ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಫಿಸಿಯೋಥೆರಫಿ ವಿಭಾಗ ಮತ್ತು ಥೀಮ್ ಫಿಸಿಯೋಥೆರಫಿ ಯುನಿವರ್ಸಿಟಿ ನೆದರ್ಲ್ಯಾಂಡ್ಸ್ ಮತ್ತು ಸ್ವಿಟ್ಜರ್ಲ್ಯಾಂಡ್ ಜೊತೆ ಒಪ್ಪಂದವನ್ನು ಮಾಡಿಕೊಂಡಿದೆ. ಎರಡೂ ವಿಶ್ವವಿದ್ಯಾಲಯಗಳು ಶೈಕ್ಷಣಿಕ ಮತ್ತು ಸಂಶೋಧನಾ ವಿನಿಮಯ ಕಾರ್ಯಕ್ರಮಗಳಲ್ಲಿ ಸಹಕರಿಸಲು ಒಪ್ಪಿಕೊಂಡಿವೆ. ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯ
ದೈವದ ಮಹತ್ವ ಸಾರಿದ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ ಚಿತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭೆ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಕುಟುಂಬಸ್ಥರೊಂದಿಗೆ ಶನಿವಾರ ರಾತ್ರಿ ವೀಕ್ಷಿಸಿದರು.ಮಂಗಳೂರಿನ ಭಾರತ್ ಮಾಲ್ ಬಿಗ್ ಸಿನಿಮಾಸ್ನಲ್ಲಿ ರಾತ್ರಿ ಕಾಂತಾರ ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು. ಪತ್ನಿ ಮತ್ತು ಕುಟುಂಬ ಸದಸ್ಯರು ಅವರೊಂದಿಗೆ ಚಿತ್ರ ಮಂದಿರಕ್ಕೆ ಆಗಮಿಸಿದ್ದರು. ಚಿತ್ರ
ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಶಿಬಿರವು ನಗರದ ಕಾಸ್ಸಿಯಾ ಸಂತ ರೀಟಾ ವಿದ್ಯಾ ಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆಯಿತು. ಶಿಬಿರವನ್ನು ಮಹಾನಗರ ಪಾಲಿಕೆ ಸದಸ್ಯೆ ಭಾನುಮತಿ ಅವರು ಉದ್ಘಾಟಿಸಿ ಮಾತನಾಡಿ, ಎನ್.ಎಸ್.ಎಸ್. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ , ಶಿಸ್ತು, ಸಮಯ ಪ್ರಜ್ನೆ , ಸಾಮರಸ್ಯದ ಗುಣಗಳನ್ನು ಬೆಳೆಸಿ ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡುತ್ತದೆ ಎಂದು ಹೇಳಿದರು.ಸಂತ ರೀಟಾ ವಿದ್ಯಾಸಂಸ್ಥೆಯ
ಸಿನಿ ಗ್ಯಾಲಕ್ಸಿ ಅರ್ಪಿಸುವ ಮೋಗವೀರ ಗಾಟ್ ಟ್ಯಾಲೆಂಟ್ ರಿಯಾಲಿಟಿ ಶೋ ಅದ್ಧೂರಿಯಾಗಿ ನಡೆಯಲಿದ್ದು, ಈ ಕಾರ್ಯಕ್ರಮದ ಧ್ವನಿ ಸುರುಳಿ ಮತ್ತು ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ನಡೆಯಿತು.ಉಡುಪಿ ಮತ್ತು ದ.ಕ.ಜಿಲ್ಲಾ ಮೀನು ಮಾರಾಟಗಾರರ ಪೆಡರೆಸನ್ ಮಂಗಳೂರು ಇದರ ಜಿಲ್ಲಾ ಅಧ್ಯಕ್ಷರಾದ ಯಶಪಾಲ್ ಸುವರ್ಣ ಕಾರ್ಯಕ್ರಮ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ರಕ್ತದ ಆಪತ್ಭಾಂದವ ಸತೀಶ್ ಸಾಲ್ಯಾನ್ ರವರನ್ನು ಸನ್ಮಾನಿಸಲಾಯಿತು. ರಿಯಾಲಿಟಿ ಶೋನ ಧ್ವನಿ ಸುರುಳಿ, ಪೆÇೀಸ್ಟರ್
