ಸ್ಪಾರ್ಕಲ್ ಇವೆಂಟ್ಸ್ ಆಂಡ್ ಡೆಕೋರ್ಸ್, ಸಿಟಿ ಸೆಂಟರ್ ಮಂಗಳೂರು, ಸುಮಯ್ಯ ಶೇಖ್ ಸಂಯೋಜನೆಯ, ಎರೊಡೈನಾಮಿಕ್ ಮತ್ತು ಮೋತಿಶಾಮ್ ಸಹಯೋಗದೊಂದಿಗೆ “ಫೀಸ್ಟ್ ಯುವರ್ ಐಸ್” ವಿತ್ ಮಾಸ್ಟರ್ ಚೆಫ್ ವಿನ್ನರ್ ಮಹಮ್ಮದ್ ಆಶಿಕ್ ಕಾರ್ಯಕ್ರಮವು ಮಂಗಳೂರಿನ ಸಿಟಿ ಸೆಂಟರ್ ಮಾಲ್ ನಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಮಾಸ್ಟರ್ ಚೆಫ್ ವಿನ್ನರ್ ಮಹಮ್ಮದ್ ಆಶಿಕ್
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ
ಜೆಸಿಐ ಭಾರತದ ವಲಯ 15 ರ 2024 ರ ಸಾಲಿನಲ್ಲಿ ಕೊಡಮಾಡುವ ಈ ವರ್ಷದ ಅತ್ತ್ಯುತ್ತಮ ತರಬೇತುದಾರ ಪ್ರಶಸ್ತಿ ಗೆ ಜೆಸಿಐ ರಾಷ್ಟ್ರೀಯ ತರಬೇತುದಾರ ಸುಧಾಕರ್ M ಪೂಜಾರಿ ಕಾರ್ಕಳ ರವರು ಭಾಜನರಾದರು ಜೇಸಿ ಸುಧಾಕರ್ ಪೂಜಾರಿ ಯವರು 2007 ರಿಂದ ವ್ಯಕ್ತಿತ್ವ ವಿಕಸನ ತರಬೇತುಧಾರರಾಗಿ ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ, ಉದ್ಯಮಿಗಳಿಗೆ ಜೇಸಿ loins ರೋಟರಿ ಸದಸ್ಯರಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ವ್ಯಕ್ತಿತ್ವ ವಿಕಸನ, ಉಧ್ಯಮ ವಿಕಾಸನಕ್ಕೆ ಪೂರಕ ತರಬೇತಿಗಳನ್ನು ನೀಡುತಾ
ಮೂಡುಬಿದಿರೆಯ ಪೊನ್ನೆಚಾರಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಾಲಯದ ಸಮಿತಿಯು ಶಾರದಾ ಮಹೋತ್ಸವ ಕಾರ್ಯಕ್ರಮದಲ್ಲಿ ಅಲಂಗಾರು ಶ್ರೀ ಈಶ್ವರ ಭಟ್ ಅವರನ್ನು ಶಾರದಾನುಗ್ರಹ -2024 ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಪೊನ್ನೆಚಾರಿ ಲಕ್ಷ್ಮಿ ವೆಂಕಟರಮಣ ದೇವಾಲಯದ ಆಡಳಿತ ಮೊಕ್ತೇಸರರು ಪೊನ್ನೆಚಾರಿ ಶಾರದಾ ಪೂಜಾ ಮಹೋತ್ಸವ ಹಾಗೂ ಮೂಡುಬಿದಿರಿ ದಸರಾ ಉತ್ಸವದ ರೂವಾರಿ ಅಶೋಕ ಕಾಮತ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಐದು ಶತಮಾನಗಳ ಇತಿಹಾಸವನ್ನು ಹೊಂದಿರುವ ಪೊನ್ನಚಾರಿ
ಬಿಲ್ಲವ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಮುಂಡ್ಕೂರು, ಮುಲ್ಲಡ್ಕ, ಇನ್ನಾ, ಇದರ ವತಿಯಿಂದ ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣೆ, ಆಟಿಡು ಒಂಜಿ ದಿನ ಕಾರ್ಯಕ್ರಮ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಮುದಾಯ ಭವನದಲ್ಲಿ ನಡೆಯಿತು. ತೋಟ ಮನೆ ಉಷಾ ವಾಸು ಅಂಚನ್ ದೀಪ ಬೆಳಗಿಸಿ ಕಾರ್ಯಕ್ರಮನ್ನು ಉದ್ಘಾಟಿಸಿದರು. ವಿದ್ಯಾ ವರ್ಧಕ ಪದವಿ ಪೂರ್ವ ಕಾಲೇಜಿನ ಮುಖ್ಯ ಶಿಕ್ಷಕಿ ಸವಿತಾ ಸದಾನಂದ ಪೂಜಾರಿ ಮುಖ್ಯ ಅತಿಥಿಯಾಗಿ ಮಾತನಾಡಿ ತುಳುನಾಡಿನಲ್ಲಿ ಆಷಾಡ
