Home Posts tagged #mangaluru (Page 7)

ಭಾರತಕ್ಕೆ ರೈಲಿನಲ್ಲಿ ಕಲ್ಲಿದ್ದಲು ಕಳುಹಿಸಿದ ರಶಿಯಾ

ಐಎನ್‌ಎಸ್‌ಟಿಸಿ- ಅಂತರರಾಷ್ಟಿçÃಯ ಬಡಗಣ ತೆಂಕಣ ಸಾಗಣೆ ನೇರದಾರಿಯ ಮೂಲಕ ಇದೇ ಮೊದಲ ಬಾರಿಗೆ ರಶಿಯಾದ ಕಲ್ಲಿದ್ದಲು ಭಾರತಕ್ಕೆ ಬಂತು.ರಶಿಯಾದಿದ ನೇರ ಭಾರತಕ್ಕೆ ಇಂಟರ್‌ನ್ಯಾಶನಲ್ ನಾರ್ತ್ ಸೌತ್ ಟ್ರಾನ್ಸ್ಪೋರ್ಟ್ ಕಾರಿಡಾರ್ ರಚನೆಯನ್ನು ರಶಿಯಾ 2000ದಲ್ಲಿ ಆರಂಭಿಸಿತ್ತು. ಆದರೆ ತಡವಾಗಿ ಆರಂಭವಾಗಿದೆ. ಇರಾನಿನ ಬಂದರ್ ಅಬ್ಬಾಸ್‌ವರೆಗೆ ರೈಲು ಹಾದಿ. ಅಲ್ಲಿಂದ ಹಡಗು.

ಖಾಸಗಿ ವೈಟ್ ಬೋರ್ಡ್ ವಾಹನಗಳ ಮೇಲೆ ಕ್ರಮಕ್ಕೆ ಆಗ್ರಹ

ಶಾಲಾ ಮಕ್ಕಳನ್ನು ಸಾಗಿಸುತ್ತಿರುವ ಖಾಸಗಿ ವೈಟ್ ಬೋರ್ಡ್ ವಾಹನಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಗೌರವ ಅಧ್ಯಕ್ಷ ಸುನೀಲ್ ಕುಮಾರ್ ಬಜಾಲ್ , ಪೊಲೀಸ್ ಇಲಾಖೆ ಹಾಗೂ ಆರ್ ಟಿ ಓ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕು, ಇಲ್ಲದ್ರೆ ಆರ್ ಟಿಓ ಕಚೇರಿ ಮುತ್ತಿಗೆ ಹಾಕುವ ಅನಿವಾರ್ಯ ಬರುತ್ತೆ ಎಂದು ಎಚ್ಚರಿಕೆ ನೀಡಿದ್ರು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸಿ

ಅಮೃತ ವಿದ್ಯಾಲಯಂ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಪದಗ್ರಹಣ, ವಿವಿಧ ಸಂಘಗಳ ಉದ್ಘಾಟನೆ

ಮಂಗಳೂರಿನ ಅಮೃತ ವಿದ್ಯಾಲಯಂ ಶಾಲೆಯಲ್ಲಿ ನೂತನವಾಗಿ ರಚನೆಗೊಂಡ ವಿದ್ಯಾರ್ಥಿ ಮಂತ್ರಿ ಮಂಡಲದ ಪದಗ್ರಹಣ ಸಮಾರಂಭ ಮತ್ತು ವಿವಿಧ ಸಂಘಗಳ ಉದ್ಘಾಟನೆ ಕಾರ್ಯಕ್ರಮವು ನಡೆಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಲೆಫ್ಟಿನೆಂಟ್ ಕರ್ನಲ್ ವಿವೇಕ್ ಬಿಂದ್ರ, ಅಮೃತ ಕ್ಯಾಂಪಸ್ಸಿನ ನಿರ್ದೇಶಕರಾದ ಶ್ರೀಯುತ ಯತೀಶ್ ಬೈಕಂಪಾಡಿ, ಶಾಲಾ ಪ್ರಾಂಶುಪಾಲೆ ಶ್ರೀಮತಿ ಅಕ್ಷತಾ ಆರ್ ಶೆಣೈ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ನಂತರ ವಿದ್ಯಾರ್ಥಿ ಮಂತ್ರಿಮಂಡಲಕ್ಕೆ

