾ ಸಮಾರಂಭ

ಮಂಗಳೂರು ನಗರದ ಪಚ್ಚನಾಡಿ ದೇವಿನಗರದಲ್ಲಿ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ಸಹಕಾರದಲ್ಲಿ ಶ್ರೀ ದೇವಿ ಮಾತೃ ಮಂಡಳಿ ಹಾಗೂ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಪಚ್ಚನಾಡಿ ಇವರ ವತಿಯಿಂದ ಪಚ್ಚನಾಡಿ ದೇವಿನಗರದ ಕೇಂದ್ರ ಮೈದಾನದಲ್ಲಿ ಮಹಿಳೆಯರಿಗಾಗಿ ನಡೆದ ವಿಶೇಷ ಆಟೋಟ ಸ್ಪರ್ಧೆಯ ಉದ್ಘಾಟನಾ ಸಮಾರಂಭ ನಡೆಯಿತು. ಕುಮಾರಿ ತನಿಷ್ಕ ಆರ್ ಕುಲಾಲ್ ಹಾಗೂ ಸಾನ್ವಿ ಎಮ್ ಇವರು ಶ್ರೀ ಗಣೇಶನ ಸ್ತುತಿಃ ಮಾಡಿದರು. ಶ್ರೀಮತಿ ಭವ್ಯಾ ಅವರು ದೀಪ ಬೆಳಗಿಸಿ ಕಾರ್ಯಕ್ರಮ

ಮಹಿಳೆಯ ಸ್ನಾನದ ದೃಶ್ಯ ಮೊಬೈಲ್‍ನಲ್ಲಿ ಸೆರೆ ಹಿಡಿದ ಪ್ರಕರಣ – ಕಮಿಷನರ್ ಕುಲದೀಪ್ ಕುಮಾರ್ ಜೈನ್ ಸ್ಪಷ್ಟನೆ

ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಜೈನ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ , ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದನೆರೆ ಮನೆಯ ಬಚ್ಚಲು ಕೋಣೆಯಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುವುದನ್ನು ವೀಡಿಯೊ ಮಾಡಿದ ಪ್ರಕರಣಕ್ಕೆ ಬಗ್ಗೆ ಮಾತನಾಡಿ, ಪಕ್ಕದ ಮನೆಯ ಮಹಿಳೆಯು ರಾತ್ರಿ 11.30-12 ಗಂಟೆಯ ಸಮಯದಲ್ಲಿ ತನ್ನ ಮನೆಯ ಬಚ್ಚಲಿನಲ್ಲಿ ಸ್ನಾನ ಮಾಡುತಿದ್ದ ವೇಳೆ ಮೊಬೈಲ್ ಕ್ಯಾಮರಾ ಗಮನಿಸಿದ ಮಹಿಳೆ ಕಿರುಚಾಡಿದ್ದು, ಈ ವೇಳೆ ಸ್ಥಳೀಯರು ನೆರೆಮನೆಯ

ಮಂಗಳೂರು ಜಂಕ್ಷನ್‍ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣ

ಮಂಗಳೂರು ಜಂಕ್ಷನ್‍ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆಗಸ್ಟ್ 6ರಂದು ಶಿಲಾನ್ಯಾಸ ನೆರವೇರಲಿದೆ.\ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ರವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅಂತರಾಷ್ಟ್ರೀಯ ಮಟ್ಟದ ಈ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವು ಸುಮಾರು ರೂ. 19.32

ಡ್ರಗ್ಸ್ ಪೆಡ್ಲರ್‍ಗಳನ್ನು ಗೂಂಡಾಕಾಯ್ದೆಯಡಿ ಬಂಧಿಸಿ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ

ಮಂಗಳೂರಿನಲ್ಲಿ ಮಾದಕ ವಸ್ತು ಹಾವಳಿ ವಿಪರೀತ ಹೆಚ್ಚಾಗುತ್ತಿದ್ದು, ಈ ಬಗ್ಗೆ ಡ್ರಗ್ಸ್ ಪೆಡ್ಲರ್‍ಗಳನ್ನು ಗೂಂಡಾಕಾಯ್ದೆ ಅಡಿಯಲ್ಲಿ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೆÇಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭ ನಗರದಲ್ಲಿ ನಡೆಯುತ್ತಿರುವ ಅಭಿಯಾನದ ಬಗ್ಗೆ

ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ : ಸಿಎಂ

ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಸುಮಾರು 2.5 ಲಕ್ಷ ಹುದ್ದೆಗಳು ಭರ್ತಿಯಾಗಬೇಕಾಗಿದೆ. ಅವುಗಳಲ್ಲಿ ಮುಖ್ಯವಾಗಿ ಶಿಕ್ಷಕರ ಹುದ್ದೆ ಗಳು ಖಾಲಿ ಇವೆ. ಬಹುತೇಕವಾಗಿ ಹೊರಗುತ್ತಿಗೆ, ಗುತ್ತಿಗೆ ಆಧಾರದಲ್ಲಿ ಇಲಾಖೆಗಳಲ್ಲಿ ನೇಮಕಾತಿ ನಡೆಯುವುದರಿಂದ ಮೀಸಲಾತಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದ.ಕ. ಜಿಲ್ಲಾ

ಕ್ರಿಮಿನಲ್‍ಗಳಿಗೆ ಬಿಜೆಪಿ ಸಪೋರ್ಟ್ ಮಾಡುತ್ತಿದೆ : ಸಚಿವ ದಿನೇಶ್ ಗುಂಡೂರಾವ್

ಜಿಲ್ಲೆಗೆ ಉದ್ದೇಶಪೂರ್ವಕವಾಗಿ ಕೆಟ್ಟ ಹೆಸರು ತರಲು ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡೋದಿಲ್ಲ, ಇದನ್ನು ಅನೈತಿಕ ಪೊಲೀಸ್ ಗಿರಿ ಅಂತಾ ಕರೆಯಬೇಕಾಗುತ್ತದೆ ಎಂದು