ಮೂಡುಬಿದಿರೆ: ಮಂಗಳೂರು-ಕಾರ್ಕಳ ಹೆದ್ದಾರಿಯ ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬನ್ನಡ್ಕ ಎಸ್ಕೆಎಫ್ ಬಳಿ ಗುಡ್ಡ ಕುಸಿತದಿಂದ ರಸ್ತೆ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ. ಪೋಯ್ಯದ ಪಲ್ಕೆ ಬಳಿ ಪ್ರವಾಹದಿಂದ ರಸ್ತೆ ಹಾಗೂ ಗದ್ದೆಗೆ ನೀರು ನುಗ್ಗಿ ಹಾನಿ, ಕೆಂಪುಲು ಬಳಿ ಮಳೆಯಿಂದ ರಸ್ತೆಗೆ ಹಾನಿ, ಕೆಸರ್ ಗದ್ದೆ ವಿಕ್ಟರ್ ಮನೆ ಬಳಿ ಮಳೆಯ ಪ್ರವಾಹ ದಿಂದ ಮೋರಿ ಬ್ಲಾಕ್ ಆಗಿ ಜಮೀನಿಗೆ ನೀರು ಬಂದು ಹಾನಿಯಾಗಿದೆ. ಅಂಬೂರಿ ಬಳಿಯ ಕಿರಣ್
ಪುತ್ತೂರು: ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿಯಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿದ್ದ ಶ್ರೀ ಸುಂದರ ಗೌಡ ಅವರು ಪಧೋನ್ನತಿ ಹೊಂದಿ ರಾಮನಗರ ಜಿಲ್ಲೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ತೆರಳುತ್ತಿರುವ ಈ ಸಂದರ್ಭದಲ್ಲಿ ಪುತ್ತೂರು ಬನ್ನೂರು ಕೃಷ್ಣನಗರದ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಅಭಿನಂದಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವೆಂಕಟರಮಣ ಗೌಡ
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯ ಹಲವೆಡೆ ಮನೆಗಳು ಜಲಾವೃತಗೊಂಡಿದೆ.ಕರಂಬಳ್ಳಿ, ಮೂಡುನಿಡಂಬೂರು, ಕೊಡವೂರು ಭಾಗದಲ್ಲಿ ನೆರೆ ಸೃಷ್ಟಿಯಾಗಿದೆ. ಕರಂಬಳ್ಳಿ ಭಾಗದಲ್ಲಿ, ಬನ್ನಂಜೆ ಮೂಡನಿಡಂಬೂರು ಕೆಲವು ಮನೆಗಳು ಜಲಾವೃತಗೊಂಡಿದೆ. ಇಂದ್ರಾಣಿ ನದಿ ಹರಿಯುವ ಪಾತ್ರದಲ್ಲಿ ಗುಂಡಿಭಾಗದಲ್ಲಿ ತೋಟ, ಗದ್ದೆಗಳು ಜಲಾವೃತಗೊಂಡಿದೆ. ಭಾರಿ ಮಳೆಯಿಂದ ನಗರದಲ್ಲಿನ ಮಳೆನೀರು ತೋಡು ತುಂಬಿ ಹರಿಯುತ್ತಿದ್ದು ಇದರಿಂದ ಈ ಪರಿಸರದ
ಪ್ರಕೃತಿಯೇ ವಿಶ್ವವಿದ್ಯಾನಿಲಯ. ಮರ, ನದಿ ಕೂಡಾ ಪರೋಪಕಾರ ಮನೋಭಾವವನ್ನು ಬೆಳೆಸುತ್ತದೆ. ಪ್ರಕೃತಿ ನಾಶವಾಗಬಾರದು. ಅದರ ಜತೆಗೆ ಬದುಕು ಸಾಗಬೇಕು. ಪ್ರಕೃತಿ ಸಮತೋಲನ ಕಾಪಾಡುತ್ತದೆ. ಪ್ರಕೃತಿಯನ್ನು ಸ್ವಚ್ಛವಾಗಿಡುವುದು ಕರ್ತವ್ಯ ಮತ್ತು ಪರಿಣಾಮವಾಗಿ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಆಧ್ಯಾತ್ಮದ ಚಿಂತನೆ ಮೂಲಕ ಜೀವನ ಪಾವನವಾಗಬೇಕು ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ನುಡಿದರು. ಅವರು ಒಡಿಯೂರು ಶ್ರೀಗಳ
ಮಂಗಳೂರು : ರಾಜ್ಯ ಸರಕಾರ ಡಿಸೇಲ್ ಬೆಲೆ ಏರಿಸಿರುವುದರಿಂದ ಲಾರಿ ಉದ್ಯಮಕ್ಕೆ ಅತ್ಯಂತ ಹೆಚ್ಚು ನಷ್ಟವಾಗಲಿದ್ದು, ಮಾಲಕರು ಸಂಕಷ್ಟಕ್ಕೆ ಒಳಗಾಗುತ್ತಾರೆ’ ಎಂದು ದಕ್ಷಿಣ ಕನ್ನಡ ಟ್ರಕ್ ಓನರ್ಸ್ ಅಸೋಸಿಯೇಷನ್ ಹೇಳಿದ್ದಾರೆ. ಡಿಸೇಲ್ ಬೆಲೆ ಏರಿಕೆಯಾದರೂ ಲಾರಿ ಬಾಡಿಗೆ ದರ ಏರಿಸಲಾಗುತ್ತಿಲ್ಲ. ಸರಕಾರ ಸ್ವಾಮ್ಯದ ಬಂದರು, ಕಚ್ಚಾ ತೈಲ, ಆಹಾರ ಸಾಮಾಗ್ರಿ ಸರಕು ನಿರ್ವಹಣೆಗೆ ಬಳಸಲಾಗುವ ಲಾರಿಗಳ ಬಾಡಿಗೆಯನ್ನು ಸರಕಾರ ನಿಯಂತ್ರಿಸುತ್ತಿಲ್ಲ. ಲಾರಿಗಳಿಗೆ ಟನ್ /