ಮಂಗಳೂರು ಕಮ್ಯುನಿಟಿ ಸೆಂಟರ್ ಶುಭಾರಂಭ

ಉಳ್ಳಾಲ : ನಮ್ಮ ನಾಡ ಒಕ್ಕೂಟ ಇದರ ಆಶ್ರಯದಲ್ಲಿ ಮಂಗಳೂರು ಕಮ್ಯುನಿಟಿ ಸೆಂಟರ್ ತೊಕ್ಕೊಟ್ಟುವಿನ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿ ಆರಂಭಗೊಂಡಿತು. ವಿಧಾನ ಸಭಾ ಸ್ವೀಕರ್ ಯು ಟಿ ಖಾದರ್ ಫರೀದ್ ಮಂಗಳೂರು ಕಮ್ಯುನಿಟಿ ಸೆಂಟರ್ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಜನರಿಗೆ ಮೂಲಭೂತ ಸೌಕರ್ಯ ಗಳನ್ನು ಪಡೆಯಲು ಇಂತಹ ಸೇವೆ ಅವಶ್ಯಕತೆ ಇದೆ.ಶಿಕ್ಷಣ, ಉದ್ಯೋಗ ಮುಂತಾದ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ಅಗತ್ಯ ಇರುತ್ತದೆ.ಇದನ್ನು ನಮ್ಮ ನಾಡ ಒಕ್ಕೂಟ ಉಚಿತ ವಾಗಿ

ಎಂ.ಸಿ.ಸಿ. ಬ್ಯಾಂಕ್ ಕಾರ್ಯಕ್ಷಮತೆ ವಿಶ್ಲೇಷಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ

ಬ್ಯಾಂಕಿನ 2023-24ನೇ ವರ್ಷದ ಸಿಬ್ಬಂದಿ ಕಾರ್ಯಕ್ಷಮತೆ ವಿಶ್ಲೇಷಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವು ಮಂಗಳೂರಿನ ಆಡಳಿತ ಕಚೇರಿಯ ಪಿ.ಎಫ್.ಎಕ್ಸ್ ಸಲ್ಡಾನಾ ಸ್ಮಾರಕ ಸಭಾಂಗಣದಲ್ಲಿ ನಡೆಯಿತು. ಸಮೀಕ್ಷೆಯು ಆಲ್ಡ್ರಿನ್ ಡಿಸೋಜ ಮತ್ತು ತಂಡದ ನೇತೃತ್ವದಲ್ಲಿ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಮಂಗಳೂರು ಧರ್ಮಪ್ರಾಂತ್ಯದ ಮಾಜಿ ಪ್ರೊಕ್ಯುರೇಟರ್ ರೆ| ಫಾ| ಜಾನ್ ವಾಸ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಫಾ| ಜಾನ್

ಬೆಳ್ಳಾರೆ: ಮಹಿಳೆಯ ಶವ ಪತ್ತೆ- ಕೊಲೆ ಶಂಕೆ

ಸುಳ್ಯ: ಬೆಳ್ಳಾರೆ ಪೇಟೆಯಲ್ಲಿ ಮಹಿಳೆಯೋರ್ವರ ಶವ ಪತ್ತೆಯಾಗಿದ್ದು ಕೊಳೆ ಶಂಕೆ ವ್ಯಕ್ತವಾಗಿದೆ.ಬೆಳ್ಳಾರೆ ಪೇಟೆಯ ಎಪಿಎಂಸಿ ಮಾರುಕಟ್ಟೆ ಬಳಿ ಸೋಮವಾರ ಮಹಿಳೆಯ ಶವ ಪತ್ತೆಯಾಗಿದೆ. ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆಂಬ ಶಂಕೆ ವ್ಯಕ್ತವಾಗಿದ್ದು, ಸ್ಪಷ್ಟ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಮೃತ ಮಹಿಳೆಯನ್ನು ಪಾಟಾಜೆಯ ನಳಿನಿ ಎಂದು ಗುರುತಿಸಲಾಗಿದೆ. ಪೊಲೀಸ್ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ನೇಪಾಳ ಮೂಲದ ಬಾಲಕಿ ಆತ್ಮಹತ್ಯೆ

ಉಳ್ಳಾಲ: ನೇಪಾಳ ಮೂಲದ ಅಪ್ರಾಪ್ತೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೊಕ್ಕೊಟ್ಟು,ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಇಂದು ಬೆಳಕಿಗೆ ಬಂದಿದೆ.ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತೆ.ತೊಕ್ಕೊಟ್ಟು ವೃಂದಾವನ ಹೊಟೇಲಿನ ಪಕ್ಕದಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್ ಎಂಬವರು ತನ್ನ ಪತ್ನಿ ಮತ್ತು ನಾಲ್ಕು ಮಕ್ಕಳೊಂದಿಗೆ ತೊಕ್ಕೊಟ್ಟು, ಚೆಂಬುಗುಡ್ಡೆಯ ರೀಟಾ ಡಿ ಸೋಜ ಎಂಬವರ ಮನೆಯಲ್ಲಿ ಬಾಡಿಗೆಗೆ