ಮಂಗಳೂರು: ನಾರಾಯಣಗುರುಗಳ ಅನುಯಾಯಿಗಳು ಮಾಡಿದ ಶಾಂತಿಯುತ ಹೋರಾಟಕ್ಕೆ ಮಣಿದ ಸರ್ಕಾರ ಪಠ್ಯ ಪುನರ್ ಸೇರ್ಪಡೆ ಮಾಡಲು ಆದೇಶಿಸಿದ ಹಿನ್ನೆಲೆ ಹಾಗು ಸಮಾಜದ ಪ್ರಮುಖ ಬೇಡಿಕೆಗಳಾದ ಬ್ರಹ್ಮಶ್ರೀ ನಾರಾಯಣಗುರು ನಿಗಮ (ಬಿಲ್ಲವ ನಿಗಮ) ಸ್ಥಾಪನೆ ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಇಡಬೇಕು, ಸಮಾಜದ ಏಳಿಗೆಗಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ವಿಶೇಷ ಗುರುಪೂಜೆ ಸಲ್ಲಿಸಲಾಯಿತು. ಜಾನಪದ ವಿದ್ವಾಂಸ ಬನ್ನಂಜೆ
ಮಂಗಳೂರಿನ ಪ್ರಸಿದ್ಧ ತಂದೂರ್ ರೆಸ್ಟೋರೆಂಟ್ನ ಮಾಲಕರಾದ ಜಿ. ಆನಂದ್ ರಾಯ ಶೆಣೈ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ಪ್ರಾಯವಾಗಿತ್ತು. ಮಂಗಳೂರಿನ ಗುರುಪುರದವರಾದ ಇವರು ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಜನಮನ್ನಣೆ ಗಳಿಸಿದ್ದರು. ಇವರು ಪತ್ನಿ ಸುಜಾತ ಆನಂದ ರಾಯಿ, ಪುತ್ರ ವರದರಾಜ್ ಶೆಣೈ, ಪುತ್ರಿ ಶಾರದಾ ದಿಲೀಪ್ ಆಚಾರ್ಯ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಸಂಭವಿಸಿದೆ.ಖಾಸಗಿ ವೇಗದೂತ ಬಸ್ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳನ್ನು ಹೊರತುಪಡಿಸಿ ಯಾವುದೇ ಸಾವು ನೋವು ಸಂಭವಿಸಿಲ್ಲ.ಹೆಜಮಾಡಿ ಟೋಲ್ ಸುರಕ್ಷತಾ ಅಧಿಕಾರಿ ಶೈಲೇಶ್ ಶೆಟ್ಟಿ, ಟೋಲ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ
ವಿಕಲ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಅಲಿಮ್ಕೊ ಸಂಸ್ತೆ ಬೆಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಬೆಳ್ತಂಗಡಿ ವತಿಯಿಂದ ವಿಕಲ ಚೇತನರ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ರವರು ವಿಕಲ ಚೇತನರ ಶ್ರೆಯಾಭಿವೃದ್ದಿ ದೃಷ್ಟಿಯಿಂದ ಅನೇಕ ಯೋಜನೆಗಳನ್ನು ಮ್ಮ
ಮೂಡಬಿದ್ರೆ ಬೆಳುವಾಯಿ ಗ್ರಾಮದ ತರುಣಿಯೊಬ್ಬರನ್ನು ಮದುವೆಯಾಗಿದ್ದ ಬೆಂಗಳೂರಿನ ರಾಘವೇಂದ್ರ ಕುಲಕರ್ಣಿ ಎಂಬಾಂತ ಇದೀಗ ತನ್ನ ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾಗಿದ್ದು, ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗಳೂರಿನ ಬಸವೇಶ್ವರ ಬಡವಾಣೆಯ ಅಂದ್ರಳ್ಳಿ ನಿವಾಸಿ ರಾಘವೇಂದ್ರ ಕುಲಕರ್ಣಿ ಎಂಬಾತ 2017ರ ಜೂನ್ 18ರಂದು ಮೂಡಬಿದ್ರೆಯ ತರುಣಿಯನ್ನು ಬೆಂಗಳೂರಿ ಲಗ್ಗೇರಿಯಲ್ಲಿರುವ ರಾಘವೇಂದ್ರ ಮಠದಲ್ಲಿ ಹಿಂದೂ
ಮಂಗಳೂರಿನ ಸುರತ್ಕಲ್ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಆಗ್ರಹಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರೋಪಿಗಳಿಗೆ ಜಾಮೀನು ನೀಡಿದ ಹಿಂದೆ ಯಾರಿದ್ದಾರೆ..? ಕಾನೂನು ಕ್ರಮ ತೆಗೆದುಕೊಳ್ಳಲು ಪ್ರತಿಭಟನೆ ನಡೆಸಬೇಕೇ..? ಎಂದು ಪ್ರಶ್ನಿಸಿದರು. ಮಂಗಳೂರಲ್ಲಿ ಇಂತಹ