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ., ಪ್ರಾಯೋಜಿತ ಯಕ್ಷ ಶ್ರೀ ರಕ್ಷಾ ಗೌರವ- ವಾರ್ಷಿಕ ವಿಶೇ‍ಷ ಪ್ರಶಸ್ತಿ ಘೋಷಣೆ

ದುಬಾಯಿ ಯಕ್ಷಗಾನ ಅಭ್ಯಾಸ ತರಗತಿ (YAKU) ಪ್ರಾಯೋಜಕತ್ವದಲ್ಲಿ ದುಬಾಯಿ ಅಥವಾ ತಾಯಿನಾಡಿನ ಯಕ್ಷಗಾನ ರಂಗದ ಸಾಧಕರೊಬ್ಬರನ್ನು ಗುರುತಿಸಿ, ವಿಶೇಷವಾಗಿ ವಾರ್ಷಿಕ ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ ನೀಡಲು ಉದ್ದೇಶಿಸಿದಂತೆ, 2023-2024 ನೇ ಸಾಲಿನ ಪ್ರಶಸ್ತಿಗೆ, ಸ್ಥಳೀಯ ಯಕ್ಷಗಾನ ಹಿಮ್ಮೇಳ ಕಲಾವಿದರೂ, ನಮ್ಮ ಯಕ್ಷಗಾನ ಅಭ್ಯಾಸ ಕೇಂದ್ರದ ಹಿರಿಯ ಸದಸ್ಯರೂ ಆದ ಶ್ರೀಯುತ ವೆಂಕಟೇಶ ಶಾಸ್ತ್ರಿ ಪುತ್ತಿಗೆಯವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಗಿದೆ. ಶ್ರೀಯುತ ವೆಂಕಟೇಶ

ಮೂಡುಬಿದಿರೆ ತಾ.ಪಂ.ವತಿಯಿಂದ ಪರಿಸರ ದಿನಾಚರಣೆ

ಮೂಡುಬಿದಿರೆ: ವಿಶ್ವ ಪರಿಸರ ದಿನದ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ ಮತ್ತು ಮೂಡುಬಿದಿರೆ ಥಡ್ ೯ ಶಾಲೆಯ ಜಂಟಿ ಆಶ್ರಯದಲ್ಲಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎಸ್. ವೆಂಕಟಾಚಲಪತಿ ಅವರು ಗಿಡಗಳನ್ನು ನೆಡುವ ಮೂಲಕ ಚಾಲನೆಯನ್ನು ನೀಡಿದರು.ಶಾಲೆಯ ನಿಯೋಜಿತ ಪ್ರಭಾರ ಮುಖ್ಯ ಶಿಕ್ಷಕ ರಾಬಟ್ ೯ ಡಿ’ಸೋಜಾ, ತಾ.ಪಂ.ಸಿಬಂದಿ

ಪುತ್ತೂರು ನಗರ ವ್ಯಾಪ್ತಿಯಲ್ಲಿ ಗಾಳಿಮಳೆ- ಮರ ಬಿದ್ದು ಮನೆಗೆ ಹಾನಿ

ಪುತ್ತೂರು: ಭಾನುವಾರ ಸಂಜೆ ಪುತ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಮನೆಯ ಮೇಲೆ ಮರ ಬಿದ್ದು ಬಾಗಶ: ಜಖಂಗೊಂಡಿದ್ದು, ಮನೆ ಮಂದಿ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಬಪ್ಪಳಿಗೆಯ ಸಿಂಗಾಣಿಯ ಕಮಲ ಎಂಬaವರ ಮನೆಯ ಮಾಡಿನ ಶೀಟು ಗಾಳಿಗೆ ಹಾರಿ ಹೋಗಿದ್ದು, ಉರ್ಲಾಂಡಿಯಲ್ಲಿ ಶೋಭಾ ಹೆಗ್ಡೆ ಎಂಬವರ ಮನೆಯ ಮೇಲೆ ಮರ ಬಿದ್ದು ಬಾಗಶ: ಜಖಂಗೊಂಡಿದೆ. ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಸುದ್ದಿ ತಿಳಿದು ತಕ್ಷಣ